ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರು ನ್ಯಾಯಾಲಯಕ್ಕೆ ಶರಣು

ಮಂಗಳೂರು: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿ ಭರತ್ ಕುಮ್ಡೇಲು ಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲಿನ ಪಿಕಪ್ ಚಾಲಕ ಅಬ್ದುಲ್ ರಹ್ಮಾನ್ ಕೊಲೆ […]

Continue Reading

ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ , ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬಿದ್ದು, ಆ ದಿನ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 100 ಕ್ಕೂ ಹೆಚ್ಚು ಕಡೆ ಯಶಸ್ವಿಯಾಗಿ ಆಚರಿಸಿದೆ. ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ ನೀಡಿದೆ. ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ, ಹೋಬಳಿ, ಗ್ರಾಮ ಮಟ್ಟದಲ್ಲಿ ವಿವಿಧ […]

Continue Reading

ಅಬಕಾರಿ ಇಲಾಖೆಯವರ ಕಣ್ಣು ತಪ್ಪಿಸಿ ಪರಾರಿಯಾದ ಗಾಂಜಾ ಆರೋಪಿಗಳನ್ನು ಮಾಲು ಸಹಿತ ಲಾಕ್ ಮಾಡಿದ ಬಂಟ್ವಾಳ ನಗರ ಪೊಲೀಸರು

ಇತ್ತೀಚೆಗೆ ಕೆಎ-70, 6904 ಸಂಖ್ಯೆ ಹೊಂದಿರುವ ಬೊಲೋರೋ ಪಿಕಪ್ ವಾಹನದಲ್ಲಿ ಮಾಧಕ ವಸ್ತು(ಗಾಂಜಾ) ಸಾಗಾಟ ಮಾಡುತ್ತಿದ್ದ ಸಮಯ ಅಬಕಾರಿ ಇಲಾಖೆಯವರು ಪಿಕ್ ಅಪ್ ವಾಹನವನ್ನು ಬೆನ್ನಟ್ಟಿಕೊಂಡು ಬಂದಿದ್ದು, ಆರೋಪಿಗಳು ಅವರಿಗೆ ಸಿಗದೆ ಪಿಕ್ ಅಪ್ ನ್ನು ಚಲಾಯಿಸಿಕೊಂಡು ಪರಾರಿಯಾಗಿ ನಂದಾವರದ ರೈಲ್ವೆ ಇಲಾಖೆಗೆ ಸಂಬಂದಿಸಿದ ಖಾಲಿ ಜಾಗದಲ್ಲಿ ಪಿಕಪ್ ವಾಹನ ಬಿಟ್ಟು, ಗಾಂಜಾದ ಸಮೇತ ಪರಾರಿಯಾಗಿ, ಗಾಂಜಾವನ್ನು ತಮ್ಮ ಸ್ನೇಹಿತನಾದ ಮಜೀದ ಎಂಬವರ ಮನೆಯಲ್ಲಿ ಬಚ್ಚಿಟ್ಟು ಅಬಕಾರಿ ಅಧಿಕಾರಿಗಳ ಕಣ್ಣು ತಪ್ಪಿ ಭೂಗತರಾಗಿದ್ದರು. ದಿನಾಂಕ 08-10-2025 ರಂದು […]

Continue Reading

ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಮೊಹಮ್ಮದ್ ಸಿನಾನ್ ಬಂಧನ

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ, ತಲೆ ಮರೆಸಿಕೊಂಡಿರುವ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಕುದ್ರೋಳಿ ನಿವಾಸಿ ಮೊಹಮ್ಮದ್ ಸಿನಾನ್, ಎಂಬಾತನು ಕಳೆದ ಎರಡು ವರ್ಷಗಳಿಂದ ಘನ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ಘನ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು, ವಾರೆಂಟ್ ಜ್ಯಾರಿಗೊಳಿಸುವ ಸಲುವಾಗಿ ಈತನ ವಿರುದ್ದ ಬ್ಯೂರೋ ಆಫ್ ಇಮಿಗ್ರೇಶನ್ ನವದೆಹಲಿ, ಭಾರತ ಸರಕಾರ ಇವರಿಂದ ಎಲ್.ಓ.ಸಿ ತೆರೆಯಲಾಗಿತ್ತು. ದಿನಾಂಕ […]

Continue Reading

ಅಂತರ್ ರಾಜ್ಯ ಕುಖ್ಯಾತ ವಾಹನ ಜೋರನ ಬಂಧನ: ಕಳವುಗೈದ ಪಿಕಪ್ ವಾಹನ, ಮತ್ತು ಬೈಕ್ ಪೊಲೀಸ್ ವಶಕ್ಕೆ

ಸುರತ್ಕಲ್ ಪೊಲೀಸ್‌ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಗೈದಿದ್ದ ಅಂತರ್ ರಾಜ್ಯ ಕಳವು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ರಾತಿಕ್ಕಲ್ ವರ್ಕಲಾ ಗ್ರಾಮದ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಝ ಯಾನೆ ಹಂಝ ಪೊನ್ನನ್ (29) ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ […]

Continue Reading

ಸುರತ್ಕಲ್ ಯಕ್ಷ ಅಭಿಮಾನಿ ಬಳಗದ ದಶಮಾನೋತ್ಸವ ಸಂಭ್ರಮಾಚರಣೆ ಉದ್ಘಾಟನೆ.

ಸಂಘಟನೆಗಳಿoದಾಗಿ ಯಕ್ಷಗಾನದ ಭವಿಷ್ಯ ಭದ್ರ: ಡಾ.ತಲ್ಲೂರು ಉಡುಪಿ : ಯಕ್ಷಗಾನ ಸಂಘಟನೆಯೊoದು ದಶಮಾನೋತ್ಸವವನ್ನು ಪೂರೈಸುತ್ತಿರುವುದು ಅಭಿಮಾನದ ಸಂಗತಿ. ಇಂದು ಮಹಿಳಾ ಯಕ್ಷಗಾನ ಸಂಘಟನೆಗಳು, ಮಕ್ಕಳ ಯಕ್ಷಗಾನ ಮೇಳ ಸೇರಿದಂತೆ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿವೆ. ಈ ಸಂಘಟನೆಗಳಿoದಾಗಿಯೇ ಯಕ್ಷಗಾನ ಕಲೆಯ ಭವಿಷ್ಯ ಭದ್ರವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ನಡೆದ […]

Continue Reading

ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿಯ ಲಕ್ಷ, ಲಕ್ಷ ನೀರಿನ ಬಿಲ್ಲು ಸ್ವಾಹ ಪ್ರಕರಣ

ಸಿಬ್ಬಂದಿ ಲಾವಣ್ಯ ವಿರುದ್ದ ಆಡಳಿತಾತ್ಮಕ ಕ್ರಮ ಜರುಗಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಯಿಂದ ಪಿಡಿಓ ಗೆ ನೋಟಿಸ್ ಜಾರಿ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿಯ ಭ್ರಷ್ಟತೆಯ ಪರಮಾವಧಿಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಜೀಪ ಮೂಡ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪಿಡಿಒ ಅವರಿಗೆ ಸೂಚಿಸಿದ್ದಾರೆ. ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿ ಲಾವಣ್ಯ ಎಂಬಾಕೆ ಸಜೀಪ ಮೂಡ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾಗಾರರಾಗಿ […]

Continue Reading

ದುಡಿಯುವ ವರ್ಗ ಹಸಿವಿನಿಂದ ಬಳಲುತ್ತಿರುವ ಭಾರತದಲ್ಲಿ 284 ಬಿಲಿಯನೇರ್ ಗಳ ಸೃಷ್ಟಿ ಮೋದಿ ಆಡಳಿತದ ಕೊಡುಗೆ – ಡಾ.ಕೆ ಪ್ರಕಾಶ್

ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡು ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಅರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ. ಕಾರ್ಮಿಕರು ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ.ಹೊಸ ಹೊಸ ಕಾಯಿದೆಗಳು ದುಡಿಯುವ ಜನರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಇದರ ಪರಿಣಾಮ ಬಾರತ ದೇಶದಲ್ಲಿ 284 ಬಿಲಿಯನೇರ್ ಗಳು ಸೃಷ್ಠಿಯಾಗಿದ್ಸಾರೆ.ನವ ಉದಾರೀಕರಣ ನೀತಿಗಳ ಪೂರ್ವದಲ್ಲಿ ಭಾರತದಲ್ಲಿ ಬಿಲಿಯನೇರ್ ಗಳು ಇರಲಿಲ್ಲ.ಈ ರೀತಿಯ ಬಡತನವೂ ಇರಲಿಲ್ಲ. ಆದರೆ ಇಂದು 284 ಬಿಲಿಯನೇರ್ ಗಳ ಕೈಯಲ್ಲಿ ಭಾರತ ದೇಶದ ಎರಡು ವರ್ಷಗಳ ಬಜೆಟ್ […]

Continue Reading

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ. 7 ಲಕ್ಷ ನುಂಗಿದ ಸಜೀಪ ಮೂಡ ಗ್ರಾಮ ಪಂಚಾಯತ್ ಸಿಬ್ಬಂದಿ

ಭ್ರಷ್ಟೆ ಸಿಬ್ಬಂದಿ ಬೆನ್ನಿಗೆ ನಿಂತ ಪಂಚಾಯತ್ ಸದಸ್ಯರು, ಕಾಂಗ್ರೆಸ್ಸಿನ ಪ್ರಭಾವಿ ಮುಖಂಡ.! ‘ಕಾವಲಿಗಿಟ್ಟವರೇ ಕೊಳ್ಳೆ ಹೊಡೆದ ಸ್ಥಿತಿಯಂತಾಗಿದೆ’ ಸಜೀಪ ಮೂಡ ಗ್ರಾಮ ಪಂಚಾಯತ್ ಪರಿಸ್ಥಿತಿ. ಇದು ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ನ ಭ್ರಷ್ಟತೆಯ ಪರಮಾವಧಿಯ ಕಥೆ ವ್ಯಥೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಅನ್ನುತ್ತಾರಲ್ಲ ಅದಕ್ಕೆ ಪಕ್ಕಾ ಉದಾಹರಣೆಯಂತಿದೆ ಈ ಪಂಚಾಯತ್. ಇಲ್ಲಿನ ಪಂಚಾಯತ್ ಸಿಬ್ಬಂದಿಯೇ ದುಡ್ಡು ಸ್ವಾಹಾ ಮಾಡಿದರೂ, ಆಕೆಯ ರಕ್ಷಣೆಗೆ ಪಂಚಾಯತ್ ಸದಸ್ಯರ ಜೊತೆ ಕಾಂಗ್ರೆಸ್ ಮುಖಂಡರು ಬೆನ್ನಿಗೆ ನಿಂತಿರುವ […]

Continue Reading

ರಾಜ್ಯಾದ್ಯಂತ ನ್ಯಾಯಕ್ಕಾಗಿ Oct 9 ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ

“ಧರ್ಮಸ್ಥಳ ದೌರ್ಜನ್ಯಗಳು – ಇತಿಹಾಸ ಮತ್ತು ವರ್ತಮಾನ” ಎಂಬ ಪುಸ್ತಕ ಬಿಡುಗಡೆ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬುತ್ತಿದ್ದು, ಆ ದಿನವನ್ನು ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ ನೀಡಿದೆ. ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬಳಿಕ ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ವೇದವಲ್ಲಿ, ಪದ್ಮಲತಾ, ಆನೆ ಮಾವುತ ನಾರಾಯಣ, ಸಹೋದರಿ ಯಮುನಾ […]

Continue Reading