ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ, ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಿ

ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ; ಕರ್ನಾಟಕ ರಾಜ್ಯ ಪ. ಜಾ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಅಧಿಕಾರಿಗಳಿಗೆ ಖಡಕ್ಕ್ ವಾರ್ನಿಂಗ್ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಕಂಡು ಬಂದಿದ್ದು, ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ ಅಧಿಕಾರಿಗಳಿಗೆ ಖಡಕ್ಕಾಗಿ ವಾರ್ನಿಂಗ್ ಮಾಡಿದರು. ಅವರು ಮಂಗಳವಾರ […]

Continue Reading

ಮಂಗಳೂರು ಉತ್ತರದಲ್ಲಿ ಹೊಸ ಚರಿಷ್ಮಾ ಸೃಷ್ಟಿಸುತ್ತಿರುವ ಇನಾಯತ್ ಆಲಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗುವತ್ತ ಇನಾಯತ್ ಆಲಿ ದಾಪುಗಾಲು ಇಡುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ಅವರು ತೋರುತ್ತಿರುವ ಉತ್ಸಾಹಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದ ನಾಯಕರು ಫಿದಾ ಆಗುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸುತ್ತಿದ್ದಾರೆ. ಅವರ ಸಂಘಟನಾ ಚಾತುರ್ಯತೆಗೆ ಭೇಷ್ ಅನ್ನಲೇಬೇಕು. ಕಳೆದ ಚುನಾವಣೆಯಲ್ಲಿ ಕೊನೆ ಹಂತದಲ್ಲಿ ಪಕ್ಷ ಟಿಕೆಟ್ ನೀಡಿದ ಕಾರಣ ಸೋಲು ಅನುಭವಿಸಿದ್ದರು. ಸೋಲೇ ಗೆಲುವಿನ ಮೆಟ್ಟಿಲು ಅಂದುಕೊಂಡು ಸುಮ್ಮನೆ ಕೂರದೆ ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕ್ಷೇತ್ರಾದ್ಯಂತ ಸುತ್ತುತ್ತಿದ್ದಾರೆ. […]

Continue Reading

ಮಂಗಳೂರು ಗರೋಡಿ ‘ಕೋಳಿ ಅಂಕ’ ವಿಚಾರ; ಅಪಪ್ರಚಾರ ಬಗ್ಗೆ FIR

“Kalyug Kalki Post” ಎಂಬ ಶೀರ್ಷಿಕೆಯಡಿ ಒಂದು ದುರುದ್ದೇಶಪೂರಿತ ಹಾಗೂ ಪ್ರಚೋದನಾತ್ಮಕ ಪೋಸ್ಟ್ ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಉತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ‘ಕೋಳಿ ಅಂಕ’ವು ಉತ್ಸವ ಸಂದರ್ಭದ ಮೋಜಿನ ಆಟವಾಗಿದೆಯೇ ಹೊರತು ಜಾತ್ರಾ ಸಂಪ್ರದಾಯದ ಭಾಗ ಅಲ್ಲ ಎಂದು ಆಸ್ತಿಕರ ಹೇಳಿಕೊಂಡರೆ, ಇನ್ನೂ ಕೆಲವರು ಈ ಸ್ಪರ್ಧೆಗೆ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿಯುತ್ತಿದ್ದಾರೆ. ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ: ಬಿಹಾರ ಮೂಲದ ಗಾಂಜಾ ವ್ಯಾಪಾರಿಗಳ ಬಂಧನ, ಒಂದು ಕೆ.ಜಿ ಗಾಂಜಾ ವಶ

ಬಿಹಾರ ರಾಜ್ಯದಿಂದ ರೈಲ್ವೆ ಮುಖಾಂತರ ಮಂಗಳೂರಿಗೆ ಗಾಂಜಾ ತಂದು, ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲು ಯತ್ನಿಸಿದ ಅಂತರಾಜ್ಯ ಗಾಂಜಾ ವ್ಯಾಪಾರಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ರಸ್ತೆಯ ಬದಿಯಲ್ಲಿ ಸುಮಾರು 1 ಕೆ.ಜಿ ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರ ಮೂಲದ ಸುನಿಲ್ ಕುಮಾರ್, ಹಾಲಿ ವಾಸ: ಕೃಷ್ಣಾಪುರ ಕಾಟಿಪಳ್ಳ ಸುರತ್ಕಲ್‌ ಮತ್ತು ಬ್ರಿಜೇಶ್ ಶ್ರಿನಿವಾಸ್ತವ, ಹಾಲಿವಾಸ: ಕೃಷ್ಣಾಪುರ ಕಾಟಿಪಳ್ಳ […]

Continue Reading

ವಿಟ್ಲ: ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು

ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ-ವಿಭಾಗೀಯ ದಂಡಾಧಿಕಾರಿಗಳು ಇವರ ಆದೇಶದ ಮೇರೆಗೆ ಗಣೇಶ ಯಾನೆ ಗಣೇಶ್ ಪೂಜಾರಿ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ಯಾನೆ ಗಣೇಶ ಪೂಜಾರಿ, ಬಡಕೋಡಿ, ಕೇಪು ಗ್ರಾಮ, ಬಂಟ್ವಾಳ ತಾಲೂಕು. ಈತನ ಮೇಲೆ ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು ಮತ್ತು ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಯಂತಹ ಒಟ್ಟು14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ವಿಟ್ಲ […]

Continue Reading

ಮಂಗಳೂರು ಪೊಲೀಸರ ಕಾರ್ಯಾಚರಣೆ: 21 ಕೆ.ಜಿ ತೂಕದ ಗಾಂಜಾ ವಶ; ಕುಖ್ಯಾತ ಆರೋಪಿಗಳ ಬಂಧನ, ಪ್ರಕರಣ ದಾಖಲು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ, 2ನೇ ಕ್ರಾಸ್ ನ ಬೆನಕ ಎಂಬ ಹೆಸರಿನ ಮನೆಯ ಬಳಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಗಳಾದ ಪ್ರದೀಪ್ ಪೂಜಾರಿ, ಶಾಲೆಮಜಲು, ಉಳಾಯಿಬೆಟ್ಟು ಗ್ರಾಮ, ಗುರುಪುರ. ಇದೀಗ ವಾಸ ಚೊಕ್ಕಬೆಟ್ಟು, ಸುರತ್ಕಲ್ ಹಾಗೂ ವಸಂತ ಪೂಜಾರಿ ಚಿತ್ರಾಪುರ, ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಿ, ಅವರ ವಶದಲ್ಲಿದ್ದ ಸುಮಾರು 21 ಕೆ.ಜಿ 450 ಗ್ರಾಂ […]

Continue Reading

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಸುಬ್ರಹ್ಮಣ್ಯಂ ಎಂಬವರು ಲಕ್ಷಾಂತರ ರೂ. ನಗದು ಮತ್ತು ಚಿನ್ನ ವಂಚಿಸಿ ಪರಾರಿ

ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಟಿಎಂಗೆ ನಿಗದಿತ ನಗದು ಜಮಾ ಮಾಡದೆ, ಕಡಿಮೆ ಹಣ ಜಮಾ ಮಾಡಿ ದುರುಪಯೋಗಪಡಿಸಿ, ವಂಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025 ರಂತೆ ಸುಬ್ರಹ್ಮಣ್ಯಂ, ಪುಲುಗುಜ್ಜು ಎಂಬವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 04-09-2023 ರಿಂದ 19-12-2025 ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಆರೋಪಿತ ಸುಬ್ರಹ್ಮಣ್ಯಂ, ಪುಲುಗುಜ್ಜು ಎಂಬವರು ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ […]

Continue Reading

ಗುರುಪುರ ಕೈಕಂಬ ವಿಜಯ ನರ್ಸಿಂಗ್ ಹೋಂ ವೈದ್ಯರ ಬೇಜವಾಬ್ದಾರಿತನಕ್ಕೆ ಮಗು ಬಲಿಯಾದ ಪ್ರಕರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಜಿಲ್ಲಾಡಳಿತ

ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ಸಂತೋಷ್ ಬಜಾಲ್ ಒತ್ತಾಯ ಗುರುಪುರ- ಕೈಕಂಬ ಬಳಿಯ ವಿಜಯ ನರ್ಸಿಂಗ್ ಹೋಮ್ ನಲ್ಲಿ ಇತ್ತೀಚೆಗೆ ಹೆರಿಗೆಗೆ ದಾಖಲಾಗಿದ್ದ ವೇಳೆ ವೈದ್ಯರ ಕರ್ತವ್ಯ ಲೋಪ, ಬೇಜವಾಬ್ದಾರಿತನದಿಂದ ಬಂಟ್ವಾಳ ಅಮ್ಮುಂಜೆ ಪರಿಸರ ನಿವಾಸಿ ಬಾಣಂತಿ ದಿವ್ಯ ನವೀನ್ ಪೂಜಾರಿಯವರ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ಪ್ರಮುಖ ವೈದ್ಯರ ವಿರುದ್ಧ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, […]

Continue Reading

ಅಂಬಲಪಾಡಿ ನಾಟಕೋತ್ಸವ ಸಮಾರೋಪ, ರಂಗಸನ್ಮಾನ ನಾಟಕಗಳಿoದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಸಾಧ್ಯ : ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್

ಉಡುಪಿ : ರಂಗಭೂಮಿಗೆ ತನ್ನದೇ ಆದ ಇತಿಹಾಸವಿದೆ. ಸಮಾಜದ ವಿವಿಧ ಮುಖಗಳ ಅನಾವರಣೆ, ಸಾಮಾಜಿಕ ಪಿಡುಗುಗಳ ಬಗ್ಗೆ ನಾಟಕಗಳು ಬೆಳಕು ಚೆಲ್ಲಿ ಸಮಸ್ಯೆಗಳ ಪರಿಹಾರಕ್ಕೂ ಕಾರಣವಾಗಿವೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದರು. ಅವರು ಗುರುವಾರ ರಂಗಭೂಮಿ ಉಡುಪಿ ವತಿಯಿಂದ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ದಿ.ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಎರಡು ದಿನಗಳ […]

Continue Reading

ಆಪರೇಷನ್ ವೇಳೆ ಮಹಿಳೆ ಮೃತ್ಯು: ಕಾರ್ಕಳ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಪ್ರಕರಣ ದಾಖಲು

ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ಕುರಿತು ಕಾರ್ಕಳದ ಖಾಸಗಿ ಆಸ್ಪತ್ರೆಯ ವೈದ್ಯರಾದ ನಾಗರತ್ನ, ರಹಮತ್ತುಲ್ಲಾ ಮತ್ತು ತುಷಾರ್ ಎಂಬವರ ವಿರುದ್ಧ ಕರ್ತವ್ಯಲೋಪ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಸಾಣೂರು ಗ್ರಾಮದ ಝುಬೈದಾ ಎಂಬವರು 2025 ಮೇ 10 ರಂದು ಹೊಟ್ಟೆನೋವಿನ ಚಿಕಿತ್ಸೆಗೆಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 1.30 ರ ಸುಮಾರಿಗೆ ಆಸ್ಪತ್ರೆಯ ವೈದ್ಯಾಧಿಕಾರಿ ನಾಗರತ್ನ ಅವರು ತಕ್ಷಣ ಆಪರೇಷನ್ ಆಗದಿದ್ದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿ ಆಪರೇಷನ್ ಥಿಯೇಟರ್ ಗೆ ಕರೆದೊಯ್ದಿದ್ದರು. […]

Continue Reading