ನಕಲಿ ದಾಖಲೆ ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ ಕೈವಶ; ಕೆನರಾ ಲೈಟಿಂಗ್ ವಿರುದ್ದ ಕ್ರಿಮಿನಲ್ ಪ್ರಕರಣ

ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಕೆನರಾ ಲೈಟಿಂಗ್ ಇಂಡಸ್ಟ್ರಿಯಲ್ ಖಾಸಾಗಿ ಲಿಮಿಟೆಡ್ ಕಂಪೆನಿಯ ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು […]

Continue Reading

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಚನ್ನರಾಯಪಟ್ಟಣದ ಬೆಳಗಿಹಳ್ಳಿಯ ಚಂದ್ರೆಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 60/2009, ರಂತೆ ದಾಖಲಾದ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ವಂಚಿಸಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ಮೂಲದ ನಿವಾಸಿ S. N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು […]

Continue Reading

ಪುತ್ತೂರು ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ; 106 ಕೆ.ಜಿ ಗಾಂಜಾ ವಶ, ಆರೋಪಿಗಳ ಬಂಧನ

ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ದಿನಾಂಕ: 19-01-2026 ರಂದು ಸಂಜೆ, ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ತಡೆದು ನಿಲ್ಲಿಸಿ, ಕಾರಿನ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಎಂಬುದಾಗಿ ತಿಳಿದು ಬಂದಿದ್ದು, ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ […]

Continue Reading

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) – ಒಂದು ಸಮಗ್ರ ಪ್ರಾಯೋಗಿಕ ಮಾರ್ಗದರ್ಶಿ

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಏನು ಮಾಡಬೇಕು.? ದಾಖಲೆಗಳ ಬಗ್ಗೆ ಮಾಹಿತಿ, ಯಾವಾಗ ದಾಖಲೆಗಳು ಬೇಕು? ✍️. ಇಸ್ಮಾಯಿಲ್ ಸುನ್ನಾಲ್. ವಕೀಲರು, ಮಂಗಳೂರು

Continue Reading

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿ ಕೊಂಡಿದ್ದ ಆರೋಪಿ ನವೀನ್ ಸಿಕ್ವೇರಾ ಬಂಧನ

ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ಎಂಬಾತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ. ನಂತರ ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ […]

Continue Reading

ಕಾಂಗ್ರೆಸ್ ಸಂಘಟನೆಗೆ ‘ಲೀಗಲ್ ಬ್ಯಾಂಕ್’ ಬಲ; ದಕ್ಷಿಣ ಕನ್ನಡದಲ್ಲಿ ಮೊದಲ ಪ್ರಯೋಗ ಯಶಸ್ವಿ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಲೀಗಲ್ ಬ್ಯಾಂಕ್’ ಹಾಗೂ ‘ಲಾಯರ್ ಡೈರೆಕ್ಟರಿ’ ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, […]

Continue Reading

ರಾಜ್ಯದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಲಿಂಕ್; ಮಕ್ಕಳೇ ಮಾದಕ ಜಾಲದ ಟಾರ್ಗೆಟ್, ಸಿಂಹಸ್ವಪ್ನರಾದ ‘ಮಂಗಳೂರು ಪೊಲೀಸರು’

ಕರಾವಳಿ ಅಂದರೆ ಶಿಕ್ಷಣಕ್ಕೆ ಹೆಸರುವಾಸಿ. ಇಲ್ಲಿರುವ ಶಿಕ್ಷಣ ಸಂಸ್ಥೆಗಳು ತಮ್ಮ ಅತ್ಯುತ್ತಮ ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿ. ‘ಎಜ್ಯುಕೇಶನ್ ಹಬ್’ ಎನಿಸಿಕೊಂಡಿರುವ ಮಂಗಳೂರಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹೊರಜಿಲ್ಲೆ, ಹೊರರಾಜ್ಯಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇವರು ಸೇರಿದಂತೆ ಯುವ ಸಮೂಹ ಡ್ರಗ್ಸ್ ಮಾರುಕಟ್ಟೆಯ ಮುಖ್ಯ ಟಾರ್ಗೆಟ್. ನೆಲ, ಜಲ, ವಾಯು ಸಂಪರ್ಕ ಎಲ್ಲವನ್ನು ಜಿಲ್ಲೆ ಹೊಂದಿರುವುದರಿಂದ ಡ್ರಗ್ಸ್ ಕಾಳದಂಧೆಗೆ ಅನುಕೂಲಕರವಾಗಿ ಪರಿಣಮಿಸಿದೆ. ರಾತ್ರಿಯಾದರೆ ಸಾಕು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ನಶಾ ಲೋಕದಲ್ಲಿ ತೇಲಾಡುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಮುಖದಲ್ಲೊಂದು ಕುರುಚಲು […]

Continue Reading

ಅಗಲಿಕೆಗೆ ನಾಲ್ಕು ವರ್ಷ; ಜಾತಿ-ಧರ್ಮ ಮೀರಿ ಬೆಳೆದ ಝಾಕೀರ್ ಸೂರಲ್ಪಾಡಿ ನೆನಪು ಮಾತ್ರ

ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಆರ್.ಎಸ್.ಝಾಕೀರ್ ಸೂರಲ್ಪಾಡಿ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತ. ಹಗಲು-ರಾತ್ರಿಯೆನ್ನದೆ ಜನರ ಕಷ್ಟ ಕಾರ್ಪಣ್ಯಗಳಿಗೆ,ಸಾರ್ವಜನಿಕ ಕರೆಗೆ ಸ್ಪಂದಿಸುತ್ತಿದ್ದ ವ್ಯಕ್ತಿ. 15 ವರ್ಷಗಳಿಂದ ಗ್ರಾಮ ಪಂಚಾಯತ್ ಸದಸ್ಯರಾಗಿ, ಸೋಲಿಲ್ಲದ ಸರದಾರನಾಗಿ, ಬಡವರ ಪಾಲಿನ ಬಂಧುವಾಗಿ ಕ್ಷೇತ್ರದಾದ್ಯಂತ ಜನ ಮನ್ನಣೆಗಳಿಸಿದ್ದ ಗಂಜಿಮಠ ಗ್ರಾಮ ಪಂಚಾಯತ್ತಿನ ಅಭಿವೃದ್ಧಿಯ ಹರಿಕಾರ. ಪಂಚಾಯತ್ ವ್ಯಾಪ್ತಿಯ ನಂಬರ್ ಒನ್ ಸದಸ್ಯ. ಗ್ರಾ.ಪಂ ಚುನಾವಣೆಯಲ್ಲಿ ಜಿಲ್ಲೆಯಲ್ಲೆ ದಾಖಲೆ ಮಟ್ಟದ ಮತ (1020)ಪಡೆದ ಹೆಗ್ಗಳಿಕೆಗೆ ಪಾತ್ರರಾಗಿದ್ದ ವ್ಯಕ್ತಿ. ಚಾಲೆಂಜರ್ಸ್ ಫ್ರೆಂಡ್ಸ್ ಕ್ಲಬ್ ಸೂರಲ್ಪಾಡಿ ಇದರ ಮೂಲಕ […]

Continue Reading

ತಂದೆಯ ಮೃತದೇಹ ನೋಡಲು ಪಾಸ್ ಪೋರ್ಟ್ ಇಲ್ಲದೇ ಕಂಗಾಲಾದ ಮಗನಿಗೆ ನೆರವಾದ ಮಾಜಿ ಶಾಸಕ.!

ಗಂಜಿಮಠದ ಯುವಕನಿಗೆ ಒಂದೇ ದಿನದಲ್ಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟು ಮಾನವೀಯತೆ ಮೆರೆದ ಮೊಹಿದ್ದೀನ್ ಬಾವಾ ತಂದೆ ವಿದೇಶದಲ್ಲಿ ಮರಣ, ಮಗ ಊರಿನಲ್ಲಿ. ತಂದೆಯ ಮುಖವನ್ನು ಕೊನೆಯ ಬಾರಿ ನೋಡಿ ಬೀಳ್ಕೊಡಬೇಕಾದ ಮಗನಿಗೆ ಪಾಸ್ ಪೋರ್ಟ್ ಇಲ್ಲದೇ ಊರಿನಲ್ಲಿಯೇ ಬಾಕಿಯಾಗುವ ದುಃಖತಪ್ತದ ವಾತಾವರಣ. ಆ ಸಂದರ್ಭದಲ್ಲಿ ಕುಟುಂಬಕ್ಕೆ ನೆನಪಾಗಿದ್ದು ಮಾಜಿ ಶಾಸಕ ಮೊಹಿದ್ದೀನ್ ಬಾವಾ. ವಿಷಯ ತಿಳಿಯುತ್ತಿದ್ದಂತೆ ಮಗನಿಗೆ ಒಂದೇ ದಿನದಲ್ಲಿ ಪಾಸ್ ಪೋರ್ಟ್ ಮಾಡಿಸಿ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ ಮೊಹಿದ್ದೀನ್ ಬಾವಾ. […]

Continue Reading

ಕುಂಬಳೆ ಟೋಲ್ ಗೇಟ್ ತೆರವು ಹೋರಾಟಕ್ಕೆ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬೆಂಬಲ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಅಂತರದ ನಿಯಮ ಪಾಲಿಸಲು ಆಗ್ರಹ: ಮುನೀರ್ ಕಾಟಿಪಳ್ಳ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹ ಆರಂಭಿಸಿರುವುದು ಜನತೆಯ ತೀವ್ರ ಆಕ್ರೋಶಕ್ಕೆ‌ ಕಾರಣವಾಗಿದೆ.‌ ಪ್ರತಿಭಟನೆಗಳು ಭುಗಿಲೆದ್ದಿವೆ.‌ ಮಂಜೇಶ್ವರದ ಶಾಸಕರೂ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ‘ಕರ್ನಾಟಕದ ಗಡಿಭಾಗದಲ್ಲಿ ಕಾರ್ಯಾಚರಿಸುತ್ತಿರುವ ತಲಪಾಡಿ ಟೋಲ್ ಗೇಟ್ ನಿಂದ ಕುಂಬಳೆ ಟೋಲ್ ಗೇಟ್ ಗೆ ಇರುವ ಅಂತರ ಕೇವಲ 26 ಕಿ ಮೀ ಮಾತ್ರ, ಹೆದ್ದಾರಿ ಪ್ರಾಧಿಕಾರದ ನಿಯಮಗಳ ಪ್ರಕಾರ ಎರಡು ಟೋಲ್ ಗೇಟ್ ಗಳ […]

Continue Reading