ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು

ಭಾರತದ ಸುಪ್ರೀಂ ಕೋರ್ಟ್ ಇತ್ತೀಚೆಗೆ ‘ಪರಮ್ ವೀರ್ ಸಿಂಗ್ ಸೈನಿ ವಿರುದ್ಧ ಬಲ್ಜಿತ್ ಸಿಂಗ್ ಮತ್ತು ಇತರರು’ ಪ್ರಕರಣದಲ್ಲಿ (ವಿಶೇಷ ಮೇಲ್ಮನವಿ ಅರ್ಜಿ ಕ್ರಿಮಿನಲ್ ಸಂಖ್ಯೆ 3543/2020) ಪೊಲೀಸ್ ಠಾಣೆಗಳಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ದೇಶದಾದ್ಯಂತ ಅಪರಾಧ ಸ್ಥಳಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮತ್ತು ಸೆಕ್ಷನ್ 161 ಸಿಆರ್‌ಪಿಸಿ ಹೇಳಿಕೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ ಮಾಡುವ ಪ್ರಮುಖ ಕಾನೂನು ವಿಚಾರವನ್ನು ಈ ಪ್ರಕರಣವು […]

Continue Reading

ಅಧಿಕಾರದ ಜಟಾಪಟಿಯ ನಡುವೆ, ಮೊದಲ ಬಾರಿಗೆ ಆಯ್ಕೆಯಾದ ಯುವ ಶಾಸಕರು, ಹಿರಿಯ ಶಾಸಕರು ಸಿಡಿದೆದ್ದು ಪಕ್ಷದ ಹೈಕಮಾಂಡ್‌ ಗೆ ಪತ್ರ ಬರೆದು ಹೊಸ ಸಂಚಲನ

ಅಧಿಕಾರ ಹಂಚಿಕೆಯ ಜಟಾಪಟಿಯ ನಡುವೆಯೇ ಕಾಂಗ್ರೆಸ್ ನಲ್ಲಿ ಮೊದಲ ಬಾರಿಗೆ ಆಯ್ಕೆಯಾದವರು ಹಾಗೂ ಹಿರಿಯ ಶಾಸಕರು ಪಕ್ಷದ ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದಿದ್ದು ಸಂಚಲನ ಸೃಷ್ಟಿಸಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಡಿದೆದ್ದಿರುವ ಶಾಸಕರು ನೇರವಾಗಿ ರಾಹುಲ್‌ ಗಾಂಧಿ, ಸುರ್ಜೇವಾಲಾ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರಿಗೂ ಪತ್ರ ಬರೆದು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಸಂಪುಟ ಪುನರ್‌ ರಚನೆಯ ವಿಚಾರದಲ್ಲಿ ಹೈಕಮಾಂಡ್‌ನ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಶಾಸಕರಿಗೆ ಅದರಲ್ಲೂ ಮೊದಲ […]

Continue Reading

ಮಕ್ಕಳ ಅಶ್ಲೀಲ ವಿಡಿಯೋ; ಇಂಟರ್ ಪೋಲ್ ಮೂಲಕ ಬೆಳಕಿಗೆ ಬಂದ ಕೃತ್ಯ, 47 ದೇಶಗಳಲ್ಲಿ ಮಾರಾಟ, ಎಂಜಿನಿಯರ್ ದಂಪತಿಗಳಿಗೆ ಗಲ್ಲು.

ಲೈಂಗಿಕ ಅಪರಾಧ ಸೇರಿದಂತೆ 33 ಮಕ್ಕಳ ಮೇಲೆ ಘೋರ ಅಪರಾಧಗಳನ್ನು ಎಸಗಿದ ದಂಪತಿಗೆ ಉತ್ತರ ಪ್ರದೇಶದ ಪೋಕ್ಸೋ ವಿಚಾರಣಾ ನ್ಯಾಯಾಲಯ ಶುಕ್ರವಾರ ಮರಣದಂಡನೆ ವಿಧಿಸಿದೆ. ನೀರಾವರಿ ಇಲಾಖೆಯ ಮಾಜಿ ಜೂನಿಯರ್ ಎಂಜಿನಿಯರ್ ರಾಮ್‌ಭವನ್‌ ಮತ್ತು ಆತನ ಪತ್ನಿ ದುರ್ಗಾವತಿಗೆ ಉತ್ತರ ಪ್ರದೇಶದ ಬಾಂದಾದಲ್ಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅಡಿಯ ವಿಶೇಷ ನ್ಯಾಯಾಧೀಶರು ಮರಣ ದಂಡನೆ ವಿಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯಡಿ ವಿವಿಧ ಅಪರಾಧಗಳಿಗಾಗಿ ಆರೋಪಿಗಳಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಕೇಂದ್ರ […]

Continue Reading

400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ. ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ವರದಿ

ಕರ್ನಾಟಕ-ಗೋವಾ ಗಡಿಯಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (SIT) ತನ್ನ ವರದಿಯಲ್ಲಿ ತಿಳಿಸಿದೆ.ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ ಹೇಳಿಕೆಗಳಲ್ಲಿ ಗಂಭೀರ ವ್ಯತ್ಯಾಸಗಳು, ಕರೆ ವಿವರಗಳು, ಪ್ರಯಾಣ ಮಾರ್ಗ ಮತ್ತು ಸಮಯದಲ್ಲಿ ಹೋಲಿಕೆಯಾಗಿಲ್ಲ ಎಂದು ತನಿಖೆಯಲ್ಲಿ ಧೃಢಪಟ್ಟಿದೆ. ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಯಲ್ಲಿ ಜನವರಿ 2026ರಂದು ಸಲ್ಲಿಸಲಾದ ದೂರಿನಲ್ಲಿ ನಾಸಿಕ್ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಗೋವಾದಿಂದ ಅಹಮದಾಬಾದ್‌ನ ಒಂದು ಆಶ್ರಮಕ್ಕೆ […]

Continue Reading

ನ್ಯಾಯಮೂರ್ತಿಗಳ ವಿರುದ್ಧ ಸಿಜೆಐ ಕಚೇರಿಗೆ 2016 ರಿಂದ 2026ರ ವರೆಗೆ 8,630 ದೂರು; ಕೇಂದ್ರ ಕಾನೂನು ಸಚಿವಾಲಯ ಬಹಿರಂಗ

ನ್ಯಾಯಮೂರ್ತಿಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ 2016ರಿಂದ ಇಲ್ಲಿಯವರೆಗೆ 8,630 ದೂರುಗಳು ಬಂದಿವೆ ಎಂದು ಕೇಂದ್ರ ಕಾನೂನು ಸಚಿವಾಲಯವು ಲೋಕಸಭೆಯಲ್ಲಿ ಶುಕ್ರವಾರ ಬಹಿರಂಗಪಡಿಸಿದೆ. ಲೋಕಸಭೆಯಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಡಿಎಂಕೆ ಸಂಸದ ಮಾಥೇಶ್ವರನ್ ವಿ.ಎಸ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್‌ ಈ ಉತ್ತರ ನೀಡಿದರು. ಹೈಕೋರ್ಟ್‌ಗಳು ಅಥವಾ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾಗಿರುವ ಭ್ರಷ್ಟಾಚಾರ, ಲೈಂಗಿಕ ದುರ್ನಡತೆ ಅಥವಾ ಇತರ ಗಂಭೀರ ಅನುಚಿತ ವರ್ತನೆಗೆ ಸಂಬಂಧಿಸಿದ ದೂರುಗಳ ಬಗ್ಗೆ […]

Continue Reading

ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ

ಎಲ್ಲಾ ರಾಜ್ಯಗಳಲ್ಲೂ ಭ್ರಷ್ಟಾಚಾರ; ಪ್ರಧಾನಿಗೆ CRF ನಿಂದ 700 ಪುಟಗಳ ವರದಿ, ಕಠಿಣ ಶಿಕ್ಷೆಯ ಕಾನೂನು ಜಾರಿಗೆ ಸಲಹೆ ಭ್ರಷ್ಟರಿಗೆ ಜೀವಾವಧಿ ಮರಣದಂಡನೆ ಶಿಕ್ಷೆಯ ಜಾರಿಗೆ ತರಲು ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ […]

Continue Reading

ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ನಕಲಿ ಮಂತ್ರವಾದಿ; ರಾಜನ್ ಬಾಬು ಅಲಿಯಾಸ್ ಮುರಾರಿ ಬಂಧನ

ಕೊಲ್ಲಂ: ಮೂಢನಂಬಿಕೆಯ ಹೆಸರಿನಲ್ಲಿ ನಡೆದ ಘಟನೆಯೊಂದು ಬೆಚ್ಚಿಬೀಳಿಸಿದೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜನ್ ಬಾಬು ಅಲಿಯಾಸ್ ಮುರಾರಿ ಎಂಬ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಪುತೂರು ಪೊಲೀಸ್ ಠಾಣಾ ವ್ಯಾಪ್ತಿಯ ವೆಂಡರ್ ಎಂಬಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿ ಮೊದಲು ಜ್ಯೋತಿಷ್ಯದ ಸಲಹೆಗಾಗಿ ಆರೋಪಿಯನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಆರೋಪಿಯು, ನಿಮ್ಮೆಲ್ಲಾ ಕಷ್ಟಗಳಿಗೆ ಬಾಲಕಿಯ ದೇಹದಲ್ಲಿರುವ ‘ಕೆಟ್ಟ […]

Continue Reading

ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೂಗುದಾರ; ಆಕ್ಷೇಪಾರ್ಹ ವಿಷಯವನ್ನು ಮೂರು ಗಂಟೆಗಳ ಒಳಗೆ ತೆಗೆದುಹಾಕುವುದು ಕಡ್ಡಾಯ: ಕೇಂದ್ರ ಸರಕಾರ

ಭಾರತ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಅನ್ನು ಬಿಗಿಗೊಳಿಸಿದೆ. ನವೆಂಬರ್ 15, 2025 ರಿಂದ ಜಾರಿಗೆ ಬಂದ ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ನಿಯಮಗಳು, 2025 ಅನ್ನು ಜಾರಿಗೆ ತಂದಿದೆ. ತಿದ್ದುಪಡಿಗಳು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ, ವಿಶೇಷವಾಗಿ ಕಾನೂನುಬಾಹಿರ ಮತ್ತು ಹಾನಿಕಾರಕ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವ ಬಗ್ಗೆ ಸೂಚನೆ ನೀಡಿದೆ. ಭಾರತ ಸರ್ಕಾರವು AI-ರಚಿತ ಮತ್ತು ಡೀಪ್‌ಫೇಕ್ ವಿಷಯದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ, ಸಾಮಾಜಿಕ ಮಾಧ್ಯಮ […]

Continue Reading

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ಮೋದಿ ಖಡಕ್ ವಾರ್ನಿಂಗ್; ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಮುಗಿಸಲು ಮೇ ತಿಂಗಳ ಗುಡುವು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ನರೇಂದ್ರ ಮೋದಿಯವರು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಬೇಗ ಮುಗಿಸಲು ಮೇ ತಿಂಗಳ ಗುಡುವನ್ನು ಕೊಟ್ಟಿದ್ದಾರೆ. ಸರಿಯಾಗಿ ಕಾಮಗಾರಿ ನಿರ್ವಹಣೆ ಮಾಡದ ಕಾಂಟ್ರಾಕ್ಟರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ದೇಶಿಸಿದ್ದಾರೆ. ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸಲು ಒತ್ತು ನೀಡುವಂತೆ ಸಚಿವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳ ಗಡುವು ನೀಡಿದ್ದಾರೆ. ವಿಶೇಷವಾಗಿ ಮುಂಗಾರು ಹಂಗಾಮಿನಲ್ಲಿ ಮತ್ತು ಅದರ ನಂತರದ ಕಳಪೆ ರಸ್ತೆಗಳ ಬಗ್ಗೆ […]

Continue Reading

ಬಿಜೆಪಿಯಿಂದ ಆರ್ಎಸ್ಎಸ್ ಗೆ ಅಚ್ಛೇ ದಿನ್ ಬಂದಿಲ್ಲ; ಸ್ವಯಂಸೇವಕರ ಕಠಿಣ ಪರಿಶ್ರಮ, ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ ಆರ್‌ಎಸ್‌ಎಸ್‌ಗೆ ‘ಅಚ್ಛೇ ದಿನ್’ ಬಂದಿದೆ: ಮೋಹನ್ ಭಾಗವತ್

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ ಕಾರಣವಾಗಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.ಬಿಜೆಪಿ ಅಧಿಕಾರಕ್ಕೆ ಬಂದ ನಂತರ RSSಗೆ ಅಚ್ಛೇ ದಿನ್’ ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, “ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು. ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ […]

Continue Reading