ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ಕೋರ್ಟ್ ಗೆ 3 ತಿಂಗಳು, ಜಿಲ್ಲಾಧಿಕಾರಿಗೆ 1 ವರ್ಷದ ಗಡುವು: ಸಿಎಂ ಸಿದ್ದರಾಮಯ್ಯ ಆದೇಶ

ನಿನ್ನೆ ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ಮಾಡಿದರು. ಡಿಸಿ, ಸಿಇಒಗಳ ಜೊತೆಗೆ ಸಭೆ ನಡೆಸಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಇದಷ್ಟೇ ಅಲ್ಲದೇ ಕೇಸುಗಳ ಇತ್ಯರ್ಥಕ್ಕೆ ತಹಶೀಲ್ದಾರ್ ಕೋರ್ಟ್ ಗೆ ಮೂರು ತಿಂಗಳು, ಡಿಸಿ ಕೋರ್ಟ್ ಗೆ 1 ವರ್ಷ ಗಡುವು ನೀಡಿದ್ದಾರೆ. ಜನ ಸಣ್ಣಪುಟ್ಟ ಸಮಸ್ಯೆಗೆ ಸಿಎಂ ಕಚೇರಿಗೆ ಬರೋದನ್ನ ತಪ್ಪಿಸುವಂತೆ ಸೂಚಿಸಿದ್ದಾರೆ. ಇನ್ನೂ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ […]

Continue Reading

ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ; ಇಂಥ ನೂರಾರು ಪ್ರಕರಣಗಳಿದ್ದು, ಈ ಬಗ್ಗೆ ಸರ್ಕಾರ ಗಮನಹರಿಸಬೇಕು: ಹೈಕೋರ್ಟ್ ತಾಕೀತು

ಸರ್ಕಾರಿ ಭೂಮಿಯಲ್ಲಿನ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿದ್ದು, ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದೆ. ಸರ್ಕಾರಿ ಭೂಮಿಯೊಂದರ ಒತ್ತುವರಿ ಪ್ರಕರಣದಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವು ಮಾಡಬೇಕು. ಈ ವಿಚಾರದಲ್ಲಿ ಹೊಣೆಗಾರಿಕೆ ನಿಭಾಯಿಸಿದ ತಪ್ಪಿತಸ್ಥ […]

Continue Reading

ಬಿ.ಎಲ್. ಸಂತೋಷ್ ಟೀಮಿಗೆ ಸೈಲೆಂಟಾಗಿ ಗುದ್ದಿದ ಬಿಜೆಪಿ ಹೈಕಮಾಂಡ್; ವಿಜಯೇಂದ್ರ ಅಧ್ಯಕ್ಷ, ಕುಮಾರಸ್ವಾಮಿ ವಿಪಕ್ಷ ನಾಯಕ: ಅಧಿಕೃತ ಘೋಷಣೆಯೊಂದೇ ಬಾಕಿ.!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವೈಟ್ ವಾಶ್ ಆಗುತ್ತಿದ್ದಂತೆ ಕೇಂದ್ರದ ಬಿಜೆಪಿ ನಾಯಕರು ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೆ ಸುಳಿಯಲು ಬಿಡುತ್ತಿರಲಿಲ್ಲ. ನರೇಂದ್ರ ಮೋದಿ ರಾಜ್ಯ ಭೇಟಿ ಸಂದರ್ಭದಲ್ಲೂ ರಾಜ್ಯದ ನಾಯಕರಿಗೆ ಬ್ಯಾರಿಕೇಡ್ ಗತಿ ಆಗಿತ್ತು. ಹೊಸ ಸರಕಾರ ಬಂದು ನೂರು ದಿನಗಳೂ ಕಳೆದರೂ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡದೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ತಪರಾಕಿಯನ್ನೇ ನೀಡಿತ್ತು. ಇದೀಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ರಾಜ್ಯದಲ್ಲಿ ಕಟ್ಟಿ ಬೆಳೆಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದಂತಿದೆ. […]

Continue Reading

” ಮುಖ್ಯಮಂತ್ರಿಗಳೇ ಆರೋಗ್ಯದ ಗ್ಯಾರಂಟಿ ನೀಡಿ” ಕುಪ್ಪೆಪದವು ಹೋರಾಟದಲ್ಲಿ ಮುನೀರ್ ಕಾಟಿಪಳ್ಳ ಮನವಿ

ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ಕುಪ್ಪೆಪದವು ಇದರ ಆಶ್ರಯದಲ್ಲಿ ಇಂದು ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು 24 ಗಂಟೆ ಲಭ್ಯವಿರಲು ಆಗ್ರಹಿಸಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಡಿವೈಎಪ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರವು ಕುಲವೂರು,ಕಿಲಿಂಜಾರು, ಮುತ್ತೂರು,ಪದರಂಗಿ ಸಹಿತ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಏಕೈಕ ಸರ್ಕಾರಿ ಆರೋಗ್ಯ ಕೇಂದ್ರವಾಗಿದೆ.ಕೂಲಿಕಾರರು ಬೀಡಿ,ಕಟ್ಟಡ ಮತ್ತು ಬಡವ,ಕೆಳ ಮಧ್ಯಮ […]

Continue Reading

ಅನೈತಿಕ ಪೊಲೀಸ್ ಗಿರಿ ಮುಚ್ಚಿಟ್ಟ ಪೊಲೀಸ್ ಇಲಾಖೆ.. ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಪೊಲೀಸರೇ ಮುಚ್ಚಿ ಹಾಕಿದ್ದ ಪ್ರಕರಣ ಇದೀಗ ಬಟಾಬಯಲಾಗಿದೆ. ಕೆಲವು ದಿನಗಳ ಹಿಂದೆ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ರೆಕ್ಕೆ ಪುಕ್ಕ ಸೇರಿ ಸಂತ್ರಸ್ತೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುವಷ್ಟರ ಮಟ್ಟಿಗೆ ಪ್ರಕರಣ ಬೆಳೆದಿದೆ. ಹಾಗಾದರೆ ಏನಿದು ಈ ಪ್ರಕರಣ? ಚಿಕ್ಕಮಗಳೂರು ಜಿಲ್ಲೆ ಹೇಳಿ ಕೇಳಿ ಮಂಗಳೂರಿನಂತೆ ಕೋಮು ಸೂಕ್ಷ್ಮ ಪ್ರದೇಶ. ಸಣ್ಣ ಪುಟ್ಟ ಘಟನೆಗಳು ಕೋಮು ಗಲಭೆಗಳಿಗೆ ತುತ್ತಾದುದ್ದೆ ಹೆಚ್ಚು. ಜಿಲ್ಲೆಯ ಕೊಪ್ಪ ತಾಲೂಕಿನ ಕಪಿಲ ಬಳಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣ ಇದೀಗ ಹೊಸತೊಂದು […]

Continue Reading

ಬಿಜೆಪಿ ತೊರೆಯುತ್ತರಾ ಮಾಜಿ ಸಿಎಂ ಡಿವಿ ಸದಾನಂದ ಗೌಡ..! ಡಿ.ವಿ ಮುಂದಿನ ನಡೆ ಕುತೂಹಲದತ್ತ..!

ಬಿಜೆಪಿಯ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಬಿಜೆಪಿ ಪಕ್ಷದೊಂದಿಗೆ ಮುನಿಸಿಕೊಂಡಿದ್ದರಾ ಅನ್ನುವ ಅನುಮಾನ ಇದೀಗ ಎದ್ದಿದೆ. ಅವರ ಹೇಳಿಕೆ ಭಾರಿ ಕುತೂಹಲ ಮೂಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಡಿ.ವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ನನಗೆ ಎಲ್ಲವನ್ನು ನೀಡಿದೆ. ನಾನು ಪಕ್ಷಕ್ಕೆ ಏನು ನೀಡಬೇಕೆಂಬುದನ್ನು ನೋಡಬೇಕಿದೆ. ನನ್ನ ಮುಂದಿನ ನಿರ್ಧಾರ ಏನು ಎಂದು ಈಗಲೇ‌ ಹೇಳುವುದಿಲ್ಲ. ಬಿಜೆಪಿ […]

Continue Reading

ರಾಜ್ಯ ವಿಧಾನಸಭೆಗೆ ವಿಪಕ್ಷ ನಾಯಕನ ನೇಮಕ ವಿಳಂಬ; ಬಿಜೆಪಿಯ ಮುಖ್ಯಸ್ಥರಿಗೆ ಲೀಗಲ್ ನೋಟಿಸ್‌

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಭಾರತೀಯ ಜನತಾ ಪಕ್ಷವು ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದನ್ನು ಆಕ್ಷೇಪಿಸಿ ವಕೀಲ ಎನ್‌.ಪಿ ಅಮೃತೇಶ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಮತ್ತು ಮುಖ್ಯ ಕಾರ್ಯದರ್ಶಿ ಅವರಿಗೆ ಲೀಗಲ್‌ ನೋಟಿಸ್‌ ನೀಡಿದ್ದಾರೆ.ನೋಟಿಸ್‌ ದೊರೆತ ಹತ್ತು ದಿನಗಳ ಒಳಗೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಶಾಸಕಾಂಗ ಸಭೆ […]

Continue Reading

ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯ:ಸಿದ್ದರಾಮಯ್ಯ

ಸರ್ಕಾರಿ ಶಾಲೆಯ 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೂ ಪೌಷ್ಟಿಕ ಆಹಾರ ಕೊಡುವ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಅಭಿನಂದಿಸಿದ ಹಾಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕೋರಿಕೊಂಡಿದ್ದ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಭೇಟಿಮಾಡಿದರು. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಆಶಾ ಪಾಟೀಲ ಅವರನ್ನು ಸಿದ್ದರಾಮಯ್ಯ ಭೇಟಿಮಾಡಿ,ಕೆಲಹೊತ್ತು ಮಾತುಕತೆ ನಡೆಸಿದರು.ಆಶಾ ಅವರು ಮಳಲಿಯಲ್ಲಿರುವ ಶ್ರೀ ಜಗದ್ಗುರು ಫಕ್ಕಿರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾರೆ.ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದೂ ಸೇರಿದಂತೆ […]

Continue Reading

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿ ಸುದ್ದಿ;6ನೇ ವೇತನ ಆಯೋಗ ಜಾರಿ:ಗೃಹ ಸಚಿವ ಜಿ.ಪರಮೇಶ್ವರ್

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಿಹಿ ಸುದ್ದಿ ನೀಡಿದ್ದು, ಶ್ರೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸಲಾಗುತ್ತದೆ. ಪೊಲೀಸ್ ಸಿಬ್ಬಂದಿಗಳಿಗೆ ಸಿಗಬೇಕಾದ ಸರಿಸಮಾನ ವೇತನ, ಭತ್ಯೆ ಸಿಗುವಂತೆ ಮಾಡಲಿದ್ದೇವೆ ಎಂದರು. ಪೊಲೀಸರಿಗೆ ಭಡ್ತಿ ನೀಡುವ ವಿಚಾರ ಕೆಲವು ನಿಯಮಗಳನ್ನು ಬದಲಾವಣೆ ಮಾಡಬೇಕಾಗಿದೆ. ಅಂತರ್ ವಲಯ ವರ್ಗಾವಣೆಯಿಂದ ಹಿರಿಯ ಅಧಿಕಾರಿಗಳಿಗೆ ತೊಂದರೆ ಆಗುತ್ತಿದ್ದು, ಇದನ್ನು ಶ್ರೀಘ್ರದಲ್ಲೇ ಪರಿಹರಿಸಲಾಗುತ್ತದೆ ಎಂದಿದ್ದಾರೆ.

Continue Reading

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಸ್ಟ್ರೋಕ್. 25 ಸಂಸದರ ಪೈಕಿ 12 ಮಂದಿ ಸಂಸದರಿಗೆ ಗೇಟ್ ಪಾಸ್.!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಹಾಲಿ 25 ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆಯಿದೆ. ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್ ತಪ್ಪಿದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆ ಮಾಡದೇ ಇರುವುದು ಮುಖ್ಯ ಕಾರಣ ಎಂಬುವುದು ತಿಳಿದುಬಂದಿದೆ. ಜೊತೆಗೆ ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದ ರಿಂದ ಆಡಳಿತ ವಿರೋಧಿ ಅಲೆ ಕಾರಣಕ್ಕಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ. ದಾವಣಗೆರೆ ಸಂಸದರಾದ ಸಿದ್ದೇಶ್ವರ, ವಿಜಯಪುರ ಸಂಸದರಾದ ರಮೇಶ ಜಿಗಜಿಣಗಿ, ಬೆಂಗಳೂರು ಉತ್ತರ […]

Continue Reading