ವಿಟ್ಲ: ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು

ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ-ವಿಭಾಗೀಯ ದಂಡಾಧಿಕಾರಿಗಳು ಇವರ ಆದೇಶದ ಮೇರೆಗೆ ಗಣೇಶ ಯಾನೆ ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ಯಾನೆ ಗಣೇಶ ಪೂಜಾರಿ, ಬಡಕೋಡಿ, ಕೇಪು ಗ್ರಾಮ, ಬಂಟ್ವಾಳ ತಾಲೂಕು. ಈತನ ಮೇಲೆ ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು ಮತ್ತು ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಯಂತಹ ಒಟ್ಟು14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ವಿಟ್ಲ […]

Continue Reading

ಮಂಗಳೂರು ಪೊಲೀಸರ ಕಾರ್ಯಾಚರಣೆ: 21 ಕೆ.ಜಿ ತೂಕದ ಗಾಂಜಾ ವಶ; ಕುಖ್ಯಾತ ಆರೋಪಿಗಳ ಬಂಧನ, ಪ್ರಕರಣ ದಾಖಲು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ, 2ನೇ ಕ್ರಾಸ್ ನ ಬೆನಕ ಎಂಬ ಹೆಸರಿನ ಮನೆಯ ಬಳಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಗಳಾದ ಪ್ರದೀಪ್ ಪೂಜಾರಿ, ಶಾಲೆಮಜಲು, ಉಳಾಯಿಬೆಟ್ಟು ಗ್ರಾಮ, ಗುರುಪುರ. ಇದೀಗ ವಾಸ ಚೊಕ್ಕಬೆಟ್ಟು, ಸುರತ್ಕಲ್ ಹಾಗೂ ವಸಂತ ಪೂಜಾರಿ ಚಿತ್ರಾಪುರ, ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಿ, ಅವರ ವಶದಲ್ಲಿದ್ದ ಸುಮಾರು 21 ಕೆ.ಜಿ 450 ಗ್ರಾಂ […]

Continue Reading

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಸುಬ್ರಹ್ಮಣ್ಯಂ ಎಂಬವರು ಲಕ್ಷಾಂತರ ರೂ. ನಗದು ಮತ್ತು ಚಿನ್ನ ವಂಚಿಸಿ ಪರಾರಿ

ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಟಿಎಂಗೆ ನಿಗದಿತ ನಗದು ಜಮಾ ಮಾಡದೆ, ಕಡಿಮೆ ಹಣ ಜಮಾ ಮಾಡಿ ದುರುಪಯೋಗಪಡಿಸಿ, ವಂಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025 ರಂತೆ ಸುಬ್ರಹ್ಮಣ್ಯಂ, ಪುಲುಗುಜ್ಜು ಎಂಬವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 04-09-2023 ರಿಂದ 19-12-2025 ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಆರೋಪಿತ ಸುಬ್ರಹ್ಮಣ್ಯಂ, ಪುಲುಗುಜ್ಜು ಎಂಬವರು ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ […]

Continue Reading

ಗುರುಪುರ ಕೈಕಂಬ ವಿಜಯ ನರ್ಸಿಂಗ್ ಹೋಂ ವೈದ್ಯರ ಬೇಜವಾಬ್ದಾರಿತನಕ್ಕೆ ಮಗು ಬಲಿಯಾದ ಪ್ರಕರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಜಿಲ್ಲಾಡಳಿತ

ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ಸಂತೋಷ್ ಬಜಾಲ್ ಒತ್ತಾಯ ಗುರುಪುರ- ಕೈಕಂಬ ಬಳಿಯ ವಿಜಯ ನರ್ಸಿಂಗ್ ಹೋಮ್ ನಲ್ಲಿ ಇತ್ತೀಚೆಗೆ ಹೆರಿಗೆಗೆ ದಾಖಲಾಗಿದ್ದ ವೇಳೆ ವೈದ್ಯರ ಕರ್ತವ್ಯ ಲೋಪ, ಬೇಜವಾಬ್ದಾರಿತನದಿಂದ ಬಂಟ್ವಾಳ ಅಮ್ಮುಂಜೆ ಪರಿಸರ ನಿವಾಸಿ ಬಾಣಂತಿ ದಿವ್ಯ ನವೀನ್ ಪೂಜಾರಿಯವರ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ಪ್ರಮುಖ ವೈದ್ಯರ ವಿರುದ್ಧ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, […]

Continue Reading

ಅಂಬಲಪಾಡಿ ನಾಟಕೋತ್ಸವ ಸಮಾರೋಪ, ರಂಗಸನ್ಮಾನ ನಾಟಕಗಳಿoದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಸಾಧ್ಯ : ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್

ಉಡುಪಿ : ರಂಗಭೂಮಿಗೆ ತನ್ನದೇ ಆದ ಇತಿಹಾಸವಿದೆ. ಸಮಾಜದ ವಿವಿಧ ಮುಖಗಳ ಅನಾವರಣೆ, ಸಾಮಾಜಿಕ ಪಿಡುಗುಗಳ ಬಗ್ಗೆ ನಾಟಕಗಳು ಬೆಳಕು ಚೆಲ್ಲಿ ಸಮಸ್ಯೆಗಳ ಪರಿಹಾರಕ್ಕೂ ಕಾರಣವಾಗಿವೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದರು. ಅವರು ಗುರುವಾರ ರಂಗಭೂಮಿ ಉಡುಪಿ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ದಿ.ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಎರಡು ದಿನಗಳ […]

Continue Reading

ಆಪರೇಷನ್ ವೇಳೆ ಮಹಿಳೆ ಮೃತ್ಯು: ಕಾರ್ಕಳ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಪ್ರಕರಣ ದಾಖಲು

ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ಕುರಿತು ಕಾರ್ಕಳದ ಖಾಸಗಿ ಆಸ್ಪತ್ರೆಯ ವೈದ್ಯರಾದ ನಾಗರತ್ನ, ರಹಮತ್ತುಲ್ಲಾ ಮತ್ತು ತುಷಾರ್ ಎಂಬವರ ವಿರುದ್ಧ ಕರ್ತವ್ಯಲೋಪ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಸಾಣೂರು ಗ್ರಾಮದ ಝುಬೈದಾ ಎಂಬವರು 2025 ಮೇ 10 ರಂದು ಹೊಟ್ಟೆನೋವಿನ ಚಿಕಿತ್ಸೆಗೆಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 1.30 ರ ಸುಮಾರಿಗೆ ಆಸ್ಪತ್ರೆಯ ವೈದ್ಯಾಧಿಕಾರಿ ನಾಗರತ್ನ ಅವರು ತಕ್ಷಣ ಆಪರೇಷನ್ ಆಗದಿದ್ದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿ ಆಪರೇಷನ್ ಥಿಯೇಟರ್ ಗೆ ಕರೆದೊಯ್ದಿದ್ದರು. […]

Continue Reading

ಸಾಲ ವಸೂಲಾತಿ ನೆಪದಲ್ಲಿ ವೃದ್ದೆ ಮೇಲೆ ದರ್ಪ; ಮಂಗಳೂರಿನ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮತ್ತೊಂದು ಪ್ರಕರಣ

ಮಂಗಳೂರು: ಹಣಕಾಸು ವಹಿವಾಟು ಹೆಸರಿನಲ್ಲಿ ಅಮಾಯಕರನ್ನು ಪೀಡಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದಿದ್ದರೂ ಸಹಕಾರಿ ಸಂಘಗಳು ತಮ್ಮ ಚಾಳಿಯನ್ನು ಬಿಟ್ಟಿಲ್ಲ. ಸಾಲ ವಸೂಲಾತಿ ಹೆಸರಲ್ಲಿ ಅಮಾಯಕ (ಸಾಲವನ್ನೇ ಪಡೆಯದ) ವೃದ್ಧೆಯನ್ನು ಪೀಡಿಸಿರುವ ಅಮಾನವೀಯ ಕೃತ್ಯವೊಂದು ಮಂಗಳೂರು ಬಳಿ ನಡೆದಿದೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರ ಸಚಿವಾಲಯವನ್ನೇ ಮುಜುಗರಕ್ಕೀಡು ಮಾಡಿದೆ. ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ವಿಜಯ ಫೆರ್ನಾಂಡೀಸ್ […]

Continue Reading

ಪುತ್ತೂರು: ಹೆಲ್ಮೇಟ್ ಧರಿಸಿ ಮನೆ ದರೋಡೆಗೆ ಯತ್ನ, ದಂಪತಿ ಅರೆಸ್ಟ್; ಆರೋಪಿ ಕಾರ್ತಿಕ್ ರಾವ್ ಅರ್ಚಕ

ಪುತ್ತೂರು ಕಸಬಾ ನಿವಾಸಿ , ನಿವೃತ್ತ ಪ್ರಾಂಶುಪಾಲರಾದ ಎ.ವಿ ನಾರಾಯಣ (84) ಎಂಬವರ ಮನೆಯಲ್ಲಿ ಮಧ್ಯರಾತ್ರಿ ನಡೆದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ದಂಪತಿಗಳ ಹೆಡೆಮುರಿ ಕಟ್ಟುವಲ್ಲಿ ಸಫಲರಾಗಿದ್ದಾರೆ. ಡಿಸೆಂಬರ್ 17 ,2025 ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ, ನಾರಾಯಣ ಅವರ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು . ಈ ಸಂದರ್ಭ ದರೋಡೆಕೋರರು ನಾರಾಯಣ ಹಾಗೂ ಅವರ […]

Continue Reading

ಸುಳ್ಯ: ರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಅಸಹಜ ಸಾವಲ್ಲ; ಕೊಲೆ: ವೈದ್ಯಕೀಯ ವರದಿಯಲ್ಲಿ ದೃಢ. ಆರೋಪಿಗಳಾದ ರಫೀಕ್ ಪಡು, ಮನು ಬಂಧನ

ಸುಳ್ಯ ತಾಲೂಕಿನಲ್ಲಿ ಸಾಕಷ್ಟು ಸುದ್ಧಿಗೆ ಕಾರಣವಾಗಿದ್ದ ರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಅವರದ್ದು ಅಸಹಜ ಸಾವಲ್ಲ, ಕೊಲೆ ಎಂಬುವುದಾಗಿ ಕೃತ್ಯ ನಡೆದ ಮೂರು ತಿಂಗಳ ನಂತರ ದೃಢವಾಗಿದ್ದು, ವೈದ್ಯಕೀಯ ವರದಿಯಲ್ಲಿ ಹಲ್ಲೆ ನಡೆಸಿದ ಪರಿಣಾಮ ಸಾವು ಸಂಭವಿಸಿದೆ ಎಂದು ದೃಡಪಡಿಸಿದೆ. ಅಕ್ಟೋಬರ್ 16 ರಂದು ಬಾಡಿಗೆ ನೆಪದಲ್ಲಿ ಮೊಹಮ್ಮದ್ ರಫೀಕ್ ಹಾಗೂ ಇತರರು ದುಗ್ಗಲಡ್ಕಕ್ಕೆ ಕರೆಸಿಕೊಂಡಿದ್ದರು. ಬಾಡಿಗೆಗೆಂದು ಹೊರಟ ಅಬ್ದುಲ್ ಜಬ್ಬಾರ್ ಅವರನ್ನು ಸುಳ್ಯ ಕಲ್ಲಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಬಿಟ್ಟಿದ್ದರು. ಮರುದಿನ ಹಲ್ಲೆಯಿಂದ ಅನಾರೋಗ್ಯಕ್ಕೀಡಾದ […]

Continue Reading

ಬಿಎಂಆರ್ ಲಕ್ಕಿ ಸ್ಕೀಂ: ಲಬೋ ಲಬೋ ಗ್ರಾಹಕರು. ಬಡ-ಮಧ್ಯಮ ವರ್ಗದವರಿಗೆ ಆಮಿಷ ತೋರಿಸಿ ಪಂಗನಾಮ.!

ಪ್ರಭಾವಿ ನಾಯಕರೊಂದಿಗೂ ಸಖ್ಯ. ಗಡುವು ಮುಗಿದು ಗ್ರಾಹಕರಿಗೆ ಉಂಡೆನಾಮ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಣಬೆಗಳಂತೆ ಹುಟ್ಟಿಕೊಂಡ ಲಕ್ಕಿ ಸ್ಕೀಂ ಗಳು ಬಾಗಿಲು ಮುಚ್ಚಿ ಗ್ರಾಹಕರು ಲಬೋ ಲಬೋ ಅನ್ನುವಂತಾಗಿದೆ. ಈಗಾಗಲೇ ಹತ್ತಾರು ಲಕ್ಕಿ ಸ್ಕೀಂ ಗಳು ಗೋತಾ ಹೊಡೆದು ಕೋಟಿ ಕೋಟಿ ದುಡ್ಡು ಬಾಚಿ ಎಸ್ಕೇಪ್ ಆಗಿದೆ. ಕೆಲವರು ಜೈಲು ಕಂಬಿ ಎಣಿಸಿದ್ದು ಇದೆ. ಅದರಲ್ಲೂ ಸುರತ್ಕಲ್ ಭಾಗದ ಪ್ರಭಾವಿಯೊಬ್ಬನ ಬಿಎಂಆರ್ ಲಕ್ಕಿ ಸ್ಕೀಂ ಕೂಡ ಮುಳುಗಡೆಯಾಗಿದೆ.ದುಡ್ಡು ಕಟ್ಟಿದ ಗ್ರಾಹಕರು ಬಿಎಂಆರ್ ಕಚೇರಿಗೆ ನುಗ್ಗಿ […]

Continue Reading