ಕೋಮುವಾದಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಆಸೇ ನಿಯಮ ಉಲ್ಲಂಘಿಸಿದ ದ.ಕ ಜಿಲ್ಲಾಧಿಕಾರಿ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು: ನವೀನ್ ಸೂರಿಂಜೆ

ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಪಾಠ ಕಲಿಯಬೇಕಾದ ಅವಶ್ಯಕತೆ ಇದೆ. ಕಾನೂನು ಸುವ್ಯವಸ್ಥೆ ಎನ್ನುವುದು ಕೇವಲ ಕಾನೂನಿನಿಂದ ಮಾತ್ರ ಜಾರಿಯಲ್ಲಿರುವುದಲ್ಲ. ನಮ್ಮ ನಡತೆಯೂ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ದಂಡಾಧಿಕಾರಿ ಹುದ್ದೆಯವರಂತೂ ಈ ಬಗ್ಗೆ ಹೆಚ್ಚು ಎಚ್ಚರ ಹೊಂದಿರಬೇಕಾಗುತ್ತದೆ. ಇಂದು ನಡೆಯುತ್ತಿರುವ ಮೂಡಬಿದ್ರೆ ಕಂಬಳದ ಆಹ್ವಾನ ಪತ್ರಿಕೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ ಎಚ್ ವಿ ಹೆಸರುಗಳಿದ್ದವು. ಆ ಕಂಬಳ […]

Continue Reading

ಮಂಗಳೂರು: ಬರ್ಕೆ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ಕಳ್ಳನ ಬಂಧನ; ಲಕ್ಷಾಂತರ ರೂ. ಬೆಲೆಬಾಳುವ ಚಿನ್ನದ ಒಡವೆ, ನಗದು ವಶ

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಏಳು ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗನ್ನು ಕಳವುಗೈದಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂ: 10/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ […]

Continue Reading

ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿದೆ: ಮೀನಾಕ್ಷಿ ಸುಂದರಂ

ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ. ಈ ಹಿನ್ನೆಲೆಯಲ್ಲಿ ಜಾರಿಗೊಂಡ 4 ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು. ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು […]

Continue Reading

ಸುರತ್ಕಲ್: ದೈವಗಳ ಮೂರ್ತಿ, ಪೂಜಾ ಸಾಮಗ್ರಿ ಕಳ್ಳತನ ಪ್ರಕರಣ; ಇಬ್ಬರ ಬಂಧನ, ಸ್ವತ್ತು ವಶ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಯಶೋದ ಕ್ಲಿನಿಕ್ ಸಮೀಪದ ಮನೆಯೊಂದರಲ್ಲಿ ನಡೆದ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಳಾಯಿ ಗ್ರಾಮದ ಅಮಿತಾ ಅವರ ದೂರಿನಂತೆ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದು ಆ ಮನೆಯಲ್ಲಿ ಯಾರೂ ವಾಸವಿರದೇ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕುತ್ತಿದ್ದರು ಎನ್ನಲಾಗಿದೆ. ದಿನಾಂಕ: 26-12-2025 ರಂದು ರಾತ್ರಿ […]

Continue Reading

ಪುತ್ತೂರು: ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. ನಾಲ್ಕು ಮಂದಿ ಆರೋಪಿಗಳ ಬಂಧನ, ಕಾರು ವಶ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಗಳಾದ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ ಎಂಬವರುಗಳನ್ನು ಹಾಗೂ ಎಂಡಿಎಂಎ ನೀಡುತ್ತಿದ್ದ, ಬಂಟ್ವಾಳ ನಿವಾಸಿ ಮುಸ್ತಾಫ ಎಂಬವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, ಗಾಂಜಾ 0.87 […]

Continue Reading

ಬಿಲ್ಲವ ಸಮುದಾಯದ ವ್ಯಕ್ತಿ ಯಾವ ಪಕ್ಷದಲ್ಲೂ ಬೇಕಾದರೂ ಅಭ್ಯರ್ಥಿಯಾಗಿ ನಿಲ್ಲಲಿ, ಗೆಲ್ಲಿಸುವ ಜವಾಬ್ದಾರಿ ನಮ್ಮದು: ಕಾಂಗ್ರೆಸ್ ನಾಯಕಿ ವಿವಾದಾತ್ಮಕ ಭಾಷಣ

ರಾಜಕೀಯ ವ್ಯಕ್ತಿಗಳು ಜಾತಿ ಪ್ರೇಮ ತೋರಿಸುವುದು ಸಹಜ, ಆದರೆ ಅದುವೇ ರಾಜಕೀಯ ಆಗಬಾರದು. ಇತ್ತೀಚೆಗೆ ಮೂಡಬಿದ್ರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದ್ರೆ ಆಯೋಜಿಸಿದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಮಾಡಿರುವ ಭಾಷಣ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ರಾಜಕಾರಣದಲ್ಲಿ ಬೆಳೆದು ಬಂದಿರುವುದು ಅಹಿಂದ ಸಮುದಾಯಗಳ ಮತಗಳಿಂದ. ಅಲ್ಪಸಂಖ್ಯಾತ ವರ್ಗ ಬಿಟ್ಟರೆ ಬೇರೆ ಸಮುದಾಯಗಳು ಹೋಲ್ ಸೇಲ್ ಆಗಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿರುವುದು ವಿರಳ. ಅದರಲ್ಲೂ ಬಿಲ್ಲವ […]

Continue Reading

ಅಧಿಕಾರ ದುರುಪಯೋಗ ಪ್ರಕರಣ; ನೆಲ್ಲಿಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಆರು ವರ್ಷಗಳ ಕಾಲ ಚುನಾವಣೆಗೆ ಅನರ್ಹ

ಮೂಡಬಿದ್ರೆ: ನೆಲ್ಲಿಕಾರು ಗ್ರಾಮ ಪಂಚಾಯತ್ ಹಾಲಿ ಉಪಾದ್ಯಕ್ಷರು ಶ್ರೀಮತಿ ಸುಶೀಲ ಎಂಬವರು ಅಧಿಕಾರ ಮತ್ತು ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮದ ಪ್ರಕಾರ ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿರುವುದಲ್ಲದೇ, ಮುಂದಿನ ಆರು ಆರು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಪಂಚಾಯತ್ ರಾಜ್ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಸರಕಾರಕ್ಕೆ ಸಂಬಂದ ಪಟ್ಟ ರೂ.48,289 ಗಳನ್ನು ದುರುಪಯೋಗ ಪಡಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ದಿನಾಂಕದಿಂದ ಶೇ.8ರ […]

Continue Reading

ಮಂಗಳೂರಿನ ಹೃದಯಬಾಗದಲ್ಲಿ ದಿನದ ಅತ್ಯಮೂಲ್ಯ (ಪ್ರೈಮ್ ಟೈಮ್) ವೇಳೆಯಲ್ಲಿ “ತಲಾ 15 ನಿಮಿಷದಂತೆ ಒಟ್ಟು 11 ಬಾರಿ ಸಂಚಾರ ದಿಗ್ಬಂಧನ! ” ರೈಲ್ವೆ ಕಾರ್ಯಾಚರಣೆಯ ಹೆಸರಿನಲ್ಲಿ ನಗರಕ್ಕೆ ದಿಗ್ಬಂಧನ!

✍️. ಇಸ್ಮಾಯಿಲ್ ಸುನ್ನಾಲ್, ವಕೀಲರು ಮಂಗಳೂರು. ಮಂಗಳೂರು: ಒಂದು ಕಡೆ ‘ಸ್ಮಾರ್ಟ್ ಸಿಟಿ’ಯ ಕನಸು, ಇನ್ನೊಂದು ಕಡೆ ದಶಕಗಳಷ್ಟು ಹಳೆಯದಾದ ರೈಲ್ವೆ ಗೇಟ್ ಸಮಸ್ಯೆ. ಮಂಗಳೂರಿನ ಹೃದಯಭಾಗದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ (LC Gate) ಈಗ ನಗರದ ಸಂಚಾರ ವ್ಯವಸ್ಥೆಯ ಪಾಲಿಗೆ ಕಂಠಕವಾಗಿ ಪರಿಣಮಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ನಾಗರಿಕರು ತಮ್ಮ ಅಮೂಲ್ಯ ಸಮಯವನ್ನು ರಸ್ತೆಯಲ್ಲೇ ಕಳೆಯುವಂತಾಗಿದೆ. ಅಂಕಿಅಂಶಗಳ ಆಘಾತಕಾರಿ ಸತ್ಯರೈಲ್ವೆ ಇಲಾಖೆ ಪ್ರಕಟಿಸಿದ ವೇಳಾ ಪಟ್ಟಿ ಪ್ರಕಾರವೇ, ಈ ರೈಲ್ವೆ ಗೇಟ್‌ ಕೇವಲ ಹನ್ನೆರಡು (12) […]

Continue Reading

ಬೆಳ್ತಂಗಡಿ: ಯಾವುದೆ ಪರವಾನಿಗೆ ಪಡೆಯದೆ ಅಕ್ರಮ ಕಟ್ಟಡ ನಿರ್ಮಾಣ; ದ. ಕ ಜಿಲ್ಲಾ ಉಸ್ಸುವಾರಿ ಸಚಿವರಿಗೆ ದೂರು

ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಕ್ಕೆ ವಂಚಿಸಿ, ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಬಹು ಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಮಾಜಿಕ ಕಾರ್ಯಕರ್ತ ಶೇಖರ್. ಲಾಯಿಲ ಮನವಿ ಸಲ್ಲಿಸಿದ್ದಾರೆ. ಇಂದು ಕುಕ್ಕೇಡಿ ಡಾ.ಬಿ.ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಭ್ಯಾಸ್ ಕಾಲೇಜ್, […]

Continue Reading

ಉಡುಪಿ: ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆ; ಸೂಕ್ತ ಕ್ರಮಕ್ಕೆ ಕರವೇ ಪ್ರವೀಣ್ ಶೆಟ್ಟಿ ಬಣದ ಮನವಿ, ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್

ಉಡುಪಿ : ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಗಿತ್ತು. ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತು ಕುಡುಕರು ಹಾಗೂ ತೃತೀಯ ಲಿಂಗಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶಾಲೆಯ […]

Continue Reading