ಉಳ್ಳಾಲ: ಕಲ್ಕಟ್ಟ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಗಂಭೀರ ಗಾಯಗೊಂಡಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಳ್ಳಾಲ ತಾಲೂಕಿನ ಮಂಜನಾಡಿ ಕಲ್ಕಟ್ಟ ಮನೆಯಲ್ಲಿ ಡಿಸೆಂಬರ್ 7 ರಂದು ಮನೆಯ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಖುಬ್ರಾ ಮೃತಪಟ್ಟಿದ್ದಾರೆ. ಮೂವರು ಮಕ್ಕಳಾದ ಮೆಹದಿಯಾ, ಮಝಿಯಾ, ಮಾಯಿದಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಲಿಂಡರ್ ಸ್ಪೋಟಗೊಂಡು ಇವರ ಚರ್ಮ ಬೆಂದು ಹೋಗಿರುವುದಾಗಿ ತಿಳಿದು ಬಂದಿದೆ.

Continue Reading

ಪುಂಜಾಲಕಟ್ಟೆ: ಪಿಕಪ್‌ ವಾಹನ ಕಳವು ಪ್ರಕರಣ : ಆರೋಪಿಗಳು ಅಂದರ್

ಪುಂಜಾಲಕಟ್ಟೆ ಇಂಟರ್ ಲಾಕ್ ಪ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಬೊಲೆರೋ ಪಿಕಪ್ ಗೂಡ್ಸ್ ವಾಹನ ಕಳವು ಪ್ರಕರಣದ ಆರೋಪಿಗಳನ್ನು ಪುಂಜಾಲಕಟ್ಟೆ ಎಸ್.ಐ‌.ನಂದಕುಮಾರ್ ನೇತ್ರತ್ವದ ತಂಡ ವಶಪಡಿಸಿಕೊಂಡ ಘಟನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್‌ ಫ್ಯಾಕ್ಟರಿಯ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ರವರ KA19D5858 ನೇ ಬೊಲೆರೋ ಪಿಕಪ್‌ ಗೂಡ್ಸ್‌ ವಾಹನವನ್ನು ಡಿ. 2 ರಂದು ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಸಮಯ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, , ಈ […]

Continue Reading

ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ. ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದ ಘಟನೆ.

ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು ಸಮೀಪದ ಮೆದು ನಿವಾಸಿಯಾಗಿದ್ದು ಪ್ರಸ್ತುತ ಕನ್ಯಾನ ಪಿಲಿಚಾಮುಂಡಿ ಗುಡ್ಡೆ ನಿವಾಸಿ ಸುರೇಶ್ ನಾಯ್ಕ (32) ಮೃತಪಟ್ಟ ವ್ಯಕ್ತಿಯೆಂದು ಪರಿಚಯಸ್ಥರು ತಿಳಿಸಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿರುವ ಈತ ಅದೇ ಕಾರಣದಿಂದಾಗಿ ಕುಸಿದುಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ 112ಪೊಲೀಸರು ಹಾಗೂ ವಿಟ್ಲ ಪೊಲೀಸರು ಆಗಮಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು […]

Continue Reading

ಬೆಳ್ತಂಗಡಿ: ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ – ಆರೋಪಿ ಉಮೇಶ್ ಗೌಡ ಅರೆಸ್ಟ್

ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಎಂಬಾತನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯೂರು ಗ್ರಾಮದ ಆದೂರ್‌ ಪೆರಲ್ ಬಸ್ ನಿಲ್ದಾಣದಲ್ಲಿ ಡಿ.10 ರಂದು ಬೆಳಗ್ಗೆ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, […]

Continue Reading

ಹೊರ ಜಿಲ್ಲೆಗಳ ಜೆಸಿಬಿ ಚಾಲಕರ ಮೇಲೆ ಜಿಲ್ಲೆಯ ಜೆಸಿಬಿ ಮಾಲಿಕರಿಂದ ದೌರ್ಜನ್ಯ, ಅನೈತಿಕ ಪೊಲೀಸ್ ಗಿರಿ.

ಸಾರಿಗೆ ನಿಯಮ ಪಾಲಿಸುವ ಹೊರ ಜಿಲ್ಲೆಗಳ ಜೆಸಿಬಿಗಳಿಗೆ ದೊಣ್ಣೆ ನಾಯಕರ ಅಪ್ಪಣೆ ಬೇಕೇ.? ಹೌದು. ದ.ಕ.ಜಿಲ್ಲೆಯು ಒಂದಲ್ಲ ಒಂದು ವಿಚಾರದಲ್ಲಿ ನೈತಿಕ ಪೊಲೀಸ್ ಗಿರಿಯಿಂದಲೇ ಕುಖ್ಯಾತಿ ಪಡೆಯುತ್ತಿದೆ. ಇದೀಗ ಇದೇ ಸಾಲಿಗೆ ಜೆಸಿಬಿ ಮಾಲಿಕರ ಸಂಘವೆಂಬ ಒಂದಿಷ್ಟು ಜನರ ತಂಡ ಹೊರ ಜಿಲ್ಲೆಯ ಜೆಸಿಬಿ ಆಪರೇಟರ್ ಮೇಲೆ ದೌರ್ಜನ್ಯ ಎಸಗಿ ನೈತಿಕ ಪೊಲೀಸ್ ಗಿರಿ ನಡೆಸಿದ ವೀಡಿಯೋ ಸಾಮಾಜಿಕ ತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿದೆ.ಸಾರಿಗೆ ನಿಯಮದ ಪ್ರಕಾರ ಸಾರಿಗೆ ತೆರಿಗೆ, ಇನ್ಸೂರೆನ್ಸ್ ಮತ್ತು ಚಾಲಕನಿಗೆ ಲೈಸೆನ್ಸ್ ಇದ್ದರೂ ಹೊರ […]

Continue Reading

ದ.ಕ.ಜಿಲ್ಲೆಯಾಧ್ಯಂತ ಬೀಡುಬಿಟ್ಟಿರುವ ಉತ್ತರ ಭಾರತ, ಬಾಂಗ್ಲಾ ಮೂಲದ ವಂಚಕರು..

ಮನೆ ಮನೆಗೆ ಬಂದು ಕಡಿಮೆ ಬೆಲೆಯ ಅಟೋಮ್ಯಾಟಿಕ್ ಸ್ಟವ್ ನೀಡುವ ವಂಚಕರು. ಎಂಟು ಸಾವಿರ ಮುಖಬೆಲೆಯ ಅಟೋಮೆಟಿಕ್ ಸ್ಟವ್ ಕೇವಲ ಎರಡು ಸಾವಿರಕ್ಕೆ ಬಂತೆಂದು ಖುಷಿಪಡ್ತೀರಾ ಜೋಕೆ. ಬೈಕುಗಳಲ್ಲಿ ಸುತ್ತಾಡುವ ಉತ್ತರ ಭಾರತ, ಬಾಂಗ್ಲಾ ಮೂಲದ ವಂಚಕರ ತಂಡ ನಾಳೆ ನಿಮ್ಮ ಮನೆಗೂ ಬರ್ತಾರೆ. ಎಂಟು ಸಾವಿರದಿಂದ ಆರಂಭವಾಗುವ ದರ ಚರ್ಚೆ ಇಳಿಯುತ್ತಾ ಕೊನೆಗೆ ಕೇವಲ ಎರಡು ಸಾವಿರಕ್ಕೆ ಬಂದು ನಿಲ್ಲುತ್ತದೆ. ಹೈಫೈ ಅಟೋಮೆಟಿಕ್ ಸ್ಟವ್ ನಿಮ್ ಕೈಗೆ ಕೊಟ್ಟು ಬೈಕ್ ವಾಲಾ ಹೋಗ್ತಾನೆ‌. ಎರಡು ಸಾವಿರಕ್ಕೆ […]

Continue Reading

ಕೋಮುಭಾವನೆ ಕೆರಳಿಸುವ ಪೋಸ್ಟ್; ಬಂಟ್ವಾಳ ಅರಳದ ಜಯಪೂಜಾರಿಗೆ 14 ದಿನಗಳ ನ್ಯಾಯಾಂಗ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ಧರ್ಮಗಳ ಮಧ್ಯೆ ಅವಹೇಳನಕಾರಿ ಪೋಸ್ಟ್ ಬರೆದು ವೈರಲ್ ಮಾಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ . ಬಂಟ್ವಾಳ ಗ್ರಾಮಾಂತರ ಪೋಲೀಸರು ಈತನನ್ನು ಬಂಧಿಸಿ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಆರೋಪಿ ಜಯ ಪೂಜಾರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಧರ್ಮ, ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ […]

Continue Reading

ವಿಟ್ಲ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕಿ. ಬಾಲಕಿಯ ಬಲಿ ಪಡೆದ ಜೋಕಾಲಿ ಹಗ್ಗ.

ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಮನಕಲಕುವ ಘಟನೆ ನಡೆದಿದೆ. ಮಡಲ ನಿವಾಸಿ ಕಿಶೋರ್ ಎಂಬವರ ಪುತ್ರಿ ಮಾಣಿ ಸಮೀಪದ ಸೇರ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ತೀರ್ಥಶ್ರೀ(8) ಮೃತ ಬಾಲಕಿ.ರವಿವಾರದಂದು ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ಜೋಕಾಲಿ ಹಗ್ಗ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಈ ಹಿಂದೆ ಇದೇ ರೀತಿ ಅನಂತಾಡಿ ಗ್ರಾಮದಲ್ಲಿ, ವಿಟ್ಲ ಸಮೀಪದ ಉಕ್ಕುಡ ದರ್ಬೆಯಲ್ಲೂ ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಪುಟಾಣಿಗಳು ಸಾವನ್ನಪ್ಪಿದ್ದರು. ಮಕ್ಕಳು ಆಟವಾಡುವ ಸಂದರ್ಭ […]

Continue Reading

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಪೋಟ; ತಾಯಿ, ಮೂವರು ಮಕ್ಕಳು ಗಂಭೀರ

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 7 ರ ಶನಿವಾರ ತಡರಾತ್ರಿ ಸಂಭವಿಸಿದೆ . ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಂಜನಾಡಿ ಕಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಪತ್ನಿ ಕುಬ್ರ (40), ಮಕ್ಕಳಾದ ಮೆಹದಿ(15), ಮಝಿಹಾ (13) ಮಾಯಿ಼ಝಾ (11) ಗಂಭೀರ ಗಾಯಗೊಂಡಿದ್ದಾರೆ. ಪತಿ ವಿದೇಶದಲ್ಲಿ […]

Continue Reading

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಐಕಾನ್ ತುಂಬೆ ಶೆಟ್ರು.!

ಕರಾವಳಿ, ಮಲೆನಾಡಿನಲ್ಲಿ ಲಗಾಡಿ ತೆಗೆದ ನಾಯಕರಿಗೆ ಸಿಂಹಸ್ವಪ್ನವಾದ ಯುವ ನಾಯಕ ಹೊಂದಾಣಿಕೆ ರಾಜಕಾರಣಕ್ಕೆ ಜಿಲ್ಲಾ ಕಾಂಗ್ರೆಸ್ ಧೂಳೀಪಟ.! ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಡಿಶುಂ.. ಡಿಶುಂ ಸಖತ್ ಸುದ್ದಿ ಮಾಡಿದ್ದಂತೂ ಸತ್ಯ. ಕಛೇರಿ ಒಳಗಡೆ ನಡೆದ ಭಾರೀ ತಮ್ಮಣಕ್ಕೆ ಪೇಚಿಗೆ ಸಿಲುಕಿದ ನಾಲಾಯಕರು ಮೀಡಿಯಾದೆದುರು ನಮ್ಮ ನಡುವೆ ಹಂಗೇನಿಲ್ಲ, ಎಲ್ಲವೂ ಸರಿಯಾಗಿದೆ ಎಂದು ತೇಪೆ ಹಚ್ಚಿದರೂ ಕಾಂಗ್ರೆಸ್ ನಾಯಕರೊಳಗೆ ಬೂದಿ ಮುಚ್ಚಿದ ಕೆಂಡದಂತಿದೆ. ಪಾಪ ಕಾರ್ಯಕರ್ತರು ಮಾತ್ರ ಈ ಹೈಡ್ರಾಮವನ್ನು ಎಂಜಾಯ್ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ […]

Continue Reading