ಉಡುಪಿಯಲ್ಲಿ ಸಂಸ್ಕೃತಿ ಸಂಭ್ರಮ ಸಮಾರೋಪ. ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ನಮಗೆ ಭೂಷಣ: ಮಾಜಿ ಸಚಿವ ಸೊರಕೆ

ಉಡುಪಿ : ಒಬ್ಬ ವ್ಯಕ್ತಿಗೆ ಬಂಗಾರ, ವಜ್ರ ಇವೆಲ್ಲಾ ಎಷ್ಟು ಭೂಷಣವೋ ಹಾಗೆಯೇ ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ಕೂಡಾ ಭೂಷಣವಾಗಿರುತ್ತದೆ. ಕರಾವಳಿ ಪ್ರದೇಶ ಅತ್ಯುನ್ನತ ಸಂಸ್ಕೃತಿ, ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಾನಪದ ಅಕಾಡೆಮಿ, ನಾಟಕ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಇವರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, […]

Continue Reading

ಬೆಳ್ತಂಗಡಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ.ಜಾತಿ /ಪಂಗಡಗಳ ಕುಂದುಕೊರತೆಗಳ ಸಭೆ

ಕೊರಗ ಕಾಲನಿಗೆ ಕೇಂದ್ರ ಸರ್ಕಾರದ ವಿಶೇಷ ಅನುದಾನದಲ್ಲಿ ಮಂಜೂರಾದ 9 ಕೋಟಿ ಹಣದಲ್ಲಿ ದುರುಪಯೋಗ, ಉನ್ನತ ಮಟ್ಟದ ತನಿಖೆಗೆ ಒತ್ತಾಯ: ಶೇಖರ್ ಲಾಯಿಲ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರ ಅಧ್ಯಕ್ಷತೆಯಲ್ಲಿ ನಡೆದ ಪ.ಜಾತಿ /ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು. ಸುಲ್ಕೇರಿ ಗ್ರಾಮದ ಅಟ್ರಿಂಜೆ ಕೊರಗ ಕಾಲನಿಗೆ ಕೇಂದ್ರ ಸರ್ಕಾರದ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಮಂಜೂರಾದ 9 ಕೋಟಿ ರೂಪಾಯಿಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಈ […]

Continue Reading

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಅರೆಸ್ಟ್

ಮಂಗಳೂರಿನ ಬಿಜೈ ಬಿಲ್ಡರ್ಸ್ ಶೂಟೌಟ್ ಪ್ರಕರಣದ ಆರೋಪಿ 10 ವರ್ಷದಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕರಾಡ್ ಗಣೇಶ್‌ ಲಕ್ಷ್ಮಣ್ ಸಕಟ್ ಬಂಧಿತ ಆರೋಪಿ. 2014 ರಲ್ಲಿ ಬಿಜೈಯ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ಕರಾಡ್ ಗಣೇಶ್ 2015ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು. ಈತನ […]

Continue Reading

S.I.T ಮುಂದೆ ‘ಭೀಮ’ ಎಂಟ್ರಿ.! 8 ಗಂಟೆ 30 ನಿಮಿಷಗಳ ಕಾಲ ಸುದೀರ್ಘ ವಿಚಾರಣೆ; S.I.T ಮುಂದೆ 30 ಜನರ ಹೆಸರು ರಿವೀಲ್.?

ತೆರೆದುಕೊಳ್ಳುತ್ತಾ ಧರ್ಮಸ್ಥಳದ 2 ದಶಕದ ‘ಬುರುಡೆ’ ರಹಸ್ಯ..? ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಇದೀಗ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು S.I‌.T ಗೆ ವಹಿಸಿತ್ತು. ಇದೀಗ ಮುಸುಕುಧಾರಿ ದೂರುದಾರ ತನ್ನ ವಕೀಲರ ಮೂಲಕ ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಅತಿಥಿ ಗೃಹಕ್ಕೆ ಬಂದು ಎಸ್ ಐ ಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ. ಎಸ್ ಐಟಿ ತಂಡದ ಡಿಐಜಿ ಎಂ ಎನ್ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ […]

Continue Reading

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಸೊರಕೆ ಹೆಸರು ಮುಂಚೂಣಿಯಲ್ಲಿ..? ದ.ಕ ಜಿಲ್ಲೆಯ ‘ಆಲಿ’ ಗೆ ಸಿಗುತ್ತಾ ನಿಗಮ ಭಾಗ್ಯ..? ಕಾಂಗ್ರೆಸ್ ನಾಯಕರಲ್ಲಿ ಗರಿಗೆದರಿದ ‘ನಿಗಮ’ ನಿರೀಕ್ಷೆ.!

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ದೆಹಲಿ ಭೇಟಿ ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುರುಪನ್ನು ತಂದುಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗುತ್ತಾ ಬಂದರೂ ಕಾರ್ಯಕರ್ತರು, ಎರಡನೇ ಹಂತದ ನಾಯಕರಿಗೆ ನಿಗಮ ಭಾಗ್ಯ ಪೂರ್ಣ ಪ್ರಮಾಣದಲ್ಲಿ ದೊರಕಿಲ್ಲ. ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಬೇಕು, ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ಯಾವಾಗ ಅನ್ನುವ ಅಸಮಾಧಾನಗಳು ಪಕ್ಷದೊಳಗೆ ನಡೆಯುತ್ತಿದೆ. ಇದೀಗ ಕೆಲವು ಬಾಕಿ ಉಳಿದಿರುವ ನಿಗಮ ಮಂಡಳಿಗಳಿಗೆ ನೇಮಕಾತಿ ಪಟ್ಟಿ ಫೈನಲ್ ಹಂತಕ್ಕೆ ತಲುಪಿದ್ದು, ಅಧಿಕೃತವಾಗಿ […]

Continue Reading

ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಮಹತ್ವದ ಪ್ರಕಟಣೆ; DK SAND BAZAAR APP ನೋಂದಾಯಿಸಿ, ಮರಳು ಪಡೆಯಿರಿ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನ್ -ಸಿಆರ್ ಝೆಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಜಿಲ್ಲಾಧಿಕಾರಿಯವರು ಸೂಚಿಸಿರುವಂತೆ, ಸದರಿ ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ DK SAND BAZAAR APP ನಲ್ಲಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆ […]

Continue Reading

ಮಂಗಳೂರು: ಶ್ರೀಮಂತ ಉದ್ಯಮಿರ ಸುಸೈಡ್ ಹಿಂದೆ ಇದೆಯಾ ಹನಿ ಟ್ರ್ಯಾಪ್ ಕಹಾನಿ..? ಶಾಸಕರ ಆಪ್ತ ನಿತಿನ್ ಪೂಜಾರಿ ಆತ್ಮಹತ್ಯೆ ನಾನಾ ಅನುಮಾನ.!

ಮರ್ಯಾದೆಗೆ ಅಂಜಿ ಮಂಗಳೂರಿನ ಹಲವಾರು ಅಗರ್ಭ ಶ್ರೀಮಂತರು ಆತ್ಮಹತ್ಯೆ ದಾರಿ ಹಿಡಿದಿದ್ದರು.! ಮರೋಳಿ ನಿವಾಸಿಯಾಗಿರುವ ಮಣ್ಣಗುಡ್ಡೆ ಗುಂಡೂರಾವ್ ಲೇನಲ್ಲಿರುವ ವಸತಿ ಸಂಕೀರ್ಣದಲ್ಲಿ ವಾಸವಿರುವ ಉದ್ಯಮಿ ನಿತಿನ್ ಪೂಜಾರಿ ಎರಡು ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು. ನಿತಿನ್ ಪೂಜಾರಿ ಬಿಜೆಪಿ ಪಕ್ಷದ ಮುಖಂಡರಾಗಿದ್ದು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಆಪ್ತರಾಗಿ ಗುರುತಿಸಿಕೊಂಡಿದ್ದರು. ಎಂಟು ತಿಂಗಳ ಹಿಂದೆಯಷ್ಟೇ ಕದ್ರಿಕಂಬಳದಲ್ಲಿ ‘ಕೊಡೆಕ್ಕೆನ’ ಹೆಸರಿನ ಹೋಟೆಲ್ ಉದ್ಯಮ ಆರಂಭಿಸಿದ್ದರು. ಮುಡಿಪುವಿನಲ್ಲಿ ಪಾಲುದಾರಿಕೆಯ ಹೋಟೆಲ್ ಕೂಡ ಹೊಂದಿದ್ದರು. ಹೋಟೆಲ್ ಉದ್ಯಮದಲ್ಲಿ ಸಾಕಷ್ಟು ಹೆಸರು […]

Continue Reading

ಸ್ತಬ್ಧಗೊಂಡಿದ್ದ ಕೆಂಪು ಕಲ್ಲು ಗಣಿಗಾರಿಕೆ ಆರಂಭಕ್ಕೆ ಕ್ಷಣಗಣನೆ.!

ರಾಯಲ್ಟಿ ಕಡಿಮೆಗೊಳಿಸಿ, ನಿಯಮಬದ್ಧ ಕಲ್ಲು ಗಣಿಗಾರಿಕೆಗೆ ಅವಕಾಶ, ವಾರದೊಳಗೆ ಜಿಲ್ಲೆಯ ಕೆಂಪು ಕಲ್ಲು ಉತ್ಪಾದಕರೊಂದಿಗೆ ಸಭೆ ನಡೆಸಿ: ಉಸ್ತುವಾರಿ ಸಚಿವರ ಸೂಚನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತಗೊಂಡು ಎರಡು ತಿಂಗಳೇ ಕಳೆದಿದೆ. ಮನೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಕೆಂಪು ಕಲ್ಲು ಲಭ್ಯತೆಯ ಕೊರತೆಯಿಂದ ಅರ್ಧದಲ್ಲೇ ನಿಂತಿದೆ. ಕೆಲಸವಿಲ್ಲದೆ ಹಲವಾರು ಕಾರ್ಮಿಕರು ತೊಂದರೆಗೊಳಗಾಗಿದ್ದಾರೆ. ಈ ಬಗ್ಗೆ ಜಿಲ್ಲೆಯಲ್ಲಿ ಹಲವಾರು ಸಂಘಟನೆಗಳು ಬೃಹತ್ ಹೋರಾಟಕ್ಕೆ ತೀರ್ಮಾನಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ […]

Continue Reading

ಬಂಟ್ವಾಳ: ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ಹೋಲೋ ಬ್ಲಾಕ್ ಕಂಪನಿ, ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು ಸಹಾಯಕ ಆಯುಕ್ತರ ನಿರ್ದೇಶನದ ಮೇಲೆ ದಾಳಿ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ರಾಜಾರೋಷವಾಗಿ ನಡೆಯುತ್ತಿದ್ದ ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯಿತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರ ನಿರ್ದೇಶನದ ಮೇಲೆ ದಾಳಿ ನಡೆದಿದೆ. ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮಂಜನಾಡಿ ಫಯಾನ್ ಅಂದರ್

ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಹಲ್ಲೆ ಸೇರಿದಂತೆ 24 ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ನ್ಯಾಯಾಲಯಕ್ಕೆ ಹಾಜರಾಗಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮಂಜನಾಡಿ ಕಲ್ಕಟ್ಟ, ಬದ್ರಿಯ ನಗರ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. […]

Continue Reading