ಶುಲ್ಕ ಪಾವತಿಗೆ ದಂಡ ವಸೂಲಿ ಶ್ರೀದೇವಿ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲು ಎಸ್ ಎಫ್ ಐ, ಆಗ್ರಹ

ಮಂಗಳೂರು: ನಗರದ ಶ್ರೀ ದೇವಿ ಕಾಲೇಜಿನ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಪಾವತಿಗೆ ವರ್ಷಾಂತ್ಯಕ್ಕೂ ಮೊದಲೇ ವಿಳಂಬ ಪಾವತಿಯ ಹೆಸರಿನಲ್ಲಿ ದಿನಕ್ಕೆ 100 ರೂಪಾಯಿಯಂತೆ ದಂಡ ವಸೂಲಿ ಮಾಡುತ್ತಿದ್ದು, ವಿಪರೀತ ದಂಡ ಕಟ್ಟಲು ಕಾಲೇಜು ಮಂಡಳಿ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿರುವುದು ಶಿಕ್ಷಣ ನೀತಿಗೆ ವಿರುದ್ಧವಾದುದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(SFI) ಆರೋಪಿಸಿದೆ. ವಿದ್ಯಾರ್ಥಿಗಳು ಶ್ರೀದೇವಿ ಕಾಲೇಜಿನ ದಂಡ ಪಾವತಿ ನೀತಿಯ ವಿರುದ್ಧ ತರಗತಿ ಬಹಿಷ್ಕರಿಸಿ ನಡೆಸಿರುವ ಹೋರಾಟವನ್ನು ಎಸ್ ಎಫ್ ಐ ಮತ್ತು ಡಿವೈಎಫ್ಐ ಬೆಂಬಲಿಸಿದ್ದು ಮಂಗಳೂರು […]

Continue Reading

ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ನಕಲಿ ದಾಖಲೆ ಸೃಷ್ಠಿಸಿ ವಂಚಿಸಿದ ಪ್ರಕರಣ, ಆರೋಪಿಯ ಬಂಧನ.

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಪತ್ರಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ಪಡೆಯಲು ವಂಚನೆ ಮಾಡಿದಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಪ್ರಕರಣ ದಾಖಲಾತ್ತು. ಪ್ರಕರಣದಲ್ಲಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ […]

Continue Reading

ಕಂಬಳ ಪ್ರೇಮಿ, ಉದ್ಯಮಿ ವಾಮಂಜೂರು ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಅಭಿಷೇಕ್ ಮೃತದೇಹ ನದಿ ಕಿನಾರೆಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ?

ಕಳೆದೆರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ, ಕಂಬಳ ಪ್ರೇಮಿ, ಉದ್ಯಮಿ ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಅವರ ಸುಪುತ್ರ ಅಭಿಷೇಕ್ ಆಳ್ವ ಅವರ ಮೃತದೇಹ ಇಂದು ಮೂಲ್ಕಿ ಬಪ್ಪನಾಡು ನದಿ ತೀರದಲ್ಲಿ ಪತ್ತೆಯಾಗಿದೆ. ಎರಡು ದಿನಗಳ ಹಿಂದಷ್ಟೇ ತನ್ನ ಸ್ನೇಹಿತರ ಜೊತೆ ಪಾರ್ಟಿ ಮಾಡಿಕೊಂಡಿದ್ದ ಅಭಿಷೇಕ್ ಆಳ್ವ ಆ ನಂತರ ಡಿಢೀರಾಗಿ ನಾಪತ್ತೆಯಾಗಿದ್ದರು. ಮೂಲ್ಕಿ ಬಪ್ಪನಾಡು ಬಳಿ ಕಾರು ಪತ್ತೆಯಾಗಿತ್ತು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನಲ್ಲಿ ಆತ ಬಳಸುತ್ತಿದ್ದ ವಾಚ್ ಪತ್ತೆಯಾಗಿತ್ತು. […]

Continue Reading

ಹಳೇ ಹುಲಿಗಳು ಕಾಂಗ್ರೆಸ್ ತೆಕ್ಕೆಗೆ.! ಅಧಿಕಾರಿ, ಬಾವಾ ಬ್ರದರ್ಸ್ ಕಾಂಗ್ರೆಸ್ ಸೇರ್ಪಡೆಗೆ ಕೌಂಟ್ ಡೌನ್.!

ಕರಾವಳಿಯ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸುವ ಮುನ್ಸೂಚನೆ ಸಿಕ್ಕಿದೆ. ಹಿಂದುತ್ವದ ತವರು ನೆಲದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಮಾಸ್ಟರ್ ಪ್ಲ್ಯಾನ್ ಈಗಿಂದಲೇ ಸಿದ್ಧಗೊಂಡಂತಿದೆ. ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಖಾಡಕ್ಕೆ ಇಳಿದಿರುವ ಲಕ್ಷಣ ಗೋಚರಿಸುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಡಿಕೆಶಿ ಮುಖ್ಯಮಂತ್ರಿಯಾಗಲು ರಣತಂತ್ರಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ಗಾದಿಗೇರಲು ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ ಬಿ ಪಾಟೀಲ್ ಹೀಗೆ ಡಜನ್ ಗಟ್ಟಲೆ ನಾಯಕರು ಕ್ಯೂನಲ್ಲಿ ನಿಂತಿದ್ದಾರೆ. ಕಾಂಗ್ರೆಸ್ಸಿನಲ್ಲಿ ಸಿಎಂ […]

Continue Reading

ಪುತ್ತೂರು: ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ಪ್ರಕರಣ; ಆರೋಪಿಗಳನ್ನು ರಕ್ಷಿಸಲು ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಹಲವರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು, ಸುಳ್ಳು ಸುದ್ದಿ ಹಾಗೂ ಮತೀಯ ಸಂಘರ್ಷಕ್ಕೆ ಕಾರಣವಾಗುವ ವಿಡಿಯೋ ಹಾಗೂ ಸುದ್ದಿಗಳನ್ನು ಪ್ರಸಾರ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆಯ ಇಂತಹ ಕಟ್ಟುನಿಟ್ಟಿನ ಕ್ರಮ ಹಲವು ಸಾಮಾಜಿಕ ಜಾಲತಾಣದ ವೀರರ ನಿದ್ದೆಗೆಡಿಸಿದೆ. ಇದೀಗ ಇತ್ತೀಚೆಗೆ ಪುತ್ತೂರು ಭಾಗದಲ್ಲಿ ಅಕ್ರಮ ಗೋ ಸಾಗಾಟಗಾರರ ಮೇಲೆ ಫೈರಿಂಗ್ ನಡೆಸಿ ಪೊಲೀಸ್ ಇಲಾಖೆ ಆರೋಪಿಗಳ ಹೆಡೆಮುರಿ ಕಟ್ಟಿತ್ತು. ಈ ವಿಚಾರಕ್ಕೆ ಸಂಬಂಧಿಸಿ […]

Continue Reading

ಸೋಮೇಶ್ವರ-ಉಚ್ಚಿಲದ ಯುವಕನ ಮಾನವ ಕಳ್ಳಸಾಗಣೆ; ಮ್ಯಾನ್ಮಾರ್‌ ಸೇನೆಯಿಂದ ಯುವಕನ ಬಂಧನ, ಏಜೆನ್ಸಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಉದ್ಯೋಗಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದ ಉಳ್ಳಾಲ ಸೋಮೇಶ್ವರ ಪರಿಸರದ ಉಚ್ಚಿಲದ ಯುವಕನನ್ನು, ಅಲ್ಲಿನ ಕೆಲವರು ಮಾನವ ಕಳ್ಳಸಾಗಣೆ ಮೂಲಕ ಮ್ಯಾನ್ಮಾರ್‌ಗೆ ಕರೆದೊಯ್ದಿದ್ದಾರೆ. ಮ್ಯಾನ್ಮಾರ್‌ ಸೇನೆಯು ಯುವಕನನ್ನು ಬಂಧಿಸಿದ್ದು, ಆತನನ್ನು ವಿದೇಶಕ್ಕೆ ಕಳುಹಿಸಿದ್ದ ಏಜೆನ್ಸಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಉಚ್ಚಿಲದ ಜುಬೇದಾ-ಹುಸೇನ್‌ ದಂಪತಿ ಪುತ್ರ ಹೇಮದ್ ರಜಾಕ್‌ ಮ್ಯಾನ್ಮಾರ್‌ನಲ್ಲಿ ಬಂಧನಕ್ಕೊಳಗಾದ ಯುವಕ ಎಂದು ಪೊಲೀಸರ ಮಾಹಿತಿಯಿಂದ ತಿಳಿದು ಬಂದಿದೆ. ಪಿಯುಸಿ ವಿದ್ಯಾಭ್ಯಾಸ ಪೂರೈಸಿದ್ದ ಹೇಮದ್ ರಜಾಕ್‌ ಉದ್ಯೋಗ ಹುಡುಕುತ್ತಿದ್ದ ಸಮಯದಲ್ಲಿ ಆತನಿಗೆ ಪುತ್ತೂರಿನ ಗೋಲ್ಡನ್ ಟ್ರಾವೆಲ್ಸ್ […]

Continue Reading

ಪೂಜೆ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣ; ಆರೋಪಿಯ ಹೆಡೆಮುರಿ ಕಟ್ಟಿದ ದ. ಕ. ಜಿಲ್ಲಾ ಸೈಬರ್‌ ಅಪರಾಧ ಪೊಲೀಸರು

ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತಕ್ಷಣದಲ್ಲಿ ದೇವರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ನಂಬಿಸಿ ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ ಸೈಬರ್‌ ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ. 87/2025, ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ದ.ಕ ಜಿಲ್ಲೆಯ ಸೈಬರ್ ಅಪರಾಧ ಠಾಣೆಯ ಪೊಲೀಸರು ದಿನಾಂಕ: 04-11-2025 ರಂದು ಆರೋಪಿ ವಾಸುದೇವ ಆರ್‌, ಗೋಕುಲ 1ನೇ ಹಂತ, ಯಶವಂತಪುರ, ಬೆಂಗಳೂರು.‌(ಹಾಲಿ ವಾಸ: […]

Continue Reading

ಕರಾವಳಿ: ಧರ್ಮದಂಗಲ್ ಗೆ ಗುಡ್ ಬೈ.. ಐಟಿಬಿಟಿಯತ್ತ ದಿಟ್ಟ ಹೆಜ್ಜೆ

ಧರ್ಮದಂಗಲ್ ಹಿಂದೆ ಯುವಕರು ಬಿದ್ದದ್ದು ಸಾಕು; ಇನ್ನಾದರೂ ಮಂಗಳೂರು ವಿಶ್ವದರ್ಜೆಯ ಸಿಲಿಕಾನ್ ಸಿಟಿ ಆಗಲಿ. ‘ಏನಾಗುತ್ತಿದೆ ಮಂಗಳೂರಿನಲ್ಲಿ?’ ದಿನ ಬೆಳಗಾದರೆ ಚೂರಿಯದ್ದೇ ಸದ್ದು ಕೇಳುತ್ತಿತ್ತು. ಅಮಾಯಕರು ಓಡಾಡಲು ಹೆದರುವ ಕಾಲವಿತ್ತು. ಮತೀಯ ಕ್ರೌರ್ಯಕ್ಕೆ ಯಾರ್ಯಾರೋ ಮನೆಯ ಬಡಕೂಸು ಜೀವ ಕಳಕೊಳ್ಳುತ್ತಿತ್ತು. ಶಾಂತಿ, ನೆಮ್ಮದಿ, ಭಾತೃತ್ವದ ಸಮಾಜದಲ್ಲಿ ಕತ್ತಿ, ತಲವಾರು, ದ್ವೇಷ ಭಾಷಣಗಳು ಮೊಳಗುತ್ತಿತ್ತು. ರಕ್ತ ಕೊಟ್ಟು ಜೀವ ಉಳಿಸಬೇಕಾದ ಕೈಯಲ್ಲಿ ರಕ್ತ ಮೆತ್ತಿತ್ತು. ಅಪರಾಧ ಸುದ್ಧಿಗಳು ಪತ್ರಿಕೆಗಳ ಮುಖಪುಟಗಳಲ್ಲಿ ರಾರಾಜಿಸುತ್ತಿತ್ತು. ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ […]

Continue Reading

ಕಲ್ಲಡ್ಕ ಪ್ರಭಾಕರ ಭಟ್ ಗೆ ಇಂದೂ ಮಂಜೂರಾಗದ ಜಾಮೀನು.! ಬಂಧಿಸಲು ಕಾರಣ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು.!

ಮಂಗಳೂರು: ‘ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ’ ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೇ ಮುಂದೂಡಲ್ಪಟ್ಟಿತು. ಬಿಎನ್‌ಎಸ್‌ಎಸ್‌ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು […]

Continue Reading

ಸುಳ್ಯ: ಬೆನಿಫಿಟ್ ಸ್ಕೀಂ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ವಂಚಿಸಿದ‌ ಪ್ರಕರಣದ ಆರೋಪಿಗಳಿಗೆ ಶಿಕ್ಷೆ

ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಹೆಸರಿನ ಸಂಸ್ಥೆ ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸದ್ರಿ ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ ಏಜೆಂಟರುಗಳ […]

Continue Reading