ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ: ಸುಪ್ರೀಂ ಕೋರ್ಟ್

ಮಕ್ಕಳಿಲ್ಲದ ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ ಎಂದು ಹೇಳುವ ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ ಗೋತ್ರವೂ ಬದಲಾಗುತ್ತದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ಹಿಂದೂ ಸಮಾಜ ಕನ್ಯಾದಾನ ಎಂಬ ಪರಿಕಲ್ಪನೆಯನ್ನು ಹೊಂದಿದೆ, ಅದರ ಅಡಿಯಲ್ಲಿ ಒಬ್ಬ ಮಹಿಳೆ ಮದುವೆಯಾದಾಗ, ಅವಳ […]

Continue Reading

ಮುಸ್ಲಿಂ ಪುರುಷ ತನ್ನ ಎಲ್ಲಾ ಹೆಂಡತಿಯರಿಗೆ ನ್ಯಾಯ ಒದಗಿಸಲು ಸಾಧ್ಯವಾಗದ ಹೊರತು, ಆತ ಒಂದಕ್ಕಿಂತ ಹೆಚ್ಚು ಬಾರಿ ಮದುವೆಯಾಗಲು ಅವಕಾಶವಿಲ್ಲ: ಕೇರಳ ಹೈಕೋರ್ಟ್

ಕೇರಳ: ಯಾವುದೇ ಮುಸ್ಲಿಂ ಪುರುಷನು ತನ್ನ ಪತ್ನಿಯರನ್ನು ಪೋಷಿಸಲು ಸಾಧ್ಯವಾಗದ ಹೊರತು ಎರಡನೇ ಅಥವಾ ಮೂರನೇ ಪತ್ನಿಯನ್ನು ಮದುವೆಯಾಗುವ ಹಕ್ಕನ್ನು ಹೊಂದಿಲ್ಲ, ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಕೇರಳ ಹೈಕೋರ್ಟ್ ಒತ್ತಿ ಹೇಳಿದೆ. 39 ವರ್ಷದ ಮಹಿಳೆಯೊಬ್ಬರು ತನ್ನ ಪತಿಯಿಂದ ಮಾಸಿಕ 10 ಸಾವಿರ ರೂಪಾಯಿ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದಾಗ ನ್ಯಾಯಮೂರ್ತಿ ಪಿ.ವಿ. ಕೃಷ್ಣನ್ ಈ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳೆಯು ತನ್ನ 46 ವರ್ಷದ ಪತಿ ಕುರುಡನಾಗಿದ್ದು, ಭಿಕ್ಷಾಟನೆಯಿಂದ ಜೀವನ ಸಾಗಿಸುತ್ತಿದ್ದಾನೆ. ಆತ […]

Continue Reading

ಯೋಗದ ಹೆಸರಲ್ಲಿ ಭೋಗ.!ಯೋಗ ಗುರುವಿನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ನಿರಂಜನಾ ಮೂರ್ತಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಯೋಗ ದ ಹೆಸರಲ್ಲಿ ಯೋಗಗುರುವಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸರಿಂದ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ಬಂಧನವಾಗಿದೆ.ಆರೋಪಿ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತಿದ್ದ ಎನ್ನಲಾಗಿದೆ. ಯೋಗ ಸೆಂಟರ್ ಗೆ ಯೋಗದ ಕ್ಲಾಸಿಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿಯಲ್ಲಿ ಬಂಧನ ಮಾಡಲಾಗಿದೆ. ಹದಿನೇಳು ವರ್ಷದ ಬಾಲಕಿಗೆ […]

Continue Reading

ಕಾಸರಗೋಡು: 14 ಮಂದಿ ಪುರುಷರಿಂದ 16 ರ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು.

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ಮಂದಿ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಹಾಯಕ ಶಿಕ್ಷಣ ಅಧಿಕಾರಿ, ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಲಿಪಶು ಬಾಲಕನ ತಾಯಿ ತನ್ನ ಮಗನ ಚಟುವಟಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ತಾಯಿ ಚೈಲ್ಡ್ ಲೈನ್ […]

Continue Reading

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದರೋಡೆ: ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ 8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣ ದೋಚಿಕೊಂಡು ಪರಾರಿ

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ ಹೊತ್ತಿಗೆ ಏಳೆಂಟು ಮುಸುಕುದಾರಿ ದರೋಡೆಕೋರರ ತಂಡ ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿ 8 ಕೋಟಿ ರೂಪಾಯಿ ನಗದು, ಸರಿ ಸುಮಾರು 50 ಕೆ.ಜಿಯಷ್ಟು ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸಿಕೊಂಡು […]

Continue Reading

‘ಮ್ಯೂಲ್ ಅಕೌಂಟ್’ ದಂಧೆ ಪ್ರಕರಣ: ಹೊಸ ನಮೂನೆಯ ವಂಚನೆ ಬಯಲು; ಬಾಡಿಗೆ ರೂಪದಲ್ಲಿ ಬ್ಯಾಂಕ್ ಖಾತೆ ಪಡೆದು 500 ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಖದೀಮರು

ಕೇರಳದ ವಯನಾಡು ಜಿಲ್ಲೆಯಲ್ಲಿ 500 ಕ್ಕೂ ಹೆಚ್ಚು ಜನರು ‘ಮ್ಯೂಲ್ ಅಕೌಂಟ್’ (ಒಂದು ಬಗೆಯಲ್ಲಿ ಬಾಡಿಗೆ ರೂಪದಲ್ಲಿ ಬ್ಯಾಂಕ್ ಖಾತೆ ಪಡೆದು ಅದನ್ನು ಹಣ ಅಕ್ರಮ ವರ್ಗಾವಣೆ ಚಟುವಟಿಕೆಗಳಿಗೆ ಬಳಸುವುದು) ದಂಧೆಗೆ ಬಲಿಯಾಗಿ ಗಂಭೀರ ಕಾನೂನು ಸಂಕಷ್ಟ ಎದುರಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರಿಂದ ಹೀಗೆ ಮೋಸ ಹೋದವರಲ್ಲಿ ಮಹಿಳೆಯರು ಹಾಗೂ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಸೈಬರ್ ಪೊಲೀಸರು ಹೇಳಿದ್ದಾರೆ. ಜಿಲ್ಲೆಯ ಹೊರಗಿನಿಂದ ಬಂದ ವಂಚಕರು ಸ್ಥಳೀಯರಿಗೆ ತಮ್ಮ ಬ್ಯಾಂಕ್ ಖಾತೆಗಳನ್ನು ಬಾಡಿಗೆ ನೀಡುವಂತೆ ಆಮಿಷ […]

Continue Reading

ಬಹುಕೋಟಿ ವಂಚಕ ವಿಜಯ್ ಮಲ್ಯ, ನೀರವ್ ಮೋದಿ ಭಾರತಕ್ಕೆ ಹಸ್ತಾಂತರಕ್ಕೆ ಕ್ಷಣಗಣನೆ.‌.

ಸಿಪಿಎಸ್ ತಜ್ಞರ ತಂಡ ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ, ಹೈ ಪ್ರೊಫೈಲ್ ಬ್ಯಾರಕ್ ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ವಿದೇಶದಲ್ಲಿ ಅವಿತಿರುವ ಮಲ್ಯ, ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ನ್ಯಾಯಾಂಗ ವ್ಯವಸ್ಥೆ ಈಗಾಗಲೇ ಒಪ್ಪಿಗೆ ನೀಡಿದ್ದು, ಈಗಾಗಲೇ ಅಲ್ಲಿನ ತಜ್ಞರ ತಂಡವೊಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಮಲ್ಯ ಅಥವಾ ನೀರವ್ ಮೋದಿಯವರಿಗಾಗಿ ನಿಗದಿಗೊಳಿಸಲಾಗಿರುವ ಹೈ ಸೆಕ್ಯುರಿಟಿ ಜೈಲು ಕೊಠಡಿಗಳ ಸಮುಚ್ಛಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದೆ ಎಂದು ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ. […]

Continue Reading

ಸೈಬರ್ ಖದೀಮರ ಬೆಚ್ಚಿ ಬೀಳಿಸುವ ಬ್ರಹ್ಮಾಂಡ ರೂಪ.! ರಾಜ್ಯದಲ್ಲಿ ಏಳೇ ತಿಂಗಳಲ್ಲಿ 1,287 ಕೋಟಿ ರೂಪಾಯಿ ವಂಚನೆ

ಪ್ರತಿಗಂಟೆಗೆ 65 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲು.. ಪೊಲೀಸರಿಗೆ ಸವಾಲಾಗುತ್ತಿರುವ ಕಿರಾತಕರು.! ಭಾರತವು ಡಿಜಿಟಲ್ ಇಂಡಿಯಾದತ್ತ ಸಾಗುತ್ತಿದ್ದಂತೆ ಸೈಬರ್ ಅಪರಾಧಗಳ ಪಿಡುಗು ಕೂಡ ಭಯಾನಕ ವೇಗದಲ್ಲಿ ಹೆಚ್ಚುತ್ತಿದೆ. ಕರ್ನಾಟಕವು ದೇಶದ ಟೆಕ್ ಹಬ್ ಆಗಿ ಗುರುತಿಸಿಕೊಂಡಿದ್ದರೂ, ಸೈಬರ್ ಖದೀಮರ ಪಾಲಿಗೆ ಸುಲಭವಾಗಿ ತುತ್ತಾಗುತ್ತಿದೆ. ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಆದರೆ ಇದಕ್ಕೆ ಕಡಿವಾಣ ಹಾಕುವಲ್ಲಿ ಈವರೆಗೂ ಯಶಸ್ಸು ಕಂಡಿಲ್ಲ ಅನ್ನುವುದೇ ದುರ್ದೈವದ ಸಂಗತಿ. ಇಡೀ ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. […]

Continue Reading

ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿ ಟಿವಿ; ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಸುಪ್ರೀಂ ಕೋರ್ಟ್

ಪೊಲೀಸ್ ಠಾಣೆಗಳಲ್ಲಿ ಕಸ್ಡಡಿ ಚಿತ್ರಹಿಂಸೆ ತಡೆಯಲು ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಗುರುವಾರ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಿ ಕೊಂಡು ನೋಟಿಸ್ ನೀಡಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ ಕ್ಯಾಮೆರಾಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. 2025 ರ ಮೊದಲ ಎಂಟು ತಿಂಗಳಲ್ಲಿ ರಾಜಸ್ಥಾನದಲ್ಲಿ 11 ಜನರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳುವ […]

Continue Reading

ದರ್ಗಾ ತೆರವಿಗೆ ಹಿಂದೂ ಬಲಪಂಥೀಯ ಸಂಘಟನೆ ‘ಸೇವ್ ಇಂಡಿಯಾ’ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್

ದರ್ಗಾ ಕಾನೂನು ಬದ್ಧವೋ ಇಲ್ಲವೋ ಬೇರೆ ಮಾತು; ಆದರೆ ಒಂದು ನಿರ್ದಿಷ್ಟ ಧರ್ಮವನ್ನು ಗುರಿ ಮಾಡುವ ಹಿಂದಿನ ಉದ್ದೇಶವೇನು.? ಹೈಕೋರ್ಟ್ ಕಳವಳ ದೆಹಲಿಯ ಯಮುನಾ ನದಿ ತೀರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಕೋರಿ ‘ಸೇವ್ ಇಂಡಿಯಾ’ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯಲ್ಲಿ ಒಂದು ಮಜರ್ ಮತ್ತು ರೋಹ್ಟಕ್ ರಸ್ತೆ, ಸೀಲಾಂಪುರ ಮತ್ತು ಬುರಾರಿಯ ಮೂರು ದರ್ಗಾಗಳು ಸೇರಿವೆ. ಈ ಎನ್‌ಜಿಒ ಹಿಂದೂ ಬಲಪಂಥೀಯ ಗುಂಪುಗಳೊಂದಿಗೆ ಸಂಬಂಧ ಹೊಂದಿದೆ. ಸಂಘಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ಮುಖ್ಯ […]

Continue Reading