ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದ ನಿರ್ಧಾರಕ್ಕೆ CSS ಆಕ್ರೋಶ, ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ; ಸರ್ಕಾರದ ನಡೆಗೆ CSS ಆಕ್ಷೇಪ

ಜಾತಿ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ; ಜಾತಿ ಸಂಘರ್ಷ ಬೇಡ; ಸಿಎಂಗೆ ವಕೀಲ ಶಾಜಿ ವರ್ಗೀಸ್ ಪತ್ರ ಕ್ರಿಶ್ಚಿಯನ್ ಸೇವಾ ಸಂಘ (CSS) ಪತ್ರದ ಸಂಚಲನ; ಹೀಗಿದೆ ಶಾಜಿ ಸಲಹೆ ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ […]

Continue Reading

ಯತ್ನಾಳ್ ಹೇಳಿಕೆ ಸನಾತನ ಹಿಂದುತ್ವದ ಅಪಾಯಕಾರಿ ಸಿದ್ಧಾಂತದ ದ್ಯೋತಕವಾಗಿದೆ: ಶೇಖರ್ ಲಾಯಿಲ

ನಾಡಹಬ್ಬ ಮೈಸೂರು ದಸರಾವನ್ನು ವಿವಾದಾತ್ಮಕ ವಿಷಯವನ್ನಾಗಿಸಿದ ಬಿಜೆಪಿ, ಸಂಘಪರಿವಾರಕ್ಕೆ ರಾಜ್ಯ ಹೈಕೋರ್ಟ್ ತೀರ್ಪು ತೀವ್ರ ಹಿನ್ನಡೆಯಾದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದೆ. ಚಾಮುಂಡೇಶ್ವರಿಗೆ ದಲಿತ ಮಹಿಳೆಯರು ಹೂವು ಹಾಕಲು ಅರ್ಹರಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ ಹೇಳಿಕೆ ಸನಾತನ ಹಿಂದುತ್ವದ ನಿಜವಾದ ರೂಪ. ಇದು ಹಿಂದೂ ಧರ್ಮದ ಅಸಮಾನತೆಯನ್ನು ಮತ್ತೊಮ್ಮೆ ಬಹಿರಂಗ ಪಡಿಸಿದಂತಾಗಿದೆ. ದಸರಾ ಉತ್ಸವವನ್ನು ನಾಡಿನ ಹಿರಿಯ ಸಾಹಿತಿ, ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದನ್ನು ರಾಜ್ಯ ಹೈಕೋರ್ಟ್ […]

Continue Reading

ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನ

ಆರೋಪಿಗಳಿಂದ ನಕಲಿ ದಾಖಲೆ ಪತ್ರ, ನಕಲಿ ದಾಖಲೆ ಸೃಷ್ಟಿಸಲು ಬಳಸುತ್ತಿದ್ದ ಉಪಕರಣಗಳ ಜಪ್ತಿ ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದವರಿಗೆ ನೆರವು ನೀಡಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನ ನಿವಾಸಿ ಭರಮಪ್ಪ, ಹೊಸಪೇಟೆಯ ಉಮೇಶ್ ಚೌಧರಿ ಹಾಗೂ ಕುಕನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ನಕಲಿ ದಾಖಲೆಗಳು ಹಾಗೂ ನಕಲಿ ದಾಖಲೆ […]

Continue Reading

ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಾಗಾಟ ಪತ್ತೆ. ಡೈವರ್ ಪೊಲೀಸರು ವಶ; ಕಾರಿನಲ್ಲಿದ್ದ ಮೂವರು ಆರೋಪಿಗಳು ಪರಾರಿ

ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ನಹೀಮ್ ಅಹ್ಮದ್ ಎಂಬಾತನನ್ನು ಗಿರಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನಹೀಮ್ ವಶವಿದ್ದ 22 ಕೆ.ಜಿ. ಗಾಂಜಾ, ರೂ. 2.90 ಸಾವಿರ ನಗದು, 88 ಗ್ರಾಂ ಚಿನ್ನಾಭರಣ, ಐದು ಮೊಬೈಲ್ ಫೋನ್‌ಗಳು, ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಮೂರು ಮಂದಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. 16-09-2025 ರಂದು ಸಂಜೆ 5ರ ಸುಮಾರಿಗೆ ಬನಶಂಕರಿ ಸಂಚಾರ ಠಾಣೆ ಪೊಲೀಸರು […]

Continue Reading

ಸರಕಾರಿ ಡಿಪ್ಲೋಮಾ ಕೋರ್ಸ್ ಗಳತ್ತ ಕಣ್ಣು ಹಾಯಿಸುತ್ತಿಲ್ಲ ವಿದ್ಯಾರ್ಥಿಗಳು

ಈ ವರ್ಷ 9000 ಕ್ಕೂ ಅಧಿಕ ಸೀಟುಗಳು ವಿದ್ಯಾರ್ಥಿಗಳಿಲ್ಲದೆ ಖಾಲಿ..ಖಾಲಿ ರಾಜ್ಯದ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಳೆದ ಮೂರು ವರ್ಷಗಳಿಂದ ಡಿಪ್ಲೋಮಾ ಕೋರ್ಸ್ ಗಳಿಗೆ ವರ್ಷದಿಂದ ವರ್ಷಕ್ಕೆ ಬೇಡಿಕೆ ಕಡಿಮೆಯಾಗುತ್ತಿದ್ದು, ಈ ವರ್ಷ 9,349 ಕ್ಕೂ ಹೆಚ್ಚು ಸೀಟುಗಳು ಖಾಲಿ ಉಳಿದಿವೆ. ಕಟ್ಟಡಗಳು, ಪ್ರಯೋಗಾಲಯಗಳು ಮತ್ತು ಪೂರ್ಣ ಪ್ರಮಾಣದ ಅಧ್ಯಾಪಕರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದಾಗಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳು ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ವಿಫಲವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯಾದ್ಯಂತ ಒಟ್ಟು 109 ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿದ್ದು, […]

Continue Reading

ಜಾತಿ ಗಣತಿ ಜೊತೆ ಒಂದು ಮಹತ್ವದ ಕೆಲಸವೂ ನಡೆಯಲಿದೆ. ಮೊಬೈಲ್, ಆಧಾರ್ ಕಾರ್ಡ್ ರೆಡಿ ಮಾಡಿಟ್ಟುಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರ ನಡೆಸಲುದ್ದೇಶಿಸಿರುವ ಜಾತಿ ಗಣತಿ ಜೊತೆ ಈ ಒಂದು ಮಹತ್ವದ ಕೆಲಸವೂ ನಡೆಯಲಿದೆ. ಅದಕ್ಕಾಗಿ ಮೊಬೈಲ್, ಆಧಾರ್ ಕಾರ್ಡ್ ರೆಡಿ ಮಾಡಿಟ್ಟುಕೊಳ್ಳಬೇಕು. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಹೀಗಾಗಿ ಸಮೀಕ್ಷೆಗೆ ಬರುವವರಿಗೆ ನಿಮ್ಮ ಜಾತಿ, ಶಿಕ್ಷಣ, ಸಾಮಾಜಿಕ ಸ್ಥಿತಿಗತಿಯ ಮಾಹಿತಿ […]

Continue Reading

ಅರಸು, ಕೃಷ್ಣ, ಯಡಿಯೂರಪ್ಪ ಅವರಿಗೆ ನಸೀಬು ಇತ್ತು

ಅಧಿಕಾರದ ಸನಿಹ ಬಂದಿದ್ದ ಅನಂತ್; ಅರಸರು ಮೇಲೆದ್ದು ನಿಂತ ಕತೆ, ರಾಚಯ್ಯ ಅವರಿಗೆ ಆಫರ್ ಬಂದಿತ್ತು ✍️. ಆರ್.ಟಿ.ವಿಠ್ಠಲಮೂರ್ತಿ ಇದು 1999 ರಲ್ಲಿ ನಡೆದ ಘಟನೆ.ಆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕ ರಾಜಶೇಖರ ಮೂರ್ತಿ ಅವರನ್ನು ತರಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ನಿರ್ಧರಿಸಿದ್ದರು.ಹೀಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕರನ್ನು ತರಬೇಕು ಅಂತ ಸೋನಿಯಾಗಾಂಧಿ ನಿರ್ಧರಿಸಲು ಹಲವು ಕಾರಣಗಳಿದ್ದವು.ಈ ಪೈಕಿ ಮುಖ್ಯವಾದುದೆಂದರೆ ಜನತಾದಳದಲ್ಲಿ ನಡೆದ ಬೆಳವಣಿಗೆ.ಅರ್ಥಾತ್,ಅ ಹೊತ್ತಿಗೆ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಜನತಾದಳ ಆಂತರಿಕ […]

Continue Reading

ಮಂಡ್ಯ ‘ಧರ್ಮ ದಂಗಲ್’ ಹಿಂದೆ ಲೀಥಿಯಂ ಗಣಿಗಾರಿಕೆ ವಾಸನೆ.!

ಸಂಘಪರಿವಾರ ತೋಡಿದ ಖೆಡ್ಡಾಕ್ಕೆ ಮಂಗಳೂರು ನಂತರ ಮಂಡ್ಯದ ಜನತೆ ಬಲಿಪಶು ಆಗುತ್ತರಾ.? ಕೆರೆಗೋಡಿನ ಹನುಮ ಧ್ವಜ ಗಲಾಟೆ, ನಾಗಮಂಗಲದ ಗಣೇಶನ ಗಲಾಟೆ, ಮದ್ದೂರಿನ ಗಣೇಶನ ಗಲಾಟೆ ಹೀಗೆ ಕಳೆದ 2-3 ವರ್ಷಗಳಿಂದ ಶಾಂತವಾಗಿದ್ದ ಸಕ್ಕರೆ ನಾಡು ಮಂಡ್ಯದಲ್ಲಿ ಕೋಮುದ್ವೇಷಗಳು, ಕೋಮು ಗಲಾಟೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಬಹಳ ದೊಡ್ಡ ಕಾರಣವೂ ಇದೆ. ಇತ್ತೀಚೆಗೆ ಕೇಂದ್ರ ಸರಕಾರದ ಅಧೀನದಲ್ಲಿರುವ ಡಿಪಾರ್ಟ್ ಮೆಂಟ್ ಆಫ್ ಅಟಾಮಿಕ್ ಎನರ್ಜಿ (DAF) ಎಂಬ ಸಂಸ್ಥೆಯು 2021 ರಲ್ಲಿ ನಡೆಸಿದ ಒಂದು ಸಂಶೋಧನೆಯಿಂದ ಇದರ ಹಿಂದಿನ […]

Continue Reading

ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆಗೆ ಅಸ್ತು, ಕನಿಷ್ಠ ಏಳು ವರ್ಷ ಪೂರೈಸಿದ ಸಿಬ್ಬಂದಿಗೆ ಅನುಮತಿ.

ಪೊಲೀಸ್‌ ಇಲಾಖೆ ಸಿಬ್ಬಂದಿಗಳನ್ನು ಒಂದು ಘಟಕದಿಂದ ಇನ್ನೊಂದು ಘಟಕಕ್ಕೆ ಕೋರಿಕೆ ಆಧಾರದ ಮೇಲೆ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಅಂತರ ಜಿಲ್ಲಾ ಘಟಕಗಳ ವರ್ಗಾವಣೆಗೆ ಇಲಾಖೆಯಿಂದ ರೂಪಿಸಲಾಗಿರುವ ಅಧಿಕೃತ ಆನ್‌ಲೈನ್‌ ಪೋರ್ಟಲ್‌ನಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಮಾತ್ರವೇ ಪರಿಗಣಿಸಬೇಕು. ಪ್ರತಿ ಘಟಕದಿಂದ ವರ್ಗಾವಣೆ ಆಗಿ ಹೋಗುವ ಸಿಬ್ಬಂದಿ ಸಂಖ್ಯೆ ಶೇ 15ಕ್ಕಿಂತ ಹೆಚ್ಚಿರಬಾರದು. ಸೇವಾ ಜ್ಯೇಷ್ಠತೆ ಆಧಾರದ ಮೇಲೆಯೇ ವರ್ಗಾವಣೆ ನಡೆಸಬೇಕು. ಎಲ್ಲ ವೃಂದದ ವರ್ಗಾವಣೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ನಿರಾಕ್ಷೇಪಣಾ ಪತ್ರ ಕಡ್ಡಾಯ ಆಗಿರುತ್ತದೆ ಎಂದು ಆದೇಶ […]

Continue Reading

ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಗಿಫ್ಟ್ ಎಂದ BJPಗೆ ಟಾಂಗ್.. ಬಸ್ ಕೊಡುಗೆಯ ಇತಿಹಾಸ ತೆರೆದಿಟ್ಟ KPCC

ಬೆಂಗಳೂರು: ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದು ಕಾಂಗ್ರೆಸ್ ಪಕ್ಷ ಟಾಂಗ್ ಕೊಟ್ಟಿದೆ. PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ 5250 ಎಲೆಕ್ಟ್ರಿಕ್ ಬಸ್ಸುಗಳನ್ನು‌ ಕೇಂದ್ರ ಸರ್ಕಾರ ಖರೀದಿಸಿ ನೀಡಿದೆ […]

Continue Reading