ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವಿನ ಹಿಂದೆ ದೊಡ್ಡ ಷಡ್ಯಂತ್ರವಿದೆ; ವಿ.ಎಸ್. ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಬದ್ದತೆ ಪ್ರದರ್ಶಿಸಲಿ: ಶೇಖರ್ ಲಾಯಿಲ

ಹಿರಿಯ ನ್ಯಾಯವಾದಿ , ಮಾಜಿ ಸಂಸದ ವಿ.ಎಸ್ ಉಗ್ರಪ್ಪರವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಮೇಲಿನ ಅತ್ಯಾಚಾರ , ಕೊಲೆ , ದೌರ್ಜನ್ಯ ತಡೆ ಸಮಿತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ನೂರಾರು ಮಹಿಳೆಯರ, ಮಕ್ಕಳ ಕೊಲೆ, ಅತ್ಯಾಚಾರ, ಅಸಹಜ ಸಾವುಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ತನ್ನ ವರದಿಯಲ್ಲಿ ನೀಡಿರುವ ಎಲ್ಲಾ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸುವ ಮೂಲಕ ಬದ್ದತೆ ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಇಡೀ ರಾಜ್ಯಾದ್ಯಂತ ಮಹಿಳೆಯರ , ಮಕ್ಕಳ ಮೇಲಿನ ಕೊಲೆ, ಅತ್ಯಾಚಾರ, […]

Continue Reading

ಮಕ್ಕಳು , ಮಹಿಳೆಯರು ಕಲಿತರಷ್ಟೇ ಯಕ್ಷಗಾನ ಉಳಿವು : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನ ಉಳಿದು ಬೆಳೆಯಬೇಕಾದರೆ ಮಕ್ಕಳಿಗೆ ಹಾಗೂ ಕಲಾ ಸಂಘಟನೆ ಆಗಬೇಕಾದರೆ ಮಹಿಳೆಯರಿಗೆ ಯಕ್ಷಗಾನ ಕಲಿಸುವಿಕೆಗೆ ಒತ್ತು ನೀಡುವ ಅಗತ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಬೆಂಗಳೂರಿನ ರಂಗಸ್ಥಳ ಯಕ್ಷಮಿತ್ರ ಕೂಟದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ‘ರಜತಪರ್ವ -2025 ‘ ಕಾಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಪ್ರಸ್ತುತ ಮಕ್ಕಳು ಮತ್ತು ಮಹಿಳಾ ಯಕ್ಷಗಾನ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಒಬ್ಬ […]

Continue Reading

ಕಾರ್ಕಳ ADLR ಕಚೇರಿ: ಚವಾಣ್ ಕಮಾಯಿ; ತಾಲೂಕು ಆಡಳಿತ ಸೌಧದಲ್ಲಿ ಸರ್ವೇಯರ್‍ಗಳದ್ದೇ ದರ್ಬಾರ್

ಕಾರ್ಕಳ ತಾಲೂಕು ಆಡಳಿತ ಸೌಧದಲ್ಲಿ ಸರ್ವೇಯರ್‍ಗಳದ್ದೇ ದರ್ಬಾರ್. ಇಲ್ಲಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರು (ADLR) ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯವಿದ್ದರೂ, ಹತ್ತು ಹದಿನೈದು ವರ್ಷಗಳಿಂದ ಇಲ್ಲಿಯೇ ಗೂಟ ಹಾಕಿ ಕೂತಿರುವ ಸರ್ವೇಯರ್, ಸೂಪರ್ ವೈಸರ್‍ಗಳ ಆಟಾಟೋಪದ ಮುಂದೆ ADLR ಮಂಕಾಗಿ ಕೂತಿರುತ್ತಾರೆ. ಇತ್ತೀಚೆಗೆ ADLR ಆಗಿ ಬಂದ ಮಹಿಳಾ ಅಧಿಕಾರಿಗಳನ್ನು ಈ ಕಿಲಾಡಿ ಸರ್ವೇಯರ್‍ಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ ಅನ್ನುವ ಆರೋಪ ಕೇಳಿಬರುತ್ತಿದೆ.ಕಾರ್ಕಳ ಭೂಮಾಪನ ಇಲಾಖೆಯ ಲಂಚವತಾರದ ಬಗ್ಗೆ ಬರೆಯುತ್ತಾ ಹೋದರೆ ಅದೊಂದು ಕಾದಂಬರಿಯಾದೀತು. ಕಳೆದ […]

Continue Reading

ಹಾವು ಖರೀದಿಸಲು ಮಾರುವೇಷದಲ್ಲಿ ಬಂದ ಅರಣ್ಯಾಧಿಕಾರಿಗಳು; ತಗುಲಾಕಿಕೊಂಡ ಆರೋಪಿಗಳು.!

ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಹೆಬ್ಬಾವು ಮಾರಾಟಕ್ಕೆ ಯತ್ನ; ವಿದ್ಯಾರ್ಥಿ ಸೇರಿ ನಾಲ್ವರು ಅಂದರ್ ಮಂಗಳೂರು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಹೆಬ್ಬಾವು ಮಾರಾಟ ಮಾಡುವ ತಂಡವನ್ನು ಖೆಡ್ಡಾಕ್ಕೆ ಬೀಳಿಸಿ ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ವಿಹಾಲ್ ಶೆಟ್ಟಿ(18), ಇಬ್ರಾಹಿಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬ್ಬಂದಿ ಮಹಮ್ಮದ್ ಮುಸ್ತಫಾ (22) ಹಾಗೂ 16 ವರ್ಷದ‌ ಪ್ರಥಮ‌ ಪಿಯುಸಿ ವಿದ್ಯಾರ್ಥಿ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಇಬ್ರಾಹಿಂ ಶಕೀಲ್ ಇಸ್ಮಾಯಿಲ್ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ […]

Continue Reading

ಡ್ರಗ್ಸ್ ದಂಧೆಯ ವಿರುದ್ಧ ಮಂಗಳೂರು ಕಮೀಷನರ್ ಸಮರ

ರಾಹುಲ್, ಜಬ್ಬಾರ್, ರಿಚರ್ಡ್ ಸೇರಿದಂತೆ 8 ವಿದ್ಯಾರ್ಥಿಗಳು ಅರೆಸ್ಟ್; ನಗರದ ಕಾಲೇಜೊಂದರ ವಿದ್ಯಾರ್ಥಿಗಳು ಮಂಗಳೂರು ಕಮೀಷನರ್ ಅನುಪಮ್ ಅಗರವಾಲ್ ಡ್ರಗ್ಸ್ ದಂಧೆ ಮಟ್ಟ ಹಾಕಲು ನಿರಂತರ ಶ್ರಮಿಸುತ್ತಿದ್ದು, ಬಹುಪಾಲು ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿರುವುದರಿಂದ ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇನ್ನಾದರೂ ಸರಿಯಾಗಿ, ಕಾಲೇಜಿಗೆ ಬರುವಂತೆ ಮಾಡಬೇಡಿ ಎಂದು ವಿಡಿಯೋ ಮುಖಾಂತರ ಮನವಿ ಮಾಡಿದ್ದರು. ಇದೀಗ ಮಂಗಳೂರು ನಗರದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳು ಪೊಲೀಸರ ಕೈಗೆ ತಗುಲಾಕಿಕೊಂಡಿದ್ದಾರೆ. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ […]

Continue Reading

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು, ಪ್ರಕರಣ ದಾಖಲು

ಮಹಿಳೆಯ ಗಂಡ ಹಾಗೂ ಕಾವೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಬಂಧನ ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ತ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿ ದೂರು ನೀಡಿರುತಾರೆ. ಸಂತ್ರಸ್ತ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ […]

Continue Reading

ಹಿರಿಯ ನಾಟಕ ಕಲಾವಿದ, ಪಕ್ಕಲಡ್ಕ ಯುವಕ ಮಂಡಲದ ಸಕ್ರೀಯ ಸದಸ್ಯ, ಸಂಗಾತಿ ಕೆ. ರಾಘವ ಬಂಗೇರ ಇನ್ನಿಲ್ಲ.

ಖ್ಯಾತ ನಾಟಕ ಕಲಾವಿದರೂ, ಪಕ್ಕಲಡ್ಕ ಯುವಕ ಮಂಡಲದ ಸಕ್ರೀಯ ಸದಸ್ಯರಾಗಿದ್ದ ಪ್ರಸ್ತುತ ಅಸೈಗೋಳಿಯಲ್ಲಿ ವಾಸವಾಗಿರುವ ಸಂಗಾತಿ ಕೆ ರಾಘವ ಬಂಗೇರ (78)ರವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಅಸೈಗೋಳಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಾಲ್ ಪಕ್ಕಲಡ್ಕದ ಪರಿಸರದಲ್ಲಿ ಹುಟ್ಟಿ ಬೆಳೆದ ರಾಘವರವರು ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಯಿಂದ ಆಕರ್ಷಿತರಾಗಿ ಆ ಮೂಲಕ ಪಕ್ಕಲಡ್ಕ ಯುವಕ ಮಂಡಲದಲ್ಲಿ ಸಕ್ರೀಯ ಸದಸ್ಯರಾಗಿದ್ದರು. ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾದ ಈ ಯುವಕ ಮಂಡಲದಲ್ಲಿ ತನ್ನಲ್ಲಿರುವ ಪ್ರತಿಭೆಯನ್ನು ಬೆಳೆಸಲು ಸಂಪೂರ್ಣವಾಗಿ ತೊಡಗಿಸಿಕೊಂಡ ರಾಘವರವರು ವಾರ್ಷಿಕೋತ್ಸವದ […]

Continue Reading

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ, ವಿಚಾರಣೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಸೆರೆಹಿಡಿದ ಸುರತ್ಕಲ್ ಪೊಲೀಸರು

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜೇಶ್ ನಾಯ್ಕ್ @ ರಾಜ್ @ ರಾಜು ಪಮಾಡಿ, ಉಡುಪಿ. ಹಾಲಿ ವಾಸ: ಟೋಲ್ ನಾಕ, […]

Continue Reading

ವ್ಯವಹಾರದ ನೆಪದಲ್ಲಿ ಮಲ್ಲೂರಿನ ಮನೆಗೆ ಕರೆಯಿಸಿ ಕೂಡಿಹಾಕಿ ಗಂಭೀರ ಥಳಿತ; ಲಕ್ಷಾಂತರ ರೂಪಾಯಿ ಸುಲಿಗೆ: ಪ್ರಕರಣ ದಾಖಲು

ಬಿಟ್ ಕಾಯಿನ್ ದಂಧೆಯ ವಾಸನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೂರಿನ ಮನೆಯೊಂದಕ್ಕೆ ಕೇರಳ ಮೂಲದ ನಾಲ್ವರನ್ನು ಕರೆಯಿಸಿ ಕೂಡಿಹಾಕಿ ತಂಡವೊಂದು ಗಂಭೀರ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು ಹತ್ತರಷ್ಟು ಮಂದಿಯ ವಿರುದ್ಧ ದೂರು ದಾಖಲಾಗಿದೆ. ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಹಾಗೂ ಅವರ ಸ್ನೇಹಿತರಾದ ಅರ್ಶಕ್ ಅಹಮ್ಮದ್, ಯಾಸರ್ ಅರಾಫತ್, ಮುಹಮ್ಮದ್ ಸಾಹಿರ್ ದುಬೈನಲ್ಲಿ ವ್ಯವಹಾರ ಮಾಡಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದು ನೆಲೆಸಿದ್ದರು. ಮಂಗಳೂರಿನ ಸರ್ಫಾರಾಝ್ ಎಂಬಾತನೊಂದಿಗೆ ಕೇರಳದ […]

Continue Reading

ಪುತ್ತೂರಿನ ಬೊಳ್ವಾರಿನಲ್ಲಿ ದುಷ್ಕೃತ್ಯ, ಆರೋಪಿ ಬಂಧನ; ಹಾಡಹಗಲೇ ತಲವಾರು ಝಳಪಿಸಿ ಸಾರ್ವಜನಿಕರಿಗೆ ಬೆದರಿಕೆ.

ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನನ್ನು ಹಿಡಿದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಹಾಸನ ಮೂಲದವನಾಗಿದ್ದು ಪ್ರಸ್ತುತ ಬಂಟ್ವಾಳ ನಿವಾಸಿಯಾಗಿರುವ ರಾಜು (45) ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದ ನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ […]

Continue Reading