ಭಯಾನಕ ನರಕವಾಗಿರುವ ಸರಕಾರಿ ಆಸ್ಪತ್ರೆಗಳಿಗೆ ಸೂಕ್ತ ಚಿಕಿತ್ಸೆ ಯಾವಾಗ?

ಸರ್ಕಾರದ ಎಲ್ಲ ಇಲಾಖೆಗಳೂ ಕೆಟ್ಟು ಕೆರೆಹಿಡಿದು ಹೋಗಿರುವಂತೆ ಆರೋಗ್ಯ ಇಲಾಖೆಯು ಹದಗೆಟ್ಟಿದೆ. ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳು ನರಕವಾಗಿವೆ. ತಾಲ್ಲೂಕು ಆಸ್ಪತ್ರೆಗಳ ಅವ್ಯವಸ್ಥೆಯಿಂದ ಬಡರೋಗಿಗಳು ಬಾಯಿ ಬಾಯಿ ಬಡಿದುಕೊಳ್ಳುವಂತಾಗಿದೆ. ಇಡೀ ಆರೋಗ್ಯ ವ್ಯವಸ್ಥೆಯೇ ರೋಗಗ್ರಸ್ತವಾಗಿದ್ದರೂ ರಾಜ್ಯ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 2,844 ಆಸ್ಪತ್ರೆಗಳಿವೆ. ಮಂಜೂರಾದ 6,563 ವೈದ್ಯರ ಹುದ್ದೆಗಳಿವೆ. ಈ ಪೈಕಿ 2,269 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ […]

Continue Reading

ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ; ರಾಜ್ಯ ಸರಕಾರದ ಮಹತ್ವದ ನಿರ್ಧಾರ

ರಾಜ್ಯ ಸರ್ಕಾರವು ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ […]

Continue Reading

ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದು: ಶೇಖರ್ ಲಾಯಿಲ

2013 ರಲ್ಲಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಗಳಿಗೆ ಅವಕಾಶ ನಿಷೇಧಿಸಬೇಕು ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆಯವರ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ. ಜಗತ್ತಿನಾದ್ಯಂತ ಎಲ್ಲಿಯೂ ಅಧಿಕೃತವಾಗಿ ನೋಂದಣಿಯಾಗದ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿಷೇಧಗೊಳಗಾಗಬೇಕಾದ ಅಗತ್ಯವಿದೆ. ಈಗಾಗಲೇ ಸರ್ಕಾರಿ ಸೇರಿದಂತೆ ಅನುದಾನಿತ ಶಾಲಾ ಕಾಲೇಜುಗಳ ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿ ಬಿಜೆಪಿ ಪಕ್ಷದ ಜಗದೀಶ್ ಶೆಟ್ಟರ್ ಅವರು […]

Continue Reading

ಅಮಲು ಬರುವ ಸಿರಪ್‌ ಅಕ್ರಮ ಮಾರಾಟ ಗ್ಯಾಂಗ್ ಪತ್ತೆ. ಐವರು ಆರೋಪಿಗಳ ಬಂಧನ

ಕೂಲಿ ಕಾರ್ಮಿಕರ, ಬಡವರ ಮಕ್ಕಳೇ ಹೆಚ್ಚಾಗಿ ಈ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವು ಮೂಡಿಸಿದ ಕೋಲ್ಡ್ರಿಫ್ ಕಾಫ್ ಸಿರಪ್ ದೇಶಾದ್ಯಂತ ನಿಷೇಧಗೊಂಡಿತ್ತು. ಅದರ ಬಳಿಕ ಕರ್ನಾಟಕದಲ್ಲಿ ಸಿರಪ್‌ಗಳ ಮೇಲೆ ಕಠಿಣ ನಿಗಾ ಇಡಲಾಗಿದೆ. ಇದನ್ನೇ ಪರಿಗಣಿಸಿ, ದಾವಣಗೆರೆ ನಗರದಲ್ಲಿ ಅಮಲು ಬರುವ ಸಿರಪ್‌ಗಳನ್ನು ಅಕ್ರಮ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಸವನಗರ ಪೊಲೀಸರು ಬಂಧಿಸಿದ್ದಾರೆ. ದೇವರಾಜ ಅರಸ್ ಬಡಾವಣೆಯ ಫ್ಲೈಓವರ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ವೈದ್ಯರ ಅನುಮತಿ ಪತ್ರ ಇಲ್ಲದೆ, ಯುವಕರು […]

Continue Reading

ರಾಹುಲ್ ಗಾಂಧಿಗೆ ಸಿದ್ದು ಹೇಳಿದ್ದೇನು?, 12 ಹೊರಕ್ಕೆ 12 ಒಳಕ್ಕೆ

ಬಿಜೆಪಿ ಗೋಳು ತಪ್ಪುತ್ತಿಲ್ಲ, ಸಂಜಯ್ ಜೋಷಿಗೆ ಸಾರಥ್ಯ? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಯಿಂದ ಬಂದ ವರ್ತಮಾನ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರ ಆತ್ಮವಿಶ್ವಾಸ ಹೆಚ್ಚಿಸಿದೆ. ಅದರ ಪ್ರಕಾರ ರಾಹುಲ್ ಗಾಂಧಿಯವರಿಗೆ ಕೊಡಬೇಕಾದ ಮೆಸೇಜನ್ನು ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ.ಯಾವಾಗ ರಾಹುಲ್ ಗಾಂಧಿ ಅವರಿಗೆ ಈ ಮೆಸೇಜನ್ನು ಸಿದ್ದರಾಮಯ್ಯ ತಲುಪಿಸಿದ್ದಾರೆ ಎಂಬ ವರ್ತಮಾನ ಸಿಕ್ಕಿತೋ? ಇದಾದ ನಂತರ ಸಿದ್ಧು ಆಪ್ತರ ಪಡೆ ಸಂಪುಟ ಪುನರ್ರಚನೆಯ ದಿನವನ್ನು ಎದುರು ನೋಡುತ್ತಿದೆ.ಮೂಲಗಳ ಪ್ರಕಾರ, ಇತ್ತೀಚೆಗೆ ರಾಹುಲ್ ಗಾಂಧಿ ಅವರ ಜತೆ ಮಾತನಾಡಿದ […]

Continue Reading

ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ; ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ಪಕ್ಕಾ

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸುಳಿವನ್ನು ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ ಆಗಿವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಶಾಸಕರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಸಿಎಂ ಸಂಪುಟ ಪುನಾರಚನೆಯ ಸುಳಿವು ನೀಡಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯ ಚರ್ಚೆ ಹೊತ್ತಲ್ಲೇ ಡಿನ್ನರ್ ಮೀಟಿಂಗ್ ಸಿಎಂ ಸಿದ್ದರಾಮಯ್ಯ ಕರೆದಿದ್ದಾರೆ. ಡಜನ್ ಗೂ ಹೆಚ್ಚು […]

Continue Reading

ಕೇಂದ್ರ, ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ: ಹೈಕೋರ್ಟ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಸಂಘಕ್ಕೆ ಇದೇ ವೇಳೆ ನ್ಯಾಯಾಲಯ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ತನಿಖೆಗೆ ಅನುಮತಿ […]

Continue Reading

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ, ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯ, ತೆರೆಮರೆಯಲ್ಲಿ ಲಾಬಿ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯರಾಗಿದ್ದು, ತೆರೆಮರೆಯಲ್ಲಿ ಲಾಬಿ ಚಟುವಟಿಕೆಗಳು ಗರಿಗೆದರಿವೆ. ಒಂದು ಕಡೆ ಹಾಲಿ ಸಚಿವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವ ತವಕವಾದರೆ, ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆಯ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದರು. ಇದುವರೆಗೂ ಸೈಲೆಂಟ್ ಆಗಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಈ ಹೇಳಿಕೆ […]

Continue Reading

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಯಶಸ್ವಿನಿ ಕಾರ್ಡ್ ದಾರರು ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ

ಕರ್ನಾಟಕದ ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABARK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳು […]

Continue Reading

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಅವರನ್ನು ಸಿನಿಮೀಯ ರೀತಿಯಲ್ಲಿ ಕಾರು ಡಿಕ್ಕಿ ಹೊಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಗಂಗಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆ ಬಳಿ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಈ […]

Continue Reading