ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಒಬ್ಬ ಒಳನುಸುಳುಕೋರ, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು: ಅಖಿಲೇಶ್‌ ಯಾದವ್‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಒಬ್ಬ ಒಳನುಸುಳುಕೋರನಾಗಿದ್ದು, ಅವರನ್ನು ಉತ್ತರಾಖಂಡಕ್ಕೆ ಗಡೀಪಾರು ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಭಾನುವಾರ ಆಗ್ರಹಿಸಿದ್ದಾರೆ. ಲಕ್ನೋದಲ್ಲಿ ನಡೆದ ರಾಮ್‌ ಮನೋಹರ್‌ ಲೋಹಿಯಾ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳನುಸುಳುಕೋರರ ಬಗ್ಗೆ ಬಿಜೆಪಿ ಲೆಕ್ಕಾಚಾರ ಕೊಡುತ್ತಿದೆ. ಉತ್ತರ ಪ್ರದೇಶದಲ್ಲಿಯೂ ಒಳನುಸುಳುಕೋರರಿದ್ದಾರೆ. ನಮ್ಮ ಮುಖ್ಯಮಂತ್ರಿ ಉತ್ತರಾಖಂಡದವರು. ಅವರನ್ನು ಅಲ್ಲಿಗೇ ಕಳುಹಿಸಬೇಕು. ಸೈದ್ಧಾಂತಿಕವಾಗಿಯೂ ಅವರು ಒಳನುಸುಳುಕೋರ. ಅವರು ಮೊದಲು ಬಿಜೆಪಿಯಲ್ಲಿರಲಿಲ್ಲ. ಇಂತಹ ಒಳನುಸುಳುಕೋರರನ್ನು ಯಾವಾಗ ಹೊರಹಾಕುತ್ತೀರಿ ಎಂದು ಅಖಿಲೇಶ್ […]

Continue Reading

ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು-ನೀಲಿ ಬಣ್ಣದ ಬೀಕನ್ ಗಳ ಬಳಕೆ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ: ಸು.ಕೋ

ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.ಕಾನೂನು ಬಾಹಿರ ಎಲ್‌ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು ಹೆಚ್ಚಿಸುತ್ತಿವೆ. ತುರ್ತು ವಾಹನಗಳಿಗೆಂದು ಇರುವ ಕೆಂಪು- ನೀಲಿ ಬೀಕನ್ ಗಳನ್ನು ಖಾಸಗಿ ವಾಹನಗಳಲ್ಲಿ ಬಳಸಲಾಗುತ್ತಿದೆ.ಇದು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಖಾಸಗಿ ವಾಹನಗಳಲ್ಲಿ ಎಲ್‌ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಬಳಕೆ […]

Continue Reading

ಅನ್ ಲೈನ್ ಪ್ರಕರಣದ ಸೈಬರ್ ವಂಚಕರ ಬಂಧನ. 150 ಕೋಟಿ ರೂ. ವಂಚನೆ, 127 ಪ್ರಕರಣಗಳು ದಾಖಲು, ಮೊದಲ ಬಾರಿಗೆ ಸಿಕ್ಕಿಬಿದ್ದ ಆರೋಪಿ.

ಸೈಬರ್ ಅಪರಾಧ ಠಾಣೆ ಪೊಲೀಸರು ಆನ್‌ಲೈನ್‌ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿ ನೂರಾರು ಕೋಟಿ ರೂ. ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್‌ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಹಾಸನ ಬೇಲೂರಿನ ಶಾಂತಿನಗರದ ನಿವಾಸಿ ಸೈಯದ್ ಅರ್ಫಾತ್ ಪಾಷ ಬಂಧಿತ. ಪ್ರಮುಖ ಆರೋಪಿ ಹೈದರಾಬಾದ್‌ ಮೂಲದ ಉಬೇದ್‌ ತಲೆಮರೆಸಿಕೊಂಡಿದ್ದಾನೆ. ದಾವಣಗೆರೆಯ ಉದ್ಯಮಿಯ ಬ್ಯಾಂಕ್‌ ಖಾತೆಯಲ್ಲಿದ್ದ ರೂ. 52.60 ಲಕ್ಷ ಹಣವನ್ನು ಆರೋಪಿಗಳು ನೆಟ್‌ ಬ್ಯಾಂಕಿಂಗ್‌ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. […]

Continue Reading

ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಮೂವರ ಬಂಧನ. ಒಟ್ಟು 9.01 ಕೆ.ಜಿ ಚಿನ್ನಾಭರಣ, ರೂ. 86,31,220 ನಗದು ವಶ.

ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ. ಚಡಚಣ ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ರೂ. 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ. ಬಂಧಿತ ಮಹಾರಾಷ್ಟ್ರದ […]

Continue Reading

ಮುಖ್ಯನ್ಯಾಯಮೂರ್ತಿಗಳ ಮೇಲೆ ದಾಳಿ-ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ: ಸಿಪಿಐ(ಎಂ) ಖಂಡನೆ

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ದಸ್ತಗಿರಿಯಾಗಿರುವ ಸಂಬಂಧಪಟ್ಟ ವಕೀಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅದು ಒತ್ತಾಯಿಸಿದೆ. ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲಾಗಿದ್ದು, ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ ಎಂಬುದು ಅತ್ಯಂತ ಆಘಾತಕಾರಿ ಮತ್ತು ಶೋಚನೀಯ. ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು […]

Continue Reading

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ಹಲ್ಲೆ ಯತ್ನ ಖಂಡನೆ.

ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿದ್ದ ವೇಳೆ ಇಂದು (6.10.2025) ಮತಾಂಧ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿಯವರ ಮೇಲೆ ಶೂ ಎಸೆದು ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ.ಜಿಲ್ಲಾ ಘಟಕವು ತೀವ್ರವಾಗಿ‌ ಖಂಡಿಸುತ್ತದೆ. ಆರ್.ಎಸ್.ಎಸ್. ಸಂಘಟನೆಯ ನೂರು ವರ್ಷದ ಸಂಭ್ರಮಾಚರಣೆಯ ಕರಿ ನೆರಳು ಈ ಮನುವಾದಿ, ದಲಿತ ವಿರೋಧಿ ಕೃತ್ಯದ ಹಿಂದೆ ಅಡಗಿದೆ. ನ್ಯಾಯಮೂರ್ತಿ ಗವಾಯಿಯವರ ತಾಯಿ ಕಮಲಾದೇವಿಯವರು ಆರ್.ಎಸ್.ಎಸ್. 100 ರ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ಬೆನ್ನಲ್ಲೇ ‘ಸನಾತನ […]

Continue Reading

ಪ್ರತಿ ಭಾರತೀಯನ ಮೇಲೆ 4.8 ಲಕ್ಷ ಸಾಲ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿ

ಕಳೆದೆರಡು ವರ್ಷಗಳಲ್ಲಿ ಭಾರತದ ಪ್ರತಿ ವ್ಯಕ್ತಿ ಮೇಲಿನ ಋಣಭಾರ 4.8 ಲಕ್ಷ ರೂಪಾಯಿ ಗೆ ಬಂದಿದೆ. 2023 ರ ಮಾರ್ಚ್ ನಲ್ಲಿ ಪ್ರತಿ ವ್ಯಕ್ತಿ ಮೇಲೆ ತಲಾ 3.5 ಲಕ್ಷ ರೂಪಾಯಿ ನಷ್ಟು ಸಾಲವಿತ್ತು. 2 ವರ್ಷ ಅಂದರೆ ಮಾರ್ಚ್ 2025 ರ ವೇಳೆಗೆ ಇದು ಶೇಕಡಾ 23 ರಷ್ಟು ಹೆಚ್ಚಳ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ವಿತ್ತೀಯ ಸ್ಥಿರತೆ ವರದಿ ಹೇಳಿದೆ. ವರದಿ ಪ್ರಕಾರ ಪ್ರತಿ ಭಾರತೀಯನ ಮೇಲಿನ ಸಾಲದ […]

Continue Reading

ದೆಹಲಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕನಿಂದ ಎಂಬಿಬಿಎಸ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪ, ದೂರು ದಾಖಲು

ದೆಹಲಿ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಆಸ್ಪತ್ರೆ ಆವರಣದಲ್ಲಿ ಮೌಖಿಕ ಪರೀಕ್ಷೆಯ ಸಮಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ವಿದ್ಯಾರ್ಥಿನಿ ದೂರು ದಾಖಲಿಸಿದ ನಂತರ ಪೊಲೀಸರು ಬಂಧನವನ್ನು ದೃಢಪಡಿಸಿದ್ದಾರೆ. ಸೆಪ್ಟೆಂಬರ್ 26 ರಂದು ಎನ್‌ಕ್ಲೇವ್ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದಿಲ್ಶಾದ್ ಗಾರ್ಡನ್‌ನಲ್ಲಿರುವ ಜಿಟಿಬಿ ಆಸ್ಪತ್ರೆಯೊಳಗೆ ತನಗೆ ದೈಹಿಕ ಕಿರುಕುಳ ನೀಡಲಾಗಿದೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ದೂರುದಾರರು ಸಹಾಯಕ ಪ್ರಾಧ್ಯಾಪಕ ಡಾ. ಮೊಹಮ್ಮದ್ ಶಕೀರ್ ನಯೀಮ್ ಅವರು ತನಗೆ […]

Continue Reading

ಆರ್‌ಎಸ್‌ಎಸ್ ಕುರಿತ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ: ನಾಚಿಕೆಗೇಡೀ ಪಾತ್ರದ ಚರಿತ್ರೆಯನ್ನು ಸುಳ್ಳಾಗಿಸುವ ಕಸರತ್ತು. ಭಾರತದ ಸಂವಿಧಾನಕ್ಕೆ ಮಾಡಿರುವ ಅವಮಾನ: ಸಿಪಿಐ(ಎಂ) ಖಂಡನೆ

ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನ ಮಂತ್ರಿಗಳು ಒಂದು ಅಂಚೆ ಚೀಟಿ ಮತ್ತು 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿರುವುದು ಎಂದಿಗೂ ಒಪ್ಪಿಕೊಂಡಿರದ ಭಾರತದ ಸಂವಿಧಾನಕ್ಕೆ ಒಂದು ಗಂಭೀರ ಗಾಯ ಮತ್ತು ಅವಮಾನವಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡಿಸಿದೆ. ಅಧಿಕೃತ ನಾಣ್ಯವೊಂದು ಆರೆಸ್ಸೆಸ್‍ನ ಹಿಂದುತ್ವ ರಾಷ್ಟ್ರ ಎಂಬ ಸಂಕುಚಿತ ಪಂಥವಾದೀ ಪರಿಕಲ್ಪನೆಯ ಸಂಕೇತವಾಗಿರುವ “ಭಾರತ ಮಾತಾ” ಚಿತ್ರವನ್ನು ಆರೆಸ್ಸೆಸ್‍ ಪ್ರಚುರಪಡಿಸಿದ ಒಂದು ಹಿಂದೂ ದೇವತೆಯ “ಭಾರತ ಮಾತಾ” ಚಿತ್ರವನ್ನು ನಕಲಿಸುವುದು ಅತ್ಯಂತ ಆಕ್ಷೇಪಾರ್ಹ ಸಂಗತಿ. ಅಂಚೆ […]

Continue Reading

ಖೈರ್ಲಂಜಿಯ ಘನ-ಘೋರ ದಲಿತ ಹತ್ಯಾಕಾಂಡ. ಖೈರ್ಲಂಜಿ ಹತ್ಯಾಕಾಂಡ ನಡೆದು ಇಂದಿಗೆ 19 ವರ್ಷ

29-09-20೦6 ರ ಅ ಕರಾಳ ದಿನ ತಮ್ಮ ಅಂತಿಮ ವಿಧಿ ಬರೆಯುವ ದಿನ ಎಂದು ಆ ಅಮಾಯಕ ಕುಟುಂಬದ ಗಮನಕ್ಕೆ ಬರಲೇ ಇಲ್ಲ. ✍️. ಪದರಂಗಿ 20೦6 ಸೆಪ್ಟೆಂಬರ್ 29 ಆ ದಿನ ಸಂಜೆ ಮಹಾರಾಷ್ಟ್ರದ ಬಂಡಾರ ಜಿಲ್ಲೆಯ ಮೊಹಾಲಿ ತಾಲೂಕಿನ ಖೈರ್ಲಂಜಿ ಗ್ರಾಮದಲ್ಲಿ ಅತೀ ಭೀಕರವಾದ ಮನುಷ್ಯತ್ವವೇ ಇಲ್ಲದ, ಕ್ರೂರ ಮೃಗೀಯ ಕಹಿ ಘಟನೆಯೊಂದು ನಡೆದೇ ಹೋಗುತ್ತದೆ. ​ಬಯ್ಯಲಾಲ್ ಎಂಬ ವಿದ್ಯಾವಂತ ದಲಿತ ಕುಟುಂಬದ ಸದಸ್ಯರ ಭೀಕರ ಹತ್ಯಾಕಾಂಡವೇ ನಡೆಯುತ್ತದೆ. ಆ ಕುಟುಂಬದ ಮುಖ್ಯಸ್ಥನೇ ಬಯ್ಯಲಾಲ್ […]

Continue Reading