ಅಕ್ರಮ ಮರಳುಗಾರಿಕೆಯಲ್ಲಿ ಸಿಕ್ಕಿ ಬಿದ್ದರೆ ಗೂಂಡಾ ಕಾಯ್ದೆ ಫಿಕ್ಸ್; ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ

ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಎಲ್ಲಾ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಕಟ್ಟುವಿಟ್ಟಿನ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ […]

Continue Reading

ಡಿಚ್ಚಿ ಹೊಡೆಯುತ್ತಿದೆ ರಾಹುಲ್ ಪಟ್ಟಿ?, ರೀಸರ್ಚ್ ಟೀಮಿನಿಂದ ಸಿಕ್ಕ ಫೀಡ್ ಬ್ಯಾಕ್; ಸೋನಿಯಾ ಸಿಗ್ನಲ್ ಏನು; ವಿಜಯೇಂದ್ರ ಟೀಮಿನ ಚಿಂತೆ

✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ವೆಬ್ ಎಕ್ಸ್ ಮೀಟಿಂಗು ನಡೆಸಿದ್ದಾರೆ. ಈ ಮೀಟಿಂಗಿನಲ್ಲಿ ಪಾಲ್ಗೊಂಡ ಎಲ್ಲ ರಾಜ್ಯಗಳ ಪಕ್ಷಾಧ್ಯಕ್ಷರು, ಪದಾಧಿಕಾರಿಗಳು ಮತ್ತಿತರ ಪ್ರಮುಖರ ಜತೆ ಚರ್ಚಿಸಿದ ಅವರು ಕಾಂಗ್ರೆಸ್ ವಿರುದ್ದ ಹೋರಾಡಲು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರ್ಕಾರದ ವಿರುದ್ದ ಹೋರಾಡುವ ಹೆಸರಿನಲ್ಲಿ ಸಂಸತ್ತಿಗೆ, ನಮ್ಮ ಪಕ್ಷದ ಕಚೇರಿಗೆ ಮುತ್ತಿಗೆ ಹಾಕುತ್ತಾರೆ. ಇಂತಹ ಸಂದರ್ಭದಲ್ಲಿ ನಾವೂ ಸುಮ್ಮನಿರಬಾರದು. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಚೇರಿಗಳಿಗೆ‌ ನಾವೂ ಮುತ್ತಿಗೆ […]

Continue Reading

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ದರೆ, ಎರಡನೇ ಮದುವೆ ಊರ್ಜಿತವಲ್ಲ: ಹೈಕೋರ್ಟ್

ಮುಸ್ಲಿಂ ವೈಯಕ್ತಿಕ ಕಾನೂನು ಆ ಸಮುದಾಯದ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ವಿವಾಹ ಮಾಡಿಕೊಳ್ಳಲು ಅವಕಾಶ ನೀಡುತ್ತದೆ. ಮುಸ್ಲಿಂ ವ್ಯಕ್ತಿಯ ಎರಡನೇ ಪತ್ನಿ ಬಳ್ಳಾರಿಯ ಮೀನಾಕುಮಾರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಧಾರವಾಡ ಪೀಠದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಏಕಸದಸ್ಯ ಪೀಠ ಮುಸ್ಲಿಮರ ಮದುವೆ ಸಂಬಂಧ ಈ ಆದೇಶ ನೀಡಿದೆ. ಹೈಕೋರ್ಟ್​ನಲ್ಲಿ ನಡೆದ ಅರ್ಜಿ ವಿಚಾರಣೆ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ‘ಮುಸ್ಲಿಂ ವೈಯಕ್ತಿಕ ಕಾನೂನು ಪುರುಷರು ಬಹು ವಿವಾಹ ಮಾಡಿಕೊಳ್ಳಲು ಅವಕಾಶ ನೀಡಿದೆ, ಆದರೂ ವೈಯಕ್ತಿಕ […]

Continue Reading

ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಪ್ರಕರಣ: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. 2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. […]

Continue Reading

ಜಿಬಿಎ ಅಧಿಕಾರಿಗಳಿಗೆ ಹಲ್ಲೆ, ಜೀವ ಬೆದರಿಕೆ ಪ್ರಕರಣ: ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆಗೆ ಚಿಂತನೆ

ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈತನ ವಿರುದ್ದ ಈಗಾಗಲೇ ಹಲವಾರು ಠಾಣೆಗಳಲ್ಲಿ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಹಫ್ತಾ ವಸೂಲಿ ಸೇರಿದಂತೆ ಹಲವು ಅಪರಾಧಿ ಚಟುವಟಿಕೆಗಳು ಭಾಗಿಯಾಗಿ, ಮಿತಿಮೀರಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನಿನಡಿ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಅಧಿಕಾರಿಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ […]

Continue Reading

ಅಪ್ರಾಪ್ತೆಯನ್ನು ದೇವಸ್ಥಾನಕ್ಕೆಂದು ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ, ರಾತ್ರಿಪೂರ್ತಿ ಅತ್ಯಾಚಾರ; ಮೂವರ ಬಂಧನ

ದೇವಸ್ಥಾನಕ್ಕೆಂದು ಅಪ್ರಾಪ್ತೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ , ರಾತ್ರಿ ಪೂರ್ತಿ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17ರ ರಾತ್ರಿ ಈ ನೀಚ ಕೃತ್ಯ ನಡೆದಿದ್ದು, ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಹೋಗೋಣಾ ಅಂತಾ ಅಪ್ರಾಪ್ತೆಯನ್ನು ಪುಸಲಾಯಿಸಿ ರೇಣುಕಾ ಕರೆ ತಂದಿದ್ದಳು. ಈ ವೇಳೆ ಆಟೋದಲ್ಲಿ ಬೇರೆಡೆಗೆ ರೇಣುಕಾ, ವೆಂಕಟರಮಣ ಮತ್ತು ನವೀನ್ […]

Continue Reading

ಮದುವೆಯಾಗುವುದಾಗಿ ನಂಬಿಸಿ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯ ಕೃಷ್ಣ ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ ಮೂಲದ ಅನಿಷಾ ಪಾಲನ್ನ ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕ ದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿ […]

Continue Reading

ಸಂಪುಟ ಸರ್ಕಸ್ಸು ಏಕೆ ಮುಗಿಯುತ್ತಿಲ್ಲ?; ಇನ್ನೆಷ್ಟು ದಿನ ಸಂಪುಟ ಸರ್ಕಸ್?

ಮೋದಿ ಸಂಪುಟಕ್ಕೆ ಯಾರು ಸೇರುತ್ತಾರೆ.?, ಬಿಜೆಪಿ-ಜೆಡಿಎಸ್ ಮೈತ್ರಿಯ ಕತೆ? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ಶನಿವಾರ ರಾಜ್ಯ ಬಿಜೆಪಿ ಪಾಳಯದಲ್ಲಿ ಕುತೂಹಲಕಾರಿ ಸುದ್ದಿಯೊಂದು ತೇಲಿ ಬಂತು. ಕರ್ನಾಟಕದಲ್ಲಿ ಪಕ್ಷದ ವಿದ್ಯಮಾನಗಳನ್ನು ಗಮನಿಸಲು ವರಿಷ್ಟರು ವೀಕ್ಷಕರ ತಂಡವನ್ನು ಕಳಿಸಲು ನಿರ್ಧರಿಸಿದ್ದಾರೆ ಎಂಬುದು ಈ ಸುದ್ದಿ. ಜುಲೈ ಇಪ್ಪತ್ತೈದರ ಹೊತ್ತಿಗೆ ಕರ್ನಾಟಕಕ್ಕೆ ಆಗಮಿಸಲಿರುವ ಈ ವೀಕ್ಷಕರ ಪಡೆ ಇಲ್ಲಿ ವಿವಿಧ ಹಂತದ ನಾಯಕರ ಅಭಿಪ್ರಾಯ ಸಂಗ್ರಹಿಸಿ, ಆನಂತರ ದಿಲ್ಲಿಗೆ ಮರಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರಿಗೆ ವರದಿ ಸಲ್ಲಿಸಲಿದೆ […]

Continue Reading

ರಾಹುಲ್‌ ಅನುಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ: ಸೋಮವಾರ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ; ಹೊಸ ಮುಖಗಳಿಗೆ ಅವಕಾಶ

ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಜತೆಗೆ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್‌ ಅವರ ಸಭೆ ನಡೆಸಲಿದ್ದಾರೆ. ಈ ಸಭೆಯ ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ನಾಯಕರಿಗೆ ನೀಡುವ […]

Continue Reading

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು

ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ […]

Continue Reading