ಮಂಗಳೂರು ಕಮೀಷನರ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ

ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಸಮಾಲೋಚನಾ ಸಭೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ ಸಮಾಲೋಚನಾ ಸಭೆ ನಡೆಸಿದವು. ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಸಂಘಟನೆಗಳು ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳು, ಎಡಪಕ್ಷಗಳ ಪ್ರಮುಖರು ಸಭೆಯಲ್ಲಿ ಭಾಗಿಯಾದರು. ಬಿಜೆಪಿ ದುರಾಡಳಿತದ ಎದುರಾಗಿ ಜನಪರ ಸಂಘಟನೆಗಳ ಒಕ್ಕೊರಲ ಬೆಂಬಲ […]

Continue Reading

ವಿಟ್ಲ: ಸ್ವಾಮಿ ಹೋಲೋ ಬ್ಲಾಕ್ ನ ಉದ್ಯಮಿ ಆತ್ಮಹತ್ಯೆ; ಕಂಪನಿಯ ಶೆಡ್ಡಿನೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಮಾಲಿಕನ ಮೃತದೇಹ ಪತ್ತೆ

ಉದ್ಯಮಿ ಸಾವಿನ ಸುತ್ತ ಸಂಶಯದ ಹುತ್ತ. ವಿಟ್ಲದ ಸ್ವಾಮಿ ಹೋಲೋ ಬ್ಲಾಕ್ & ಇಂಟರ್ ಲಾಕ್ ಕಂಪನಿಯ ಮಾಲಿಕ ನಿಡ್ಯ ದಾಮೋದರ ಪೂಜಾರಿ(59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ವಿಟ್ಲ-ಕುಂಡಡ್ಕ ರಸ್ತೆಯ ಪರನೀರು ಎಂಬಲ್ಲಿ ಹೋಲೋ ಬ್ಲಾಕ್ ಕಂಪನಿ ನಡೆಸುತ್ತಿದ್ದ ದಾಮೋದರ ಪೂಜಾರಿಗೆ ಮೇಲ್ನೋಟಕ್ಕೆ ಯಾವುದೇ ರೀತಿಯಲ್ಲೂ ಆರ್ಥಿಕ ಸಂಕಷ್ಟಗಳಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಾ ಎಲ್ಲರೊಂದಿಗೂ ಸಹಬಾಳ್ವೆಯಿಂದ ಕೊಡುಗೈ ದಾನಿಯಾಗಿದ್ದ ದಾಮೋದರ ಪೂಜಾರಿಯವರ ಸಾವಿನ ಸುತ್ತ ಹಲವಾರು ಸಂಶಯಗಳು ವ್ಯಕ್ತವಾಗಿವೆ. ಘಟನಾ […]

Continue Reading

ಶಕ್ತಿನಗರ ಜನರಿಗೂ ಸಿಕ್ತು ‘ಶಕ್ತಿ’ಯ ಖುಷಿ..! ಭಗೀರಥ ಪ್ರಯತ್ನದ ನಂತರ ಬಂದ ಸರ್ಕಾರಿ ಬಸ್ ಕಂಡು ಜನ ಫುಲ್ ಖುಷ್..

ಮಂಗಳೂರು: ಬಂದರು ನಗರಿ ಮಂಗಳೂರಿನ ಶಕ್ತಿನಗರದ ಜನರಲ್ಲಿ ಎಂದಿಲ್ಲದ ಹರ್ಷ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಗ್ಯಾರೆಂಟಿ ಯೋಜನೆ ರಾಜ್ಯದ ಎಲ್ಲೆಡೆ ಮಹಿಳೆಯರ ಪಾಲಿಗೆ ಆಶಾಕಿರಣವಾದರೆ, ಖಾಸಗಿ ಬಸ್’ಗಳ ಪ್ರಾಬಲ್ಯವಿರುವ ದಕ್ಷಿಣ ಕನ್ನಡದ ಬಹುತೇಕ ಊರುಗಳ ಮಹಿಳೆಯರಿಗೆ ನಿಲುಕದ ಕುಸುಮದಂತಿದೆ. ಇಂತಹಾ ಸ್ಥಿತಿಯನ್ನು ಮನಗಂಡ ಸಾಮಾಜಿಕ ಹೋರಾಟಗಾರರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್ ಅವರ ಕಾಳಜಿಯಿಂದ ಮಂಗಳೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸರ್ಕಾರಿ ಬಸ್ ಸಂಚರಿಸುವಂತಾಗಿದೆ. ಮಂಗಳೂರಿನ ಶಕ್ತಿನಗರ ಅನನ್ಯ ಸಂಭ್ರಮಕ್ಕೆ ಸಾಕ್ಷಿಯಾಯಿತು. ಶಕ್ತಿನಗರ ಪದವು […]

Continue Reading

ಪೊಲೀಸ್ ಕಮೀಷನರ್ ವರ್ಗಾವಣೆ ಅಸಾಧ್ಯವಾದರೆ ಜಿಲ್ಲಾಡಳಿತದ ಕಾರ್ಯಕ್ರಮಗಳಿಗೆ ಮುತ್ತಿಗೆ; ಯೋಗೀಶ್ ಜಪ್ಪಿನಮೊಗರು ಎಚ್ಚರಿಕೆ

ಮಂಗಳೂರು ನಗರದ ಪೊಲೀಸ್‌‌ ಕಮೀಷನರ್ ವಿನಾ ಕಾರಣ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಿಸುವ, ಪ್ರತಿಭಟನೆಯ ಹಕ್ಕನ್ನು ನಿರಾಕರಿಸುತ್ತಿರುವುದು ಸಂವಿಧಾನ ವಿರೋಧಿ ಮತ್ತು ಈ ನೆಲದ ಕಾನೂನು ವಿರೋಧಿ ನಡೆಯಾಗಿದೆ ಇಂತಹ ವರ್ತನೆ ಬದಲಾಯಿಸದಿದ್ದರೆ ಕಮೀಷನರ್ ಅಗ್ರವಾಲರು ಮಂಗಳೂರಿಗೆ ಬೇಕಾಗಿಲ್ಲ ಕೂಡಲೇ ವರ್ಗಾಯಿಸಲು ಕ್ರಮಕೈಗೊಳ್ಳಿ ಇಲ್ಲವೆಂದಾದರೆ ಜಿಲ್ಲಾಡಳಿತ ಕಾರ್ಯಕ್ರಮಗಳಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಎಚ್ಚರಿಸಿದರು. ಅವರು ಇಂದು ಡಿವೈಎಫ್ಐ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ನಗರದ ಪಂಪ್ವೆಲ್ […]

Continue Reading

ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು. ಬಂಟ್ವಾಳ ಸಮೀಪದ ವಗ್ಗ ಬಳಿ ಘಟನೆ.

ಬಂಟ್ವಾಳ-ಗುರುವಾಯನಕೆರೆ ರಸ್ತೆಯ ವಗ್ಗ ಸಮೀಪ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ರಾಜೇಂದ್ರಪೂಜಾರಿ (45) ಮೃತ ಬೈಕ್ ಸವಾರ. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಆಗಮಿಸಿ […]

Continue Reading

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ ? – ಸುನೀಲ್ ಕುಮಾರ್ ಬಜಾಲ್

ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ರವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದರು. ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, […]

Continue Reading

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಮನೆಗೆ NIAದಾಳಿ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮನೆಗಳಿಗೆ NIAತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿದೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗದ್ದೆ ಎಂಬಲ್ಲಿನ ನೌಷಾದ್(27) ಮನೆಗೆ ಇಂದು ಬೆಳಗ್ಗೆ NIA ತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ನೌಷಾದ್ ಪತ್ತೆಗಾಗಿ ಈಗಾಗಲೇ ಸುಳಿವು ನೀಡಿದವರಿಗೆ ಎನ್.ಐ.ಎ. 2ಲಕ್ಷ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ತಲೆಮರೆಸಿಕೊಂಡ ಆರೋಪಿ ಅಬೂಬಕ್ಕರ್ ಸಿದ್ದೀಕ್ ಎಂಬಾತನ ಪತ್ನಿ ಮತ್ತು ಸಹೋದರನ […]

Continue Reading

ಗುರುಪುರ: ಹೆಜ್ಜೇನು ದಾಳಿಗೆ ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಗುರುಪುರ ಮಠದಬೈಲಿನಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡು, ಇಬ್ಬರಿಗೆ ಸಾಮಾನ್ಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಮಠದಬೈಲಿನ ಬೇಬಿ ಎಂಬವರು ಮನೆಯಂಗಳದಲ್ಲಿ ಇದ್ದ ವೇಳೆ ಹೆಜ್ಜೇನು (ಪೆರಿಯ) ಗುಂಪೊಂದು ದಾಳಿ ಮಾಡಿದೆ; ನೋವಿನಿಂದ ಕಿರುಚುತ್ತಾ ಹತ್ತಿರದ ರಸ್ತೆಗೆ ಓಡಿ ಬಂದ ವೇಳೆ ಅವರ ನೆರವಿಗೆ ಬಂದ ಗಣೇಶ್ ಮೇಲೆಯೂ ಹೆಜ್ಜೇನು ಎರಗಿದೆ. ಇವರಿಬ್ಬರು ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡಾಡುತ್ತಿದ್ದ ಸಂದರ್ಭ ಇವರ ನೆರವಿಗೆ ಬಂದ ಶೋಧನ್ ರವರ ಮೇಲೂ ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ […]

Continue Reading

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚನೆ; ಪ್ರೀತಿ ಫರ್ನಿಚರ್ ಮಾಲಕನಿಗೆ ಬಿತ್ತು ದಂಡ; ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್ ಗೆ 20,000 ರೂಪಾಯಿ ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ. ಕಲ್ಲಂಗಲ ನಿವಾಸಿ ಹೈದರ್ ಅಲಿ 50,000 ರೂಪಾಯಿ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಸೂಚಿಸಿದ್ದರು. ನಿಗದಿತ ಸಮಯಕ್ಕೆ ಪೀಠೋಪಕರಣ ತಯಾರಿಸದೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಹೈದರ್ ಅಲಿ ನ್ಯಾಯಾಲಯಕ್ಕೆ […]

Continue Reading

ಮಂಗಳೂರು ಪೊಲೀಸ್ ಕಮೀಶನರ್ ವರ್ಗಾವಣೆ ಒತ್ತಾಯಿಸಿ- ಉಡುಪಿಯಲ್ಲಿ ಸಿಪಿಐಎಂ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು ,ಸಿಪಿಐಎಂ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಶನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿಸಲಾಯಿತು. ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರು ಕೂಡಲೆ ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಾಸು ಪಡೆಯಬೇಕು, ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ […]

Continue Reading