ಆದಿವಾಸಿ ಸಮುದಾಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ. ಆ. ಹ. ಸಮನ್ವಯ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯರಿಗೆ ಮನವಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯ ವಿದ್ಯುತ್, ರಸ್ತೆ ಸೇರಿದಂತೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು , ಆದಿವಾಸಿ ಸಮುದಾಯಗಳಾದ ಮಲೆಕುಡಿಯ, ಕೊರಗ , ಮರಾಠಿ ನಾಯ್ಕ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಬಾಂಜಾರು ಮಲೆಕುಡಿಯ ಕಾಲನಿಯ ಜಮೀನಿನ ಮೇಲೆ ರಾಜ್ಯ ಸರ್ಕಾರ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ […]

Continue Reading

ವಾಹನ ಅಪಘಾತ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ವಿಧಿವಶ

ಮೈಸೂರಿಗೆ ತೆರಳಿ, ಐಜಿಪಿಯವರನ್ನು ಬೇಟಿಯಾಗಿ ಹಾಸನಕ್ಕೆ ಮರಳುತ್ತಿದ್ದ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಿನ್ನೆ ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಹಾಸನ ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ […]

Continue Reading

ಅತನನ್ನು ಉಚ್ಛಾಟನೆ ಮಾಡಿ ಬಿಸಾಕಿ, ಅವನಿಂದ ಏನು ಆಗಲ್ಲ; ಆತ ಮುಖವಾಡ ಹಾಕಿಕೊಂಡಿರುವ ಹಿಂದುತ್ವದ ನಾಯಕ

ಬಸವನ ಗೌಡ ಪಾಟೇಲ್ ಯತ್ನಾಳ್ ವಿರುದ್ದ ಬಿಜೆಪಿ ನಾಯಕರು ಕೆಂಡಾಮಂಡಲ ರಾಜ್ಯ ಬಿಜೆಪಿಯ ಬಣ ಬಡಿದಾಟ ಇದೀಗ ಪೂರ್ತಿ ಬೀದಿಗೆ ಬಂದಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ, ಬಿಜೆಪಿ ಕಾರ್ಯಕರ್ತರೇ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಉಗಿದು ಆಚೆ ಹಾಕಿ ಎಂದು ಕೆಂಡಾಮಂಡಲಗೊಂಡರು. ಬಿ.ವೈ ವಿಜಯೇಂದ್ರ ಬಣದ ಎಂ.ಪಿ ರೇಣುಕಾಚಾರ್ಯ, ಬಿ.ಸಿ ಪಾಟೀಲ್ ಸೇರಿದಂತೆ ಹಲವು ನಾಯಕರು ಮೈಸೂರಿನ ಚಾಮುಂಡಿ […]

Continue Reading

ಶಿವಪುರಿ ದಲಿತ ಹತ್ಯೆ: ಬೋರ್ ವೆಲ್ ನಿಂದ ನೀರು ತುಂಬಿಸಿದ ಕಾರಣಕ್ಕೆ ಕ್ರೂರವಾಗಿ ಕೊಂದ ಮೇಲ್ಜಾತಿಯವರು.!

ಗ್ರಾಮದ ಸರಪಂಚ್, ಆತನ ಪತ್ನಿ ಸೇರಿದಂತೆ ಐವರ ಬಂಧನ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಬೋರ್ ವೆಲ್ ನಿಂದ ನೀರು ತುಂಬಿಸುವ ವಿವಾದಕ್ಕೆ ಸಂಬಂಧಿಸಿದಂತೆ 27 ವರ್ಷದ ಪರಿಶಿಷ್ಟ ಜಾತಿ (ಎಸ್ ಸಿ) ವ್ಯಕ್ತಿಯನ್ನು ಗ್ರಾಮದ ಸರಪಂಚ್ ಮತ್ತು ಸರಪಂಚ್ ನ ಪತ್ನಿ ಸೇರಿದಂತೆ ಕನಿಷ್ಠ ಐವರು ವ್ಯಕ್ತಿಗಳು ಹೊಡೆದು ಕೊಂದಿದ್ದಾರೆ. ರಾಜ್ಯದ ಗ್ವಾಲಿಯರ್ -ಚಂಬಲ್ ಪ್ರದೇಶದ ಸುಭಾಷ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದರ್ ಗಢ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಗ್ವಾಲಿಯರ್ ಜಿಲ್ಲೆಯ ನಾರದ್ […]

Continue Reading

ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್

ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಕಡಿವಾಣ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ ನೀಡಿದ್ದರಿಂದಾಗಿ, ರಾಜ್ಯಪಾಲರ ಅಧಿಕಾರ ಮೊಟಕಾಗಲಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸ್ […]

Continue Reading

ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ನಿಂದ ಸಚಿವ ಸಂಪುಟ ಭರ್ಜರಿ ಸರ್ಜರಿ.. ಅಸಮರ್ಥರು ಔಟ್..ಹೊಸಬರ ಎಂಟ್ರಿ

ಹರಿಪ್ರಸಾದ್, ಸವದಿಗೆ ಅದೃಷ್ಟ ಖುಲಾಯಿಸುತ್ತಾ..? ಉಪಸಮರ ನಡೆದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಬೇಕೆಂಬ ಕೂಗು ಕೇಳಿ ಬರುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಸೇರಿದಂತೆ ಪಕ್ಷದ ನಾಯಕರು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ಸಂಪುಟ ವಿಸ್ತರಿಸುವ ಮನಸ್ಸಿದ್ದರೂ ಮುಡಾ ನಿವೇಶನ ಹಂಚಿಕೆ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ವಕ್ಫ್ ಆಸ್ತಿ ವಿವಾದದಂತಹ ಹಲವು ಕಾರಣಗಳಿಂದ ಆ ಸಾಹಸಕ್ಕೆ ಸದ್ಯ ಕೈಹಾಕುವುದೇ ಬೇಡ ಎಂಬ ನಿಲುವಿಗೆ ಸಿಎಂ-ಡಿಸಿಎಂ ಬಂದಿದ್ದರು. […]

Continue Reading

ಉಪಸಮರದಲ್ಲಿ ಗೆದ್ದು ಬೀಗಿದ ಕೈ ಗೆ ಈಗ ವಿಧಾನಪರಿಷತ್ ನಾಮ ನಿರ್ದೇಶನದ್ದೇ ಚಿಂತೆ; ಆಕಾಂಕ್ಷಿಗಳಿಂದ ಲಾಬಿ ಜೋರು.!

ಉಪಸಮರದಲ್ಲಿ ಗೆದ್ದು ಬೀಗುತ್ತಿರುವ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಲ್ಲೀಗ ಮೇಲ್ಮನೆಯ ನಾಮನಿರ್ದೇಶನಕ್ಕೆ ಸಂಬಂಧಿಸಿದ ಚಟುವಟಿಕೆ ಗರಿಗೆದರಿದ್ದು, ತೆರವಾದ ಮತ್ತು ತೆರವಾಗಲಿರುವ ಸ್ಥಾನಗಳಿಗಾಗಿ ಆಕಾಂಕ್ಷಿಗಳಿಂದ ಲಾಬಿ ಬಹಳ ಚೋರಾಗಿ ನಡೆಯುತ್ತಿದೆ. ನೂತನ ಶಾಸಕ ಸಿ.ಪಿ. ಯೋಗೇಶ್ವರ್‌ ರಾಜೀನಾಮೆಯಿಂದ ತೆರವಾದ ಸ್ಥಾನ ಸೇರಿ 3 ಸ್ಥಾನಗಳು ಈಗಾಗಲೇ ಖಾಲಿಯಾಗಿದ್ದು, ಮತ್ತೊಂದು ಸ್ಥಾನ ಜನವರಿಯಲ್ಲಿ ತೆರವಾಗಲಿದೆ. ಇವುಗಳಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಪರಿಷತ್ ಆಕಾಂಕ್ಷಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹಿತ ಪ್ರಮುಖ ನಾಯಕರ […]

Continue Reading

ಭಾರಿ ವಿವಾದ ಸೃಷ್ಟಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಮೇಲಿನ ‘ಕತ್ತಲೆ ಜಗತ್ತು’ ಪುಸ್ತಕಕ್ಕೆ ಸ್ಟೇ

ತೀವ್ರ ಕುತೂಹಲ ಕೆರಳಿಸಿರುವ ಪ್ರವೀಣ್ ಕುಮಾರ್ ಮಾವಿನಕಾಡು ವಿರಚಿತ ‘ಕತ್ತಲೆ ಜಗತ್ತು’ ಕೃತಿ. ಟಿಕೆಟ್ ವಂಚಿತ ಪ್ರತಾಪ್ ಸಿಂಹ ಕುರಿತ ‘ಕತ್ತಲೆ ಜಗತ್ತು’ ಪುಸ್ತಕ ಬೆತ್ತಲೆ ಜಗತ್ತಿನ ನಿದ್ದೆಗೆಡಿಸಿದ ‘ಕತ್ತಲೆ ಜಗತ್ತು’ ಬೆಂಗಳೂರು: ಪತ್ರಕರ್ತ ಹಾಗೂ ‘ಬೆತ್ತಲೆ ಜಗತ್ತು’ ಅಂಕಣ ಖ್ಯಾತಿಯ ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಮೂಲಕ ಸಂಸತ್ತಿಗೆ ಆಯ್ಕೆಗೊಂಡಿದ್ದರಾದರೂ ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದರು. ಈ ಟಿಕೆಟ್ ವಂಚಿತರಾಗಲು ಕಾರಣ ಏನು ಎಂಬ ಕುತೂಹಲ […]

Continue Reading

ಸಿದ್ದು ಸರಕಾರ ಸೇಫ್.!ಕಾಂಗ್ರೆಸ್ ಏಟಿಗೆ ಜೆಡಿಎಸ್, ಬಿಜೆಪಿ ಚಿತ್ರಾನ್ನ..!

ಮುಡಾ ಹಗರಣ, ವಕ್ಫ್ ಗುಮ್ಮ ಕಸದ ಬುಟ್ಟಿಗೆ ಎಸೆದ ಮತದಾರರು.. ಮೂರನೇ ಬಾರಿಯೂ ಚಕ್ರವ್ಯೂಹ ಭೇದಿಸಲು ವಿಫಲನಾದ ದುರಂತ ನಾಯಕ.! ಬಹಳಷ್ಟು ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಬಿಜೆಪಿ, ಜೆಡಿಎಸ್ ಹೀನಾಯ ಸೋಲು ಕಂಡಿದೆ. ಮೂರರಲ್ಲೂ ಮೂರು ಸ್ಥಾನ ಕೈ ಗೆ ದಕ್ಕಿದರೆ, ಬಿಜೆಪಿ, ಜೆಡಿಎಸ್ ಶೂನ್ಯ ಕ್ಕಿಳಿದಿದೆ. ಚನ್ನಪಟ್ಟಣ ಉಪ ಚುನಾವಣೆ ಗೌಡರ ಕುಟುಂಬಕ್ಕೆ ಪ್ರತಿಷ್ಠೆಯ ಕ್ಷೇತ್ರವಾಗಿತ್ತು. ಕೇಂದ್ರ ಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೆಲುವಿಗೆ […]

Continue Reading

ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಅಬಕಾರಿ ಸಚಿವರ ತಲೆ ದಂಡ ಸಾಧ್ಯತೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಿಲ್ಲೊಂದು ಹಗರಣ ಬರುತ್ತಲೇ ಇದೆ. ವಾಲ್ಮೀಕಿ, ಮುಡಾ ಹಗರಣ, ಇದೀಗ ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಹಗರಣಗಳಿಂದ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುವಂತೆ ಮಾಡಿದೆ. ಹೀಗಾಗಿ ಸಚಿವರೊಬ್ಬರ ತಲೆದಂಡ ಖಚಿತ ಎನ್ನಲಾಗಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ರಾಜೀನಾಮೆ ಪಡೆಯಲು ಸಿದ್ಧತೆ ನಡೆಯುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ ವಲಯದಲ್ಲೇ ಕೇಳಿ ಬಂದಿದೆ.. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಹಗರಣದ ಆರೋಪ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿತ್ತು. […]

Continue Reading