15 ಪರ್ಸೆಂಟ್ ಲಂಚ ಕೇಳಿದ ಮಹಿಳಾ ಅಧಿಕಾರಿ,ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ

ಬಿಲ್ ಪಾವತಿಗೆ ಬಿಲ್ ಮೊತ್ತದ 15 ಪರ್ಸೆಂಟ್ ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ. 2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ […]

Continue Reading

ದಸರಾ ರಜೆಯನ್ನು ಅಕ್ಟೋಬರ್ 30ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಶಿಕ್ಷಕರ ಪತ್ರ

ರಾಜ್ಯದಲ್ಲಿ ಕರ್ನಾಟಕ ಶಿಕ್ಷಣ ಇಲಾಖೆಯು ಈ ಬಾರಿ 15 ದಿನಗಳ ಕಾಲ ದಸರಾ ರಜೆ ಘೋಷಣೆ ಮಾಡಿದೆ. ಆದರೆ ಈ ಹಿಂದೆ ನೀಡಲಾಗುತ್ತಿರುವ ರಜೆಗೆ ಹೋಲಿಕೆ ಮಾಡಿದ್ರೆ ಈ ಬಾರಿಯೂ ರಜೆ ಕಡಿತವಾಗಿದೆ. ಇದು ರಾಜ್ಯದ ಶಿಕ್ಷಕರ ಅತೃಪ್ತಿಗೆ ಕಾರಣವಾಗಿದ್ದು, ಇದೀಗ ದಸರಾ ವಿಸ್ತರಣೆ ಮಾಡುವಂತೆ ಶಿಕ್ಷಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆಕರ್ನಾಟಕದ ಶಾಲೆಗಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ನವರಾತ್ರಿಯ ಆಚರಣೆ ನಡೆಯುತ್ತಿದೆ. ಅಕ್ಟೋಬರ್ 24 […]

Continue Reading

ಫ್ಲ್ಯಾಟ್‌ ವ್ಯವಹಾರಕ್ಕೆ ಸಂಬಂಧಿಸಿದಂತೆ 17 ಲಕ್ಷ ರೂ. ಬಡ್ಡಿ ಸಮೇತ ಹಿಂದಿರುಗಿಸುವಂತೆ ಡಿ.ಕೆ. ಶಿವಕುಮಾರ್ ಅವರಿಗೆ ಗ್ರಾಹಕರ ಆಯೋಗ ಆದೇಶ.

ಫ್ಲ್ಯಾಟ್‌ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಗ್ರಾಹಕರೊಬ್ಬರ ಮುಂಗಡ ಮೊತ್ತ ಹಿಂದಿರುಗಿಸುವಾಗ ಕಡಿತಗೊಳಿಸಿದ್ದ ರೂ 17 ಲಕ್ಷವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಡಿ.ಕೆ. ಶಿವಕುಮಾರ್ ಅವರಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಈ ಸಂಬಂಧ ಎನ್‌ಟಿವೈ ಬಡಾವಣೆಯ ರಾಘವ ನಗರದ ನಿವಾಸಿ ಜೆ. ರಾಘವೇಂದ್ರ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಂ.ಶೋಭಾ ಮತ್ತು ಸದಸ್ಯೆ ಸುಮಾ ಅನಿಲ್ ಕುಮಾರ್ ಅವರಿದ್ದ ಪೀಠವು ಈ ಕುರಿತಂತೆ ಇದೇ […]

Continue Reading

ಮಾಹಿತಿ ನೀಡದ ತಹಸಿಲ್ದಾರ್ ಗೆ ಮಾಹಿತಿ ಆಯೋಗದಿಂದ 25,000 ರೂ. ದಂಡ, ಶಿಸ್ತು ಕ್ರಮಕ್ಕೆ ನಿರ್ದೇಶನ

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಸಿಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ 25000 ರೂ. ದಂಡ ವಿಧಿಸಿದೆ. ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಜೊತೆಗೆ ಮಾಹಿತಿ ಆಯೋಗ ನೀಡಿದ ಶೋಕಾಸ್ ನೋಟಿಸ್ ಗೂ ಉತ್ತರ ನೀಡದ ಕಾರಣ 25,000ರೂ. ದಂಡ ವಿಧಿಸಿದ್ದು, ಶಿಸ್ತು ಕ್ರಮಕೈಗೊಳ್ಳುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ. ಬೆಂಗಳೂರಿನ ತಾವರೆಕೆರೆ ನಿವಾಸಿ ಅಶ್ವತ್ ರೆಡ್ಡಿ ಅವರು ಸಲ್ಲಿಸಿದ್ದ ಎರಡನೇ ಮೇಲ್ಮನವಿ ಪರಿಶೀಲಿಸಿದ […]

Continue Reading

ಕಸದ ಬುಟ್ಟಿ ಸೇರಿದ ವರದಿಗಳು..ಬೆಂಗಳೂರು, ಮಂಗಳೂರು ಮಹಾನಗರಗಳಲ್ಲಿ ಅಗ್ನಿ ಸುರಕ್ಷತೆ ಪಾಲಿಸದ ಬಹು ಮಹಡಿ ಕಟ್ಟಡಗಳು

ಬೆಂಗಳೂರು, ಮಂಗಳೂರಿನಂತಹ ಮಹಾನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಲು ಸಾಲು ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿವೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಇರುವುದು ಇಂತಹ ಪ್ರಕರಣಗಳು ಹೆಚ್ಚಾಗಲು ಕಾರಣ. ಇನ್ನು ಬಿಬಿಎಂಪಿ, ಮಹಾನಗರ ಪಾಲಿಕೆಗಳು ಲಂಚದ ಆಮಿಷಕ್ಕೆ ಒಳಗಾಗಿ ಬೇಕಾಬಿಟ್ಟಿಯಾಗಿ ಲೈಸೆನ್ಸ್ ನೀಡುತ್ತಿರುವುದು ಇದಕ್ಕೆಲ್ಲ ಕಾರಣ. ಕೋರಮಂಗಲ, ಅತ್ತಿಬೆಲೆ ದುರಂತಗಳು ಕಣ್ಣ ಮುಂದೆ ಇದ್ದರೂ ಅಧಿಕಾರಿ ವರ್ಗ ರಿಯಲ್ ಎಸ್ಟೇಟ್ ಮಾಫಿಯಾಕ್ಕೆ ಬಲಿ ಬಿದ್ದು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸುರಕ್ಷತಾ ಸಂಬಂಧ ನಿರ್ಲಕ್ಷ್ಯ ದಿಂದಾಗಿ ಪದೇಪದೆ ಸಾವು ನೋವು ಸಂಭವಿಸುತ್ತಿವೆ. […]

Continue Reading

ಮೂಲಗೇಣಿ ಭೂ ಮಾಲಿಕರ ಅರ್ಜಿ ವಜಾ; ಗೇಣಿದಾರರಿಗೆ ಆನೆ ಬಲ, ಮೂಲಗೇಣಿ ಹಕ್ಕಿನ ಸಿಂಧುತ್ವ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲಕತ್ವ ಪ್ರಧಾನ ಮಾಡುವ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಮೂಲಗೇಣಿ, ಒಳಮೂಲಗೇಣಿ ಹಕ್ಕು ಅಧಿನಿಯಮ-2011ರ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ.ಇದರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಗೇಣಿದಾರರಿಗೆ ಹೈಕೋರ್ಟ್‌ನ ಈ ಆದೇಶದಿಂದ ಆನೆ ಬಲ ಬಂದಂತಾಗಿದೆ. ಉಡುಪಿ ಅದಮಾರು ಮಠ, ಗಣೇಶ್ ಪೈ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ […]

Continue Reading

ಆನ್ ಲೈನ್ ಗೇಮ್ ನಿಂದ ಕೋಟ್ಯಾಧಿಪತಿಯಾದ ಪೊಲೀಸ್ ಅಧಿಕಾರಿ: ಸೇವೆಯಿಂದ ವಜಾ

ಆನ್ ಲೈನ್ ಬೆಟ್ಟಿಂಗ್ ಆಟವನ್ನು ದೇಶದಾದ್ಯಂತ ನಿಷೇಧಿಸಬೇಕು ಅನ್ನುವ ಕೂಗು ಒಂದೆಡೆ ಕೇಳಿಬರುತ್ತಿದ್ದರೆ, ಆನ್ ಲೈನ್ ಬೆಟ್ಟಿಂಗ್ ಆಟಗಳಿಂದ ದೂರವಿರಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಪೊಲೀಸ್ ಅಧಿಕಾರಿಯೇ ಆನ್ ಲೈನ್ ಗೀಳಿಗೆ ಬಿದ್ದರೆ ಏನಾಗಬಹುದು? ಇಲ್ಲೊಬ್ಬ ಪೊಲೀಸ್ ಅಧಿಕಾರಿ ಆನ್ ಲೈನ್ ಬೆಟ್ಟಿಂಗ್ ಆಟದಿಂದ ಬರೋಬ್ಬರಿ ಕೋಟಿಗಳನ್ನು ಸಂಪಾದಿಸಿದ್ದಾರೆ. ಇದೀಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಹರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೇ ‘ಡ್ರೀಮ್‌ 11’ ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ನಲ್ಲಿ ಒಂದೂವರೆ ಕೋಟಿ ರೂ. ಬಹುಮಾನ ಗೆದ್ದು ಸುದ್ದಿಯಾಗಿದ್ದರು.ಇದೀಗ […]

Continue Reading

ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವರು

ರಾಜ್ಯದಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಮಾಡಲು ಚಿಂತನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಮಾತ್ರ ಮಾಡಬೇಕಾ ಅಥವಾ ರಾಜ್ಯಾದ್ಯಂತ ಮಾಡಬೇಕಾ ಅನ್ನುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಅತ್ತಿಬೆಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪಟಾಕಿ ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪುರಸಭೆ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಪಟಾಕಿ ನಿಷೇಧ […]

Continue Reading

500 ಕೋಟಿ ಮೌಲ್ಯದ ಅರಣ್ಯ ಭೂಮಿಯ ಪರಭಾರೆಗೆ ನೆರವಾದ ಎಸಿ ವಿರುದ್ಧ ಎಫ್ಐಆರ್

ಅರಣ್ಯ ಎಂದು ವರ್ಗೀಕರಣವಾಗಿದ್ದ ನೂರಾರು ಕೋಟಿ ರೂಪಾಯಿ ಬೆಲೆಬಾಳುವ 17 ಎಕರೆ 34 ಗುಂಟೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿ ಎಂದು ಮ್ಯುಟೇಷನ್ ಮಾಡಿದ್ದ ಬೆಂಗಳೂರಿನ ಉಪ ಜಿಲ್ಲಾಧಿಕಾರಿ ಡಾ.ಎಂ ಜಿ ಶಿವಣ್ಣ ವಿರುದ್ಧ ಅರಣ್ಯ ಸಚಿವರ ಸೂಚನೆ ಮೇರೆಗೆ ಇಲಾಖೆ ಎಫ್ ಐ ಆರ್ ದಾಖಲಿಸಿದೆ. ಉತ್ತರ ಬೆಂಗಳೂರಿನ ಭಾರತೀಯ ನಗರದ ಬಳಿ ಸುಮಾರು 500 ಕೋಟಿ ರೂಪಾಯಿ ಮಾರುಕಟ್ಟೆ ಮೌಲ್ಯದ 17 ಎಕರೆ 34 ಗುಂಟೆ ಅರಣ್ಯ ಭೂಮಿಯನ್ನು ಉಪ ವಿಭಾಗಾಧಿಕಾರಿಯಾಗಿದ್ದ ಶಿವಣ್ಣ ಏಕಪಕ್ಷೀಯವಾಗಿ […]

Continue Reading

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ಬೆಟ್ಟಿಂಗ್ ಕುಳಗಳ ಬಂಧನ; ಇಬ್ಬರು ಆರೋಪಿಗಳು ಪರಾರಿ

ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾದ ಘಟನೆ ಹುಬ್ಬಳ್ಳಿಯ ಡಾಕಪ್ಪ ಸರ್ಕಲ್ ಬಳಿ ನಡೆದಿದೆ. ಬಂಧಿತ ಆರೋಪಿಗಳಿಂದ 2 ಲಕ್ಷದ 39 ಸಾವಿರ ರೂಪಾಯಿ ಹಾಗೂ ಹಲವಾರು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯ ಡಾಕಪ್ಪ ಸರ್ಕಲ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದ ನವೀನ್, ಮಹಮ್ಮದ್,ಪವನ್ ಬಂಧಿತ ಆರೋಪಿಗಳಾಗಿದ್ದಾರೆ. ಧಾಳಿ ವೇಳೆ ಸಂತೋಷ್ ಹಾಗೂ ಗಿರೀಶ್ ಎಂಬವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಕ್ರಿಕೆಟ್ ಮ್ಯಾಚ್ […]

Continue Reading