ಚುನಾವಣೆ ಮುಗಿದ ಮೇಲೆ ಶುರುವಾಗಿದೆ ರಾಜಕೀಯ ಲೆಕ್ಕಾಚಾರ; ಬಿಜೆಪಿ-ಕಾಂಗ್ರೆಸ್ ಜಯದ ವಿಶ್ವಾಸ ಎಷ್ಟು.?

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮೂರು ಪಕ್ಷದಲ್ಲೂ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್‌ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಆರಂಭದಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಗೆ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಟ್‌ ಟಾರ್ಗೆಟ್‌ ನೀಡಿತ್ತು. ಅದರಂತೆ ಕಾಂಗ್ರೆಸ್‌ ಘಟಾನುಘಟಿ ನಾಯಕರು ಅಬ್ಬರ ಪ್ರಚಾರವನ್ನು […]

Continue Reading

ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಡೆದುಕೊಂಡರೆ ಕಠಿಣ ಕ್ರಮದ ಎಚ್ಚರಿಕೆ: ಮಧು ಬಂಗಾರಪ್ಪ

ಖಾಸಗಿ ಶಾಲೆಗಳಲ್ಲಿ ಡೊನೇಷನ್ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ತೆಗೆದುಕೊಂಡಿದ್ದು ಗಮನಕ್ಕೆ ಬಂದರೆ ಅಥವಾ ದಾಖಲೆ ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಮಾಡುವುದು ನಮ್ಮ ಕೈಯಲ್ಲಿಲ್ಲ. ಅದಕ್ಕೆ ಕ್ಯಾಂಪ್ಸ್(ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ) ಇರುತ್ತದೆ. ಅಲ್ಲಿ ತೆಗೆದುಕೊಂಡ ತೀರ್ಮಾನದಂತೆ ಶುಲ್ಕ ಪಡೆಯಲು ಅವಕಾಶವಿದೆ. ಅದರಲ್ಲಿ ಶಿಕ್ಷಣ ಇಲಾಖೆ ಮೂಗು ತೂರಿಸಲು ಸಾಧ್ಯವಿಲ್ಲ. ಆದರೆ ಶುಲ್ಕ ಸಂಗ್ರಹ ನೆಪದಲ್ಲಿ ಡೊನೇಷನ್ ಪಡೆಯುವುದು ತಪ್ಪು […]

Continue Reading

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ತನಿಖಾ ತಂಡದ ಅಧಿಕಾರಿಗಳಿಗೆ ಬಿ.ಕೆ ಸಿಂಗ್ ಖಡಕ್ ವಾರ್ನಿಂಗ್

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ತನಿಖಾ ತಂಡದ ಅಧಿಕಾರಿಗಳಿಗೆ ಎಸ್​​ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ರವರು ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತನಿಖಾ ತಂಡಕ್ಕೆ ಪ್ರಕರಣದ ಮಾಹಿತಿ ಸೋರಿಕೆಯಾಗದಂತೆ ನೋಡಿಕೊಳ್ಳಬೇಕು ಎನ್ನಲಾಗಿದೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವ ಮುನ್ನ, ವಿಚಾರಣೆಯ ನಂತರ ಕೆಲ ಮಾಹಿತಿ ಸೋರಿಕೆಯಾದ ಹಿನ್ನೆಲೆ ಖಡಕ್ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ. ಎಸ್ಐಟಿ ವಿಚಾರಣೆಗೂ ಮುನ್ನ ಅಜ್ಞಾತ ಸ್ಥಳದಿಂದ ಆರೋಪಿ ಚಾಲಕ ಕಾರ್ತಿಕ್ ವಿಡಿಯೋ ಹರಿಬಿಟ್ಟಿದ್ದನು. ವಕೀಲ ದೇವರಾಜೇಗೌಡ ಎಸ್ಐಟಿ ವಿಚಾರಣೆ ನಂತರ ರಾಜಕಾರಣಿಗಳ […]

Continue Reading

ರಾಜ್ಯದಲ್ಲಿ ಮತದಾನ ಪ್ರಮಾಣದಲ್ಲಿ ಹೆಚ್ಚಳ ಯಾರಿಗೆ ಲಾಭ.?

ಮತದಾನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ ಎಂದರೆ ಅದು ಸರ್ಕಾರದ ವಿರುದ್ಧ ರೋಸಿಹೋಗಿ ಜನರು ಹಕ್ಕು ಚಲಾವಣೆ ಮಾಡಿದ್ದಾರೆ ಎಂದರ್ಥ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತಗಳು ಮುಕ್ತಾಯಗೊಂಡಿವೆ. ಮೊದಲ ಹಂತ ಏಪ್ರಿಲ್​ 26, ಎರಡನೇ ಹಂತ ಮೇ 7ರಂದು ಚುನಾವಣೆ ನಡೆದಿದ್ದು, ಎರಡೂ ಹಂತದ ಚುನಾವಣೆಯಲ್ಲೂ ಉತ್ತಮ ಮತದಾನ ಆಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ ನಡೆದರೆ, ಬೆಂಗಳೂರು ಸೆಂಟ್ರಲ್​ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ನಡೆದಿದೆ. ಆದರೆ ಲೆಕ್ಕಾಚಾರ ಪ್ರಕಾರ ರಾಜ್ಯದಲ್ಲಿ ಮೊದಲ […]

Continue Reading

ಬಿಎಂಐ (ಬೊಜ್ಜು) ಪ್ರಮಾಣ ಹೆಚ್ಚಿದೆ ಎಂಬ ಕಾರಣಕ್ಕೆ ಒಂದು ಕೇಂದ್ರದಿಂದ ಮತ್ತೊಂದು ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

ಬೊಜ್ಜು ಕರಗಿಸಲು ಪೊಲೀಸರಿಗೆ ಟಾಸ್ಕ್ ಬಿಎಂಐ (ಬಾಡಿ ಮಾಸ್ ಇಂಡೆಕ್ಸ್) ಪ್ರಮಾಣ ಶೇಕಡಾ 29 ಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಒಂದು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಮತ್ತೊಂದು ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯ, ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ, ಕಡೂರು, ಐಮಂಗಲ, ಖಾನಾಪುರ, ಮೈಸೂರು, ಬೆಂಗಳೂರು, ಧಾರವಾಡ, ಥಣಿಸಂದ್ರ, ಯಲಹಂಕ, ಹಾಸನದ ಪೊಲೀಸ್ ತರಬೇತಿ ಶಾಲೆಗಳ ಪ್ರಾಂಶುಪಾಲರು, ತರಬೇತಿ ಅಧಿಕಾರಿಗಳು ಹಾಗೂ ಇತರ ಪೊಲೀಸ್ ಸಿಬ್ಬಂದಿಯನ್ನು ಪರಸ್ಪರ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ತರಬೇತಿ […]

Continue Reading

ಭ್ರೂಣ ಹತ್ಯೆ ಪ್ರಕರಣ; ಅಧಿಕಾರಿಗಳ ದಾಳಿ: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಗಳ ಬಂಧನ

ಇತ್ತೀಚೆಗಷ್ಟೇ ದೊಡ್ಡ ಪ್ರಮಾಣದಲ್ಲಿ ಮಂಡ್ಯದ ಆಲೆ ಮನೆಯೊಂದರಲ್ಲಿ ಭ್ರೂಣ ಹತ್ಯೆ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಅದೇ ರೀತಿಯ ಪ್ರಕರಣವೊಂದು ಬಯಲಾಗಿದ್ದು, ಭ್ರೂಣ ಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆನಂದ್ ಹಾಗೂ ಅಶ್ವಿನಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮತ್ತೋರ್ವ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ್ ಆಂಬುಲೆನ್ಸ್ ಡ್ರೈವರ್ ಆಗಿದ್ದು, ಅಶ್ವಿನಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ನೌಕರರಾಗಿದ್ದಾರೆ. ಆನಂದ್ ಗೆ ಪಾಂಡವರಪುರದಲ್ಲಿ ಅಲರ್ಟ್ ಆಗಿದ್ದ […]

Continue Reading

ಮಾಜಿ ಸಚಿವ ರೇವಣ್ಣ ಅವರನ್ನು ಮಾಜಿ ಪ್ರಧಾನಿ ನಿವಾಸದಿಂದಲೇ ಬಂಧಸಿದ ಎಸ್ಐಟಿ ಅಧಿಕಾರಿಗಳು

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧಿಸಿರುವ ಅಧಿಕಾರಿಗಳು ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ […]

Continue Reading

ಮೇ 31ರೊಳಗೆ HSRP ಅಳವಡಿಸದ ವಾಹನಗಳಿಗೆ ದಂಡ; ಪ್ರಾರಂಭದಲ್ಲಿ 500 ರೂ. ಬಳಿಕ 1000 ರೂ ದಂಡ ವಿಧಿಸುವ ಸಾಧ್ಯತೆ

ಮೇ 31ರೊಳಗೆ ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ದಂಡ ವಿಧಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸುತ್ತಿದ್ದು ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದೆ. ಪ್ರಾರಂಭದಲ್ಲಿ 500 ರೂ ದಂಡ ಮತ್ತು ಬಳಿಕ 1000 ರೂ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 2019ರ ಏಪ್ರಿಲ್ 1ರ ಒಳಗೆ ನೋಂದಣಿಯ ವಾಹನಗಳಿಗೆ HSRP ಅಳವಡಿಕೆೆಗೆ ಮೇ 31ರವರೆಗೆ ಗಡುವು ಈಗಾಗಲೇ 2 ಬಾರಿ ವಿಸ್ತರಣೆಯಾಗಿದ್ದು, ಇನ್ನು ಮುಂದಕ್ಕೆ ವಿಸ್ತರಣೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಮೇ 31ರೊಳಗೆ HSRP ಅಳವಡಿಕೆ […]

Continue Reading

ಬಿಟ್‌ಕಾಯಿನ್ ಹಗರಣ: ಎಲೆಕ್ಟ್ರಾನಿಕ್ ಡೇಟಾವನ್ನು ತಿರುಚಿ ಸಾಕ್ಷ ನಾಶ ಪಡಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ತಂಡಕ್ಕೆ ಬಂದಿರುವ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಸಿ-ಡಾಕ್ ವರದಿಗಳಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು ಡಿಎಂ ಎಲೆಕ್ಟ್ರಾನಿಕ್ ಡೇಟಾವನ್ನು ತಿರುಚಿದ್ದಾರೆ ಎಂದು ಬಹಿರಂಗಪಡಿಸಿದೆ. ಬೆಂಗಳೂರಿನ ಸೆಂಟ್ರಲ್ ಕ್ರೈಂ ಬ್ರಾಂಚ್ ನ ತಾಂತ್ರಿಕ ಬೆಂಬಲ ಕೇಂದ್ರದ ಉಸ್ತುವಾರಿ ವಹಿಸಿದ್ದ ಬಾಬು, ಮ್ಯಾಕ್‌ಬುಕ್, ಲ್ಯಾಪ್‌ಟಾಪ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಹೆಚ್ಚುವರಿ ಫೈಲ್‌ಗಳನ್ನು ರಚಿಸುವ ಮೂಲಕ ಡೇಟಾವನ್ನು ತಿರುಚಿದ ಮತ್ತು ಪ್ರಮುಖ ಸಾಕ್ಷ್ಯಗಳನ್ನು ನಾಶ ಮಾಡಿರುವುದು […]

Continue Reading

ಹುಲಿ ಬೇಟೆಯ ಪ್ರಕರಣ, ಪ್ರಮುಖ ಆರೋಪಿ, ಅರಣ್ಯ ಕಾವಲುಗಾರ ಸುರೇಶನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

ವರದಿ: ಸಲಾವುದ್ದೀನ್ ಎಂ,ಎ ಮೂಡಿಗೆರೆ: ಕಳೆದ ಹಲವು ದಿನಗಳ ಹಿಂದೆ ಹುಲಿಯನ್ನು ಕೊಂದು ಅದನ್ನು ಮೂರು ಬಾಗವನ್ನಾಗಿ ಕತ್ತರಿಸಿ ತಲೆಯನ್ನು ಕಡಿದು ನ್ಯಾಯಾಲಯಕ್ಕೆ ತೆರಳಿದ್ದ ವ್ಯಕ್ತಿಯೋರ್ವರ ಬೈಕಿನ ಬ್ಯಾಗಿನಲ್ಲಿಟ್ಟು ತನ್ನ ವಿರೋಧಿ ವ್ಯಕ್ತಿಯನ್ನು ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದ ಅರಣ್ಯ ಕಾವಲುಗಾರ ಸುರೇಶ್ ಇಂದು ಮೂಡಿಗೆರೆ ನ್ಯಾಯಾಲಯದ ಆವರಣದಲ್ಲಿ ನಾಟಕೀಯ ರೀತಿಯಲ್ಲಿ ಬೆಳವಣಿಗೆ ನಡೆದು ಕೊನೆಗೂ ಅರಣ್ಯ ಇಲಾಖೆ ಸುರೇಶನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮೂಡಿಗೆರೆ ತಾಲೂಕಿನ ಕುಂಡ್ರ ಎಂಬಲ್ಲಿ ಹುಲಿಯನ್ನು ಕೊಂದು ಅದರ ಶಿರವನ್ನು ಕಡಿದು ಮಣ್ಣಿನಲ್ಲಿ ಹೂತು […]

Continue Reading