ಕಿನ್ನಿಗೋಳಿ, ಬಜಪೆ ಪಟ್ಟಣ ಪಂಚಾಯಿತಿಗೆ ಡಿಸೆಂಬರ್ 21 ರಂದು ಮತದಾನ

ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಹಾಗೂ ಬಜಪೆ ಪಟ್ಟಣ ಪಂಚಾಯಿತಿ ಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಹಾಗೂ ಬಜಪೆ ಪಟ್ಟಣ ಪಂಚಾಯತ್ ಗೆ ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಿಸೆಂಬರ್ 2 ರಂದು ಅಧಿಸೂಚನೆ ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿಸೆಂಬರ್ 10 ರಂದು ನಾಮಪತ್ರ ಪರಿಶೀಲನೆ, ಡಿಸೆಂಬರ್ 12 ರಂದು ನಾಮಪತ್ರ ಹಿಂತೆಗೆತಕ್ಕೆ […]

Continue Reading

ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣ, ಆರೋಪಿಗಳ ದಸ್ತಗಿರಿ

5,32,000 ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣಗಳ ವಶ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ದಿನಾಂಕ: 03-05-2025 ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ. ಕ್ರ 17/2025 ರಂತೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿದ್ದರು. ದಿನಾಂಕ:23.11.2025ರಂದು ಮತ್ತೆ ಧರ್ಮಸ್ಥಳದತ್ತ ಕಳ್ಳತನ ಮಾಡಲು ಆರೋಪಿಗಳು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ […]

Continue Reading

ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು(26-11-2025) ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ […]

Continue Reading

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ […]

Continue Reading

ಬೀಡಿ ಮಾಲಕರ ವಂಚನೆಯ ವಿರುದ್ಧ ಬೀದಿಗಿಳಿದ ಬೀಡಿ ಕಾರ್ಮಿಕರು; ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಉದ್ಘಾಟನೆ

ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು. ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಬೀಡಿ […]

Continue Reading

ಮಂಗಳೂರು: ಪ್ರಸಿದ್ಧ ನ್ಯಾಯವಾದಿ ಯು. ಮುಹಮ್ಮದ್ ಆಲಿ ವಿಧಿವಶ

ಮಂಗಳೂರಿನಲ್ಲಿ ಹಲವಾರು ವರ್ಷಗಳಿಂದ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿ ಪ್ರಸಿದ್ಧರಾಗಿದ್ದ ಯು. ಮುಹಮ್ಮದ್ ಆಲಿ ಇಂದು ಮುಂಜಾನೆ ಹೊಸದಿಲ್ಲಿಯಲ್ಲಿ ವಿಧಿವಶರಾಗಿದ್ದಾರೆ. ಜಡ್ಜ್ ಉಳ್ಳಾಲ ಹಮ್ಮಬ್ಬ ರವರ ಸುಪುತ್ರರಾಗಿರುವ ಮುಹಮ್ಮದ್ ಆಲಿ ನ್ಯಾಯವಾದಿ ಜೊತೆಗೆ ಸಾಮಾಜಿಕ ಸೇವೆ ಹಾಗೂ ರಾಜಕೀಯ ವಲಯದಲ್ಲೂ ಗುರುತಿಸಿಕೊಂಡಿದ್ದರು. ಮುಸ್ಲಿಂ ಲೀಗ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಮುಹಮ್ಮದ್ ಆಲಿ ಚುನಾವಣೆಯಲ್ಲೂ ಕೂಡ ಸ್ಪರ್ಧಿಸಿದ್ದರು. ಮಂಗಳೂರಿನ ಪ್ರಸಿದ್ಧ ನ್ಯಾಯವಾದಿಯಾಗಿದ್ದ ಮುಹಮ್ಮದ್ ಆಲಿ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ಫಜರ್ ನಮಾಜಿಗೆ ಮಸೀದಿಯಲ್ಲಿದ್ದ ಸಂದರ್ಭ ಹೃದಯಾಘಾತ […]

Continue Reading

ಕೇಂದ್ರ ಸರಕಾರ ಜಾರಿ ಮಾಡಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ಮಾಡಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯ ಸರಕಾರ ಈ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು, ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ […]

Continue Reading

ಇನ್ಮುಂದೆ ಗಡಿ ಜಿಲ್ಲೆಗಳ ಕ್ರಿಮಿನಲ್ ಗಳ ಎದೆಯಲ್ಲಿ ಢವ..ಢವ; ಮಂಗಳೂರು ಕಮೀಷನರ್ ಕಚೇರಿಯಲ್ಲಿ ಬಾರ್ಡರ್ ಕ್ರೈಂ ಮೀಟಿಂಗ್

ಅಪರಾಧ ಕೃತ್ಯಗಳನ್ನು ಮಟ್ಟ ಹಾಕಲು ಕಾನೂನನ್ನು ಬಿಗಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿರುವ ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಇದೀಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಲಾಭ ಪಡೆದು ಕ್ರಿಮಿನಲ್ ಗಳು ಬಚವಾಗಲು ಯತ್ನಿಸುತ್ತಿದ್ದರು. ಆದರೆ ಇದೀಗ ಅದಕ್ಕೆ ಅಂಕುಶ ಬಿದ್ದಿದೆ. ನವೆಂಬರ್ 22 ರಂದು ಕೇರಳ ರಾಜ್ಯದ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಜಿ.ಹೆಚ್, ಕಾಸರಗೋಡು ಎಸ್ ಪಿ […]

Continue Reading

ಬಡಪಾಯಿ ಬೀಡಿ ಕಾರ್ಮಿಕರಿಗೆ ಭಾರೀ ವಂಚನೆ ಮಾಡಿದ ಬೀಡಿ ಮಾಲಕರ ವಿರುದ್ದ ನಿರ್ಣಾಯಕ ಹೋರಾಟಕ್ಕಿಳಿದ ಬೀಡಿ ಕಾರ್ಮಿಕರು

ಸಮಾನ ಮನಸ್ಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು ಕಳೆದ 7 ವರ್ಷಗಳಿಂದ ನಿರಂತರವಾಗಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿತನವನ್ನು ವಿರೋಧಿಸಿ ಬೀಡಿ ಕಾರ್ಮಿಕರು ನವೆಂಬರ್ 24 ರಿಂದ ಅನಿರ್ದಿಷ್ಟಾವಧಿ ರಾತ್ರಿ ಹಗಲು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇಂತಹ ನ್ಯಾಯಪರ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸಲು ದ.ಕ.ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಕಾರ್ಮಿಕ […]

Continue Reading

14 ವರ್ಷಗಳಿಂದ ದಂಡ ಕಟ್ಟಲು ಸಾಧ್ಯವಾಗದೇ, ಕಾರಾಗೃಹದಲ್ಲಿ ಬಂಧಿಯಾಗಿದ್ದ ಬಿಜಾಪುರದ ಖೈದಿಗೆ ನೆರವಾದ ಮಂಗಳೂರಿನ ಸಮಾಜಸೇವಕ

ಜೈಲೇ ಶಾಶ್ವತ ಎಂದು ನಂಬಿ ಕೂತಿದ್ದ ಅಪರಾಧಿಯ ಬಾಳಿಗೆ ಬೆಳಕಾಗಿ ಬಂದ ಮಂಗಳೂರಿನ ಗಿರೀಶ್ ಕೊಟ್ಟಾರಿಯ ಮಾನವೀಯ ಕಾಳಜಿಗೆ ವ್ಯಾಪಕ ಶ್ಲಾಘನೆ ಕಳೆದ ಹದಿನಾಲ್ಕು ವರ್ಷಗಳಿಂದ ಕಾರಾಗೃಹದಲ್ಲಿ ಬಂಧಿಯಾಗಿರುವ ಖೈದಿ. ಬಿಡುಗಡೆಯ ಭಾಗ್ಯವಿದ್ದರೂ ದಂಡದ ಹಣ ಕಟ್ಟಲಾಗದೆ ಜೈಲು ಕಂಬಿಯನ್ನೇ ಎಣಿಸಬೇಕಾದ ದುಸ್ಥಿತಿ. ಕುಟುಂಬಸ್ಥರು ಯಾರೂ ಈ ಖೈದಿಯ ನೆರವಿಗೆ ಬಾರದೇ ಇದ್ದುದರಿಂದ ಜೈಲೇ ಶಾಶ್ವತ ಎಂದು ನಂಬಿ ಕೂತಿದ್ದ ಬಿಜಾಪುರದ ಅಪರಾಧಿಯ ಬಾಳಿಗೆ ಬೆಳಕಾಗಿ ಬಂದಿದ್ದು ಮಂಗಳೂರಿನ ಸಮಾಜ ಸೇವಕ. ಎಲ್ಲಿಯ ಬಿಜಾಪುರ, ಎಲ್ಲಿಯ ಮಂಗಳೂರು. […]

Continue Reading