ನಾಯಿ ಕಚ್ಚಿದರೆ ರಾಜ್ಯ ಸರಕಾರವೇ ಹೊಣೆ, ಪರಿಹಾರ ನೀಡಲಿ; ಬೀದಿ ನಾಯಿಗಳ ಬಗ್ಗೆ ಪ್ರೀತಿ, ಕಾಳಜಿ ಇದ್ದರೆ ಮನೆಗೊಯ್ದು ಸಾಕಿ: ಸುಪ್ರೀಂ ಕೋರ್ಟ್

ದೇಶಾದ್ಯಂತ ಅನೇಕ ನಗರಗಳಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿ ಹೆಚ್ಚುತ್ತಿದೆ. ಜನವರಿ 13ರಂದು ಈ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ನಾಗರಿಕರು ನಾಯಿ ಕಡಿತದಿಂದ ಸತ್ತರೆ ಅಥವಾ ಗಾಯಗೊಂಡರೆ, ರಾಜ್ಯ ಸರ್ಕಾರಗಳು ಪರಿಹಾರವನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಪ್ರಕರಣವನ್ನು ವಿಚಾರಣೆ ನಡೆಸಿತು. 75 ವರ್ಷಗಳಿಂದ ಸರ್ಕಾರಗಳು ಬೀದಿ ನಾಯಿ ಸಮಸ್ಯೆಯನ್ನು ನಿಭಾಯಿಸಲು ಏನೂ […]

Continue Reading

ಶಬರಿಮಲೆ ಚಿನ್ನ ಲೂಟಿ ಪ್ರಕರಣ: ಹಿರಿಯ ತಂತ್ರಿ ಕಂಠರರ್ ರಾಜೀವರ್ ಬಂಧನ

ಶಬರಿಮಲೆ: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆಯ ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗಾಗಿ ವಶಕ್ಕೆ ಪಡೆದು, ದೇವಾಲಯದ ಆವರಣದಿಂದ ನಾಪತ್ತೆಯಾಗಿರುವ ಬೆಲೆಬಾಳುವ ಆಭರಣಗಳ ಕುರಿತು ತನಿಖೆ ನಡೆಸುತ್ತಿದೆ. ಕೆಲವು ದಿನಗಳ ಹಿಂದಷ್ಟೇ ದೇವಾಲಯದ ಒಳಗಿನ ಚಿನ್ನಾಭರಣಗಳು ಕಳುವಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಈ ಗಂಭೀರ ಪ್ರಕರಣದ ಬೆನ್ನಲ್ಲೇ ತನಿಖೆಯನ್ನು ಆರಂಭಿಸಲಾಗಿತ್ತು. ಇದೀಗ ತನಿಖಾ ತಂಡವು ಮುಖ್ಯ ಅರ್ಚಕರನ್ನೇ ವಿಚಾರಣೆಗೆ ಒಳಪಡಿಸಿರುವುದು ಭಕ್ತರಲ್ಲಿ ಮತ್ತು […]

Continue Reading

ರಸ್ತೆ ಅಪಘಾತಗಳಿಗೆ ಕಡಿವಾಣ; ಶೀಘ್ರವೇ V2V ತಂತ್ರಜ್ಞಾನ: ನಿತಿನ್ ಗಡ್ಕರಿ

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಾಂತಿಕಾರಿ ಕ್ರಮವಾಗಿ ವಾಹನದಿಂದ ವಾಹನ (V2V) ಸಂವಹನ ತಂತ್ರಜ್ಞಾನವನ್ನು ಜಾರಿಗೆ ತರಲು ಸರ್ಕಾರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಘೋಷಿಸಿದರು. ಈ ವ್ಯವಸ್ಥೆಯ ಅಡಿಯಲ್ಲಿ, ಚಾಲಕರು ಹತ್ತಿರದ ವಾಹನಗಳ ವೇಗ, ಸ್ಥಳ ಮತ್ತು ವೇಗ ವರ್ಧನೆಯ ಬಗ್ಗೆ ನೈಜ-ಸಮಯದ ಎಚ್ಚರಿಕೆಗಳನ್ನು ಪಡೆಯುತ್ತಾರೆ. ಈ ತಂತ್ರಜ್ಞಾನವು ಬ್ಲೈಂಡ್ ಸ್ಪಾಟ್ ಗಳಲ್ಲಿರುವ ವಾಹನಗಳನ್ನು ಗುರುತಿಸುತ್ತದೆ ಮತ್ತು ಸುತ್ತಮುತ್ತಲಿನ ಹಠಾತ್ ಬ್ರೇಕಿಂಗ್ ಅನ್ನು ಮೇಲ್ವಿಚಾರಣೆ ಮಾಡುತ್ತದೆ, ತಕ್ಷಣದ ಸರಿಪಡಿಸುವ ಕ್ರಮವನ್ನು ತೆಗೆದುಕೊಳ್ಳಲು […]

Continue Reading

ಕ್ರೀಡಾಪಟು ಬಾಲಕಿಗೆ ಲೈಂಗಿಕ ದೌರ್ಜನ್ಯ; ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಪ್ರಕರಣ ದಾಖಲು, ಕರ್ತವ್ಯದಿಂದ ಅಮಾನತು

ಹರಿಯಾಣದ ಫರಿದಾಬಾದ್‌ನಲ್ಲಿ ತಲೆತಗ್ಗಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ರೀಡಾಪಟು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕ್ರೀಡಾಪಟುವಿನ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಗಳವಾರ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ನವದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ರಾಷ್ಟ್ರೀಯ ಮಟ್ಟದ ಶೂಟಿಂಗ್ ಸ್ಪರ್ಧೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಫರಿದಾಬಾದ್‌ನ ಹೋಟೆಲ್ ಕೋಣೆಯಲ್ಲಿ ಕ್ರೀಡಾಪಟು ವಿರಾಮ ತೆಗೆದುಕೊಳ್ಳುತ್ತಿದ್ದ […]

Continue Reading

ವೆಂಟಿಲೇಟರ್ ಜೀವ ಉಳಿಸುವ ಸಾಧನವಾಗಿರಬೇಕು, ಅದು ಆಸ್ಪತ್ರೆಗೆ ಆದಾಯ ತರುವ ಸಾಧನವಾಗಿರಬಾರದು: ಕೇಂದ್ರ ಆರೋಗ್ಯ ಸಚಿವಾಲಯ

ಔಷಧವು ವ್ಯವಹಾರವಾಗುತ್ತಿರುವ ಈ ಸಮಯದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸಾಮಾನ್ಯ ಜನರಿಗೆ ಪರಿಹಾರ ನೀಡುವ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದೆ. ವೆಂಟಿಲೇಟರ್ ಜೀವ ಉಳಿಸುವ ಸಾಧನವಾಗಿರಬೇಕು, ಆದರೆ ಅದು ಆಸ್ಪತ್ರೆಗೆ ಆದಾಯ ತರುವ ಸಾಧನವಾಗಿರಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಚಿಕಿತ್ಸೆಯ ಅವಧಿಯನ್ನು ಅನಗತ್ಯವಾಗಿ ವಿಸ್ತರಿಸುವುದು ಮತ್ತು ಕುಟುಂಬ ಸದಸ್ಯರನ್ನು ವೆಚ್ಚಗಳ ಬಗ್ಗೆ ಕತ್ತಲೆಯಲ್ಲಿಡುವುದು ಮುಂತಾದ ದೂರುಗಳನ್ನು ಆರೋಗ್ಯ ಸೇವೆಗಳ ನಿರ್ದೇಶನಾಲಯ ಗಂಭೀರವಾಗಿ ಪರಿಗಣಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವೆಚ್ಚದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಸಚಿವಾಲಯದ ಅಡಿಯಲ್ಲಿ […]

Continue Reading

ಪೊಲೀಸರಿಗೆ ಬ್ಲಾಕ್ಮೇಲ್: ಖಾಸಗಿ ಸುದ್ದಿವಾಹಿನಿಯ ಪತ್ರಕರ್ತ ಅರೆಸ್ಟ್

ಡ್ರಗ್ಸ್ ದಂಧೆ ಶಾಮೀಲಾತಿಯ ಸ್ಟೋರಿ; ಹದಿನೈದು ಲಕ್ಷ ರೂಪಾಯಿ ಡಿಮ್ಯಾಂಡ್ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ವಾಟ್ಸಾಪ್ ಕರೆ ಮಾಡಿ ತಲಾ 5 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನೊಬ್ಬನನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ರಕರ್ತ ಶರತ್ ಶರ್ಮಾ ಕಲಗಾರು ಎಂಬಾತನೇ ಬಂಧಿತ ಆರೋಪಿ. ಬಾಗಲೂರು ಠಾಣೆ ಸಬ್ ಇನ್ಸ್ ಪೆಕ್ಟರ್ ರಮೇಶ್ ಎಂಬುವರ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ […]

Continue Reading

ವಾಹನ ಚಾಲನಾ ಪರವಾನಿಗೆಯ ಅವಧಿ ಮುಗಿದ ನಂತರ ಸ್ವಯಂಚಾಲಿತವಾಗಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 14ರ ತಿದ್ದುಪಡಿ ಮಾಡದ ಕೊನೆಯ ನಿಬಂಧನೆಯಲ್ಲಿ ಒದಗಿಸಿದಂತೆ, ಚಾಲನಾ ಪರವಾನಗಿಯು ಈಗ ಅದರ ಅವಧಿ ಮುಗಿದ ನಂತರ ಸ್ವಯಂಚಾಲಿತವಾಗಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2019ರ ತಿದ್ದುಪಡಿ ಕಾಯ್ದೆಯ ನಂತರ, ಅವಧಿ ಮುಗಿದ ದಿನಾಂಕದ ಮರುದಿನದಿಂದಲೇ, ನವೀಕರಣವಿಲ್ಲದೆ, ಅವಧಿ ಮುಗಿದ ಪರವಾನಗಿಯನ್ನು ಹೊಂದಿರುವ ವ್ಯಕ್ತಿಯು ಅಂತಹ ಪರವಾನಗಿಯನ್ನು ಹೊಂದಿದ್ದ ವಾಹನಗಳನ್ನು ಓಡಿಸಲು ಅಸಮರ್ಥನಾಗಿದ್ದಾನೆ ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಎಸ್ ವಿ ಎನ್ ಭಟ್ಟಿ ಅವರ ಪೀಠವು […]

Continue Reading

ಹನ್ನೊಂದು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್ಐಆರ್ ನಡೆಸಿ, 3.67 ಕೋಟಿ ಮತದಾರರ ಕೈಬಿಟ್ಟ ಕೇಂದ್ರ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಸಿ, 3.67 ಕೋಟಿ ಮತದಾರರನ್ನು ಕೈಬಿಟ್ಟಿದೆ. ಎರಡನೇ ಹಂತದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೈಗೊಂಡ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್‌ನ ಕರಡು ಮತದಾರರ ಪಟ್ಟಿ ಮಂಗಳವಾರ ಪ್ರಕಟವಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಗೋವಾ, ಪುದುಚೇರಿ, ಲಕ್ಷದ್ವೀಪ, ಗುಜರಾತ್ ಮತ್ತು ತಮಿಳುನಾಡಿನ ಕರಡು ಪಟ್ಟಿಗಳನ್ನು ಆಯೋಗವು ಕಳೆದ ಹತ್ತು ದಿನಗಳಲ್ಲಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ […]

Continue Reading

ಪಾಕಿಸ್ತಾನ ಪರ ಗೌಪ್ಯ ಮಾಹಿತಿ ರವಾನೆ; ಆರೋಪಿಗಳಿಗೆ ಸಿಮ್ ಕಾರ್ಡ್ ನೀಡುತ್ತಿದ್ದ ಗುಜರಾತ್ ಮೂಲದ ಹೀರೇಂದ್ರ ಕುಮಾರ್ ಖಡಯಾತ್ ಬಂಧನ

ಉಡುಪಿ: ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತಿ‌ನ ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ ಎಂದು ಗುರುತಿಸಲಾಗಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ […]

Continue Reading

ಮೋದಿ ಆಡಳಿತದಿಂದ ಗ್ರಾಮೀಣ ಜನರ ಬದುಕು ಬುಲ್ಡೋಜ್; ಕೇಂದ್ರ ಸರಕಾರದ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದ ‘ಮನಾರೇಗ’ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಯೋಜನೆಯನ್ನು ಬುಲ್ಡೋಜ್ ಮಾಡಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. “ಹಳ್ಳಿಯ ಜನರ ಉದ್ಯೋಗದ ಹಕ್ಕು ಕಸಿದುಕೊಳ್ಳುವ ಉದ್ದೇಶ ‘ವಿಬಿ ಜಿ ರಾಮ್ ಜಿ’ (ವಿಕಸಿತ ಭಾರತ -ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್) ವಿಧೇಯಕದ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸಲಿದೆ. ವಿಧೇಯಕ ಹಿಂದಕ್ಕೆ ಪಡೆಯುವ ತನಕ ಪಕ್ಷದ […]

Continue Reading