ಪಾಕಿಸ್ತಾನದ ಐಎಸ್‌ಐಗೆ ಮಾಹಿತಿ ರವಾನೆ, ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರ ಬಂಧನ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಹರಿಯಾಣ ಮೂಲದ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ, ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್​ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಟ್ರಾವೆಲ್ ವಿಥ್ ಜೋ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ […]

Continue Reading

ಪತ್ನಿಯರನ್ನು ಸಮಾನವಾಗಿ ನೋಡಿಕೊಂಡಲ್ಲಿ ಮುಸ್ಲಿಮರು ಒಬ್ಬರಿಗಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಹೈಕೋರ್ಟ್‌

ಬಹುಪತ್ನಿತ್ವಕ್ಕೆ ಸಕಾರಣವಿದ್ದಲ್ಲಿ ಮತ್ತು ಎಲ್ಲಾ ಪತ್ನಿಯರನ್ನೂ ಸಮಾನವಾಗಿ ನೋಡಿಕೊಂಡಲ್ಲಿ ಮುಸ್ಲಿಮರು ಒಬ್ಬರಿಗಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದು ಎಂದು ಅಲಹಾಬಾದ್ ಹೈಕೋರ್ಟ್‌ ಗುರುವಾರ ಹೇಳಿದೆ. ಮೊದಲ ಮದುವೆಯನ್ನು ಗೌಪ್ಯವಾಗಿಟ್ಟು ತನ್ನನ್ನೂ ಮದುವೆಯಾಗಿ ವಂಚಿಸಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದನ್ನು ಮತ್ತು ಆರೋಪಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಅರುಣ್ ಕುಮಾರ್ ಸಿಂಗ್ ದೇಶವಾಲ್ ಅವರಿದ್ದ ಪೀಠವು ಈ ಅಭಿಪ್ರಾಯ ಹೇಳಿದೆ. ಮುಸ್ಲಿಂ ವೈಯಕ್ತಿಕ […]

Continue Reading

ಕರ್ನಲ್ ಸೋಫಿಯಾ ಖುರೇಷಿ “ಭಯೋತ್ಪಾದಕರ ಸಹೋದರಿ” ಬಿಜೆಪಿ ನಾಯಕ, ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಎಪ್ಐಆರ್.

ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ನಾಯಕ ಮತ್ತು ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದೆ. ಭಾರತೀಯ ನ್ಯಾಯ ಸಂಹಿತಾ, 2023 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಸಚಿವರ ವಿರುದ್ಧ ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತದ […]

Continue Reading

ಒಂದೇ ವೇದಿಕೆಯಲ್ಲಿ ಯುಎಇಯ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಒಟ್ಟುಗೂಡಿಸಿದ ಯಕ್ಷಗಾನ ಅಭ್ಯಾಸ ಕೇಂದ್ರ

ಜೂನ್ 29 ರಂದು ನಡೆಯಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್ 29 ರಂದು ಜರಗಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮೆ.11 ರಂದು ಜರುಗಿತ್ತು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಯುಎಇ ಬಂಟ್ಸ್ […]

Continue Reading

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ: ಒಂದು ಯುಗದ ಅಂತ್ಯ

ನಾಯಕತ್ವ: 68 ಪಂದ್ಯಗಳಲ್ಲಿ 40 ಗೆಲುವುಗಳು, 20 ಶತಕಗಳೊಂದಿಗೆ 5,864 ರನ್‌ಗಳು (ಸರಾಸರಿ 54.80) ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು. ಭಾರತೀಯ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ, ಮಾಜಿ ನಾಯಕ ಮತ್ತು ಆಧುನಿಕ ಕ್ರಿಕೆಟ್‌ನ ಐಕಾನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಕ್ರಿಕೆಟ್ ಜಗತ್ತಿನಾದ್ಯಂತ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಕೊಹ್ಲಿಯ ಟೆಸ್ಟ್ ವೃತ್ತಿಜೀವನವು 14 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಕ್ರಿಕೆಟ್‌ನ ಬೆನ್ನೆಲುಬಾಗಿತ್ತು. ಅವರ ಈ ನಿರ್ಧಾರವು ಕ್ರಿಕೆಟ್ ಇತಿಹಾಸದಲ್ಲಿ […]

Continue Reading

ದೇಶದಾದ್ಯಂತ 515ಕ್ಕೂ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಮಾರು 20 ಆರೋಪಿಗಳ ಬಂಧನ

ದೇಶದಾದ್ಯಂತ 515ಕ್ಕೂ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಮಾರು 20 ಆರೋಪಿಗಳನ್ನು ತೆಲಂಗಾಣ ಸೈಬರ್‌ ಭದ್ರತಾ ಬ್ಯೂರೊ ಅಧಿಕಾರಿಗಳು ಗುಜರಾತ್‌ನ ಸೂರತ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ. ಈ ಪ್ರಕರಣಗಳ ಪೈಕಿ 60 ‍ಪ್ರಕರಣಗಳು ತೆಲಂಗಾಣದಲ್ಲಿಯೇ ದಾಖಲಾಗಿವೆ. ಪ್ರಕರಣಗಳ ಸಂಬಂಧ ಖಾಸಗಿ ಕಂಪನಿಗಳ ಉದ್ಯೋಗಿಗಳು, ಉದ್ಯಮಿಗಳು ಹಾಗೂ ಖಾಸಗಿ ಬ್ಯಾಂಕ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಟಿಜಿಸಿಎಸ್‌ಬಿ ನಿರ್ದೇಶಕ ಶಿಖಾ ಗೋಯಲ್‌ ಮಾಹಿತಿ ನೀಡಿದರು. ಅಕ್ರಮಗಳಿಂದ ಬಂದ ಹಣವನ್ನು ಇತರೆ ಖಾತೆಗಳಿಗೆ ವರ್ಗಾಯಿಸಿದ ಮತ್ತು ಚೆಕ್‌ ಮೂಲಕ ಹಣ ಪಡೆದುಕೊಂಡದ್ದನ್ನು […]

Continue Reading

ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ.? ಬಿಜೆಪಿಯಲ್ಲಿ ಅಸಹಕಾರ ಚಳವಳಿ

ಭಾರತ-ಪಾಕಿಸ್ತಾನದ ನಡುವಣ ಸಂಘರ್ಷ ಕೂಡಾ ಸಿದ್ದುಗೆ ಟಾನಿಕ್ ಯೋಗಿ ಆದಿತ್ಯನಾಥ್ ಅವರನ್ನು ಪ್ರದಾನಿ ಪಟ್ಟಕ್ಕೆ ಕೂರಿಸುವ ಲೆಕ್ಕಾಚಾರ ಸಂಘಪರಿವಾರದಲ್ಲಿದೆ. ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಬಿಜೆಪಿಯಿಂದ ಉಚ್ಚಾಟಿತರಾದ ಬಸವನಗೌಡ ಪಾಟೀಲ್ ಯತ್ನಾಳ್ ಪಕ್ಷದ ವರಿಷ್ಟರಿಗೆ ಒಂದು ಸಂದೇಶ ರವಾನಿಸಿದರು. ಇನ್ನು ಪಕ್ಷದ ಶಿಸ್ತು ಉಲ್ಲಂಘನೆ ನಾಡುವುದಿಲ್ಲ ಎಂಬುದು ಈ ಸಂದೇಶ. ಅರ್ಥಾತ್, ಪಕ್ಷದಿಂದ ಉಚ್ಚಾಟಿತರಾದ ಯತ್ನಾಳ್ ಅವರು ಮರಳಿ ಬಿಜೆಪಿ ಪಾಳಯಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಆದರೆ ಯಡಿಯೂರಪ್ಪ ಗ್ಯಾಂಗನ್ನು ಕಂಡರೆ ಕುದಿಯುವ, ಎಗಾದಿಗಾ ಮಾತನಾಡುವ ಯತ್ನಾಳ್ […]

Continue Reading

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್; ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರಾಗಿ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಗುರುವಾರ ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು. ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ […]

Continue Reading

ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಸುಪ್ರೀಂ ಕೋರ್ಟ್‌ ಸೂಚನೆ

ಜಮ್ಮು ಮತ್ತು ಕಾಶ್ಮೀರದ ಕುಟುಂಬದ ಆರು ಮಂದಿಯ ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚನೆ ನೀಡಿದೆ. ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ವಾಸವಿರುವ ಆರೋಪ ಅವರ ಮೇಲಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ಎನ್‌.ಕೋಟೀಶ್ವರ ಸಿಂಗ್‌ ಅವರು, ಯಾವುದೇ ಕಾಲಮಿತಿ ನಿಗದಿ ಮಾಡದೆ, ಆ ಕುಟುಂಬದ ಪಾಸ್‌ಪೋರ್ಟ್‌, ಆಧಾರ್‌, ಪಾನ್‌ ಕಾರ್ಡ್‌ ಮತ್ತಿತರ ಗುರುತಿನ ದಾಖಲೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿರ್ದಿಷ್ಟ ನಿರ್ಧಾರ ಕೈಗೊಳ್ಳುವವರೆಗೂ ಅಧಿಕಾರಿಗಳು […]

Continue Reading

ಪಹಲ್ಗಾಮ್​: ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣ ಪಣಕ್ಕಿಟ್ಟು ಪ್ರವಾಸಿಗರನ್ನು ರಕ್ಷಿಸಿದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ‘ಪಹಲ್ಗಾಮ್ ಹೀರೋ’

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣವನ್ನು ಲೆಕ್ಕಿಸದೇ ದಾಳಿಯಲ್ಲಿ ಗಾಯಗೊಂಡಿದ್ದ ಪ್ರವಾಸಿಗರನ್ನು ಉಳಿಸುವಲ್ಲಿ ಸಾಹಸ ಮೇರೆದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ಅವರನ್ನು ‘ಪಹಲ್ಗಾಮ್ ಹೀರೋ’ ಎಂದು ಗೌರವಿಸಲಾಗುತ್ತಿದೆ. ಭೀಕರ ದಾಳಿಯ ವೇಳೆ 5 ರಿಂದ 6 ಜನರ ಜೀವ ಉಳಿಸಿದ ರಯೀಸ್ ಅಹ್ಮದ್ ಭಟ್ ಇದೀಗ ‘ಪಹಲ್ಗಾಮ್ ಹೀರೋ’ ಆಗಿದ್ದಾರೆ. ದಾಳಿಯ ವೇಳೆ ಗಾಯಗೊಂಡ ಪ್ರವಾಸಿಗರಿಗೆ ಅವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಹಾಯ ಮಾಡಿದರು. ದಾಳಿಕೋರರ ದಾಳಿಗೆ ಸತ್ತರೂ […]

Continue Reading