ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಅಥವಾ ಗುಜರಿಗೆ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುವಂತಿಲ್ಲ: ದೆಹಲಿ ಸರ್ಕಾರ ಆದೇಶ

ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಗುಜರಿಗೆ ಹಾಕಬೇಕು’ ಎಂದು ದೆಹಲಿ ಸರ್ಕಾರವು ಗುರುವಾರ ಆದೇಶ ಹೊರಡಿಸಿದೆ.ಅವಧಿ ಮೀರಿದ ವಾಹನಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದು ಕಂಡುಬಂದಲ್ಲಿ, ಅದನ್ನು ಮಾರ್ಗಸೂಚಿ ಉಲ್ಲಂಘನೆ ಎಂದೇ ಪರಿಗಣಿಸಿ ವಶಕ್ಕೆ ಪಡೆಯುವುದಾಗಿ ನೋಟಿಸ್‌ನಲ್ಲಿ ಹೇಳಲಾಗಿದೆ. ಕಳೆದ ಫೆಬ್ರುವರಿಯಲ್ಲಿ ಈ ಕುರಿತು ಹೊರಡಿಸಿದ್ದ ಮಾರ್ಗಸೂಚಿಯನ್ನು ಪುನುರಚ್ಚರಿಸಿರುವ ಸರ್ಕಾರ, ಮನೆಯ ಮುಂಭಾಗದ ರಸ್ತೆಯನ್ನೂ ಒಳಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಅವಧಿ ಮೀರಿದ ವಾಹನಗಳನ್ನು ನಿಲ್ಲಿಸುವುದನ್ನು ಸಾರಿಗೆ ಇಲಾಖೆಯು ನಿರ್ಬಂಧಿಸಿದೆ. ಇಂಥ ವಾಹನಗಳನ್ನು ಅವುಗಳ ಮಾಲೀಕರು […]

Continue Reading

ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಜೂನ್ 26ಕ್ಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಂಗಳವಾರ ಜೂನ್ 26ಕ್ಕೆ ಮುಂದೂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರ್ಜಿದಾರರ ಪರ […]

Continue Reading

ಅರುಂಧತಿ ಮತ್ತು ಶೌಕತ್ ಹುಸೈನ್ ವಿರುದ್ಧದ ಯುಎಪಿಎ ಪ್ರಕರಣ ಹಿಂಪಡೆಯುವಿಕೆ, ಅಸಂವಿಧಾನಿಕ ಕಾನೂನು ರದ್ದತಿಗೆ ಪಿಯುಸಿಎಲ್ ಆಗ್ರಹ.

ಸೆಕ್ಷನ್ ಅಡಿಯಲ್ಲಿ ಅಪರಾಧಗಳಿಗಾಗಿ 2010 ರ ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಶೇಖ್ ಶೋಕತ್ ಹುಸೇನ್ (ಕಾಶ್ಮೀರದ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಅಂತರರಾಷ್ಟ್ರೀಯ ಕಾನೂನಿನ ಮಾಜಿ ಪ್ರೊಫೆಸರ್) ಅವರನ್ನು ಪ್ರಾಸಿಕ್ಯೂಟ್ ಮಾಡಲು ದೆಹಲಿ ಪೋಲೀಸ್ ಅನುಮತಿಯನ್ನು ನೀಡುವ ದೆಹಲಿ ಲೆಫ್ಟಿನೆಂಟ್-ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರ ನಿರ್ಧಾರವನ್ನು ಪಿಯುಸಿಎಲ್ ಖಂಡಿಸುತ್ತದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ 13. ಲೆಫ್ಟಿನೆಂಟ್ ಗವರ್ನರ್ ರ ಈ ನಿರ್ಧಾರವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 153B ಮತ್ತು 505 ರ […]

Continue Reading

ಜುಲೈ 22 ರಿಂದ ಪ್ರತಿದಿನ ಮಂಗಳೂರು-ಅಬುಧಾಬಿ ನಡುವೆ ವಿಮಾನ ಹಾರಾಟ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜುಲೈ 22 ರಿಂದ ಅಬುಧಾಬಿಗೆ ಪ್ರತಿದಿನ ಏರ್ ಇಂಡಿಯಾ ವಿಮಾನ ಹಾರಾಟ ನಡೆಯಲಿದೆ. ಅಬುಧಾಬಿಗೆ ವಾರಕ್ಕೆ 4 ದಿನಗಳ ಕಾಲ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಜುಲೈ 22 ರಿಂದ ಪ್ರತಿದಿನ ಹಾರಾಟ ನಡೆಸಲಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಹಾರಾಟ ನಡೆಸುತ್ತಿದ್ದು, ಇದೀಗ ಮೂರು ವಿಮಾನಗಳ ಹೆಚ್ಚುವರಿ ಸೇರ್ಪಡೆಯೊಂದಿಗೆ ಪ್ರತಿದಿನ ಹಾರಾಟ […]

Continue Reading

ಭಾರತಕ್ಕೆ ಕಾಲಿಟ್ಟ ಹಕ್ಕಿ ಜ್ವರ, 2019 ರ ಬಳಿಕ ವಿಶ್ವದಲ್ಲಿ ಕಾಣಿಸಿಕೊಂಡ ಎರಡನೇ ಪ್ರಕರಣ

ಪಶ್ಚಿಮ ಬಂಗಾಳದಲ್ಲಿ 4 ವರ್ಷದ ಮಗುವಿನಲ್ಲಿ ಎಚ್ 9ನ್2 (ಹಕ್ಕಿ ಜ್ವರ) ಕಾಣಿಸಿಕೊಂಡಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂ ಎಚ್ ಒ) ದೃಢೀಕರಿಸಿ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹಕ್ಕಿ ಜ್ವರ ಪೀಡಿತ ಮಗುವಿನ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಭಾರಿ ಜ್ವರದ ಲಕ್ಷಣಗಳು ಕೂಡ ಇದೆ. 2019 ರ ಬಳಿಕ ವಿಶ್ವದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಮಾನವ ಸೋಂಕಿನ ಎರಡನೇ ಪ್ರಕರಣ ಇದಾಗಿದೆ ಎಂದು ಡಬ್ಲ್ಯೂ ಎಚ್ ಒ ಹೇಳಿದೆ.

Continue Reading

ನ್ಯಾಯವಾದಿಗಳನ್ನು ಮುಟ್ಟಿದರೆ ಹುಷಾರ್.! ಜೈಲು ಶಿಕ್ಷೆ, ದಂಡ ಗ್ಯಾರಂಟಿ.

ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ ಜಾರಿ ವಕೀಲರ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದ್ದು, ವಕೀಲರ ರಕ್ಷಣೆಗೆ ಸಂಬಂಧಿಸಿದ “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ ಜಾರಿಗೆ ಬಂದಿದೆ. ಈ ಸಂಬಂಧ ರಾಜ್ಯ ಸರಕಾರ ಜೂನ್‌ 10ರಂದು ಗೆಜೆಟ್‌ ಅಧಿಸೂಚನೆ ಪ್ರಕಟಿಸಿದ್ದು, ಆ ದಿನದಿಂದಲೇ ಕಾಯ್ದೆ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು […]

Continue Reading

300 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಗಾಗಿ ಸ್ವಂತ ಮಾವನನ್ನೇ ಕೊಲ್ಲಲು ಸುಫಾರಿ ನೀಡಿದ ಕಿಲ್ಲರ್ ಸೊಸೆ

ಪಟ್ಟಣ ಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಅರ್ಚನಾ ಮನೀಷ್ ಪುಟ್ಟೇವಾರ್ ಬಂಧನ ಮಧ್ಯ ಪ್ರದೇಶದ ನಾಗಪುರದಲ್ಲಿ 82 ವರ್ಷದ ವ್ಯಕ್ತಿಯೊಬ್ಬರು ಹಿಟ್ ಅಂಡ್ ರನ್‌ನಲ್ಲಿ ಸಾವನ್ನಪ್ಪಿದ ಪ್ರಕರಣ ನಡೆದಿದೆ. 300 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಗಾಗಿ ಸ್ವಂತ ಸೊಸೆಯೇ ರೂಪಿಸಿದ್ದ ಭೀಕರ ಕೊಲೆ ಸಂಚು ಬಯಲಾಗಿದೆ. ನಾಗಪುರ ಪಟ್ಟಣ ಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಆಗಿರುವ ಅರ್ಚನಾ ಮನೀಷ್ ಪುಟ್ಟೇವಾರ್ ಅವರನ್ನು ಅವರ ಮಾವ ಪುರುಷೋತ್ತಮ ಪುಟ್ಟೇವಾರ್ ಕೊಲೆಯಾದ ಹದಿನೈದು ದಿನಗಳ ನಂತರ ಪೋಲೀಸರು ಬಂಧಿಸಿದ್ದಾರೆ. […]

Continue Reading

ಟೋಲ್ ಪ್ಲಾಜಾದಲ್ಲಿ ಟೋಲ್ ಪಾವತಿಸದೆ ಪ್ರಯಾಣಿಸಲು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (GNSS) ರಚಿಸಲು ಸರ್ಕಾರ ನಿರ್ಧರಿಸಿದೆ

ಹೆದ್ದಾರಿಗಳಲ್ಲಿ ಕಡಿಮೆ ದೂರಕ್ಕೂ ಹೆಚ್ಚಿನ ಶುಲ್ಕ ವಿಧಿಸುವ ಬಗ್ಗೆ ಪ್ರಯಾಣಿಕರ ಟೀಕೆಗಳು ಹೆಚ್ಚಾಗಿವೆ. ಇದರಿಂದಾಗಿ ವಾಹನಗಳು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಟೋಲ್ ಸಂಗ್ರಹದ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ. ಪ್ರಸ್ತುತ ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಹೊಸ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂಗಾಗಿ (GNSS) ಸಂಪೂರ್ಣ ಚೌಕಟ್ಟನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಟೋಲ್ ಪ್ಲಾಜಾದಲ್ಲಿ ಟೋಲ್ ಪಾವತಿಸದೆ ಪರ್ಯಾಯ ತಂತ್ರಜ್ಞಾನದೊಂದಿಗೆ ಪ್ರಯಾಣಿಸಿದ ದೂರಕ್ಕೆ ಅನುಗುಣವಾಗಿ ಹಣ ಸಂಗ್ರಹಿಸಲು ಚಿಂತನೆ ನಡೆಸಿದೆ. ಭಾರತದಾದ್ಯಂತ ಟೋಲ್ […]

Continue Reading

ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನ ದುರ್ಬಳಕೆ, ಸುಳ್ಳು ಸುದ್ದಿ ಹರಡುವ ರೀತಿ ಸರಿಯಲ್ಲ. ಚುನಾವಣಾ ಉನ್ಮಾದವನ್ನು ತೊಡೆದುಹಾಕಬೇಕು: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ರವರು ಮಣಿಪುರ ಸಂಘರ್ಷವನ್ನು ಆದ್ಯತೆಯ ಮೇಲೆ ಪರಿಹರಿಸಬೇಕು ಎಂದು ಹೇಳಿದ್ದಾರೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಗವತ್ ರವರು ಮಣಿಪುರ ಶಾಂತಿಗಾಗಿ ಕಾಯುತ್ತಾ ಒಂದು ವರ್ಷವಾಗಿದೆ, ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು, ಆದರೆ ಇದ್ದಕ್ಕಿದ್ದಂತೆ ರಾಜ್ಯದಲ್ಲಿ ಮತ್ತೆ ಬಂದೂಕು ಸಂಸ್ಕೃತಿ ಹೆಚ್ಚಾಗಿದೆ, ಇದು ಮುಖ್ಯವಾಗಿದ್ದು ಆದ್ಯತೆಯ ಮೇಲೆ ಇಲ್ಲಿನ ಸಂಘರ್ಷವನ್ನು ಪರಿಹರಿಸಿ ಎಂದು ಆಗ್ರಹಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯ ನಂತರದ ತಮ್ಮ ಮೊದಲ ಹೇಳಿಕೆಯಲ್ಲಿ, […]

Continue Reading

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ, ಅವರು “ಗಂಭೀರ ಮತ್ತು ಅತೀ ಗಂಭೀರ” ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಅವರು ಪ್ರಭಾವ ಬೀರಬಹುದು ಎಂಬ ಆತಂಕವಿದೆ ಎಂದು ಹೇಳಿದ್ದಾರೆ. ಕಳೆದ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲ್ಪಟ್ಟ ಕುಮಾರ್, ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಮಲಿವಾಲ್ […]

Continue Reading