ಆರ್ ಟಿ ಐ ಕಾಯಿದೆಯಿಂದ ದೇಗುಲ ಹೊರಗಿಡಲು ಸಾಧ್ಯವಿಲ್ಲ: ಹೈಕೋರ್ಟ್

ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೇಳುವುದು ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ ಬೆಂಗಳೂರು: ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯಿದೆಯಿಂದ ಹೊರಗಿಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಅನಗತ್ಯ ಅರ್ಜಿಗಳನ್ನು ಸಲ್ಲಿಸಿ ಅರ್ಚಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ […]

Continue Reading

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಮತ್ತು ಸಹಚರರಿಗೆ 6 ದಿನಗಳ ಪೊಲೀಸ್ ಕಸ್ಟಡಿ

ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿಯ ಹತ್ಯೆ, ಅಪಹರಣ ಮಾಡಿ ಕರೆದುಕೊಂಡು ಹೋಗಿದ್ದು,. ಕೊಲೆಯಾದ ಸ್ಥಳ, ಶವ ಎಸೆದ ಜಾಗದಲ್ಲಿ ಮಹಜರು ನಡೆಸಬೇಕಿದೆ. ಮೊಬೈಲ್ ಡೇಟಾ ಸಂಗ್ರಹಿಸಬೇಕು. ಆಯುಧ ಜಪ್ತಿ ಮಾಡಬೇಕಿದೆ. […]

Continue Reading

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಚಿತ್ರನಟ ದರ್ಶನ್ ಬಂಧನ

ಕನ್ನಡ ಚಿತ್ರರಂಗದ ನಾಯಕನಟ ದರ್ಶನ್ ಅವರನ್ನು ಅವರ ಫಾರಂ ಹೌಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ. ಕೊಲೆ ಪ್ರಕರಣವೊಂದರಲ್ಲಿ ದರ್ಶನ್ ಅವರ ಆರೋಪ ಆಗಿರುವ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ. ಮೆಡಿಕಲ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆಗೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ. ದರ್ಶನ್ ಅವರ ಆಪ್ತ ಗೆಳತಿಯಾಗಿರುವ ಹಾಗೂ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ವಿವಾದಕ್ಕೆ ಗುರಿಯಾದ ಪವಿತ್ರಾ ಗೌಡ […]

Continue Reading

ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆಯ ಲಕ್ಷಣ. ಸಿ.ಟಿ. ರವಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನ, ಆರ್‌.ಅಶೋಕ್‌ಗೆ ಬಿಜೆಪಿಯ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ಸಾಧ್ಯತೆ.

ಕೇಂದ್ರ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲೂ ಸಮೀಕರಣಗಳು ಬದಲಾಗುವ ಲಕ್ಷಣ ಸೃಷ್ಠಿಯಾಗಿದೆ. ಸಿ.ಟಿ. ರವಿ ವಿಧಾನ ಪರಿಷತ್‌ ವಿಪಕ್ಷ ನಾಯಕರನ್ನಾಗಿಸುವ ಸಾಧ್ಯತೆ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆಯುತ್ತಿದ್ದು, ಆರ್‌.ಅಶೋಕ್‌ಗೆ ಬಿಜೆಪಿಯ ರಾಷ್ಟ್ರೀಯ ಮಟ್ಟದ ಜವಾಬ್ದಾರಿ ಸಿಗಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಬದಲಾಗಲಿದ್ದಾರೆ. ಸಹಜವಾಗಿಯೇ ಈ ಪಟ್ಟಿಯಲ್ಲಿ ಕರ್ನಾಟಕಕ್ಕೂ ಒಂದಿಷ್ಟು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದ್ದು, ಹಿರಿತನ ಆಧರಿಸಿ ಆರ್‌. […]

Continue Reading

ನಕಲಿ ದಾಖಲೆ ಸೃಷ್ಟಿ, ವಂಚನೆ, ದಾಖಲೆ ತಿದ್ದುವ ಮೂಲಕ ಜನಸಾಮಾನ್ಯರನ್ನು ವಂಚಿಸುವ ಅಕ್ರಮಗಳಿಗೆ ಕಡಿವಾಣ

ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಪ್ರಕ್ರಿಯೆಗೆ ವೇಗ ನೀಡಿದ ಸರಕಾರ ಇನ್ಮು ಮುಂದಕ್ಕೆ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳು ಆನ್ ಲೈನ್ ನಲ್ಲಿ ಸಿಗಲಿದ್ದು, ಇದರಿಂದಾಗಿ ನಕಲಿ ದಾಖಲೆ ಸೃಷ್ಟಿ ವಂಚನೆಗೆ ಸಂಪೂರ್ಣ ಕಡಿವಾಣ ಬೀಳಲಿದೆ. ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಪ್ರಕ್ರಿಯೆಗೆ ವೇಗ ಪಡೆದುಕೊಂಡಿದ್ದು, ನಕಲಿ ದಾಖಲೆ ಸೃಷ್ಟಿ ಮತ್ತು ದಾಖಲೆ ತಿದ್ದುವ ಮೂಲಕ ಜನಸಾಮಾನ್ಯರನ್ನು ವಂಚಿಸುವ ಅಕ್ರಮಗಳಿಗೆ ಕಡಿವಾಣ ಹಾಕಲು, ಕಂದಾಯ ದಾಖಲೆಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತೆ ಮಾಡಲು ಭೂ […]

Continue Reading

ಅಂತರ ಜಿಲ್ಲಾ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿ ವರ್ಷಗಳ ಕಾಲ ಕಳೆದರೂ ಪೊಲೀಸ್ ಕಾನ್‌ಸ್ಟೆಬಲ್‌ ಗಳಿಗೆ ವರ್ಗಾವಣೆ ಭಾಗ್ಯ ದೊರೆತಿಲ್ಲ.

ಸ್ವಂತ ಊರಿಗೆ ತೆರಳಲು ಬಡ್ತಿಯನ್ನೇ ತ್ಯಾಗ ಮಾಡಲು ಕಾನ್ಸ್ಟೇಬಲ್ ಗಳು ಸಿದ್ದರಿದ್ದಾರೆ. ಅಂತರ ಜಿಲ್ಲಾ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿ ವರ್ಷಗಳ ಕಾಲ ಕಳೆದಿದ್ದರೂ ಪೊಲೀಸ್ ಕಾನ್‌ಸ್ಟೆಬಲ್‌ ಗಳಿಗೆ ವರ್ಗಾವಣೆ ಭಾಗ್ಯ ದೊರೆತಿಲ್ಲ.ಪೊಲೀಸ್‌ ಇಲಾಖೆ ಆರಂಭಿಸಿದ ಆನ್‌ಲೈನ್‌ ಪೋರ್ಟಲ್‌ನಲ್ಲಿ ರಾಜ್ಯದ 3,286 ಮಂದಿ ಪರಸ್ಪರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಯಾರಿಗೂ ವರ್ಗಾವಣೆ ಪತ್ರ ಕೈಸೇರಿಲ್ಲ. ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಳೆದ ಮೇ 31ರಂದು ಪೊಲೀಸ್‌ ಮಹಾನಿರ್ದೇಶಕರಿಗೆ ಗೃಹ ಸಚಿವರು ಪತ್ರ ಬರೆದಿದ್ದರು. […]

Continue Reading

KSRTC ಪ್ರಯಾಣಿಕರಿಗೆ ಬಿಗ್ ಶಾಕ್.! ದರ ಏರಿಕೆಗೆ ಚಿಂತನೆ.

ಲೋಕಸಭೆ ಚುನಾವಣೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಬಿಗ್‌ ಶಾಕ್‌ ನೀಡಿದೆ. ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.ವರ್ಷದಿಂದ ವರ್ಷಕ್ಕೆ ಡೀಸೆಲ್‌, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ […]

Continue Reading

ಸಚಿವ ಬಿ.ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ರಾಜ್ಯ ಸರ್ಕಾರದ ಮತ್ತೆ ಎರಡು ವಿಕೆಟ್ ಪತನವಾಗುವ ಸಾಧ್ಯತೆ: ಚಲುವಾದಿ‌ ನಾರಾಯಣಸ್ವಾಮಿ

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯ ಹಗರಣ ಮತ್ತು ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಸಂಬಂಧ ಈಗಾಗಲೇ ಸಚಿವ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಮತ್ತೆ ಎರಡು ವಿಕೆಟ್ ಪತನವಾಗುವ ಸಾಧ್ಯತೆ ಇದೆ. ಎಂದು ಪರಿಷತ್ ಸದಸ್ಯ ಚಲುವಾದಿ‌ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿರುತ್ತಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈ ಹಗರಣದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ಬಸವನಗೌಡ ದದ್ದಲ್ ಇಬ್ಬರ ಪಾಲು ಇದೆ ಎಂದು ಆರೋಪಿಸಿದ್ದಾರೆ. ಪ್ರಕರಣದ […]

Continue Reading

ಪ್ರಯಾಣಿಕರ ಊಟದ ಹೆಸರಲ್ಲಿ ಭ್ರಷ್ಟಾಚಾರ; ‘ಶಕ್ತಿ’ ಗ್ಯಾರೆಂಟಿಯಿಂದಾಗಿ KSRTCಗೆ ಭಿಕ್ಷಾಟನೆ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ KSRTC ನಿಗಮವು ಕಾಂಗ್ರೆಸ್ ಪಕ್ಷದ ‘ಶಕ್ತಿ’ ಗ್ಯಾರೆಂಟಿ ಯೋಜನೆಯಿಂದಾಗಿ ಆರ್ಥಿಕವಾಗಿ ಬಲಗೊಂಡಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳುತ್ತಲೇ ಇದ್ದಾರೆ. ಪ್ರಧಾನಿಯವರ ಟೀಕೆಗೂ ಸಚಿವರು ಎದಿರೇಟು ನೀಡಿದ್ದರು. ಆದರೆ ನಿಗಮದ ಕಾರ್ಯವೈಖರಿಯನ್ನು ಗಮನಿಸಿದರೆ ನಿಗಮವು ನಷ್ಟದ ಅಂಚಿನಲ್ಲಿದೆಯೇ ಎಂಬ ಪ್ರಶ್ನೆ ಕಾಡುವಂತಿದೆ. ಅದಕ್ಕೆ ಸಾಕ್ಷಿ ಎಂಬಂತಿದೆ ಈ ಬೆಳವಣಿಗೆ. ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC)ಯನ್ನು […]

Continue Reading

ಕತ್ತಲೆಯಲ್ಲಿ ಮುಳುಗಿದ ಹೊಯ್ಸಳ ಕ್ರೀಡಾಂಗಣ; ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ

✍️. ಸಲಾವುದ್ದೀನ್ ಎಂ.ಎ ಮೂಡಿಗೆರೆ: ತಾಲೂಕಿಗೆ ಇರುವ ಏಕೈಕ ತಾಲೂಕು ಕ್ರೀಡಾಂಗಣ ಹೊಯ್ಸಳ ಕ್ರೀಡಾಂಗಣ ವಾಗಿದ್ದು ಎಲ್ಲಾ ರೀತಿಯ ಸರ್ಕಾರಿ ಕಾರ್ಯಕ್ರಮಗಳು ಗಾಂಧಿ ಜಯಂತಿ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಸೇರಿದಂತೆ ಕ್ರೀಡೆಗಳು ನಡೆಯುವ ಏಕೈಕ ಕ್ರೀಡಾಂಗಣ ವಾಗಿದೆ. ಬೆಳಗ್ಗೆ ಮತ್ತು ಸಂಜೆ ವಾಯುವಿಹಾರ, ಪುಟ್ ಬಾಲ್, ಕ್ರಿಕೇಟ್ ಮುಂತಾದ ಕ್ರೀಡೆಗಳಲ್ಲಿ ತೊಡಗಿಕೊಳ್ಳುವ ಸಾರ್ವಜನಿಕರು ಮತ್ತು ಮಕ್ಕಳು. ಆದರೇ ಅಧಿಕಾರಿಗಳ ಮತ್ತು ಜನ ಪ್ರತಿನಿಧಿಗಳ ದಿವ್ಯ ನಿರ್ಲಕ್ಷದ ಪರಿಣಾಮ ಇದ್ದೊಂದು ಹೈಮಾಸ್ಕ್ ದೀಪವನ್ನು ಕಿತ್ತುಹಾಕಿ ವರ್ಷಗಳೇ ಕಳೆದರೂ […]

Continue Reading