ಮುತಾಲಿಕರೇ.. ದುಡ್ಡಿಗಾಗಿ ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಹಿಂದೂಗಳ ಹತ್ಯೆ ಮಾಡಿದ್ದೀರಿ? ಎಂದಿದ್ದ ಸುನೀಲ್ ಕುಮಾರ್!

ಸುನಿಲ್ ಕುಮಾರ್ ವಿರುದ್ದದ ವಾರೆಂಟ್ ಗೆ ಹೈಕೋರ್ಟ್ ತಡೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಸ್ಪರ್ಧಿಸಿದ್ದರು. ಇವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಆದರೆ ಮುತಾಲಿಕ್ ಸ್ಪರ್ಧೆಯಿಂದ ಸುನೀಲ್ ಕುಮಾರ್ ಗೆಲುವಿನ ಅಂತರ ಕಡಿಮೆಯಾಗಿತ್ತು. ಚುನಾವಣಾ ಫಲಿತಾಂಶದ ನಂತರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮೇ 14 ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣದ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸುನೀಲ್ ಕುಮಾರ್, […]

Continue Reading

ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು (MDMA) ಸಾಗಿಸುತ್ತಿದ್ದ ಆಟೋ ಚಾಲಕ ಸಹಿತ ಮೂವರ ಬಂಧನ.

ಉಪ್ಪಿನಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಅದೇ ರಸ್ತೆಯಲ್ಲಿ ಬಂದ ಕೆಎ-21-ಸಿ-3003 ನೇ ನೋಂದಣಿ ಸಂಖ್ಯೆಯ ಅಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ, ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಓಡಲು ಪ್ರಯತ್ನಿಸಿರುತ್ತಾರೆ. ಸದ್ರಿ ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಸಮರ್ಪಕವಾದ ಉತ್ತರ […]

Continue Reading

ಪುತ್ತೂರು: ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ನೇಮಕ

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ನೌಕರರ ಸಂಘಟನೆ, ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ, ಕರ್ನಾಟಕ […]

Continue Reading

ಬೀದಿಬದಿ ವ್ಯಾಪಾರಿಗಳ ಸಭೆ ನಡೆಸಿ, ಪರ್ಯಾಯ ವ್ಯವಸ್ಥೆ ಮತ್ತು ಐಡಿ ಕಾರ್ಡ್ ವಿತರಣೆಗೆ ಆಗಸ್ಟ್ 19 ವರೆಗೆ ಕಾಲಾವಕಾಶ ಕೋರಿದ ಮೇಯರ್ ಸುಧೀರ್ ಶೆಟ್ಟಿ

ಬೀದಿಬದಿ ವ್ಯಾಪಾರಿಗಳ ಮೇಲೆ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪಾಲಿಕೆಯ ಟೈಗರ್ ಕಾರ್ಯಾಚರಣೆ ವಿರುದ್ಧ ತೀವ್ರ ಪ್ರತಿರೋಧವನ್ನು ದಾಖಲಿಸುತ್ತಾ ಬಂದಿದೆ. ಆಗಸ್ಟ್ 7ರಂದು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಮೇಯರ್ ಮತ್ತು ಪಾಲಿಕೆಯ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಬೀದಿಬದಿ ವ್ಯಾಪಾರಿಗಳ ಸಭೆ ನಡೆಸಿದ್ದಾರೆ. 667 […]

Continue Reading

ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಹಿಂದೂ ಸಂಘಟನೆಯ ಕಾರ್ಯಕರ್ತರು ದೋಷಮುಕ್ತ

ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಮಂಗಳೂರು ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣದ ಆರೋಪಿಗಳನ್ನು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ದೋಷಮುಕ್ತ ಗೊಳಿಸಿ ಅಂತಿಮ ತೀರ್ಪು ಪ್ರಕಟಿಸಿದೆ. 2012 ರ ಜುಲೈ 28 ರಂದು ಪಡೀಲ್ ಹೋಂ ಸ್ಟೇ ಯಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ ಯುವತಿಯರ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆ ನಡೆಸಿದ್ದರು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಮಂಗಳೂರಿನಲ್ಲಿ ತಾಲಿಬಾನಿ ಕೃತ್ಯ ರಾಷ್ಟ್ರೀಯ ಮಾಧ್ಯಮಗಳು ಬಣ್ಣಿಸಿದ್ದವು. ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ ಯುವತಿಯರು […]

Continue Reading

ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರಿನಲ್ಲಿ ಮನೆ ಬಾಗಿಲು ಮುರಿದು ಕಳ್ಳತನ; ಸಾಕು ನಾಯಿಯು ಕಾಣೆ.

ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಪತ್ನಿ, ಮಕ್ಕಳು ತವರಿಗೆ ಹೋಗಿದ್ದಾಗ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಗಳನ್ನು ಕಳ್ಳತನ ಮಾಡಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಬಳಿ ನಡೆದಿದೆ. ಮನೆ ಮಾಲಿಕ ಜಗನ್ನಾಥ್ ಅವರು ವಿದೇಶದಲ್ಲಿದ್ದು ಪತ್ನಿ ವಿಜಯ ಮತ್ತು ಮಕ್ಕಳಿಬ್ಬರು ಈಶ್ವರಮಂಗಲ ಸಮೀಪದ ತವರು ಮನೆಗೆ ಹೋಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಮನೆಯೊಳಗೆ ನುಗ್ಗಿ ಕಪಾಟಿನಲ್ಲಿದ್ದ 34ಗ್ರಾಂ ಚಿನ್ನಾಭರಣ, ವಿದೇಶದ ಕರೆನ್ಸಿ ನೋಟುಗಳನ್ನು ಕಳ್ಳತನ ನಡೆಸಿದ್ದಾರೆ. ಮನೆಯಲ್ಲಿ ಎರಡು ನಾಯಿಗಳಿದ್ದು […]

Continue Reading

ಸರಕಾರದ ದುಡ್ಡು ಸುನೀಲಣ್ಣನ ಜಾತ್ರೆ; ಪರಶುರಾಮ ಥೀಂ ಪಾರ್ಕ್ ವಿವಾದ; ಪೂರ್ತಿ ವಿವರ ಬಿಚ್ಚಿಟ್ಟ ಎಂ.ಜಿ ಹೆಗ್ಡೆ!

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ನಿರ್ಮಾಣ ಹಂತದಲ್ಲಿದ್ದ ಪರಶುರಾಮನ ಪ್ರತಿಮೆಯನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಈಗ ನ್ಯಾಯಾಲಯದ ಅಂಗಳದಲ್ಲಿದ್ದು, ಇನ್ನೊಂದೆಡೆಯಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಕಳಪೆಯಾಗಿದೆ ಎಂದು ಕಾರ್ಕಳ ಪೊಲೀಸರು ಬೆಂಗಳೂರಿನ ಕ್ರಿಶ್ ಆರ್ಟ್ ವರ್ಕ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಪರಶುರಾಮನ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಇಡೀ ಪ್ರಕರಣದ ಬಗ್ಗೆ ಜನ್ಮ ಜಾಲಾಡಿದ್ದಾರೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತರಾದ ಎಂ.ಜಿ ಹೆಗಡೆಯವರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. […]

Continue Reading

ವಿಟ್ಲ: ಮಳೆಯ ಅಬ್ಬರ ತಗ್ಗಿದರೂ ವಿಟ್ಲ ಪರಿಸರದಲ್ಲಿ ಗುಡ್ಡ ಕುಸಿತ, ಮನೆ, ಟ್ಯಾಂಕ್ ಕುಸಿತಗಳು ಸಂಭವಿಸುತ್ತಾ ಇದೆ.

ವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಶಾಂತಿನಗರ ಎಂಬಲ್ಲಿ ನಿಝಾಂ ಎಂಬವರ ಮನೆ ಭಾರೀ ಮಳೆಯ ಕಾರಣದಿಂದಾಗಿ ಸಂಪೂರ್ಣ ಕುಸಿತವಾಗಿದೆ. ಮನೆ ಕುಸಿಯುತ್ತಲೇ ಮನೆಯೊಳಗಿದ್ದವರು ಹೊರಗಡೆ ಓಡಿ ಹೋದ ಕಾರಣ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಅದೇ ರೀತಿ ವಿಟ್ಲ ಹೊರವಲಯದ ಅಡ್ಯನಡ್ಕ ಮರಕ್ಕಿಣಿ ಎಂಬಲ್ಲಿನ ಗುಡ್ಡದ ಮೇಲಿದ್ದ ಸಾರ್ವಜನಿಕ ಕುಡಿಯುವ ನೀರಿನ ಶೇಖರಣಾ ಟ್ಯಾಂಕ್ ಅಡಿಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಯಾವುದೇ ಕ್ಷಣದಲ್ಲಿ ಟ್ಯಾಂಕ್ ಸಂಪೂರ್ಣ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಎರಡೂ ಕಡೆಗಳಿಗೆ ಪುತ್ತೂರು ಶಾಸಕರು ಆಗಮಿಸಿ ಪರಿಶೀಲನೆ ನಡೆಸಿದ್ದು […]

Continue Reading

ಕೆತ್ತಿಕಲ್ ಭೂ ಕುಸಿತ, ಉಸ್ತುವಾರಿ ಸಚಿವರ ಆಕ್ರೋಶ, ಮಣ್ಣು (ತಿನ್ನುವ) ಮಾಫಿಯಾ

ಭೂ ವಿಜ್ಞಾನ ಇಲಾಖೆ, ನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಘರ್ಜಿಸಿ, ತನಿಖೆಗೆ ಆದೇಶಿಸಿದ್ದೇನೆ ಅಂದರೆ, ಮಂಗಳೂರಿನ ಜನರು ನಕ್ಕು ಮುಂದೆ ಸಾಗುತ್ತಾರೆ, ಅಷ್ಟೆ. ಸಚಿವರು ಅರ್ಥ ಮಾಡಿಕೊಳ್ಳಲಿ: ಮುನೀರ್ ಕಾಟಿಪಳ್ಳ ಮಂಗಳೂರಿನ ಕೆತ್ತಿಕಲ್ ನಲ್ಲಿ ಹೆದ್ದಾರಿ ಅಗಲೀಕರಣಕ್ಕೆ ಗುಡ್ಡವನ್ನು ಅವೈಜ್ಞಾನಿಕವಾಗಿ ಕತ್ತರಿಸಿದ ಪರಿಣಾಮ ಕುಸಿತದ ಭೀತಿ ಎದುರಾಗಿದೆ. ಈ ಗುಡ್ಡವನ್ನು ಹೆದ್ದಾರಿ ಅಗಲೀಕರಣಕ್ಕೆ ಪೂರ್ವದಲ್ಲೆ ಮಂಗಳೂರಿನ ಭೂ ಮಾಫಿಯಾ, ಮಣ್ಣು ಮಾಫಿಯಾ ಬೇಕಾಬಿಟ್ಟಿ ದೋಚಿದೆ. ಮೊನ್ನೆ ಸ್ಥಳ ಪರಿಶೀಲನೆಗೆ ಬಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೆದ್ದಾರಿ […]

Continue Reading

ಮಂಗಳೂರು ಮ.ನ.ಪಾಲಿಕೆಯ ಒಳಹೊಕ್ಕರೆ ಕೇಳಿ ಬರುವ ವೇದವಾಕ್ಯವೊಂದೆ ಲಂಚ..ಲಂಚ..! ಇಲ್ಲಿ ಲಂಚ ಮುಟ್ಟದವನು ಪಾಪಿ..!

ಕಂದಾಯ ಇಲಾಖೆಯಲ್ಲಿ ಭಾರೀ ಗೋಲ್ಮಾಲ್ ‘ಸರಕಾರದ ಕೆಲಸ ದೇವರ ಕೆಲಸ’ ಅಂತ ಹಿರಿಯರು ಹೇಳುತ್ತಾರೆ. ಅಲ್ಲದೆ ಸರಕಾರಿ ಹುದ್ದೆಯಲ್ಲಿ ಇರುವವರು ಅದೃಷ್ಟವಂತರು ಅಂತನೂ ಕೂಡಾ ಹೇಳುತ್ತಾರೆ. ಅಟೆಂಡರ್ ನಿಂದ ಹಿಡಿದು ಅಧಿಕಾರಿ ವರ್ಗದವರಿಗೆ ಕೆಲಸ ಮಾಡೋ ನೌಕರರಿಗೆ ದೇವರು ಹೂ ಹೆಚ್ಚಿಗೆ ಹಾಕಿ ಭೂಮಿಗೆ ಕಳಿಸಿರುತ್ತಾರೆ. ಅದನ್ನು ಒಳ್ಳೆಯ ಸದುಪಯೋಗ ಮಾಡಬಹುದು ಅಥವಾ ದುರುಪಯೋಗ ಬೇಕಾದರೂ ಆಗಬಹುದು. ಅದು ನಮ್ಮ ಕೈಯಲ್ಲಿರುತ್ತದೆ. ಆದರೆ ‘ಜೇನು ಬಿಚ್ಚೋರು ಕೈ ನೆಕ್ಕಲ್ವ’ ಅಂತಾರೆ. ಆದರೆ ಇಡೀ ಜೇನಿನ ಗೂಡನ್ನೇ ತಿನ್ನೋಕೆ […]

Continue Reading