ಕಿರುತೆರೆ ನಟಿಯ ವಂಚನೆ ಬಯಲು; ಶ್ರೀಮಂತ ಯುವಕರೇ ಈಕೆಯ ಟಾರ್ಗೆಟ್, ಹನಿಟ್ರ್ಯಾಪ್ ಶಂಕೆ, ನಟಿಯ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಉದ್ಯಮಿಗಳನ್ನು ಸಂಪರ್ಕಿಸಿ, ಆಭರಣ ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈಕೆಯ ಮಾಯದ ಮಾತುಗಳಿಗೆ ಮರುಳಾಗಿ ಲಕ್ಷ ರೂಪಾಯಿ ಕಳೆದುಕೊಂಡ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಈಕೆಯನ್ನು ಪೊಲೀಸರು ಬಂಧಿಸಿರುತ್ತಾರೆ. ಈಕೆ ಚಾಲಾಕಿ ವಂಚಕಿ. ತುಂಬಾ ಚಾಣಾಕ್ಷತನದಿಂದ ವಂಚನೆ ಮಾಡುತ್ತಿದ್ದಳು. ಇನ್‌ಸ್ಟಾಗ್ರಾಮ್, ಫೇಸ್‌ಬುಕ್‌ಗಳ ಮೂಲಕ ತಾನು ಸೀರಿಯಲ್ ನಟಿ ಎಂದು ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಚಾಟಿಂಗ್ ಮೂಲಕ […]

Continue Reading

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಮುತ್ತಜ್ಜನ ಕಾಲದ ಅಂತರಾಜ್ಯ ಸೇತುವೆಗಳು.

ತಡೆಬೇಲಿ ಹಾಗೂ ಹೊಸ ಸೇತುವೆಗೆ ಆಗ್ರಹಿಸಿ ಪೆರುವಾಯಿ ನಾಗರಿಕರಿಂದ ಪ್ರತಿಭಟನೆ ಪೆರುವಾಯಿ ಜಂಕ್ಷನ್ ಬಳಿಯಿಂದ 500 ಮೀಟರ್ ದೂರದಲ್ಲಿರುವ ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಪೇರಡ್ಕದಲ್ಲಿರುವ ಸೇತುವೆ ಹಾಗೂ ಪೆರುವಾಯಿ ಜಂಕ್ಷನ್ ನಿಂದ 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯಲ್ಲಿರುವ ಸೇತುವೆ ಈ ಭಾಗದ ಜನರ ಜೀವನಾಡಿಯಾಗಿದೆ. ಪ್ರತಿದಿನ ಸಾವಿರಾರು ವಾಹನಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು, ಕೃಷಿಕರು ಹಾಗೂ ಸಾರ್ವಜನಿಕರು ಈ ಮಾರ್ಗಗಳನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಈ ಸೇತುವೆಗಳು ಇಂದು […]

Continue Reading

ಅಮಿತ್ ಶಾ ಚಿಂತೆಗೆ ಇಷ್ಟೆಲ್ಲ ಕಾರಣಗಳಿವೆ. ಡಿಕೆಗೆ ಕೌಂಟರ್ ಯಾರು?

ಖಾತೆ ಬಗ್ಗೆ ಕ್ಯಾತೆ ತೆಗೆದ ಹಿರಿಯ ಸಚಿವ, ಕನಲಿ ಹೋದ ರಾಹುಲ್, ಟ್ರಂಫ್ ವಿರುದ್ದ ಸ್ಪರ್ಧಿಸಿ. ✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕದಲ್ಲಿ ನಡೆದ ಬೆಳವಣಿಗೆಯಿಂದ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪ್ ಸೆಟ್ ಆಗಿದ್ದಾರಂತೆ. ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಹಲ ಶಾಸಕರು ಕಾಂಗ್ರೆಸ್ ಗೆ ಮತ ಹಾಕಿದ್ದು ಇದಕ್ಕೆ ಮುಖ್ಯ ಕಾರಣ. ಅಂದ ಹಾಗೆ ಅವರು ಅಪ್ಚಸೆಟ್ ಅಗಲು ಪರಿಷತ್ ಚುನಾವಣೆಯಲ್ಲಿ ತಮ್ಮ ಪಕ್ಷದವರು […]

Continue Reading

ಬೆಂಗಳೂರು: ಡಿಕೆಶಿ ರಣತಂತ್ರಕ್ಕೆ ಬೆಚ್ಚಿಬಿದ್ದ ಬಿಜೆಪಿ.! 2028 ಕ್ಕೆ ಬಿಜೆಪಿ ಧೂಳೀಪಟ ಆಗುತ್ತಾ..?

ರಾಷ್ಟ್ರರಾಜಕರಣದ ಚಾಣಕ್ಯ ಅಮಿತ್ ಷಾ ತಂತ್ರಗಾರಿಕೆಗೆ ತಿರುಮಂತ್ರ ಕೊಟ್ಟ ಡಿಕೆಸಿ.! ಒನ್ಸ್ ಎಗೈನ್.. ಪ್ರಿಯಾಂಕ ಗಾಂಧಿ ಕೊಟ್ಟ ಚಮಕ್ ವರ್ಕ್ ಔಟ್ ಆಗಿದೆ. 2028 ರವರೆಗೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಆಗಿ ಉಳಿಸಿಕೊಂಡಿದ್ದರೆ ತಮಿಳ್ನಾಡು ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಲಿದೆ. ರಾಜಕಾರಣದಲ್ಲಿ ಮಾಸ್ ಲೀಡರ್ ಒಂದೇ ಗೆಲುವಿಗೆ ಅಸ್ತ್ರವಲ್ಲ. ತಂತ್ರ , ಮಂತ್ರ, ಕುತಂತ್ರ ಮಾಡಿದರಷ್ಟೇ ಗೆಲುವು ಸಾಧ್ಯ. ಅಂತಹ ರಣತಂತ್ರ ಮಾಡುವ ಚಾಕಚಕ್ಯತೆ ಡಿಕೆಶಿಗಿದೆ. ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಸೋನಿಯಾ, ರಾಹುಲ್ […]

Continue Reading

ಹೋಂಸ್ಟೇಗಳ ನಿರ್ವಹಣೆ, ಮೇಲ್ವಿಚಾರಣೆಗೆ ಸಮಗ್ರವಾದ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಹೋಂಸ್ಟೇಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ನಡೆಸಲು ಯಾವುದೇ ನಿರ್ದಿಷ್ಟ ಅಥವಾ ಸಮಗ್ರ ಕಾನೂನು ಚೌಕಟ್ಟು ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸಮಗ್ರ ನೀತಿಯನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಪೊನ್ನಂಪೇಟೆಯ ಕುಟ್ಟಾ ಗ್ರಾಮದ ಹೋಂಸ್ಟೇ ಒಂದರ ಮಾಲೀಕ ಪಿ.ಎ. ಪೊನ್ನಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಹೋಂಸ್ಟೇಗಳ ಕಾರ್ಯಾಚರಣೆಯ ವೈವಿಧ್ಯತೆ ಮತ್ತು ಅಲ್ಲಿ ಉದ್ಭವಿಸುತ್ತಿರುವ ಕಾನೂನು ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ನಿಯಮಾವಳಿಗಳನ್ನು […]

Continue Reading

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ: ಸಿ.ಎಂ, ಡಿ.ಕೆ. ಶಿವಕುಮಾರ್‌ಗೆ ವಿಶ್ವದ 61 ಕನ್ನಡ ಸಂಘಟನೆಗಳಿಂದ ಅಭಿನಂದನೆ

ಕಳೆದ ಡಿಸೆಂಬರ್ 2025 ರಲ್ಲಿ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ 30 ದೇಶಗಳ 43 ಅನಿವಾಸಿ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಸಿಎಂ, ಡಿಸಿಎಂ ಭೇಟಿ ನೀಡಿ ಇಟ್ಟ ಬೇಡಿಕೆಗೆಯನ್ನು ಈಡೇರಿಸಿ, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಶ್ವದಾದ್ಯಂತದ ಅರವತ್ತಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಅಭಿನಂದಿಸಿವೆ. ಜೂನ್ 15ರಂದು ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ನಡೆದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ ವಿವಿಧ ದೇಶಗಳ ಕನ್ನಡ […]

Continue Reading

ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರದ ಅಧಿಕೃತ ಸುತ್ತೋಲೆ

ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ರಾಜ್ಯದ ಗ್ರಾಮೀಣ ಭಾಗದ ಜನರ ಜೀವನಮಟ್ಟವನ್ನು ಸುಧಾರಿಸಲು ಮತ್ತು ನಗರ ಪ್ರದೇಶದ ಮಾದರಿಯಲ್ಲೇ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒದಗಿಸಬೇಕಾದ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 61.43 ರಷ್ಟು ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಅವರಿಗೆ ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು […]

Continue Reading

ಟೇಕ್ ಆಫ್ ಆಗುತ್ತಿದೆ ‘ಡಿಕೆ’ ಫ್ಲೈಟ್; ರಾಹುಲ್ ಗಾಂಧಿ ಚೀಟಿ ರಹಸ್ಯ.!, ಅಹಿಂದ ಪಿಲ್ಲರುಗಳೇ ಇಲ್ಲ

ಸಂಪುಟಕ್ಕೆ ಸೇರುವವರು ಯಾರು?; ಸ್ಪೀಕರ್ ಹುದ್ದೆಗೆ ಹೆಚ್ಕೆ ಇಲ್ಲವೇ ದಿನೇಶ್? ✍️.ಅರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಂದು ಚೀಟಿ ಹೊರತೆಗೆದರಂತೆ. ಅವರೇನು ಮಾಡುತ್ತಾರೆ ಅಂತ ಮುಖ್ಯಮಂತ್ರಿಗಳು ನೋಡುತ್ತಿದ್ದಂತೆಯೇ ಅವರ ಕೈಗೆ ರಾಹುಲ್ ಗಾಂಧಿ ಈ ಚೀಟಿಯನ್ನು ಕೊಟ್ಟಿದ್ದಾರೆ. ಅವರು ಕೊಟ್ಟ ಚೀಟಿಯನ್ನು ಡಿ.ಕೆ.ಶಿವಕುಮಾರ್ ಅವರು ಬಿಚ್ಚಿ ನೋಡಿದರೆ ಅದರಲ್ಲಿ ಕೃಷ್ಣ ಭೈರೇಗೌಡರ ಹೆಸರು ಕಾಣಿಸಿದೆ.ಅದನ್ನು ಅವರು ನೋಡುತ್ತಿದ್ದಂತೆಯೇ ರಾಹುಲ್ ಗಾಂಧಿ […]

Continue Reading

ಕೋಕಾ ಪ್ರಕರಣ: ಬಂಧಿತ ಆರೋಪಿಗಳಿಗೆ ಮೈಸೂರಿನ KCOCA ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು

ಕೋಕಾ ಪ್ರಕರಣದಲ್ಲಿ ಬಂದಿತರಾಗಿದ್ದ ಶ್ಯಾಮ್ ಸುಂದರ್ ಶೆಟ್ಟಿ, ಸುವಿನ್ ಕಾಂಚನ್ @ ಮುನ್ನ ಹಾಗೂ ಅಕ್ಷಯ್ ಎಂಬುವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಮೈಸೂರಿನ KCOCA ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ದಿನಾಂಕ 01-01-2026 ರಂದು ಸಂಜೆ ಸುಮಾರು 5:30ರ ಸಮಯಕ್ಕೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಸಹಜುದ್ದೀನ್ ಆತನ ತಂದೆಯೊಂದಿಗೆ ಜಗ್ಗು ಶೆಟ್ಟಿ ಎಂಬವರ ಕೊಟ್ಟಿಗೆಯಲ್ಲಿ ಸಾಕುತ್ತಿದ್ದ ಕಂಬಳದ ಕೋಣಗಳ ಚಕಾರಿ ಮಾಡುತ್ತಿರುವ […]

Continue Reading

ಬಿಜೆಪಿ ಶಾಸಕ ಶರಣು ಸಲಗಾರ್ ಗೆ ಜಾಮೀನು ರಹಿತ ವಾರಂಟ್ ಜಾರಿ; ಬಂಧನ ಭೀತಿಯಿಂದ ಶಾಸಕ ಪರಾರಿ

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ್ ಎಂಬವರಿಗೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಾಮೀನು ರಹಿತ ವಾರಂಟ್ ಹೊರಬೀಳುತ್ತಿದ್ದಂತೆ ಬಿಜೆಪಿ ಶಾಸಕ ಶರಣು ಸಲಗಾರ್ ಬಂಧನದ ಭೀತಿಯಿಂದ ದಿಢೀರ್ ನಾಪತ್ತೆಯಾಗಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಶರಣು ಸಲಗಾರ್ ಅಲ್ಲಿಗೆ ತೆರಳಿ ಗಲಾಟೆ ಎಬ್ಬಿಸಿದ್ದರು. ಅ ವೇಳೆ ಸ್ಥಳದಲ್ಲಿ […]

Continue Reading