CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

CPIM 24ನೇ ದ.ಕ.ಜಿಲ್ಲಾ ಸಮ್ಮೇಳನವು ಇತ್ತೀಚಿಗೆ ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಮ್ಮೇಳನಕ್ಕೆ ಮಾರ್ಗದರ್ಶಕರಾಗಿ CPIM ಪೋಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, CPIM ರಾಜ್ಯ ಕಾರ್ಯದರ್ಶಿ ಬಸವರಾಜ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.ಕೆ.ಪ್ರಕಾಶ್ ರವರು ಭಾಗವಹಿಸಿದ್ದರು. ಸಮ್ಮೇಳನದ ಉದ್ಘಾಟನಾ ಸಮಾರಂಭ, ಪ್ರತಿನಿಧಿ ಅಧಿವೇಶನ, ಸಮಾರೋಪ ಸಮಾರಂಭ, ಆಕರ್ಷಕ ಮೆರವಣಿಗೆ ಹಾಗೂ ಬಹಿರಂಗ ಸಭೆಯು ಅಚ್ಚುಕಟ್ಟಾಗಿ ನಡೆಯಿತು. ಈ ಸಮ್ಮೇಳನವು ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು. […]

Continue Reading

ಸತತ 6 ಬಾರಿ SGFI ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಉಡುಪಿಯ ಪ್ರನುಷಾ

ಉಡುಪಿ : ಉಡುಪಿ ಮಠದಬೆಟ್ಟು ಮಹೇಶ್ ಪೂಜಾರಿ ಮತ್ತು ಪ್ರಮೀಳಾ ದಂಪತಿಗಳ ಪುತ್ರಿ ಕಲ್ಯಾಣಪುರ ಮಿಲಾಗ್ರೀಸ್ ಪಿ. ಯು ಕಾಲೇಜು ವಿದ್ಯಾರ್ಥಿನಿ ಹಾಗೂ ಪಿಕೆಸಿ ತಂಡದ ಕ್ರೀಡಾಪಟು ಪ್ರನುಷಾ ಎಂ. ಪೂಜಾರಿ ರಾಜ್ಯದಲ್ಲಿ ವಿಶೇಷ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದ ರಾಷ್ಟ್ರಮಟ್ಟದ ಆಯ್ಕೆಗೆ ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸುವ ಕರಾಟೆ ಪಂದ್ಯಾವಳಿಯಲ್ಲಿ ಸತತ ಆರು ವರ್ಷ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ರಾಜ್ಯಮಟ್ಟದಲ್ಲಿ […]

Continue Reading

ಶಾಸಕ ಉಮಾನಾಥ ಕೋಟ್ಯಾನ್ ರವರೇ ನೀವು ‘ಸೌಮ್ಯ’ ಆದರೆ ಸಾಕಾ..?

ಇಲ್ಲಿನ ಉಪ ತಹಶೀಲ್ದಾರ್ ಗಳ ದರ್ಬಾರ್ ಗೆ ಬ್ರೇಕ್ ಹಾಕುವವರು ಯಾರು.? ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ರವರ ಬಗ್ಗೆ ಸ್ಥಳೀಯವಾಗಿ ಒಳ್ಳೆಯ ಅಭಿಪ್ರಾಯವಿದೆ. ಪಕ್ಷ ಬಿಜೆಪಿಯಾದರೂ ನ್ಯಾಯದ ವಿಚಾರದಲ್ಲಿ ಎಲ್ಲರಿಗೂ ಒಂದೇ. ಅನುದಾನ ಕೂಡ ಹಾಗೆನೇ. ಓಟು ಹಾಕಿದವರು, ಹಾಕದವರು ಅನ್ನುವ ಭೇದಭಾವ ತೋರದೆ ಎಲ್ಲರನ್ನು ಸಮಾನ ಕಾಣುತ್ತಾರೆ. ಸೌಮ್ಯ ಸ್ವಭಾವದವರು ಅನ್ನುವ ಮಾತಿದೆ. ಆದರೆ ಅಧಿಕಾರಿಗಳನ್ನು ಹದ್ದು ಬಸ್ತಿನಲ್ಲಿಡುವ ಕೆಲಸ ಮಾಡಬೇಕು. ಮೂಡಬಿದ್ರೆ ತಾಲೂಕು ಆಡಳಿತ ಸೌಧದಲ್ಲಿ ಪರ್ಮನೆಂಟ್ ತಹಶೀಲ್ದಾರ್ ಇಲ್ಲ. ಮೂಲ್ಕಿಯ ತಹಶೀಲ್ದಾರ್ […]

Continue Reading

ಕರಿಂಜ ನಿರೇಜಾಲು ಕೆರೆ ಉಳಿಸಲು ಹೋರಾಟ ಸಮಿತಿ ರಚನೆಗೆ ಮುಂದಾದ ಸ್ಥಳೀಯರು

ದೂರುದಾರೆಗೆ ಒಲಿದು ಬಂತು ಅಧಿಕಾರದ ಭಾಗ್ಯ.! ಮೂಡಬಿದಿರೆಯಲ್ಲಿ ಸ್ವಾಹಾ ಪ್ರಕರಣಗಳಿಗೇನೂ ಕಮ್ಮಿಯಿಲ್ಲ. ಇಲ್ಲಿ ಗೋಲ್ಮಾಲ್ ನಡೆಸುವವರಿಗೆ ನೀರು ಕುಡಿದಷ್ಟೇ ಸಲೀಸು. ಮೂಡಬಿದಿರೆಗೆ ಜೀವ ಸೆಲೆಯಾದ ಬಹುತೇಕ ಕೆರೆಯನ್ನು ಪೂರ್ತಿ ನುಂಗಿ ಹಾಕಿದ್ದಾರೆ. ಈ ಬಗ್ಗೆ ಸಮಗ್ರ ವರದಿಯನ್ನು ಸ್ಪೆಷಲ್ ನ್ಯೂಸ್ ಮೀಡಿಯಾ ವರದಿ ಮಾಡಿತ್ತು. ಇದೀಗ ಎಚ್ಚೆತ್ತುಕೊಂಡ ಸ್ಥಳೀಯರು ಕೆರೆ ಉಳಿಸಲು ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಕೆರೆ ಉಳಿಸಲು ಸಮಿತಿ ರಚನೆಗೆ ಜಿಲ್ಲೆಯ ಅಗ್ರಗಣ್ಯ ಹೋರಾಟಗಾರರಾಗಿರುವ ಸುದತ್ತ್ ಜೈನ್ ಶಿರ್ತಾಡಿ ಯವರಿಂದ ರೂಪುರೇಷೆ ಪಡೆಯಲು ಮುಂದಾಗಿದ್ದಾರೆ […]

Continue Reading

ಸ್ವಾರಿ..ಸ್ವಾರಿ..ಸ್ವಾರಿ ಡೆತ್ ನೋಟ್ ಬರೆದಿಟ್ಟು ಆಳ್ವಾಸ್ ಕಾಲೇಜಿನ ಬ್ರಿಲಿಯಂಟ್ ಸ್ಟೂಡೆಂಟ್ ಶಶಾಂಕ್ ಸುಸೈಡ್.. ಕಾರಣ ನಿಗೂಢ.!

ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಗೈದಿರುವ ಯುವಕ ಆಳ್ವಾಸ್ ಕಾಲೇಜಿನ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿ ಶಶಾಂಕ್ ಎಂದು ಗುರುತಿಸಲಾಗಿದೆ. ಈತ ಮೂಲತಃ ತಮಿಳುನಾಡಿನ ಚನ್ನಗಿರಿ ಹೊಸೂರು ನಿವಾಸಿಯಾಗಿದ್ದು, ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಶಾಂಕ್ ಆಳ್ವಾಸ್ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ. ಕಾಲೇಜಿನ ಉಪನ್ಯಾಸಕರು ಹಾಗೂ ಸಹಪಾಠಿಗಳೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದ. […]

Continue Reading

ಅಂಗವಿಕಲ ಬೀದಿ ವ್ಯಾಪಾರಿಗೆ ಹಪ್ತ ವಸೂಲಿ ಹೆಸರಲಿ ಕಿರುಕುಳ ನೀಡಿದ ಬಿಜೆಪಿ ಮುಖಂಡನ ನಡೆಗೆ ಖಂಡನೆ – ಡಿವೈಎಫ್ಐ

ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಸ್ಥಳೀಯ ಮಾಜಿ ಕಾರ್ಪೊರೇಟರ್ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ ಮತ್ತಾತನ ಹೆಸರಲ್ಲಿ ಹಿಂಬಾಲಕರು ಹಪ್ತ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಿವೈಎಫ್ಐ ನಿಯೋಗ ಸಂತ್ರಸ್ತ ಚಂದ್ರಹಾಸ್ […]

Continue Reading

ಮೂಡಬಿದ್ರೆ: ನೀರುಣಿಸಿದ ಕೆರೆಯನ್ನೇ ನುಂಗಿದ ಭೂಪರು.!

ಕೊಂಬ್ರ ಕೆರೆ, ಗೌರಿ ಕೆರೆ, ಕಡಲ ಕೆರೆ ಗುಳುಂ ಆಯ್ತು.. ಇದೀಗ ರೋಧಿಸುತ್ತಿದೆ ಕರಿಂಜೆ ನಿರೇಜಾಲು ಕೆರೆ! ಮೂಡಬಿದಿರೆಯಲ್ಲಿ ಅಂದಾಜು ನೂರಾರು ಕೆರೆಗಳಿತ್ತು. ಆದರೆ ಈಗ ಉಳಿದಿರುವುದು ಬರೀ 30 ರಿಂದ 40 ಕೆರೆಗಳು ಮಾತ್ರ. ಇಡೀ ಮೂಡಬಿದಿರೆಗೆ ನೀರಿನ ಕೊರತೆ ನೀಗಿಸುತ್ತಿದ್ದ ಕೆರೆಗಳು ಮಾಯವಾಗಿಬಿಟ್ಟಿದೆ. ರಕ್ಷಣೆ ಮಾಡುವ ಹೆಸರಿನಲ್ಲಿ ಭಕ್ಷಣೆಗೆ ಇಳಿದಿದ್ದಾರೆ. ಐತಿಹಾಸಿಕವಾದ ಕೆರೆಗಳನ್ನು ಉಳಿಸುವ ಜವಾಬ್ದಾರಿ ಇಲ್ಲಿನ ನಾಗರೀಕರದ್ದು. ಮೂಲ್ಕಿ -ಮೂಡಬಿದಿರೆ ಅವಳಿ ನಗರ ಸುಂದರ ತಾಣಗಳಲ್ಲೊಂದು. ಪ್ರವಾಸಿ ತಾಣವೂ ಹೌದು. ಇಲ್ಲಿನ ಪ್ರಾಚೀನ […]

Continue Reading

ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

ಉಡುಪಿ : ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.19 ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ […]

Continue Reading

ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೈಡ್

ಕೆಂಪು, ಕಲ್ಲು ಕ್ವಾರೆ ಪರ್ಮೀಟ್ ಗಾಗಿ ಲಕ್ಷಾಂತರ ರೂಪಾಯಿ ಪೀಕಿಸುವ ಆರೋಪ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 25 ಕಡೆ ದಾಳಿ ನಡೆಸಿದ್ದು, ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂ.ಸಿ ಕೃಷ್ಣವೇಣಿ ಅವರ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ನಡುವೆಯೇ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಾಬಳ್ಳಾಪುರದ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆದಿದೆ ಎಂದು […]

Continue Reading

ಕನ್ಯಾನ ಸಮೀಪದ ಒಂಟಿ ಮನೆಯೊಳಗೆ ಮನೆ ಮಾಲಿಕ ಮೌರಿಸ್ ಡಿಸೋಜಾರವರ ಶವ ಪತ್ತೆ. ಇದೊಂದು ವ್ಯವಸ್ಥಿತ ಕೊಲೆ.?

ವಿಟ್ಲ ಸಮೀಪದ ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ ಮೌರಿಸ್ ಡಿಸೋಜಾ(61)ಮೃತ ವ್ಯಕ್ತಿ. ಪತ್ನಿ ಮತ್ತು ಮಕ್ಕಳು ಕೆಲ ವರ್ಷಗಳ ಹಿಂದೆ ಬಿಟ್ಟು ಹೋಗಿದ್ದು ಆ ಬಳಿಕ ಒಬ್ಬಂಟಿಯಾಗಿ ಮೌರಿಸ್ ಡಿಸೋಜಾ ವಾಸಿಸುತ್ತಿದ್ದರು. ಕೃಷಿಕರಾಗಿರುವ ಮೌರಿಸ್ ಅವರ ಮನೆಗೆ ಇಂದು ಬೆಳಗ್ಗೆ ಕೂಲಿ ಕೆಲಸದವರು ಬಂದಾಗ ಮನೆಯೊಳಗೆ ಮಲಗಿದ ಸ್ಥಿತಿಯಲ್ಲಿ ಮಾಲಿಕನ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದೊಂದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ. ಘಟನಾ ಸ್ಥಳಕ್ಕೆ […]

Continue Reading