ಬಿಜೆಪಿ ನಿತೀಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ: ಖರ್ಗೆ

ಬಿಹಾರ: ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ, ಬಿಜೆಪಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ಕೇಸರಿ ಪಕ್ಷದ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಜಿಪುರದ ಪ್ರಧಾನ ಕಚೇರಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ರಾಜಾ ಪಕರ್‌ನಲ್ಲಿ ತಮ್ಮ ಮೊದಲ ಬಿಹಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಜಯಪ್ರಕಾಶ್ ನಾರಾಯಣ್, ರಾಮ್ ಮನೋಹರ್ ಲೋಹಿಯಾ ಮತ್ತು ಕರ್ಪೂರಿ ಠಾಕೂರ್ ಅವರಂತಹ ಸಮಾಜವಾದಿ ಐಕಾನ್‌ಗಳ ಪರಂಪರೆಗೆ […]

Continue Reading

ಕ್ರಿಮಿನಲ್‌ ಪ್ರಕರಣಗಳ ತನಿಖೆ ಸಂದರ್ಭದಲ್ಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದ ಹೊರತು ತನಿಖಾಧಿಕಾರಿಗಳು ವಕೀಲರಿಗೆ ಸಮನ್ಸ್‌ ನೀಡುವಂತಿಲ್ಲ: ಸುಪ್ರೀಂ ಕೋರ್ಟ್‌

ಕ್ರಿಮಿನಲ್‌ ಪ್ರಕರಣಗಳ ತನಿಖೆ ಸಂದರ್ಭದಲ್ಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಅನುಮೋದನೆ ಇಲ್ಲದ ಹೊರತು ತನಿಖಾಧಿಕಾರಿಗಳು ವಕೀಲರಿಗೆ ಸಮನ್ಸ್‌ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ತನ್ನ ಕಕ್ಷಿದಾರರಿಗೆ ಕಾನೂನು ಸಲಹೆ ನೀಡುವ ವಕೀಲರಿಗೆ ತನಿಖಾ ಸಂಸ್ಥೆಗಳು ಮನಸ್ಸಿಗೆ ತೋಚಿದಂತೆ ಸಮನ್ಸ್‌ ನೀಡುವುದಕ್ಕೆ ಕಡಿವಾಣ ಹಾಕುವುದಕ್ಕಾಗಿ ಸುಪ್ರೀಂ ಕೋರ್ಟ್‌, ಹಲವು ನಿರ್ದೇಶನಗಳನ್ನೂ ನೀಡಿದೆ. ಪ್ರಕರಣವೊಂದರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಹಿರಿಯ ವಕೀಲರಾದ ಅರವಿಂದ ದಾತಾರ್ ಮತ್ತು ಪ್ರತಾಪ್‌ ವೇಣುಗೋಪಾಲ್‌ ಅವರಿಗೆ ನೀಡಿದ್ದ ಸಮನ್ಸ್‌ಗಳನ್ನು […]

Continue Reading

ಬರೋಬ್ಬರಿ 49 ಕೋಟಿ ರೂಪಾಯಿ ದೋಚಿದ್ದ ಸೈಬರ್ ವಂಚಕರು, ರಾಜಸ್ಥಾನ ಮೂಲದ ಇಬ್ಬರು ಮಾಸ್ಟರ್ ಮೈಂಡ್‌ಗಳು

ಇಬ್ಬರು ಸೈಬರ್ ವಂಚಕರನ್ನು ಬಂಧಿಸುವಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಯಶಸ್ವಿ ಖಾಸಗಿ ಫೈನಾನ್ಸ್ ಕಂಪನಿಯೊಂದರ ಆಯಪ್‌ ಹ್ಯಾಕ್‌ ಮಾಡಿ ಎರಡು ತಾಸಿನಲ್ಲಿ ಬರೋಬ್ಬರಿ 49 ಕೋಟಿ ರೂಪಾಯಿ ದೋಚಿದ್ದ ಸೈಬರ್ ವಂಚನೆ ಜಾಲದ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಸಂಜಯ್ ಪಾಟೀಲ್ ಹಾಗೂ ಬೆಳಗಾವಿಯ ಇಸ್ಮಾಯಿಲ್ ರಶೀದ್‌ ಅತ್ತಾರ್ ಬಂಧಿತ ಸೈಬರ್ ವಂಚಕರು. ಆರೋಪಿಗಳಿಂದ ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಿದ್ದ 10 ಕೋಟಿ ರೂ ಜಪ್ತಿ ಮಾಡಲಾಗಿದೆ. ಈ ವಂಚಕ ಜಾಲದ […]

Continue Reading

ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ: ದಿಲ್ಲಿ ಹೈಕೋರ್ಟ್

ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ ನೀಡಲಾಗುತ್ತದೆಯೇ ಹೊರತು ಇಬ್ಬರು ಸಮರ್ಥ ವ್ಯಕ್ತಿಗಳ ಆರ್ಥಿಕ ಸ್ಥಿತಿಯನ್ನು ಅಳೆಯುವ ಸಾಧನವಾಗಿ ಅಲ್ಲ” ಎಂದು ಪೀಠ ಅಭಿಪ್ರಾಯ ವಿಚ್ಛೇದನ ಪಡೆದ ಸಂಗಾತಿ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಜೀವನಾಂಶವನ್ನು ನೀಡುವ ಅಗತ್ಯವಿಲ್ಲ ಎಂದು ತೀರ್ಪು ನೀಡಿದೆ. ಭಾರತೀಯ ರೈಲ್ವೆ ಸಂಚಾರ ಸೇವೆಯ ಗ್ರೂಪ್ ‘ಎ’ ಅಧಿಕಾರಿಯಾಗಿರುವ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಅನಿಲ್ ಕ್ಷೇತ್ರಪಾಲ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. “ಶಾಶ್ವತ ಜೀವನಾಂಶವನ್ನು ಸಾಮಾಜಿಕ ನ್ಯಾಯಕ್ಕಾಗಿ […]

Continue Reading

ಮಹಾರಾಷ್ಟ್ರದಲ್ಲಿ 96 ಲಕ್ಷ ‘ನಕಲಿ’ ಮತದಾರರು; ಸ್ಥಳೀಯ ಚುನಾವಣೆಗೆ ಮುನ್ನ ಶುದ್ಧೀಕರಣಕ್ಕೆ ಆಗ್ರಹ: ರಾಜ್ ಠಾಕ್ರೆ

ಮುಂಬೈ: (ಅಕ್ಟೋಬರ್ 19) ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ ಮತ್ತು ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೇಗೆ ನಡೆಸುತ್ತೀರಿ ಎಂದು ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಯ ಬೂತ್ ಮಟ್ಟದ ಏಜೆಂಟ್‌ಗಳನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರ ಪಟ್ಟಿಯಲ್ಲಿ ತಿರುಚುವ ಮೂಲಕ ಚುನಾವಣೆ ನಡೆಸಿದರೆ, ಅದು ಮತದಾರರಿಗೆ ಮಾಡುವ ದೊಡ್ಡ ಅವಮಾನ ಎಂದು […]

Continue Reading

ರಾಜ್ಯದಲ್ಲಿ ವೋಟ್ ಚೋರಿ ಪ್ರಕರಣ ಬಾರಿ ಸದ್ದು ಮಾಡುತ್ತಿದೆ. ವೋಟ್ ಚೋರಿ ಪ್ರಕರಣ ಇದೀಗ ಬಿಜೆಪಿ ಬುಡಕ್ಕೆ.

ರಾಜ್ಯದಲ್ಲಿ ವೋಟ್ ಚೋರಿ ಪ್ರಕರಣ ಸದ್ದು ಬಾರಿ ಮಾಡುತ್ತಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ ಬಳಿಕ ರಾಜ್ಯ ಎಸ್​ಐಟಿ ತಂಡ ಅಖಾಡಕ್ಕೆ ಇಳಿದಿದೆ. ಪ್ರಕರಣ ಈಗ ಬಿಜೆಪಿ ಬುಡಕ್ಕೆ ಬರುತ್ತಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತಗಳ್ಳತನ ಆರೋಪ ಪ್ರಕರಣವನ್ನು ಕರ್ನಾಟಕ ಸರ್ಕಾರ ಸೀರಿಯಸ್ ಆಗಿ ಪರಿಗಣಿಸಿದೆ. ಮತಗಳ್ಳತನ ಪ್ರಕರಣದ ತನಿಖೆಗೆ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ಇದೀಗ ಈ ಕೇಸ್ ಬಿಜೆಪಿ ಮಾಜಿ ಶಾಸಕನ ಮನೆಯ ಅಂಗಳಕ್ಕೆ ಬಂದು […]

Continue Reading

ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ: ಸುಪ್ರೀಂ ಕೋರ್ಟ್

ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ. ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ ತೀರ್ಪಿನ ವಿರುದ್ಧ ಜೊಹರಾಬಿ ಎಂಬ ಮುಸ್ಲಿಂ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. […]

Continue Reading

ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು 14 ತಿಂಗಳಿನಿಂದ 3 ತಿಂಗಳಿಗೆ ಇಳಿಕೆ

ಅಪರಾಧಿಗಳ ತ್ವರಿತ ಬಂಧನ ಪ್ರಕ್ರಿಯೆಗೆ ಇದು ಸಹಕಾರಿ: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ದೇಶದಿಂದ ಪರಾರಿಯಾದ ಘೋಷಿತ ಅಪರಾಧಿಗಳ ಪತ್ತೆ ಅಥವಾ ಬಂಧನಕ್ಕೆ ತನಿಖಾ ಸಂಸ್ಥೆಗಳು ಹೊರಡಿಸುವ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ತೆಗೆದುಕೊಳ್ಳುತ್ತಿದ್ದ ಸಮಯವನ್ನು 14 ತಿಂಗಳ ಬದಲು ಮೂರು ತಿಂಗಳಿಗೆ ಇಳಿಕೆ ಮಾಡಲಾಗಿದೆ. “ಭಾರತ್ ಪೋಲ್ ವ್ಯವಸ್ಥೆ ಜಾರಿಯಾದ ಬಳಿಕ ರೆಡ್ ಕಾರ್ನರ್ ನೋಟಿಸ್ ಜಾರಿ ಸಂಬಂಧ ಇಂಟರ್ ಪೋಲ್ ನಡೆಸುತ್ತಿದ್ದ ಕಾನೂನು ಪ್ರಕ್ರಿಯೆ 14 ತಿಂಗಳ ಬದಲು ಮೂರು ತಿಂಗಳಿಗೆ […]

Continue Reading

ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣ: ಪ್ರಾಯೋಜಕ (ಸ್ಪಾನ್ಸರ್) ಉಣ್ಣಿಕೃಷ್ಣನ್ ಪೋಟಿ ವಶಕ್ಕೆ, ವಿಶೇಷ ತನಿಖಾ ತಂಡದಿಂದ ವಿಚಾರಣೆ

ತಿರುವನಂತಪುರಂ: ಶಬರಿಮಲೆ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಪ್ರಾಯೋಜಕ ಉಣ್ಣಿಕೃಷ್ಣನ್ ಪೋಟಿ ಅವರನ್ನು ವಿಶೇಷ ತನಿಖಾ ತಂಡ (Special Investigation Team – SIT) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪುಳಿಮಾತ್ನಲ್ಲಿರುವ ಅವರ ಮನೆಯಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ಅವರ ಬಂಧನವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದ್ವಾರಪಾಲಕ ಪ್ಯಾನೆಲ್‌ಗಳು ಮತ್ತು ಕದಗಳ ಪ್ಯಾನೆಲ್‌ಗಳಲ್ಲಿನ ಚಿನ್ನದ ಕಳ್ಳತನಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಗರಿಷ್ಠ ಸಾಕ್ಷ್ಯಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸಿದ ನಂತರವೇ […]

Continue Reading

ರಸ್ತೆ ಗುಂಡಿಗಳು, ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಂಡವರಿಗೆ 6 ಲಕ್ಷ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಮಹಾರಾಷ್ಟ್ರದಲ್ಲಿ ರಸ್ತೆಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರಕಾರಕ್ಕೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ನ್ಯಾಯಮೂರ್ತಿ ಸಂದೇಶ್ ಪಾಟೀಲ್ ಅವರಿದ್ದ ನ್ಯಾಯಪೀಠವು ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಂದ ಗಾಯಗೊಂಡವರಿಗೆ 50,000 ರೂಪಾಯಿಯಿಂದ 2.5 ಲಕ್ಷ ರೂಪಾಯಿ ವರೆಗೆ ಪರಿಹಾರ ನೀಡಬೇಕು ಎಂದು ಹೇಳಿದೆ. ಸಂವಿಧಾನದ 21ನೇ ವಿಧಿಯ […]

Continue Reading