ಕಬಡ್ಡಿ ಕ್ಷೇತ್ರದಲ್ಲಿ ಭರವಸೆ ಮೂಡಿಸಿದ ಗ್ರಾಮೀಣ ಪ್ರತಿಭೆ ಶಶಿಕಾಂತ್ ಸುಲ್ಕೇರಿ; ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 […]

Continue Reading

ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೊಟ್ಯಾಂತರ ಮೌಲ್ಯದ ಚಿನ್ನ ದರೋಡೆ ಪ್ರಕರಣ

ಗಡಿ ಜಿಲ್ಲೆಗಳಲ್ಲಿ ನಟೋರಿಯಸ್ ಕೇರಳಿಯನ್ ಗ್ಯಾಂಗ್ ಮತ್ತೆ ಆಕ್ಟಿವ್ ಬೆಂಗಳೂರಲ್ಲಿ ನಡೆದ ಏಳು ಕೋಟಿಗೂ ಅಧಿಕ ಮೊತ್ತದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೋಟ್ಯಂತರ ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆಕೋರರು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಚಾಮರಾಜನಗರದ ಬಂಡಿಪುರ ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಚಿನ್ನದ ವ್ಯಾಪಾರಿಯೊಬ್ಬರು ಕೇರಳಕ್ಕೆ ತೆರಳಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರ […]

Continue Reading

ಒಬ್ಬರು ಐಟಿ ರಿಟರ್ನ್ಸ್ ಫೈಲ್ ಮಾಡಿದ್ರೂ ಕುಟುಂಬದ BPL ಕಾರ್ಡ್ ರದ್ದು!

ಆಧಾರ್ -ಫ್ಯಾನ್-ಐಟಿ ಡೇಟಾಬೇಸ್ ಗಳು ಲಿಂಕ್ ಆಗಿರುವುದರಿಂದ ಸ್ವಯಂ ಚಾಲಿತವಾಗಿ ರದ್ದಾಗುತ್ತಿದೆ ರೇಷನ್ ಕಾರ್ಡ್ ಗಳು ಒಂದು ಕಡೆ ಗ್ಯಾರಂಟಿ ಕೊಟ್ಟು, ಇನ್ನೊಂದು ಕಡೆ ಕಸಿದುಕೊಳ್ಳುತ್ತಿದೆ. ಕರ್ನಾಟಕದಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ರೇಷನ್‌ ಕಾರ್ಡ್‌ಗಳು ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಜೀವನಾಡಿ. ಆದರೆ ಈಗ ಹೊಸ ಸಮಸ್ಯೆ ತಲೆದೋರಿದೆ. ಕುಟುಂಬದ ಒಬ್ಬರು ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಿದರೂ ಸಾಕು ಇಡೀ ಕುಟುಂಬದ ರೇಷನ್ ಕಾರ್ಡ್‌ನ್ನು ಸಾಫ್ಟ್‌ವೇ‌ರ್ ‘ಅನರ್ಹ’ ಎಂದು ಗುರುತಿಸಿ ರದ್ದುಗೊಳಿಸುತ್ತಿದೆ. ಆಧಾರ್-ಪ್ಯಾನ್- ಐಟಿ ಡೇಟಾಬೇಸ್‌ಗಳು […]

Continue Reading

ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿಮಾಲ್​​ಗೆ ಬೀಗ ಜಡಿದ ಅಧಿಕಾರಿಗಳು

ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಅಧಿಕಾರಿಗಳು ಮತ್ತೆ ಬೀಗ ಜಡಿದಿದ್ದಾರೆ.ಈ ಹಿಂದೆಯೂ ಕೋಟ್ಯಾಂತರ ತೆರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಮಾಲ್ ನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೀಗ ಜಡಿದಿದ್ದಾರೆ. ಬರೋಬ್ಬರಿ 30,81,45,600 ರೂ. ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಮಾಲ್​ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆಂದು ತಿಳಿದುಬಂದಿದೆ. ಮಂತ್ರಿ ಮಾಲ್’ಗೆ ಬೀಗ ಹಾಕಿದ್ದರಿಂದ ಮಾಲ್ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. […]

Continue Reading

ಪತ್ನಿಗೆ ಜೀವನಾಂಶ ನೀಡಲು ಲುಕ್ ಔಟ್ ನೋಟಿಸ್ ಆದೇಶ ಹೊರಡಿಸಿದ್ದ ಮಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ರದ್ದುಪಡಿಸಿದ ಹೈಕೋರ್ಟ್

ಸಿ ಆರ್ ಪಿಸಿ ಸೆಕ್ಷನ್ 125ರಡಿ ಪತ್ನಿಗೆ ಜೀವನಾಂಶ ನೀಡಿದ್ದ ಆದೇಶ ಪಾಲನೆ ಮಾಡದ ಪತಿ ವಿರುದ್ಧ ಮಂಗಳೂರು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ರದ್ದುಗೊಳಿಸಿರುವ ನ್ಯಾಯಾಲಯ, ಕೌಟುಂಬಿಕ ನ್ಯಾಯಾಲಯಕ್ಕೆ ಆ ರೀತಿ ಲುಕ್ ಔಟ್ ನೋಟಿಸ್ ನೀಡುವ ಯಾವುದೇ ಅಧಿಕಾರವಿಲ್ಲವೆಂದು ಮಹತ್ವದ ತೀರ್ಪು ನೀಡಿದೆ. ಮಂಗಳೂರಿನ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಲಲಿತಾ ಕನ್ನೆಂಗಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ನೀಡಿದೆ. ಅರ್ಜಿಯನ್ನು […]

Continue Reading

ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ…, ವಿಜಯೇಂದ್ರ ಅವರೇ ಇರಲಪ್ಪೋ..

ಕರ್ನಾಟಕದಲ್ಲೂ ಬಿಹಾರ ಮಾಡೆಲ್, ಸಂಪುಟ ಪುನರ್ರಚನೆ ನಿಜಕ್ಕೂ ಕಷ್ಟ ✍️. ಆರ್.ಟಿ. ವಿಠ್ಠಲಮೂರ್ತಿ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯ ಬಿಜೆಪಿಯ ಹಲ ನಾಯಕರಿಗೆ ನಿರಾಸೆ ಉಂಟು ಮಾಡಿದೆ. ಹಾಗಂತ ಈ ಫಲಿತಾಂಶ, ಪಕ್ಷಕ್ಕೆ ವ್ಯತಿರಿಕ್ತವಾಗಿರಲಿ ಅಂತೇನೂ ಅವರು ಬಯಸಿರಲಿಲ್ಲ.ಆದರೆ, ಬಿಹಾರ ವಿಧಾನಸಭೆ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಒಂದಷ್ಟು ಬಲಿಷ್ಟವಾಗಲಿ ಅಂತ ಅವರು ನಿರೀಕ್ಷಿಸುತ್ತಿದ್ಧರು. ಕಾರಣ? ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಉತ್ತಮವಾದರೆ, ಆ ಮೂಲಕ ಅದಕ್ಕೆ ಶಕ್ತಿ ಬಂದರೆ ಕರ್ನಾಟಕದ ರಾಜಕಾರಣದಲ್ಲಿ […]

Continue Reading

ನವೆಂಬರ್ ಕ್ರಾಂತಿಗೆ ಬ್ರೇಕ್, ಬಿಹಾರ ಪಲಿತಾಂಶ ಹೈಕಮಾಂಡ್ ಶಕ್ತಿ ಕುಗ್ಗಿಸಿದೆ, ನಾಯಕತ್ವ ಚರ್ಚೆಗೆ ತಾತ್ಕಾಲಿಕ ತೆರೆ

ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಅನುಭವಿಸಿದ ಹೀನಾಯ ಸೋಲು, ದೆಹಲಿಯ ಹೈಕಮಾಂಡ್‌ನ ಶಕ್ತಿಯನ್ನು ಕುಗ್ಗಿಸಿದ್ದು, ಇದರ ನೇರ ಲಾಭ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊರೆತಿದೆ. ಈ ಮೂಲಕ ಅವರ ನಾಯಕತ್ವ ಇನ್ನಷ್ಟು ಬಲಿಷ್ಠಗೊಂಡು, ನಾಯಕತ್ವ ಚರ್ಚೆ ತಾತ್ಕಾಲಿಕ ತೆರೆ ಕಂಡಿದೆ. ಬಿಹಾರ ಚುನಾವಣೆ ಕೇವಲ ಒಂದು ರಾಜ್ಯದ ಫಲಿತಾಂಶವಾಗಿರಲಿಲ್ಲ, ಅದು ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವಕ್ಕೆ, ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿ ಅವರ ವರ್ಚಸ್ಸಿಗೆ ಒಂದು ಅಗ್ನಿಪರೀಕ್ಷೆಯಾಗಿತ್ತು. ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಅಬ್ಬರದ ಪ್ರಚಾರ ಕೈಗೊಂಡು, ಸರಣಿ […]

Continue Reading

ನಕಲಿ, ಅನರ್ಹ ವೈದ್ಯರನ್ನು ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ; ನೋಂದಣಿ ಇಲ್ಲದೆ ವೈದ್ಯ ವೃತ್ತಿ ಮಾಡುವವರಿಗೆ ಕಾದಿದೆ ಸಂಕಟ

ಮೊದಲ ಅಪರಾಧಕ್ಕೆ 25 ಸಾವಿರ ದಂಡ, 2ನೇ ಅಪರಾಧಕ್ಕೆ 2.5 ಲಕ್ಷ ರೂ. ಮತ್ತು ಒಂದು ವರ್ಷ ಜೈಲು, ನಂತರದ ಪ್ರತಿ ಅಪರಾಧಕ್ಕೆ 3ವರ್ಷಗಳವರೆಗೆ ಜೈಲು ಶಿಕ್ಷೆ 5 ಲಕ್ಷ ರೂ. ವರೆಗೆ ದಂಡ ನಕಲಿ ವೈದ್ಯರು ಮತ್ತು ಅನರ್ಹ ವೈದ್ಯರನ್ನು ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಕರ್ನಾಟಕ ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಸಿದ್ಧ, ಯುನಾನಿ ಮತ್ತು ಯೋಗ ವೈದ್ಯರ ನೋಂದಣಿ […]

Continue Reading

ಬೆಳಗಾವಿ: ಸೈಬರ್ ವಂಚಕರ ಜಾಲ ಪತ್ತೆ; ಅಮೇರಿಕದ ಬ್ಯಾಂಕಿಗೆ ಕನ್ನ, 33 ಮಂದಿ ಆರೋಪಿಗಳ ಬಂಧನ

ಅನಧಿಕೃತ ಕಾಲ್‌ ಸೆಂಟರ್‌ ಬಗ್ಗೆ ಸಂಶಯಗೊಂಡ ನಾಗರಿಕರೊಬ್ಬರು ನೀಡಿರುವ ಮಾಹಿತಿಯಿಂದ ಪತ್ತೆ ಅಮೆರಿಕಾ ದೇಶದ ನಾಗರಿಕರ ಮೊಬೈಲ್‌ ಹಾಗೂ ಬ್ಯಾಂಕ್‌ ಖಾತೆಗಳನ್ನು ಹ್ಯಾಕ್‌ ಮಾಡಿ ವಂಚಿಸುತ್ತಿದ್ದ ಕಾಲ್‌ ಸೆಂಟರ್‌ ಮೇಲೆ ದಾಳಿ ನಡೆಸಿದ ಬೆಳಗಾವಿ ಸೈಬರ್‌ ಅಪರಾಧ ವಿಭಾಗದ ಪೊಲೀಸರು 33 ಆರೋಪಿಗಳನ್ನು ಬಂಧಿಸಿ, ಹಲವಾರು ಲ್ಯಾಪ್‌ಟಾಪ್‌ ಹಾಗೂ ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಅಜಂ ನಗರದ ಸರ್ಕಲ್‌ ಬಳಿಯ ಕುಮಾರ್‌ ಹಾಲ್‌ನಲ್ಲಿ ಅನಧಿಕೃತ ಕಾಲ್‌ ಸೆಂಟರ್‌ ಕಾರ‍್ಯ ನಿರ್ವಹಿಸುತ್ತಿರುವ ಕುರಿತು ಆಂತರಿಕ ಭದ್ರತಾ ವಿಭಾಗಕ್ಕೆ ಮಾಹಿತಿ ಸಿಕ್ಕಿತ್ತು. […]

Continue Reading

ನಕಲಿ ದಾಖಲೆ ಸೃಷ್ಟಿಸಿ, ಗ್ರಾಹಕರಿಗೆ ವಂಚಿಸಿದ ಪ್ರಕರಣ; ಉಪ-ನೋಂದಣಾಧಿಕಾರಿ ಮತ್ತು ನವಯುಗ ಪ್ರಾಪರ್ಟಿಸ್ ಪಾಲುದಾರನ ಬಂಧನ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೋಂದಣಿ ಮಾಡಿಸಿ ನೂರಾರು ಗ್ರಾಹಕರಿಗೆ ವಂಚಿಸಿದ ಆರೋಪದಡಿ ಬೆಂಗಳೂರಿನ ಬಿಟಿಎಂ ಲೇಔಟ್‌ನ ಹಿಂದಿನ ಉಪ-ನೋಂದಣಾಧಿಕಾರಿ ಸೇರಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್‌ನ ಹಿಂದಿನ ಉಪ ನೋಂದಣಾಧಿಕಾರಿ ರೂಪಾ ಮತ್ತು ನವಯುಗ ಪ್ರಾಪರ್ಟಿಸ್ ಪಾಲುದಾರ ನವೀನ್‌ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು ಇತರೆ 38 ಮಂದಿ ಜತೆ ಸೇರಿಕೊಂಡು ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ ಬೆರೆಟೇನ ಅಗ್ರಹಾರ ಗ್ರಾಮದ ಸರ್ವೆ ನಂಬರ್‌ 5/2ರಲ್ಲಿರುವ 40ಕ್ಕೂ ಹೆಚ್ಚು ನಿವೇಶನಗಳನ್ನು […]

Continue Reading