ಕುಪ್ಪೆಪದವು ನಿವೇಶನ ವಂಚಿತರ ಹೋರಾಟ: ಗುರುತು ಪಡಿಸಿದ ಜಮೀನಿನ ದಾಖಲೆಗಳನ್ನು ಮಾರ್ಚ್ 16 ರ ಒಳಗಡೆ ಸಿದ್ದಪಡಿಸಿ ಸಹಾಯಕ ಆಯುಕ್ತರ ಕಚೇರಿಗೆ ತಲುಪಿಸುವ ಭರವಸೆ ನೀಡಿದ ತಹಶೀಲ್ದಾರ್

ಕುಪ್ಪೆಪದವು: 2018 ನೇ ಇಸವಿಯಲ್ಲಿ ಹಕ್ಕು ಪತ್ರ ಪಡೆದು ಈವರೆಗೂ ನಿವೇಶನ ಪಡೆಯದ ಕುಪ್ಪೆಪದವು ಗ್ರಾಮದ 80 ಕುಟುಂಬಗಳಿಗೆ ತಕ್ಷಣ ನಿವೇಶನ ವಿತರಿಸಬೇಕು ಎಂದು ಒತ್ತಾಯಿಸಿ ಇಂದು ಕುಪ್ಪೆಪದವು ಗ್ರಾಮಪಂಚಾಯತ್ ಮುಂಭಾಗ ನಿವೇಶನ ವಂಚಿತರು ಸಾಂಕೇತಿಕವಾಗಿ ಗುಡಿಸಲು ನಿರ್ಮಿಸಿ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಸುತ್ತಿನ ಪ್ರತಿಭಟನೆ, ಅನಿರ್ದಿಷ್ಟಾವಧಿ ಧರಣಿಗಳನ್ನು ನಡೆಸಿದರೂ ನಿವೇಶನ ಗುರುತಿಸಲು, ವಿತರಿಸಲು ಗ್ರಾಮಪಂಚಾಯತ್ ಹಾಗು ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿತ್ತು. ಇದರಿಂದ ಆಕ್ರೋಶಿತರಾದ ನಿವೇಶನ ವಂಚಿತರು ಇಂದು ಹೋರಾಟ […]

Continue Reading

ಬ್ಯಾರಿ ಲೇಖನ ಸ್ಪರ್ದೆ: ದಶಮಾನೋತ್ಸವ ಸಂಭ್ರಮದಲ್ಲಿ ಆಯೋಜಿಸಿದ್ದ ‘ಬ್ಯಾರಿ ಲೇಖನ ಸ್ಪರ್ದೆ – 2026’ರ ಫಲಿತಾಶವನ್ನು ಇಂದು ರಾತ್ರಿ 8.30ಕ್ಕೆ ಪ್ರಕಟಿಸಲಿದೆ

ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ‘ ಬ್ಯಾರಿವಾರ್ತೆ’ ತನ್ನ ದಶಮಾನೋತ್ಸವ ಸಂಭ್ರಮದಲ್ಲಿ ಆಯೋಜಿಸಿದ್ದ ‘ಬ್ಯಾರಿ ಲೇಖನ ಸ್ಪರ್ದೆ – 2026’ರ ಫಲಿತಾಶವನ್ನು ಇಂದು 16-2-2026ನೇ ಸೋಮವಾರ ರಾತ್ರೆ 8.30ಕ್ಕೆ ಪ್ರಕಟಿಸಲಿದೆ ಎಂದು ತಿಳಿಸಲಾಗಿದೆ. ಈ ಸ್ಪರ್ದೆಗೆ ರಾಜ್ಯದ ವಿವಿಧ ಜಿಲ್ಲೆಗಳ ಸಹಿತ ವಿದೇಶಗಳಿಂದಲೂ 149 ಲೇಖನಗಳು ಬಂದಿದ್ದು ಇದೊಂದು ದಾಖಲೆಯಾಗಿದೆ. ಈ ಸ್ಪರ್ದೆಯ ಫಲಿತಾಂಶವನ್ನು ವಿನೂತನ ಶೈಲಿಯಲ್ಲಿ ಪ್ರಟಿಸಲು ಉದ್ದೇಶಿಸಲಾಗಿದೆ. ಫಲಿತಾಂಶವನ್ನು ಒಂದು ವಿಶೇಷ ವಿಡಿಯೊ ಮೂಲಕ ‘Bearyinfo’ ಯೂಟ್ಯೂಬ್ ಚಾನೆಲ್‌ನಲ್ಲಿ 16-8-2026 ಸೋಮವಾರ ರಾತ್ರೆ 8.30ಕ್ಕೆ […]

Continue Reading

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ: ಜಾಮೀನು ಪಡೆದು ಒಂಬತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಜಾಮೀನು ಷರತ್ತು ಉಲ್ಲಂಘಿಸಿದ ಹಿನ್ನೆಲೆ ಮತ್ತೊಂದು ಪ್ರಕರಣ ದಾಖಲು ಪುತ್ತೂರು ನಗರ ಪೊಲೀಸ್ ಠಾಣಾ ಅ.ಕ್ರ: 51/2012 ಹಾಗೂ ಅ.ಕ್ರ:52/2012 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬಾತನನ್ನು ಮಂಗಳೂರು, ಕುಲಶೇಖರ, ಬಿಕರ್ನಕಟ್ಟೆ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ: 27.02.2026 ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಮುಂದುವರಿದಂತೆ ಮಾನ್ಯ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸ್ವೀಪ್ಟ್ ಕಾರಿನಲ್ಲಿ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಸಮೇತ ಸ್ವೀಪ್ಟ್ ಕಾರನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರನ್ನು ಮುಸ್ತಫಾ ಸೀದಿಯಬ್ಬ, ಉಳ್ಳಾಲ. ಮೈಯದ್ದಿ, ಉಳ್ಳಾಲ. ಮೊಹಮ್ಮದ್ ಶಿಫಾನ್, ಮುಕ್ಕಚೇರಿ, ಉಳ್ಳಾಲ, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದು, ರೂ.11 ಲಕ್ಷದ […]

Continue Reading

ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ; ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ

ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು. 500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು, ಕಾರ್ಪೊರೇಟ್ ಹಿತಾಸಕ್ತಿಗಳನ್ನು ತನ್ನ ಮೂಲಮಂತ್ರವನ್ನಾಗಿಸಿದ ಕೇಂದ್ರ ಸರಕಾರದ ವಿರುದ್ದ […]

Continue Reading

ಪಲ್ಗುಣಿ ನದಿಯ ನೀರು ಕುಲುಷಿತ, ದುರ್ವಾಸನೆ, ಜಲಚರಗಳ ಸಾವು. ತನಿಖೆ ಹಾಗು ಕ್ರಮಕ್ಕೆ ಹೋರಾಟ ಸಮಿತಿ ಆಗ್ರಹ

ಪಲ್ಗುಣಿ ನದಿಯ ಹಿನ್ನೀರು ಆಗಿರುವ ಕೂಳೂರು, ರಾಯಿಕಟ್ಟೆ ಹಳ್ಳದಲ್ಲಿ ನೀರು ಮಲಿನಗೊಂಡು ದುರ್ವಾಸನೆ ಬೀರುತ್ತಿದ್ದು, ಮೀನು, ಏಡಿ ಸಹಿತ ಜಲಚರಗಳು ಸತ್ತು ತೇಲುತ್ತಿವೆ. ಇದರಿಂದಾಗಿ ದಟ್ಟ ಜನವಸತಿ ಇರುವ ಸುತ್ತಲ ಪ್ರದೇಶದಲ್ಲಿ ಅಸಹನೀಯ ಸ್ಥಿತಿ ನಿರ್ಮಾಣಗೊಂಡಿದೆ. ಕಳೆದ ಒಂದು ವಾರದಿಂದ ಗ್ರಾಮಸ್ಥರು ಈ ಕುರಿತು ದೂರುತ್ತಿದ್ದರೂ ಯಾವುದೇ ನಿರ್ಣಾಯಕ ಕ್ರಮಗಳು ಕೈಗೊಂಡಿರುವುದಿಲ್ಲ. ಪಲ್ಗುಣಿ ನದಿಯಲ್ಲಿ ಇಂತಹ ಗಂಭೀರ ಮಾಲಿನ್ಯಕ್ಕೆ ಬೈಕಂಪಾಡಿ ಕೈಗಾರಿಕಾ ವಲಯ ಸೇರಿದಂತೆ ಸುತ್ತಲಿನ ಹಲವು ಕೈಗಾರಿಕೆಗಳು ತಮ್ಮ ಘಟಕಗಳಿಂದ ಶುದ್ದೀಕರಿಸದ ತ್ಯಾಜ್ಯ ನೀರನ್ನು ನೇರವಾಗಿ […]

Continue Reading

ಮಂಗಳೂರು: ಮಹಿಳೆಯರನ್ನು ನಂಬಿಸಿ, ಹಲವಾರು ಮದುವೆ; ಬಹು ಪತ್ನಿ ವಲ್ಲಭ ಸುಶಾಂತ್ ಪೂಜಾರಿ ಬಂಧನ

ನೊಂದ ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ, ಅವರನ್ನು ನಂಬಿಸಿ ಹಂತ ಹಂತವಾಗಿ 6 ಲಕ್ಷದ 60 ಸಾವಿರ ರೂ. ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆಯಾಗಿರುತ್ತಾನೆ. ನಂತರದ ದಿನಗಳಲ್ಲಿ ದೂರುದಾರರು ಅತನ ಬಗ್ಗೆ ಅನುಮಾನಗೊಂಡ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ […]

Continue Reading

ಗಂಜಿಮಠ: ಸೂರಲ್ಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಪ್ಲಾಜಾಗೆ ಹೈಕೋರ್ಟಿನ ಹಿರಿಯ ವಕೀಲ ಎಸ್. ಬಾಲನ್ ನೇತೃತ್ವದ ವಕೀಲರ ನಿಯೋಗ ಭೇಟಿ ನೀಡಿ ಪರಿಶೀಲನೆ

ಮಂಗಳೂರಿನ ಗಂಜಿಮಠ-ಸೂರಲ್ಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಪ್ಲಾಜಾ ಕಾಮಗಾರಿಯನ್ನು ಹಿರಿಯ ವಕೀಲ ಎಸ್ ಬಾಲನ್ ನೇತೃತ್ವದ ವಕೀಲರ ನಿಯೋಗ ಇಂದು ಭೇಟಿ ನೀಡಿ ಪರಿಶೀಲಿಸಿತು‌. ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ ಅವರು ಈ ನಿಯೋಗವನ್ನು ಮುನ್ನಡೆಸಿದರು. ಹಿರಿಯ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಹಿರಿಯ ವಕೀಲ-ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಪತ್ರಕರ್ತ ನವೀನ್ ಸೂರಿಂಜೆ ಅವರು ನಿಯೋಗದಲ್ಲಿದ್ದರು. ಗಂಜೀಮಠ – ಸೂರಲ್ಪಾಡಿ ಅಕ್ರಮ ಟೋಲ್ ವಿರುದ್ದ ಈಗಾಗಲೇ ‘ಟೋಲ್ ವಿರೋಧಿ […]

Continue Reading

ಪುತ್ತೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ಮೂಲದ ವ್ಯಕ್ತಿ ಸೇರಿದಂತೆ, ಮೂವರು ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 106 ಕೆ.ಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ ಎಂಬವರನ್ನು ಈ ಮೊದಲೇ ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ; ಕಳ್ಳತನ ಆರೋಪಿಗಳ ಬಂಧನ, 27 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ವಶ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ರವರು ಸಂಬಂಧಿಕರ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಹೋದಾಗ ರಾತ್ರಿ ಮನೆಯಲ್ಲಿದ್ದ ಸುಮಾರು 23 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1ಲಕ್ಷದ 25 ಸಾವಿರ ರೂಪಾಯಿ ನಗದು ಹಣ ದಿನಾಂಕ 23-09-2025 ರಂದು ಕಳ್ಳತನವಾಗಿತ್ತು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂಖ್ಯೆ 176/2025 ರಂತೆ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಜಪೆ ಪೊಲೀಸರು ಆರೋಪಿಗಳ ಜಾಡು ಹಿಡಿದು ಮಾಹಿತಿ ಕಲೆ ಹಾಕಿದಾಗ […]

Continue Reading