ಪುತ್ತೂರಿನ ಬೊಳ್ವಾರಿನಲ್ಲಿ ದುಷ್ಕೃತ್ಯ, ಆರೋಪಿ ಬಂಧನ; ಹಾಡಹಗಲೇ ತಲವಾರು ಝಳಪಿಸಿ ಸಾರ್ವಜನಿಕರಿಗೆ ಬೆದರಿಕೆ.

ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡಿದ್ದಾನೆ. ತಕ್ಷಣವೇ ಸಾರ್ವಜನಿಕರು ಆತನನ್ನು ಹಿಡಿದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಹಾಸನ ಮೂಲದವನಾಗಿದ್ದು ಪ್ರಸ್ತುತ ಬಂಟ್ವಾಳ ನಿವಾಸಿಯಾಗಿರುವ ರಾಜು (45) ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದ ನಗರ ಠಾಣಾ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ […]

Continue Reading

ವಿಟ್ಲ: ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ: ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: 10 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ 04.11.2015 ರಾತ್ರಿ ಹೊತ್ತು ಅತ್ಯಾಚಾರ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 218/2015 ಕಲಂ: 448,341,323, 376(G),506,34 ಐಪಿಸಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾದ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೆಲ ತಿಂಗಳ ಬಳಿಕ ಜಾಮೀನು ಪಡೆದು ಹೊರಗಡೆ ಬಂದಿದ್ದ ಆರೋಪಿ […]

Continue Reading

ನಗರದ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಸೀಮಿತವಾಗದೆ ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವ ಅಪರೂಪದ ಡಾಕ್ಟರ್

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಡಾ. ನಾಸಿರ್ ಹುಸೇನ್ ಕಿಲ್ಪಾಡಿರವರು ಅಡ್ಡೂರಿನ ರಿಫಾ ಕ್ಲಿನಿಕ್ ನಲ್ಲಿ ಬಂದು ಸೇವೆ ವೈದ್ಯ ವೃತ್ತಿ ಅನ್ನುವುದು ಪವಿತ್ರ ವೃತ್ತಿ. ಅದೊಂದು ಜೀವ ಉಳಿಸುವ ವೃತ್ತಿ. ಈ ಸಮಾಜದಲ್ಲಿ ವೈದ್ಯರಿಗೆ ಗೌರವದ ಸ್ಥಾನಮಾನಗಳಿವೆ. ಆದರೆ ಕೆಲವರು ನಗರ ಕೇಂದ್ರಿಕೃತಕ್ಕೆ ಸೀಮಿತವಾಗಿ ಕೆಲಸ ಮಾಡುವವರೇ ಜಾಸ್ತಿ. ಗ್ರಾಮೀಣ ಪ್ರದೇಶಕ್ಕೆ ಬಂದು ಸೇವೆ ನೀಡುವುದು ಬಹಳ ಅಪರೂಪ. ಗ್ರಾಮೀಣ ಪ್ರದೇಶದಿಂದಲೂ ಕಲಿತ ವೈದ್ಯರು ನಗರ ಪ್ರದೇಶದಲ್ಲೆ ತಮ್ಮ ಕಾರ್ಯಸಾಧನೆ ಮಾಡುತ್ತಾರೆ. ತಾನು ಹುಟ್ಟಿ ಬೆಳೆದ ಗ್ರಾಮೀಣ […]

Continue Reading

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ವ್ಯವಹಾರದ ಕಿಲಕಿಲ ಕೇಳಿ ಬರುತ್ತಿದೆ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ಯಾರೇ ಮುಖ್ಯಾಧಿಕಾರಿಗಳು ಬಂದರೂ ಪಟ್ಟಣ ಪಂಚಾಯತ್ ದುರವಸ್ಥೆ ಅದೇ ತರಹ ಇರುತ್ತದೆ. ಈಗ ಜಯಶಂಕರ ಅನ್ನುವ ಹೊಸ ಮುಖ್ಯಾಧಿಕಾರಿ ಬಂದು ಕೂತಿದ್ದಾರೆ. ಜಯಶಂಕರ ಬರುವ ಮೊದಲು ಈ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಗೆ ಲೋಕಾಯುಕ್ತ ರೈಡ್ ನಡೆಸಿ ಮುಖ್ಯಾಧಿಕಾರಿಯನ್ನೇ ಬಂಧಿಸಿತ್ತು. ಪಿಡಬ್ಲ್ಯೂಡಿ ಕ್ಲಾಸ್ -1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಜೂನಿಯರ್ ಇಂಜಿನಿಯರ್ ನಾಗರಾಜ್ 2022-23 ನೇ ಸಾಲಿನ […]

Continue Reading

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಸರಕಾರಿ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಉಡುಪಿ ತಾಲೂಕಿನ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ ಗುರುವಾರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನೋರ್ಥ್ ಶಾಲೆ ) ಉಡುಪಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ತಾಲೂಕು ಉಪ ತಹಶೀಲ್ದಾರ್ ರಾದ ರವಿಶಂಕರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]

Continue Reading

ನೀರುಮಾರ್ಗ: ವೈದ್ಯಕೀಯ ಸೀಟಿಗೆ ಹೆಚ್ಚುವರಿ 8 ಲಕ್ಷ ಡೊನೇಷನ್ ಪಡೆದಿದ್ದ ಜಿ.ಆರ್.ಮೆಡಿಕಲ್ ಕಾಲೇಜು; ಹಣ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಸೂಚನೆ

ಮಂಗಳೂರು ತಾಲೂಕಿನ ನೀರುಮಾರ್ಗ ಬಳಿಯ ಜಿ.ಆರ್. ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಎಂಟು ಲಕ್ಷ ರೂಪಾಯಿ ಡೊನೇಷನ್ ವಸೂಲಿ ಮಾಡಿಕೊಂಡಿದ್ದ ಕಾಲೇಜು ಆಡಳಿತ ಮಂಡಳಿ, ಆ ಹಣವನ್ನು ಮರಳಿ ವಿದ್ಯಾರ್ಥಿಗೆ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡರು ಸೂಚನೆ ನೀಡಿದ್ದಾರೆ. ಜಿ.ಆರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆರ್ ಕೆ ಆದಿತ್ಯ ಎಂಬುವವರಿಂದ ಹೆಚ್ಚುವರಿ ಹಣ ಪಾವತಿಸಿಕೊಂಡಿದ್ದರು. ಈ ಕುರಿತು ವಿದ್ಯಾರ್ಥಿ […]

Continue Reading

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ CA ಪರೀಕ್ಷೆಯಲ್ಲಿ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ಯಶಸ್ವಿ

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ತನ್ನ ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್ ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು CA ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ […]

Continue Reading

ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಪ್ರಬಲ ಮುಷ್ಕರ ; ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ

ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಎಲ್ಲಾ ವಿಭಾಗದ ಕಾರ್ಮಿಕರು,ಮಾಧ್ಯಮ ವರ್ಗದ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ._ ನಗರದ ಅಂಬೇಡ್ಕರ್ ವ್ರತ್ತದಿಂದ ಸಾವಿರಕ್ಕೂ ಮಿಕ್ಕಿದ ಕಾರ್ಮಿಕರು, ನೌಕರರು ಕೇಂದ್ರ ಸರ್ಕಾರದ ಆಕ್ರಮಣಕಾರಿ ನೀತಿಗಳ ವಿರುದ್ಧ ತೀವ್ರ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ಬಳಿಕ ಕ್ಲಾಕ್ […]

Continue Reading

ಆಧುನಿಕ ಸೌಲಭ್ಯ, ಉನ್ನತ ವಿಧಾನ, ನುರಿತ ಅಧ್ಯಾಪಕರನ್ನು ನಿಯೋಜಿಸಲಾಗಿದೆ, ಸಾಧನೆ ಮಾಡುವ ಇಚ್ಛಾಶಕ್ತಿ ಮತ್ತು ಶ್ರಮ ವಿದ್ಯಾರ್ಥಿಗಳಲ್ಲಿ ಇರಬೇಕು: ನಿವೃತ್ತ ಡಿಸಿಪಿ. ಜಿ. ಎ ಬಾವಾ

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದ ಹಂತದಲ್ಲೇ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ ಮತ್ತು ಉತ್ತೇಜನ ನೀಡುವ ಉದ್ದೇಶದಿಂದ ಇಂದು ವಿ.ಕೆ. ಒಬೇದುಲ್ಲಾ ಸ್ಕೂಲ್ ನಲ್ಲಿ ಹೆತ್ತವರ ಜೊತೆ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಶಿಸ್ತು, ಕಲಿಕೆಯ ವಿಧಾನ ಮತ್ತು ಕಲಿಯ ಗುರಿಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. ಹೆತ್ತವರು ತಮ್ಮ ಮಕ್ಕಳ ಕುರಿತ ಕಾಳಜಿ ಮತ್ತು ಪಾತ್ರಗಳನ್ನು ನಿರ್ವಹಿಸುವ ಬಗ್ಗೆಯೂ ಮನಮುಟ್ಟುವ ಹಿತವಚನ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಜಿ. ಎ. ಬಾವಾರವರು […]

Continue Reading

ಧರ್ಮಸ್ಥಳದಲ್ಲಿ ಸರಣಿ ಹತ್ಯೆ ಆರೋಪ: ನಿಷ್ಪಕ್ಷಪಾತ ತನಿಖೆ, ದೂರುದಾರ ಹಾಗು ನ್ಯಾಯವಾದಿಗಳಿಗೆ ರಕ್ಷಣೆ ಒದಗಿಸಲು ಸಿಪಿಐಎಂ ಆಗ್ರಹ

“ದಶಕಗಳ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಹತ್ಯೆಗಳು, ಅತ್ಯಾಚಾರಗಳು ಸರಣಿಯಾಗಿ ನಡೆದಿದೆ, ನನ್ನಿಂದಲೆ ಈ ಶವಗಳನ್ನು ಹೂತು ಹಾಕಿಸಿದ್ದಾರೆ, ವಿಲೆವಾರಿ ಮಾಡಿಸಿದ್ದಾರೆ. ನಾನು ಧರ್ಮಸ್ಥಳ ದೇವಸ್ಥಾನದ ಆಡಳಿತದಡಿ ಆ ಸಂದರ್ಭ ನೈರ್ಮಲ್ಯ ಕಾರ್ಮಿಕನಾಗಿದ್ದೆ” ಎಂದು ಗುರುತು ಮರೆಮಾಚಲ್ಪಟ್ಟ ವ್ಯಕ್ತಿಯೋರ್ವ ವಕೀಲರುಗಳ ಉಪಸ್ಥಿತಿಯಲ್ಲಿ ದೂರು ದಾಖಲಿಸಿರುವ ಪ್ರಕರಣ ಸಾರ್ವಜನಿಕ ವಲಯದಲ್ಲಿ ಕಂಪನಗಳನ್ನು ಎಬ್ಬಿಸಿದೆ. ಭೀತಿಗೆ ಕಾರಣವಾಗಿದೆ. ಈ ಹಿಂದೆ ಧರ್ಮಸ್ಥಳದ ನೇತ್ರಾವತಿ ನದಿ ಹಾಗು ಆಸುಪಾಸು ಪತ್ತೆಯಾಗಿದ್ದ ಅನುಮಾನಾಸ್ಪದ, ಸಾಲು ಸಾಲು ಅನಾಥ ಶವಗಳು, ಆ ಕುರಿತು ಸಾರ್ವಜನಿಕವಾಗಿ ವ್ಯಕ್ತವಾಗಿದ್ದ ಅನುಮಾನಗಳಿಗೆ […]

Continue Reading