ಮಂಗಳೂರು: ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಕಳವು ಮಾಡಿದ ಬ್ಯಾಗೇಜ್ ನೌಕರರ ಬಂಧನ, ಚಿನ್ನಾಭರಣ ಸಹಿತ ನಗದು ವಶ.

ಬಜಪೆ ಏರ್ ಪೋರ್ಟ್ ಬ್ಯಾಗೇಜ್ ಸಿಬ್ಬಂದಿಗಳೇ ದರೋಡೆಕೋರರು.! ಪ್ರಯಾಣಿಕರ ಬ್ಯಾಗ್ ನಿಂದಲೇ ಚಿನ್ನ ಲಪಟಾಯಿಸುವ ಕರಾಳ ಜಾಲ ಬೆಳಕಿಗೆ.! ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು 30-08-2025 ರಂದು ಬೆಳಿಗ್ಗೆ ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ 56 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ 4,50,000/-) ಕಳವು ಆಗಿದ್ದು, ಈ ಬಗ್ಗೆ […]

Continue Reading

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಬಂಧನ

ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿ, ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ರವರಿಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ […]

Continue Reading

ಉಳ್ಳಾಲ: ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರಿಂದ ದಾಳಿ – ಇಬ್ಬರು ಅರೆಸ್ಟ್

ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24)‌ ಎಂದು ತಿಳಿದುಬಂದಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ […]

Continue Reading

ಬಜಪೆ: ಇನ್ಸ್ಟಾಗ್ರಾಮ್ ಪರಿಚಯ; ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ವಿಡಿಯೋ ಶೇರ್ ಪ್ರಕರಣ, ಆರೋಪಿಗಳು ಜೈಲಿಗೆ.

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡು ಅತ್ಯಾಚಾರ ನಡೆಸಿ, ವಿಡಿಯೋ ಶೇಖ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಅಗಸ್ಟ್ 16 ರಂದು ಅಪ್ರಾಪ್ತ ವಿದ್ಯಾರ್ಥಿನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಬಜಪೆ ಪೊಲೀಸರು ಪ್ರಕರಣ ಸಂಖ್ಯೆ 147/2025 ರಂತೆ ಆರೋಪಿಗಳ ವಿರುದ್ದ FIR ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯಿರುವ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಗೆ […]

Continue Reading

ಬಜ್ಪೆ: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಪಾಪಿ ತಂದೆಗೆ 5 ವರ್ಷ ಕಠಿಣ ಶಿಕ್ಷೆ…

ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2024 ರ ಡಿಸೆಂಬರ್ 18 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ […]

Continue Reading

ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸರಬರಾಜು; ಸಿಸಿಬಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ದೇರಳಕಟ್ಟೆಯ ಅರ್ಶದ್

ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ತರಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೂಲತಃ ಕೇರಳದ ಕೊಚ್ಚಿ ನಿವಾಸಿ, ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸಿಸುತ್ತಿರುವ ಮೊಹಮ್ಮದ್ ಅರ್ಶದ್ ಖಾನ್ ಎಂದು ತಿಳಿದು ಬಂದಿದೆ. ಖಚಿತ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿಯಿದ್ದ 53.29 ಗ್ರಾಂ ಎಂಡಿಎಂಎ, 2.33 ಗ್ರಾಂ ಹೈಡೋವೀಡ್ ಗಾಂಜಾ ಹಾಗೂ 0.45 ಗ್ರಾಂ ಎಂಡಿಎಂಎ ಪಿಲ್ಸ್ […]

Continue Reading

ಬೆಳ್ತಂಗಡಿ:ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ವಸತಿಗೃಹದಲ್ಲಿ ಮಾರ್ಚ್ 1, 2014 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಆದೇಶ ನೀಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರಾದ ಲಿಂಗಪ್ಪ ಪೂಜಾರಿ ರವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸದ್ರಿ‌ […]

Continue Reading

ದ.ಕ ಜಿಲ್ಲೆಯ ಪೊಲೀಸರಿಗೆ ಸವಾಲಾದ ನಿಗೂಢ ಪ್ರಕರಣಗಳು..! ಪ್ರಕರಣ ಭೇದಿಸಲು ವಿಫಲರಾಗಿ ಕೈ ಕಟ್ಟಿ ಕುಳಿತ ಪೊಲೀಸ್ ಇಲಾಖೆ

ಪಂಜಿಮೊಗರು ಡಬಲ್ ಮರ್ಡರ್, ಎ.ಜೆ ಅಸ್ಪತ್ರೆ ಬಳಿ ಕಾಣೆಯಾದ ರಫೀನಾ, ಯುವ ವಕೀಲ ಪ್ರೀತಂ, ಪ್ರಕರಣದ ನಿಗೂಢ ರಹಸ್ಯ.! ಜಿಲ್ಲೆಯಲ್ಲಿ ದಶಕಗಳಿಂದ ಭೇದಿಸಲಾಗದ ಕೊಲೆ, ಮಿಸ್ಸಿಂಗ್ ಕೇಸ್ ಗಳು ಹಾಗೆ ಧೂಳು ಹಿಡಿದರೆ, ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದು ಯಾವಾಗ.? ದಕ್ಷ, ನಿಷ್ಠಾವಂತ, ಖಡಕ್ ಅಧಿಕಾರಿ, ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿಯವರು ಈ ಪ್ರಕರಣಗಳಿಗೆ ಜೀವ ನೀಡುವರೇ. ಮಂಗಳೂರು ನಗರದ ಹೃದಯ ಭಾಗದಲ್ಲಿ ನಡೆದ ಎಷ್ಟೊ ಕೊಲೆ ಕೇಸ್ ಗಳನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. […]

Continue Reading

ಪುತ್ತೂರು ಆಡಳಿತ ಸೌಧಕ್ಕೆ ಲೋಕಾಯುಕ್ತ ದಾಳಿ. ತಹಶೀಲ್ದಾರ್ ಕುಡಲಗಿ ಪರಾರಿ, ಎಫ್.ಡಿ.ಎ ಸುನಿಲ್ ಬಂಧನ

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಎಫ್.ಡಿ.ಎ ಆಗಿರುವ ಸುನಿಲ್ ದೂರುದಾರನಿಂದ ಹನ್ನೆರಡು ಸಾವಿರ ಲಂಚ ಹಣವನ್ನು ಕಚೇರಿಯಲ್ಲಿ ಸ್ವೀಕಾರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎರಡನೇ ಆರೋಪಿ ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ. ದೂರುದಾರರ ಚಿಕ್ಕಪ್ಪನಿಗೆ ಪುತ್ತೂರು ತಾಲೂಕು ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿದ್ದು, ದೂರುದಾರರ ಚಿಕ್ಕಪ್ಪನವರಿಗೆ ಅನಾರೋಗ್ಯ ಇದ್ದುದರಿಂದ ಅವರು ತನ್ನ ಸ್ವ-ಇಚ್ಛೆಯಿಂದ ಉಪ ನೋಂದಣಾಧಿಕಾರಿ ಕಛೇರಿ, ಪುತ್ತೂರು ಇಲ್ಲಿ ವೀಲುನಾಮೆ […]

Continue Reading

‘ಬಂಗಾರಿ’ ಗಾಗಿ ನಡೆದಿತ್ತು ಭಯಾನಕ ಮರ್ಡರ್.. ಕುಚುಕು ಕುಚುಕು ದೋಸ್ತ್ ಕಿರಾತಕ.. ಬಯಲಾಯ್ತು ಕುಂಟಲ್ಪಾಡಿ ಮರ್ಡರ್ ಸ್ಟೋರಿ

ಮಧ್ಯರಾತ್ರಿ ನಡೆದ ಭಯಾನಕ ಮರ್ಡರ್ ಗೆ ಕಾರ್ಕಳ ಕುಂಟಲ್ಪಾಡಿ ಜನತೆ ಬೆಚ್ಚಿಬಿದ್ದಿದ್ದರು. ಅಷ್ಟಕ್ಕೂ ಹತ್ಯೆಯಾದವ ಮಂಗಳೂರು ಮೂಲದ ನವೀನ್ ಪೂಜಾರಿ. ಹತ್ಯೆಯ ಹಿನ್ನೆಲೆಯನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಈ ಹತ್ಯೆ ನಡೆದಿದ್ದು ‘ಬಂಗಾರಿ’ ಗಾಗಿ. ಹಂತಕ ಬೆಳ್ತಂಗಡಿ ಮೂಲದ ಪರೀಕ್ಷಿತ್ ಅಂದರ್ ಆಗಿದ್ದಾನೆ. ಬಂಗಾರಿ’ ಬುಲ್ ಬುಲ್! ಮಂಗಳೂರು ಮೂಲದ ಪಡೀಲ್ ನಿವಾಸಿಯಾಗಿರುವ ನವೀನ್ ಪೂಜಾರಿ ಪತ್ನಿ, ಮಕ್ಕಳನ್ನು ಮಂಗಳೂರಿನಲ್ಲಿ ಬಿಟ್ಟು ಕಳೆದ ನಾಲ್ಕೈದು ವರ್ಷಗಳಿಂದ ಕಾರ್ಕಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾನೆ. ಬಡ್ಡಿ […]

Continue Reading