ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ: ಸುಪ್ರೀಂ ಕೋರ್ಟ್

ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ. ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ ತೀರ್ಪಿನ ವಿರುದ್ಧ ಜೊಹರಾಬಿ ಎಂಬ ಮುಸ್ಲಿಂ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. […]

Continue Reading

ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು 14 ತಿಂಗಳಿನಿಂದ 3 ತಿಂಗಳಿಗೆ ಇಳಿಕೆ

ಅಪರಾಧಿಗಳ ತ್ವರಿತ ಬಂಧನ ಪ್ರಕ್ರಿಯೆಗೆ ಇದು ಸಹಕಾರಿ: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ದೇಶದಿಂದ ಪರಾರಿಯಾದ ಘೋಷಿತ ಅಪರಾಧಿಗಳ ಪತ್ತೆ ಅಥವಾ ಬಂಧನಕ್ಕೆ ತನಿಖಾ ಸಂಸ್ಥೆಗಳು ಹೊರಡಿಸುವ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ತೆಗೆದುಕೊಳ್ಳುತ್ತಿದ್ದ ಸಮಯವನ್ನು 14 ತಿಂಗಳ ಬದಲು ಮೂರು ತಿಂಗಳಿಗೆ ಇಳಿಕೆ ಮಾಡಲಾಗಿದೆ. “ಭಾರತ್ ಪೋಲ್ ವ್ಯವಸ್ಥೆ ಜಾರಿಯಾದ ಬಳಿಕ ರೆಡ್ ಕಾರ್ನರ್ ನೋಟಿಸ್ ಜಾರಿ ಸಂಬಂಧ ಇಂಟರ್ ಪೋಲ್ ನಡೆಸುತ್ತಿದ್ದ ಕಾನೂನು ಪ್ರಕ್ರಿಯೆ 14 ತಿಂಗಳ ಬದಲು ಮೂರು ತಿಂಗಳಿಗೆ […]

Continue Reading

ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣ: ಪ್ರಾಯೋಜಕ (ಸ್ಪಾನ್ಸರ್) ಉಣ್ಣಿಕೃಷ್ಣನ್ ಪೋಟಿ ವಶಕ್ಕೆ, ವಿಶೇಷ ತನಿಖಾ ತಂಡದಿಂದ ವಿಚಾರಣೆ

ತಿರುವನಂತಪುರಂ: ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಪ್ರಾಯೋಜಕ ಉಣ್ಣಿಕೃಷ್ಣನ್ ಪೋಟಿ ಅವರನ್ನು ವಿಶೇಷ ತನಿಖಾ ತಂಡ (Special Investigation Team – SIT) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪುಳಿಮಾತ್ನಲ್ಲಿರುವ ಅವರ ಮನೆಯಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ಅವರ ಬಂಧನವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದ್ವಾರಪಾಲಕ ಪ್ಯಾನೆಲ್‌ಗಳು ಮತ್ತು ಕದಗಳ ಪ್ಯಾನೆಲ್‌ಗಳಲ್ಲಿನ ಚಿನ್ನದ ಕಳ್ಳತನಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಗರಿಷ್ಠ ಸಾಕ್ಷ್ಯಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸಿದ ನಂತರವೇ […]

Continue Reading

ರಸ್ತೆ ಗುಂಡಿಗಳು, ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಂಡವರಿಗೆ 6 ಲಕ್ಷ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಮಹಾರಾಷ್ಟ್ರದಲ್ಲಿ ರಸ್ತೆಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರಕಾರಕ್ಕೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ನ್ಯಾಯಮೂರ್ತಿ ಸಂದೇಶ್ ಪಾಟೀಲ್ ಅವರಿದ್ದ ನ್ಯಾಯಪೀಠವು ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಂದ ಗಾಯಗೊಂಡವರಿಗೆ 50,000 ರೂಪಾಯಿಯಿಂದ 2.5 ಲಕ್ಷ ರೂಪಾಯಿ ವರೆಗೆ ಪರಿಹಾರ ನೀಡಬೇಕು ಎಂದು ಹೇಳಿದೆ. ಸಂವಿಧಾನದ 21ನೇ ವಿಧಿಯ […]

Continue Reading

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಒಬ್ಬ ಒಳನುಸುಳುಕೋರ, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು: ಅಖಿಲೇಶ್‌ ಯಾದವ್‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಒಬ್ಬ ಒಳನುಸುಳುಕೋರನಾಗಿದ್ದು, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ಆಗ್ರಹಿಸಿದ್ದಾರೆ. ಲಕ್ನೋದಲ್ಲಿ ನಡೆದ ರಾಮ್‌ ಮನೋಹರ್‌ ಲೋಹಿಯಾ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳನುಸುಳುಕೋರರ ಬಗ್ಗೆ ಬಿಜೆಪಿ ಲೆಕ್ಕಾಚಾರ ಕೊಡುತ್ತಿದೆ. ಉತ್ತರ ಪ್ರದೇಶದಲ್ಲಿಯೂ ಒಳನುಸುಳುಕೋರರಿದ್ದಾರೆ. ನಮ್ಮ ಮುಖ್ಯಮಂತ್ರಿ ಉತ್ತರಾಖಂಡದವರು. ಅವರನ್ನು ಅಲ್ಲಿಗೇ ಕಳುಹಿಸಬೇಕು. ಸೈದ್ಧಾಂತಿಕವಾಗಿಯೂ ಅವರು ಒಳನುಸುಳುಕೋರ. ಅವರು ಮೊದಲು ಬಿಜೆಪಿಯಲ್ಲಿರಲಿಲ್ಲ. ಇಂತಹ ಒಳನುಸುಳುಕೋರರನ್ನು ಯಾವಾಗ ಹೊರಹಾಕುತ್ತೀರಿ ಎಂದು ಅಖಿಲೇಶ್ […]

Continue Reading

ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು-ನೀಲಿ ಬಣ್ಣದ ಬೀಕನ್ ಗಳ ಬಳಕೆ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ: ಸು.ಕೋ

ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.ಕಾನೂನು ಬಾಹಿರ ಎಲ್‌ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು ಹೆಚ್ಚಿಸುತ್ತಿವೆ. ತುರ್ತು ವಾಹನಗಳಿಗೆಂದು ಇರುವ ಕೆಂಪು- ನೀಲಿ ಬೀಕನ್ ಗಳನ್ನು ಖಾಸಗಿ ವಾಹನಗಳಲ್ಲಿ ಬಳಸಲಾಗುತ್ತಿದೆ.ಇದು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಬಳಕೆ […]

Continue Reading

ಅನ್ ಲೈನ್ ಪ್ರಕರಣದ ಸೈಬರ್ ವಂಚಕರ ಬಂಧನ. 150 ಕೋಟಿ ರೂ. ವಂಚನೆ, 127 ಪ್ರಕರಣಗಳು ದಾಖಲು, ಮೊದಲ ಬಾರಿಗೆ ಸಿಕ್ಕಿಬಿದ್ದ ಆರೋಪಿ.

ಸೈಬರ್ ಅಪರಾಧ ಠಾಣೆ ಪೊಲೀಸರು ಆನ್‌ಲೈನ್‌ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿ ನೂರಾರು ಕೋಟಿ ರೂ. ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್‌ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಹಾಸನ ಬೇಲೂರಿನ ಶಾಂತಿನಗರದ ನಿವಾಸಿ ಸೈಯದ್ ಅರ್ಫಾತ್ ಪಾಷ ಬಂಧಿತ. ಪ್ರಮುಖ ಆರೋಪಿ ಹೈದರಾಬಾದ್‌ ಮೂಲದ ಉಬೇದ್‌ ತಲೆಮರೆಸಿಕೊಂಡಿದ್ದಾನೆ. ದಾವಣಗೆರೆಯ ಉದ್ಯಮಿಯ ಬ್ಯಾಂಕ್‌ ಖಾತೆಯಲ್ಲಿದ್ದ ರೂ. 52.60 ಲಕ್ಷ ಹಣವನ್ನು ಆರೋಪಿಗಳು ನೆಟ್‌ ಬ್ಯಾಂಕಿಂಗ್‌ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. […]

Continue Reading

ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಮೂವರ ಬಂಧನ. ಒಟ್ಟು 9.01 ಕೆ.ಜಿ ಚಿನ್ನಾಭರಣ, ರೂ. 86,31,220 ನಗದು ವಶ.

ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ. ಚಡಚಣ ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ರೂ. 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ. ಬಂಧಿತ ಮಹಾರಾಷ್ಟ್ರದ […]

Continue Reading

ಮುಖ್ಯನ್ಯಾಯಮೂರ್ತಿಗಳ ಮೇಲೆ ದಾಳಿ-ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ: ಸಿಪಿಐ(ಎಂ) ಖಂಡನೆ

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ದಸ್ತಗಿರಿಯಾಗಿರುವ ಸಂಬಂಧಪಟ್ಟ ವಕೀಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅದು ಒತ್ತಾಯಿಸಿದೆ. ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲಾಗಿದ್ದು, ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಮತ್ತು ಶೋಚನೀಯ. ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು […]

Continue Reading

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ಹಲ್ಲೆ ಯತ್ನ ಖಂಡನೆ.

ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿದ್ದ ವೇಳೆ ಇಂದು (6.10.2025) ಮತಾಂಧ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ಶೂ ಎಸೆದು ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ.ಜಿಲ್ಲಾ ಘಟಕವು ತೀವ್ರವಾಗಿ‌ ಖಂಡಿಸುತ್ತದೆ. ಆರ್.ಎಸ್.ಎಸ್. ಸಂಘಟನೆಯ ನೂರು ವರ್ಷದ ಸಂಭ್ರಮಾಚರಣೆಯ ಕರಿ ನೆರಳು ಈ ಮನುವಾದಿ, ದಲಿತ ವಿರೋಧಿ ಕೃತ್ಯದ ಹಿಂದೆ ಅಡಗಿದೆ. ನ್ಯಾಯಮೂರ್ತಿ ಗವಾಯಿಯವರ ತಾಯಿ ಕಮಲಾದೇವಿಯವರು ಆರ್.ಎಸ್.ಎಸ್. 100 ರ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ಬೆನ್ನಲ್ಲೇ ‘ಸನಾತನ […]

Continue Reading