26 ವರ್ಷಗಳ ಹಿಂದಿನ ಕೋಮು ಗಲಭೆ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

1998 ಡಿಸೆಂಬರ್ 31ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಪ್ರಕರಣದಲ್ಲಿ ಕಳೆದ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಕಳೆದ 26 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು. ಹಿಂದಿನ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿರುವ ಬಗ್ಗೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ […]

Continue Reading

ಬಿಕ್ರಮ ಭಜರಂಗಿ ಪೌರಾಣಿಕ ನಾಟಕ ಬಿಡುಗಡೆ ಪೌರಾಣಿಕ ಪ್ರಸಂಗಳ ಸಂದೇಶದಿoದ ನೈತಿಕ ಸಮಾಜದ ನಿರ್ಮಾಣ ಸಾಧ್ಯ: ಡಾ.ತಲ್ಲೂರು

ಉಡುಪಿ : ಮಕ್ಕಳಿಗೆ, ಯುವ ಜನತೆಗೆ ನೈತಿಕ ಸಂದೇಶ ಬಿತ್ತಲು ನಮ್ಮ ಪೌರಾಣಿಕ ಪ್ರಸಂಗಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಅದು ಯಕ್ಷಗಾನವಿರಬಹುದು, ನಾಟಕವೇ ಆಗಿರಬಹುದು ಪುರಾಣ ಪ್ರಸಂಗಳಲ್ಲಿ ಅಡಕವಾಗಿರುವ ಸತ್ಯ, ಧರ್ಮ, ನಿಷ್ಠೆ, ಪ್ರಾಮಾಣಿಕತೆ ಮೊದಲಾದ ಮೌಲ್ಯಗಳು ನೈತಿಕ ಪ್ರಜ್ಞೆಯನ್ನು ಬಡಿದೆಬ್ಬಿಸುವ ಶಕ್ತಿಯನ್ನು ಹೊಂದಿವೆ. ನಾವು ನಂಬಿರುವ ದೇವರು, ದೈವಗಳ ಇರಿಹಾಸವನ್ನು ಇಂದು ನಾಟಕ, ಯಕ್ಷಗಾನಗಳಲ್ಲಿ ಕಟ್ಟಿಕೊಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಪ್ಪೂರಿನ ಶ್ರೀರಾಮಾಂಜನೇಯ […]

Continue Reading

ಮಂಗಳೂರು ಏರ್ ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಶಶಿಕುಮಾರ್ ಅರೆಸ್ಟ್

ಕಮೀಷನರ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳ ಮೂಲ ಬೇರು ಪತ್ತೆ ಹಚ್ಚಿ ಕಂಬಿ ಹಿಂದೆ ತಳ್ಳುತ್ತಿದೆ ಪೊಲೀಸ್ ಇಲಾಖೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಬಿಲ್ಡಿಂಗ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಅಗಸ್ಟ್ 29 ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ ಅನಾಮಿಕ ವ್ಯಕ್ತಿಯೊಬ್ಬ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದ, ಕರೆ […]

Continue Reading

ಕೆಂಪುಕೋಟೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ ಲೋಕಾಯುಕ್ತ ಬಲೆಗೆ

ಅಧ್ಯಕ್ಷೆಯ ತಾಳಕ್ಕೆ ಹೆಜ್ಜೆ ಹಾಕಿದ ಬಿಲ್ ಕಲೆಕ್ಟರ್ ವಿಲಿಯಂ ಕೂಡಾ ಅಂದರ್ ವಿಟ್ಲ: ಕೃಷಿ ಜಮೀನಿಗೆ ಕೊಳವೆ ಬಾವಿ ಮಂಜೂರಾತಿಗೆ ಹತ್ತು ಸಾವಿರ ಲಂಚ ಪಡೆಯುತ್ತಿದ್ದಾಗ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಫೀಸಾ ಹಾಗೂ ಬಿಲ್ ಕಲೆಕ್ಟರ್ ವಿಲಯಂ ಎಂಬಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಪೆರುವಾಯಿ ಗ್ರಾಮದ ದೂರುದಾರರ ಮಾವನಾದ ವೃದ್ಧ (75) ರೊಬ್ಬರ ಒಂದು ಎಕರೆ ಕೃಷಿ ಜಮೀನಿಗೆ ಸರಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕೊಳವೆ ಬಾವಿಗಾಗಿ 2024ರಲ್ಲಿ ಪೆರುವಾಯಿ ಗ್ರಾ […]

Continue Reading

ಬಲಿಷ್ಠ ವಿರೋಧ ಪಕ್ಷಗಳ ಅಗತ್ಯತೆ – ಕರ್ನಾಟಕದ ನೋಂದಣಿ ಕಾಯ್ದೆ ತಿದ್ದುಪಡಿ, ನೋಂದಣಿ ಶುಲ್ಕ ಹೆಚ್ಚಳ ಮತ್ತು ಜನಜೀವನದ ಮೇಲೆ ಅದರ ಪರಿಣಾಮ

ವಿರೋಧ ಪಕ್ಷಗಳು ತಮ್ಮ ಕರ್ತವ್ಯವನ್ನು ಮರೆತರೆ, ಪ್ರಜಾಪ್ರಭುತ್ವವೇ ದುರ್ಬಲವಾಗುತ್ತದೆ. ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಕೆಲವು ಮಂತ್ರಿಗಳು ದೊಣ್ಣೆ ನಾಯಕರಂತೆ ವರ್ತಿಸಿ ಹೊಸ ಹೊಸ ಕಾನೂನುಗಳನ್ನು ಜ್ಯಾರಿಗೆ ತರುವಾಗ ಅದರ ಸಾಧಕ ಬಾಧಕಗಳ ಬಗ್ಗೆ ವಿವರವಾದ, ಸಾಕಾರಣಾತ್ಮಕ ಚರ್ಚೆ ಮಾಡಿ ವಿದೇಯಕಗಳನ್ನು ಅಂಗೀಕರಿಸುವ ಬದಲಿಗೆ, ವಿರೋಧ ಪಕ್ಷದ ನಾಯಕರು ಸಹಿತ, ಆ ಸರಕಾರ ಹೇಳಿದ್ದನ್ನೆಲ್ಲ ಅಜ್ಞಾನಿಗಳಂತೆ ಕೇಳಿ, ಕಾನೂನು ಮಂಡಿಸಿದ ಮಂತ್ರಿಗಳಿಗೆ ಜಯಕಾರ ಮಾಡುತ್ತಿರುವುದು ಸಂವಿಧಾನದ ಆಶಯೋತ್ತರಗಳಿಗೆ ವಿರುದ್ಧ ಎನ್ನದೆ ವಿಧಿಯಿಲ್ಲ. ಪ್ರಜಾಪ್ರಭುತ್ವವು ಕೇವಲ ಮತದಾನದ […]

Continue Reading

ಬಂಟ್ವಾಳ: ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ, ವೈರತ್ವ ಉಂಟಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ, ನರಸಿಂಹ ಶೆಟ್ಟಿ ಮಾಣಿ ವಿರುದ್ದ ಪ್ರಕರಣ ದಾಖಲು

ದಿನಾಂಕ: 04.09.2025 ರಂದು ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಸದ್ರಿ ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ. ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ […]

Continue Reading

ಸುರತ್ಕಲ್: ಮುಕ್ಕ ನಿರ್ಮಾಣ ಹಂತದ ರೋಹನ್ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕನ ಶವ ಪತ್ತೆ; ಆರೋಪಿ ಬಂಧನ

ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮುಖೇಶ್ ಮಂಡಲ್ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 24 ರಂದು ರಾತ್ರಿ 9 ಗಂಟೆ ಸಮಯದಲ್ಲಿ ಸುರತ್ಕಲ್ ಮುಕ್ಕ ರೋಹನ್ ಎಸ್ಟೇಟ್ ಎಂಬ ಹೆಸರಿನ ಲೇಔಟ್ ನಿಂದ 27 ರ ಹರೆಯದ ಪಶ್ಚಿಮ ಬಂಗಾಳ ನಿವಾಸಿ ಮುಖೇಶ್ ಮಂಡಲ್ ನಾಪತ್ತೆಯಾಗಿರುವ ಬಗ್ಗೆ ಆತನ ಜೊತೆಯಲ್ಲಿ ಕೆಲಸ ಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ನಿವಾಸಿ ದೀಪಾಂಕರ್ ಎಂಬವರು ನೀಡಿದ ದೂರಿನಂತೆ ದಿನಾಂಕ: […]

Continue Reading

ಮಗು ಮಾರಾಟ ಜಾಲ ಪತ್ತೆ; ಬಂಟ್ವಾಳದ ವೈದ್ಯ, ದುರ್ಗಾವಾಹಿನಿ ಮುಖಂಡೆ ಖಾಕಿ ಬಲೆಗೆ

ಹಿಂದೂ ಮುಖಂಡೆಯ ಪಿಜಿಯಲ್ಲಿ ವಾಸವಿದ್ದ ಯುವತಿ ಅಕ್ರಮ ಗರ್ಭ ಧರಿಸಿದ್ದ ಗಂಡು ಮಗುವನ್ನೇ 4.5 ಲಕ್ಷ ರೂಪಾಯಿಗೆ ಮಾರಾಟಕ್ಕಿಟ್ಟಿದ್ದರು.! ಮಂಗಳೂರಿನಲ್ಲಿ ಶಿಶು ಮಾರಾಟ ಜಾಲ ಈ ಹಿಂದಿನಿಂದಲೂ ಸುದ್ಧಿಯಲ್ಲಿದ್ದ ವಿಷಯವಾಗಿತ್ತು ‌ಸರಕಾರಿ ಆಸ್ಪತ್ರೆಯೊಂದು ಶಿಶು ಮಾರಾಟ ಜಾಲಕ್ಕೆ ಕುಖ್ಯಾತಿ ಪಡೆದಿತ್ತು. ಆದರೆ ಈ ಬಾರಿ ಕಂಕನಾಡಿ ಸಮೀಪದ ಖಾಸಗಿ ಆಸ್ಪತ್ರೆಯೊಂದು ಮಗುವಿನ ಮಾರಾಟ ಜಾಲದಲ್ಲಿ ಕೈಯಾಡಿಸಿರುವ ವಿಷಯ ಹೊರಬಂದಿದೆ. ಮಗು ಮಾರಾಟ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಕಾಪುವಿನ ಶಿರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ವೈದ್ಯ […]

Continue Reading

ಬ್ರ್ಯಾಂಡ್ ಮಂಗಳೂರಿಗೆ ಕಪ್ಪು ಚುಕ್ಕೆ ಇಟ್ಟ ಏರ್ಪೋರ್ಟ್ ಕಳ್ಳರು.!

ಖಾಸಗಿ ತೆಕ್ಕೆಗೆ ಬಂದ ನಂತರ ಇಲ್ಲಿ ನಡೆಯುತ್ತೆ ಕರಾಳ ಕೃತ್ಯ; ಈ ಹಿಂದೆಯೂ ನಡೆದಿತ್ತು ಕಳ್ಳರ ಕೈಚಳಕ.! ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜಪೆ) ಮಂಗಳೂರಿನ ಹಿರಿಮೆಗೊಂದು ಗರಿ. ಆದರೆ ಇತ್ತೀಚಿನ ದಿನಗಳಲ್ಲಿ ಏರ್ಪೋರ್ಟ್ ಸಿಬ್ಬಂದಿಗಳ ರಾದ್ಧಾಂತ, ಅನಪೇಕ್ಷಿತ ಘಟನೆಗಳು ಬ್ರ್ಯಾಂಡ್ ಮಂಗಳೂರು ಕನಸಿಗೆ ಕಪ್ಪು ಚುಕ್ಕೆ ಇಟ್ಟಿದೆ. ಅದರಲ್ಲೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ ಬಂದ ನಂತರವಂತೂ ಇಲ್ಲಿ ಕೆಲವೊಂದು ಕರಾಳ ಕೃತ್ಯಗಳು ಸದ್ದಿಲ್ಲದೆ ನಡೆಯುತ್ತಿರುವುದಂತೂ ಸತ್ಯ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ […]

Continue Reading

ಬೀಡಿ ಕಾರ್ಮಿಕರು ಕನಿಷ್ಟ ವೇತನ ಪಡೆಯಲು ಪ್ರಬಲ‌ ಹೋರಾಟಕ್ಕೆ ಮುಂದಾಗಬೇಕು: ಜೆ. ಬಾಲಕೃಷ್ದ ಶೆಟ್ಟಿ

2018ರಿಂದ ಬೀಡಿ ಕಾರ್ಮಿಕರಿಗೆ ಬಾಕಿ ಇರಿಸಿಕೊಂಡಿರುವ ತುಟ್ಟಿಭತ್ತೆಯ ಭಾಗವಾಗಿ ಪ್ರತೀ ಸಾವಿರ ಬೀಡಿಗೆ ರೂ 7 ರಂತೆ ಕೊಡುವುದಾಗಿ ಒಪ್ಪಿಕೊಂಡಿರುವ ಬೀಡಿ ಮಾಲಕರು ಈ ಪಾವತಿಯನ್ನು ವಿಳಂಬಿಸುತ್ತಿದ್ದಾರೆ.ಕಳೆದ ಎಪ್ರಿಲ್ ನಲ್ಲಿ ಪಾವತಿಸುವುದಾಗಿ ಭರವಸೆ ನೀಡಿದ ಮಾಲಕರು ಸಪ್ಟೆಂಬರ್ ಆದರೂ ಇನ್ನೂ ಪಾವತಿ ಮಾಡಿರುವುದಿಲ್ಲ.ಮಾತ್ರವಲ್ಲ 2024ರ ಕನಿಷ್ಠ ಕೂಲಿಯನ್ನೂ ನೀಡಿರುವುದಿಲ್ಲ. ಈ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನ ಆಗಲಿಲ್ಲ.ಅದ್ದರಿಂದ ಅಕ್ಟೋಬರ್ 7ರಿಂದ ಬೀಡಿ ಕಂಪೆನಿಗಳ ಮುಂದೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದೆಂದು ದ.ಕ.ಜಿಲ್ಲಾ ಬೀಡಿ ಕಾರ್ಮಿಕರ […]

Continue Reading