ಅಕ್ರಮ ಬೆಟ್ಟಿಂಗ್ ದಂಧೆ: 110 ಕೋಟಿ ರೂಪಾಯಿ, 1,200 ಕ್ರೆಡಿಟ್ ಕಾರ್ಡ್‌ ಇ.ಡಿ ವಶ

ಸೈಪ್ರಸ್ ಮೂಲದ ‘ಅಕ್ರಮ’ ಆನ್‌ಲೈನ್ ಬೆಟ್ಟಿಂಗ್ ವೇದಿಕೆಯಾದ ಪ್ಯಾರಿಮ್ಯಾಚ್‌ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಇತ್ತೀಚೆಗೆ ಶೋಧ ನಡೆಸಿದೆ. ಅಕ್ರಮಕ್ಕೆ ಬಳಸಿಕೊಂಡಿದ್ದ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 110 ಕೋಟಿ ರೂಪಾಯಿಯನ್ನು, 1,200 ಕ್ರೆಡಿಟ್ ಕಾರ್ಡ್‌ಗಳನ್ನು ಇ.ಡಿ ವಶಪಡಿಸಿಕೊಂಡಿದೆ. ಪ್ಯಾರಿಮ್ಯಾಚ್ ಕಾರ್ಯಾಚರಣೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಭಾಗವಾಗಿ ಆಗಸ್ಟ್ 12 ರಂದು ಮುಂಬೈ, ನೋಯ್ಡಾ, ಜೈಪುರ, ಸೂರತ್, ಮಧುರೈ, ಕಾನ್ಪುರ ಮತ್ತು ಹೈದರಾಬಾದ್‌ನ 17 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿತ್ತು. […]

Continue Reading

ಕಾನೂನು ಸೇವೆ ಒದಗಿಸಿ ಕೊಡುವುದಾಗಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಬೃಹತ್‌ ಸೈಬರ್‌ ವಂಚನೆ ಜಾಲವನ್ನು ಬೇಧಿಸಿದ ಸಿಸಿಬಿ ಪೊಲೀಸರು.

ವಂಚನೆ ನಡೆಸಲು ಬಳಸುತ್ತಿದ್ದ ಹತ್ತು ಲಕ್ಷ ಮೌಲ್ಯದ ಉ‍ಪಕರಣ ಜಪ್ತಿ ಸೈಬರ್ ವಂಚನೆಗೆ ಒಳಗಾದವರಿಗೆ ಕಾನೂನು ಸೇವೆ ಒದಗಿಸಿ ಕೊಡುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಬೃಹತ್‌ ಸೈಬರ್‌ ವಂಚನೆ ಜಾಲ ಪ್ರಕರಣದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ವಂಚನೆ ನಡೆಸಲು ಬಳಸುತ್ತಿದ್ದ ರೂ. ಹತ್ತು ಲಕ್ಷ ಮೌಲ್ಯದ ಉ‍ಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಆಗಸ್ಟ್‌ 2ರಂದು ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಆಧರಿಸಿ, ವೈಟ್‌ಫೀಲ್ಡ್‌ನ ಡೇಟಾ ಸೆಂಟರ್‌ ಮೇಲೆ ಸಿಸಿಬಿ ಪೊಲೀಸರು ದಾಳಿ […]

Continue Reading

ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರಿಂದ ಹನ್ನೆರಡು ವರ್ಷದ ಬಾಲಕಿಯ ನಿರಂತರ ಅತ್ಯಾಚಾರ

12 ವರ್ಷದ ಬಾಲಕಿ ಮೇಲೆ ಸರಿ-ಸುಮಾರು 200 ಪುರುಷರು ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಇದೀಗ ‌ಈ ಕೃತ್ಯ ಎಸಗಿದ 10 ಮಂದಿಯನ್ನು ಬಂಧಿಸಲಾಗಿದೆ. ಮುಂಬೈ ಸಮೀಪದ ವಸೈನಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ ಹನ್ನೆರಡು ವರ್ಷದ ಬಾಂಗ್ಲಾದೇಶಿ ಬಾಲಕಿಯ ಮೇಲೆ ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರು ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಎಂದು ಬಾಲಕಿ ಹೇಳಿ ಕೊಂಡಿದ್ದಾಳೆ. ಈ ಘಟನೆ ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆದಿದೆ. ನಂತರ ಅವಳನ್ನು ವಸೈ ಸಮೀಪದ ನೈಗಾಂವ್‌ ನಲ್ಲಿರುವ […]

Continue Reading

ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಏಕೆ ‘ಸಿದ್ಧವಾಗಿಲ್ಲ’: ಕಾಂಗ್ರೆಸ್

ನವದೆಹಲಿ: ಹಿಂದಿನ ಸರ್ಕಾರಗಳು ಎರಡೂ ಸದನಗಳಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಚರ್ಚೆಗೆ ಅವಕಾಶ ನೀಡಿದ್ದರೂ, ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಏಕೆ “ಸಿದ್ಧವಾಗಿಲ್ಲ” ಎಂದು ಕಾಂಗ್ರೆಸ್ ಶನಿವಾರ ಸರ್ಕಾರವನ್ನು ಕೇಳಿದೆ. ಚುನಾವಣಾ ಆಯೋಗದ ಚುನಾವಣಾ ಸುಧಾರಣೆಗಳು ಮತ್ತು ಚುನಾವಣೆಯಲ್ಲಿ ಹಣದ ಬಳಕೆಯ ಕುರಿತು ಚರ್ಚೆ ನಡೆದಾಗ ಹಿಂದೆ ಹಲವಾರು ಘಟನೆಗಳನ್ನು ಕಾಂಗ್ರೆಸ್ ನಾಯಕ ಮಾಣಿಕಮ್ ಟ್ಯಾಗೋರ್ ಉಲ್ಲೇಖಿಸಿದ್ದಾರೆ. “ಗೌರವಾನ್ವಿತ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿಯ […]

Continue Reading

ಮಾದಕ ವ್ಯಸನಕ್ಕೆ ಬಲಿಯಾದ ಅಪ್ರಾಪ್ತ ಬಾಲಕಿ, ಹಲವು ಪುರುಷರೊಂದಿಗೆ ಲೈಂಗಿಕ ಸಂಬಂಧ, ಸುಮಾರು19 ಜನರಿಗೆ ಏಡ್ಸ್

ಮಾದಕ ವ್ಯಸನಕ್ಕೆ ಬಲಿಯಾದ 17 ವರ್ಷದ ಬಾಲಕಿಯೊಬ್ಬಳು ಹಲವಾರು ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿ, ಸರಿ-ಸುಮಾರು19 ಜನರಿಗೆ ಎಚ್ಐವಿ ಹರಡಿಸಿದ್ದಾಳೆ. ಉತ್ತರಾಖಂಡದ ರಾಮನಗರ ಪಟ್ಟಣದ ಗುಲರ್‌ಘಟ್ಟಿ ಪ್ರದೇಶದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ಬಾಲಕಿ ಆರ್ಥಿಕವಾಗಿ ತೀರಾ ಹಿಂದುಳಿದ ಕುಟುಂಬದಿಂದ ಬಂದವಳಾಗಿದ್ದು, ಡ್ರಗ್ಸ್ ಸೇವನೆಗೆ ತನ್ನ ಲೈಂಗಿಕ ಸಂಪರ್ಕದಿಂದ ಬಂದ ಹಣವನ್ನು ಖರ್ಚು ಮಾಡುತ್ತಿದ್ದಳು ಎನ್ನಲಾಗಿದೆ. ಆಕೆಯೊಂದಿಗೆ ಸಂಪರ್ಕ ಹೊಂದಿದವರಲ್ಲಿ ವಿವಾಹಿತ ಪುರುಷರೂ ಸೇರಿದ್ದಾರೆ. ಆಕೆಗೆ ಎಚ್‌ಐವಿ ಇದೆ ಎಂದು ಅವರಿಗೆ ತಿಳಿದಿರಲಿಲ್ಲ […]

Continue Reading

ಮೂವರು ಐಎಎಸ್ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿಗಳ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ

ಮೀನಾಕ್ಷಿ ಆರ್ಯ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಂಗಳೂರು ಉಪ-ವಿಭಾಗ 2023ನೇ ಬ್ಯಾಚ್‌ನ ಮೂವರು ಐಎಎಸ್ ಅಧಿಕಾರಿಗಳಿಗೆ ಉಪ ವಿಭಾಗಾಧಿಕಾರಿಗಳ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪಿ. ಶ್ರವಣ್‌ ಕುಮಾರ್‌ ಅವರನ್ನು ಉತ್ತರ ಕನ್ನಡ ಜಿಲ್ಲಾ ಕುಮಟಾ ಉಪ ವಿಭಾಗದ ಉಪ-ವಿಭಾಧಿಕಾರಿಯಾಗಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ. ದಿನೇಶ್‌ ಕುಮಾರ್‌ ಮೀನಾ ಅವರಿಗೆ ಚಾಮರಾಜ ನಗರ ಜಿಲ್ಲಾ ಕೊಳ್ಳೇಗಾಲ ಉಪ-ವಿಭಾಗದ ಉಪ ವಿಭಾಗಾಧಿಕಾರಿ ಹುದ್ದೆ ನೀಡಲಾಗಿದೆ. ಮೀನಾಕ್ಷಿ ಆರ್ಯ ಅವರಿಗೆ […]

Continue Reading

ಮತಾಂತರವಾಗದೆ ನಡೆಯುವ ವಿವಾಹಗಳು ಕಾನೂನು ಬಾಹಿರ; ಆರ್ಯ ಸಮಾಜ, ದೇವಸ್ಥಾನಗಳು ನೀಡುವ ನಕಲಿ ವಿವಾಹ ಪ್ರಮಾಣಪತ್ರ ಪ್ರಕರಣಗಳ ಬಗ್ಗೆ ಗಂಭೀರ ಕಳವಳ: ಅಲಹಾಬಾದ್ ಹೈಕೋರ್ಟ್

ಅಂತರಧರ್ಮದ ಜನರಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡುತ್ತಿರುವ ಆರ್ಯ ಸಮಾಜ ಸಂಘಗಳನ್ನು ಡಿಸಿಪಿ, ಐಪಿಎಸ್ ಮಟ್ಟದ ಅಧಿಕಾರಿಯಿಂದ ತನಿಖೆಗೆ ಆದೇಶ ಮತಾಂತರವಿಲ್ಲದೆ ಬೇರೆ ಬೇರೆ ಧರ್ಮಗಳನ್ನು ಅನುಸರಿಸುವ ಜನರ ನಡುವಿನ ವಿವಾಹವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಅಲಹಾಬಾದ್ ನ್ಯಾಯಾಲಯ ಸ್ಪಷ್ಟಪಡಿಸಿದೆ. ಆರ್ಯ ಸಮಾಜದಂತಹ ಸಂಸ್ಥೆಗಳು ವಿವಾಹ ಪ್ರಮಾಣಪತ್ರಗಳನ್ನು ನೀಡುವ ಮತ್ತು ವಿವಾಹ ವಿಧಿವಿಧಾನದ ನಿಗದಿತ ಶುಲ್ಕ ಮತ್ತು ದಕ್ಷಿಣೆಯನ್ನು ತೆಗೆದುಕೊಂಡು ಯಾರಿಗಾದರೂ ವಿವಾಹ ಪ್ರಮಾಣಪತ್ರಗಳನ್ನು ನೀಡುವ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ನೀಡಲಾಗಿದೆ. ಅಂದರೆ, ಅಂತಹ ವಿವಾಹಗಳು ಕಾನೂನಿನ […]

Continue Reading

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಹಾಮೋಸ.. ದಂಪತಿಗಳಿಗೆ 35 ಲಕ್ಷ ಪಂಗನಾಮ.!

ದೇಶವೇ ಬೆಚ್ಚಿಬೀಳಿಸುವ ಹಗರಣ.. ಸೃಷ್ಟಿ ಫರ್ಟಿಲಿಟಿ ವೈದ್ಯೆ ಸೇರಿ ಎಂಟು ಜನರ ಬಂಧನ ನೈಸರ್ಗಿಕವಾಗಿ ಮಗು ಪಡೆಯಲಾಗದವರಿಗೆ ಮಗು ಪಡೆಯಲು ಹಲವು ದಾರಿಗಳಿವೆ. ಇದಕ್ಕಾಗಿಯೇ ಗಲ್ಲಿ ಗಲ್ಲಿಗಳಲ್ಲಿ ಐವಿಎಸ್‌ ಸೆಂಟರ್‌ಗಳು ತಲೆ ಎತ್ತಿವೆ. ಇದೀಗ ಹೈದರಾಬಾದ್ ನಲ್ಲಿ ಒಂದು ಐವಿಎಫ್‌ ಕೇಂದ್ರ ತನ್ನ ಗ್ರಾಹಕರಿಗೆ ಯಾಮಾರಿಸಿದೆ. ಒಂದು ದಂಪತಿಗಳು ತಮ್ಮ ಕನಸನ್ನು ನನಸಾಗಿಸಲು ಹೈದರಾಬಾದ್‌ನ ಸುಪ್ರಸಿದ್ಧ ಫಲವತ್ತತೆ ಕ್ಲಿನಿಕ್‌ಗೆ ಬೇಟಿ ತಮ್ಮ ಕನಸು ನನಸಾಗಿಸುವ ಬಗ್ಗೆ ಅವರಲ್ಲಿ ಮಾತುಕತೆ ನಡೆಸಿದ್ದಾರೆ. ಆದರೆ, ಅವರಿಗೆ ತಿಳಿದಿರಲಿಲ್ಲ, ಆ ಕ್ಲಿನಿಕ್‌ನ […]

Continue Reading

ಆಗಸ್ಟ್ ಒಂದರಿಂದ ಫೋನ್ ಪೇ, ಗೂಗಲ್ ಪೇ ಗೆ ಹೊಸ ನಿಯಮ ಜಾರಿ. ಬ್ಯಾಲೆನ್ಸ್ ಚೆಕ್ಕ್ ಮಾಡಿದರೆ ದಂಡ.!

ಫೋನ್ ಪೇ, ಗೂಗಲ್ ಪೇ ಇಲ್ಲದೆ ವ್ಯವಹಾರವೇ ನಡೆಯುದಿಲ್ಲ. ಹೀಗಿರುವಾಗ ಫೋನ್ ಪೇ, ಗೂಗಲ್ ಪೇ ಆಗಾಗ ಹೊಸ ನಿಯಮಗಳನ್ನು ತರುತ್ತಿದೆ. ಆಗಸ್ಟ್ ಒಂದರಿಂದ ಹೊಸ ನಿಯಮವೊಂದು ಜಾರಿಗೆ ಬರಲಿದೆ. ಹೊಸ ನಿಯಮದ ಪ್ರಕಾರ ಫೋನ್ ಪೇ, ಗೂಗಲ್ ಪೇ ನಲ್ಲಿ ಒಂದು ದಿನದಲ್ಲಿ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಬೇಕು. ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ವೀಕ್ಷಣೆ ಮಾಡಬಹುದಾಗಿರುತ್ತದೆ. ಆಟೋ ಪೇ […]

Continue Reading

ಭೀಕರ ರಸ್ತೆ ಅಪಘಾತ: ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಇಬ್ಬರು ಡಿವೈಎಸ್‌ಪಿಗಳು ಸಾವು. ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರಿಗೆ ಗಾಯ

ಶನಿವಾರದಂದು ಹೈದರಾಬಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಪೊಲೀಸ್ ಇಲಾಖೆಯ ಇಬ್ಬರು ಡಿವೈಎಸ್‌ಪಿಗಳು ಸಾವನ್ನಪ್ಪಿದ್ದು, ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.ಪೊಲೀಸ್ ಅಧಿಕಾರಿಗಳು ಅಧಿಕೃತ ಕೆಲಸದ ನಿಮಿತ್ತ ವಿಜಯವಾಡದಿಂದ ಹೈದರಾಬಾದ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ರಸ್ತೆಯ ಇನ್ನೊಂದು ಬದಿಗೆ ಬಿದ್ದು, ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ […]

Continue Reading