ಸಮುದಾಯ ಆಸ್ಪತ್ರೆಗೆ ಆಗ್ರಹಿಸಿ ಸುರತ್ಕಲ್ ನಲ್ಲಿ12 ತಾಸುಗಳ ಸಾಮೂಹಿಕ ಧರಣಿ

ಸುರತ್ಕಲ್ ನಲ್ಲಿ ಸಮುದಾಯ ಆಸ್ಪತ್ರೆ ನಿರ್ಮಾಣ ಆಗದೆ ವಿರಮಿಸುವುದಿಲ್ಲ: ಮುನೀರ್ ಕಾಟಿಪಳ್ಳ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಾಮೂಹಿಕ ಧರಣಿ ನಡೆಯಿತು. ಹಲವು ಜನಪರ ಸಂಘಟನೆಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು ಧರಣಿಯಲ್ಲಿ ಭಾಗಿಗಳಾದರು. ಸಾಮೂಹಿಕ ಧರಣಿಯನ್ನು ಮುನೀರ್ ಕಾಟಿಪಳ್ಳ ಉದ್ಘಾಟಿಸಿ ಮಾತಾಡಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೂರು ದಶಕದ ಹಿಂದೆ […]

Continue Reading

ಚಿನ್ನದ ವ್ಯಾಪಾರಿಯೊಬ್ಬರಿಂದ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ತು ಪಡೆದು ಪರಾರಿಯಾಗಿದ್ದ ಅಂತರಾಜ್ಯ ವಂಚಕ ಪುಗಲ್ ಅರುಣ್ ಬಂಧನ

ತಮಿಳುನಾಡು ಮೂಲದ ವಂಚಕನ ಹೆಡೆಮುರಿ ಕಟ್ಟಿದ ಮಂಗಳೂರು ಪೊಲೀಸರು ಮಂಗಳೂರಿನ ಚಿನ್ನದ ವ್ಯಾಪಾರಿಯೊಬ್ಬರಿಂದ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ತು ಪಡೆದು ಪರಾರಿಯಾಗಿದ್ದ ಅಂತರಾಜ್ಯ ವಂಚಕ ತಮಿಳುನಾಡು ಮೂಲದ ಅರುಣ್ ಎಂಬಾತನನ್ನು ಮಂಗಳೂರಿನ ಉರ್ವ ಪೊಲೀಸರು ಕೊಯಂಬತ್ತೂರಿನಲ್ಲಿ ಬಂಧಿಸಿ, ಮಂಗಳೂರಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಈತ ವಂಚಿಸಿದ 240 ಗ್ರಾಂ ತೂಕದ ಚಿನ್ನದ ಬಿಸ್ಕೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನವಂಬರ್ 21 ರಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಉರ್ವಾದ ಗುಜ್ಜಾಡಿ ಚೇಂಬರ್ಸ್‌ನಲ್ಲಿರುವ ಸ್ವರ್ಣ ಜುವೆಲರ್ಸ್‌ಗೆ ಭೇಟಿ ನೀಡಿ, […]

Continue Reading

ಏಳು ವರ್ಷದಿಂದ ದುಡಿಸಿ, ಸಂಬಳ ನೀಡದ ಬೀಡಿ ಮಾಲಕರ ವಿರುದ್ಧ ಮತ್ತು ಕನಿಷ್ಟ ಕೂಲಿ ಜಾರಿ ಮಾಡದಿದ್ದರ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ

01.04.2024 ರಿಂದ ಸರಕಾರ ನಿಗದಿ ಪಡಿಸಿ ಆದೇಶ ಮಾಡಿದ ಕನಿಷ್ಠ ಕೂಲಿಯನ್ನು ಕೂಡಾ ಬೀಡಿ ಮಾಲಕರು ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಆರೋಪಿಸಿದರು. ಅವರು ಇಂದು ಮಂಗಳೂರು ಸಹಾಯಕ ಕಾರ್ಮಿಕ ಇಲಾಖೆಯಲ್ಲಿ ನಡೆದ ಬೀಡಿ ಕಾರ್ಮಿಕರ ಧೃಹತ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ಕಾರ್ಮಿಕರಿಗೆ ಈಗ ಇದ್ದ ವೇತನವನ್ನು ಹಿಮ್ಮುಖ ಗೊಳಿಸಿ, ಸರಕಾರ ಮಾಲಕರ ಪರವಾಗಿ ಆದೇಶ ಮಾಡಿದ್ದರೂ ಬೀಡಿ ಮಾಲಕರು ಆ ಕೂಲಿಯನ್ನೂ ಕೂಡಾ […]

Continue Reading

ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ, ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳು ವಶಕ್ಕೆ

ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು, ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಹೊರಗುತ್ತಿಗೆ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳನ್ನು ಇಂದು ಬಂಧಿಸಿರುತ್ತಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ.ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ […]

Continue Reading

ಕಿನ್ನಿಗೋಳಿ, ಬಜಪೆ ಪಟ್ಟಣ ಪಂಚಾಯಿತಿಗೆ ಡಿಸೆಂಬರ್ 21 ರಂದು ಮತದಾನ

ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಹಾಗೂ ಬಜಪೆ ಪಟ್ಟಣ ಪಂಚಾಯಿತಿ ಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಹಾಗೂ ಬಜಪೆ ಪಟ್ಟಣ ಪಂಚಾಯತ್ ಗೆ ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಿಸೆಂಬರ್ 2 ರಂದು ಅಧಿಸೂಚನೆ ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿಸೆಂಬರ್ 10 ರಂದು ನಾಮಪತ್ರ ಪರಿಶೀಲನೆ, ಡಿಸೆಂಬರ್ 12 ರಂದು ನಾಮಪತ್ರ ಹಿಂತೆಗೆತಕ್ಕೆ […]

Continue Reading

ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣ, ಆರೋಪಿಗಳ ದಸ್ತಗಿರಿ

5,32,000 ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣಗಳ ವಶ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ದಿನಾಂಕ: 03-05-2025 ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ. ಕ್ರ 17/2025 ರಂತೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿದ್ದರು. ದಿನಾಂಕ:23.11.2025ರಂದು ಮತ್ತೆ ಧರ್ಮಸ್ಥಳದತ್ತ ಕಳ್ಳತನ ಮಾಡಲು ಆರೋಪಿಗಳು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ […]

Continue Reading

ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು(26-11-2025) ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ […]

Continue Reading

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ […]

Continue Reading

ಬೀಡಿ ಮಾಲಕರ ವಂಚನೆಯ ವಿರುದ್ಧ ಬೀದಿಗಿಳಿದ ಬೀಡಿ ಕಾರ್ಮಿಕರು; ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಉದ್ಘಾಟನೆ

ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು. ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಬೀಡಿ […]

Continue Reading

ಮಂಗಳೂರು: ಪ್ರಸಿದ್ಧ ನ್ಯಾಯವಾದಿ ಯು. ಮುಹಮ್ಮದ್ ಆಲಿ ವಿಧಿವಶ

ಮಂಗಳೂರಿನಲ್ಲಿ ಹಲವಾರು ವರ್ಷಗಳಿಂದ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿ ಪ್ರಸಿದ್ಧರಾಗಿದ್ದ ಯು. ಮುಹಮ್ಮದ್ ಆಲಿ ಇಂದು ಮುಂಜಾನೆ ಹೊಸದಿಲ್ಲಿಯಲ್ಲಿ ವಿಧಿವಶರಾಗಿದ್ದಾರೆ. ಜಡ್ಜ್ ಉಳ್ಳಾಲ ಹಮ್ಮಬ್ಬ ರವರ ಸುಪುತ್ರರಾಗಿರುವ ಮುಹಮ್ಮದ್ ಆಲಿ ನ್ಯಾಯವಾದಿ ಜೊತೆಗೆ ಸಾಮಾಜಿಕ ಸೇವೆ ಹಾಗೂ ರಾಜಕೀಯ ವಲಯದಲ್ಲೂ ಗುರುತಿಸಿಕೊಂಡಿದ್ದರು. ಮುಸ್ಲಿಂ ಲೀಗ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಮುಹಮ್ಮದ್ ಆಲಿ ಚುನಾವಣೆಯಲ್ಲೂ ಕೂಡ ಸ್ಪರ್ಧಿಸಿದ್ದರು. ಮಂಗಳೂರಿನ ಪ್ರಸಿದ್ಧ ನ್ಯಾಯವಾದಿಯಾಗಿದ್ದ ಮುಹಮ್ಮದ್ ಆಲಿ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ಫಜರ್ ನಮಾಜಿಗೆ ಮಸೀದಿಯಲ್ಲಿದ್ದ ಸಂದರ್ಭ ಹೃದಯಾಘಾತ […]

Continue Reading