ಬಜಪೆ ಪೊಲೀಸರ ಕಾರ್ಯಾಚರಣೆ; ಕಳ್ಳತನ ಆರೋಪಿಗಳ ಬಂಧನ, 27 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ವಶ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರು ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಹೋದಾಗ ರಾತ್ರಿ ಮನೆಯಲ್ಲಿದ್ದ ಸುಮಾರು 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1ಲಕ್ಷದ 25 ಸಾವಿರ ರೂಪಾಯಿ ನಗದು ಹಣ ದಿನಾಂಕ 23-09-2025 ರಂದು ಕಳ್ಳತನವಾಗಿತ್ತು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂಖ್ಯೆ 176/2025 ರಂತೆ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಜಪೆ ಪೊಲೀಸರು ಆರೋಪಿಗಳ ಜಾಡು ಹಿಡಿದು ಮಾಹಿತಿ ಕಲೆ ಹಾಕಿದಾಗ […]

Continue Reading

ಗಂಜಿಮಠ: ಸೂರಲ್ಪಾಡಿ ಟೋಲ್ ಪ್ಲಾಜಾ಼ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪ.

ಗಂಜಿಮಠ ಟೋಲ್‌ಗೇಟ್ ಗೆ‌ ವಿವಿಧ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಭೇಟಿ ಸೂರಲ್ಪಾಡಿ ಟೋಲ್ ಪ್ಲಾಜಾ಼ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ. ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಜ಼ಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಇಂದು ಭೇಟಿ ನೀಡಿ ನಿಯಮಗಳ ಪಾಲನೆಯ ಕುರಿತಾಗಿ ಪರಿಶೀಲನೆ ನಡೆಸಿತು. ಟೋಲ್ ಗೇಟ್ ಗಳ ನಡುವಿನ ಅಂತರ […]

Continue Reading

ಮಂಗಳೂರು ಸೆನ್ ಪೊಲೀಸರ ಕಾರ್ಯಾಚರಣೆ: ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿರುವ ಮಹಾ ವಂಚಕರ ಬಂಧನ.

ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿಗಳನ್ನು ಬಂಧಿಸಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿರುತ್ತದೆ.ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಸದ್ರಿ […]

Continue Reading

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ; ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ: ಫಣೀಂದ್ರ ಕೆ

ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ, ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ. ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ […]

Continue Reading

ಕುಪ್ಪೆಪದವು: ನಿವೇಶನ ವಂಚಿತರ ಸಭೆ, ಪೆಬ್ರವರಿ 16 ರಂದು ಪಂಚಾಯತ್ ಕಚೇರಿ ಮುಂಭಾಗ ಗುಡಿಸಲು ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನ

ಏಳು ವರ್ಷಗಳ ಹಿಂದೆ ಹಕ್ಕು ಪತ್ರ ಪಡೆದು, ನಿವೇಶನ ಸ್ವಾಧೀನ ದೊರಕದೆ ಸಂತ್ರಸ್ತರಾಗಿರುವ ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿತ ಕುಟುಂಬಗಳ ಸಮಸ್ಯೆಗಳನ್ನು ಚರ್ಚಿಸಲು ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು ಸಂತ್ರಸ್ತರ ಸಭೆ ನಡೆಸಿತು. ಕಳೆದ ಒಂದು ವರ್ಷದಿಂದ ಹಲವು ಹಂತದ ಹೋರಾಟಗಳು ನಡೆಸಿದ ಸಂದರ್ಭ ಗ್ರಾಮ ಪಂಚಾಯತ್, ತಾಲೂಕು ಆಡಳಿತಗಳು ಕೇವಲ ಭರವಸೆಗಳನ್ನು ನೀಡಿ ಕೈತೊಳೆದು ಕೊಳ್ಳುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸುತ್ತಿವೆ. ಈ ಹಿನ್ನಲೆಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಮಿತಿಯ ಸಭೆಯಲ್ಲಿ […]

Continue Reading

ಪಿಲಿಕುಳ ಪ್ರಾಣಿ ಸಂಗ್ರಾಲಯಕ್ಕೆ ಬೀಗ: ಹೈಕೋರ್ಟ್ ಮಹತ್ವದ ಆದೇಶ

ಕರಾವಳಿಯ ಏಕೈಕ ನಿಸರ್ಗಧಾಮ ಆಗಿದ್ದ ಪಿಲಿಕುಳ ಪ್ರಾಣಿ ಸಂಗ್ರಾಲಯ ಇನ್ನು ನೆನಪು ಮಾತ್ರ: ಇಲ್ಲಿನ ಪ್ರಾಣಿಗಳ ತೆರವಿಗೆ ನಡೆಯುತ್ತಿದೆ ಕೆಲಸ ಕಾರ್ಯ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಾಲಯ ಆಗಿದ್ದ ಪಿಲಿಕುಳ ZOO ಇನ್ನೂ ನೆನಪು ಮಾತ್ರ.‌ ಮಕ್ಕಳಿಗೂ ಕುಟುಂಬಗಳಿಗೂ ಜನಪ್ರಿಯವಾದ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮ, ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ತೀವ್ರ ಟೀಕೆಗೆ ಗುರಿಯಾಗಿದೆ. ಕರಾವಳಿಯ ಪ್ರಸಿದ್ಧ ZOO ನಲ್ಲಿ ನಡೆದಿರುವ ದುರುಪಯೋಗವನ್ನು ಕಂಡು ಆಘಾತಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳು, […]

Continue Reading

ಕಂಕನಾಡಿ ನಗರ ಪೊಲೀಸರ ಕಾರ್ಯಾಚರಣೆ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಕೊಲ್ಲಂ ನಿವಾಸಿ ಜಯಚಂದ್ರ. 2019ರಲ್ಲಿ ಈತನ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನಾಪತ್ತೆಯಾಗಿದ್ದ.ನ್ಯಾಯಾಲಯ ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸರು ಈತನನ್ನು ಕೇರಳದ ಕೊಲ್ಲಂ ನಗರದ […]

Continue Reading

ಕೋಮುವಾದಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಆಸೇ ನಿಯಮ ಉಲ್ಲಂಘಿಸಿದ ದ.ಕ ಜಿಲ್ಲಾಧಿಕಾರಿ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು: ನವೀನ್ ಸೂರಿಂಜೆ

ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಪಾಠ ಕಲಿಯಬೇಕಾದ ಅವಶ್ಯಕತೆ ಇದೆ. ಕಾನೂನು ಸುವ್ಯವಸ್ಥೆ ಎನ್ನುವುದು ಕೇವಲ ಕಾನೂನಿನಿಂದ ಮಾತ್ರ ಜಾರಿಯಲ್ಲಿರುವುದಲ್ಲ. ನಮ್ಮ ನಡತೆಯೂ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ದಂಡಾಧಿಕಾರಿ ಹುದ್ದೆಯವರಂತೂ ಈ ಬಗ್ಗೆ ಹೆಚ್ಚು ಎಚ್ಚರ ಹೊಂದಿರಬೇಕಾಗುತ್ತದೆ. ಇಂದು ನಡೆಯುತ್ತಿರುವ ಮೂಡಬಿದ್ರೆ ಕಂಬಳದ ಆಹ್ವಾನ ಪತ್ರಿಕೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ ಎಚ್ ವಿ ಹೆಸರುಗಳಿದ್ದವು. ಆ ಕಂಬಳ […]

Continue Reading

ಮಂಗಳೂರು: ಬರ್ಕೆ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ಕಳ್ಳನ ಬಂಧನ; ಲಕ್ಷಾಂತರ ರೂ. ಬೆಲೆಬಾಳುವ ಚಿನ್ನದ ಒಡವೆ, ನಗದು ವಶ

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಏಳು ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗನ್ನು ಕಳವುಗೈದಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂ: 10/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ […]

Continue Reading

ಜಾರಿಗೊಂಡ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಲಿದೆ: ಮೀನಾಕ್ಷಿ ಸುಂದರಂ

ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡಲು ಶ್ರಮಜೀವಿಗಳ ರಕ್ತ ಹೀರಲು ಸನ್ನದ್ದವಾಗಿದೆ. ಈ ಹಿನ್ನೆಲೆಯಲ್ಲಿ ಜಾರಿಗೊಂಡ 4 ಸಂಹಿತೆಗಳು ಕಾರ್ಮಿಕರ ಪಾಲಿಗಂತೂ ಮರಣ ಶಾಸನವಾಗಲಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಮೀನಾಕ್ಷಿ ಸುಂದರಂರವರು ತೀವ್ರ ಆತಂಕ ವ್ಯಕ್ತಪಡಿಸಿದರು. ಕಾರ್ಮಿಕ ಸಂಹಿತೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಕಳೆದ 4 ದಿನಗಳಿಂದ ದ.ಕ.ಜಿಲ್ಲೆಯಾದ್ಯಂತ ಸಂಚರಿಸಿದ ಪಾದಯಾತ್ರೆಗಳು […]

Continue Reading