ಪ್ರೀತಿಯ ನಾಟಕವಾಡಿ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ; ಆರೋಪ ಸಾಬೀತು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹೈದರಾಬಾದ್‌ಗೆ ಕರೆದೊಯ್ದು ಹಲವಾರು ದಿನಗಳ ಕಾಲ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ನಿವಾಸಿ ನವೀನ್ ಕುಮಾರ್ ದಸ್ತಪ್ಪ ದುದ್ಯಾಲ ಎಂಬಾತನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ. 2025ರ ಮಾರ್ಚ್ 30ರಂದು ಬಾಲಕಿಗೆ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಸಿಕೊಂಡು ಪ್ರೀತಿಸುವುದಾಗಿ ಹೇಳಿ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ […]

Continue Reading

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ಕಳ್ಳತನ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಂಧಿತ ಆರೋಪಿಗಳನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ […]

Continue Reading

ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ

ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]

Continue Reading

ಆಭರಣ ವ್ಯಾಪಾರಿಯೊಬ್ಬರು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3.26 ಕೆ.ಜಿ ತೂಕದ ಬೆಳ್ಳಿಯ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ

ಅಯೋಧ್ಯೆಯಲ್ಲಿ ನಿರ್ಮಾಣವಾದ ಶ್ರೀರಾಮ ಮಂದಿರದಲ್ಲಿ ಕಾಣಿಕೆ ಹಣ ನಾಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಲಖನೌ ಮೂಲದ ಆಭರಣ ವ್ಯಾಪಾರಿಯೊಬ್ಬರು ತಾವು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3 ಕೆ.ಜಿ ತೂಕದ ಬೆಳ್ಳಿಯ ದೀಪದ ಸದ್ಯದ ಸ್ಥಿತಿ ಈಗ ಏನಾಗಿದೆಯೋ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳ್ಳಿ ಗಟ್ಟಿ ಮತ್ತು ಆಭರಣ ವ್ಯಾಪಾರಿಗಳ ಸಂಘದ ಉತ್ತರ ಭಾರತ ಘಟಕದ ಅಧ್ಯ‌ಕ್ಷ ಅನುರಾಗ್ ರಸ್ತೋಗಿ ಈ ಆರೋಪ ಮಾಡಿದ್ದಾರೆ. ಅಯೋಧ್ಯೆಯಲ್ಲಿ 2020ರಲ್ಲಿ ನಡೆದ ಭೂಮಿಪೂಜೆಗೆ ಮುಂಚಿತವಾಗಿ ಸಂಘದ ‘ಐಬಿಜೆಎ’ ವತಿಯಿಂದ ದಾನ […]

Continue Reading

2027ರ ಉ.ಪ್ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬಂದರೆ, ಅದು ಈ ದೇಶದ ಇತಿಹಾಸದ ಕೊನೆಯ ಚುನಾವಣೆ: ಅಖಿಲೇಶ್ ಯಾದವ್ ಭವಿಷ್ಯ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ದೇಶದ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಗಂಭೀರವಾದ ಮತ್ತು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ. ಒಂದು ವೇಳೆ ಮುಂಬರುವ ಲೋಕಸಭಾ ಚುನಾವಣೆ ಹಾಗೂ 2027ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬಂದರೆ, ಅದು ಈ ದೇಶದ ಇತಿಹಾಸದ ಕೊನೆಯ ಚುನಾವಣೆಯಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಆಡಳಿತದಲ್ಲಿ ದೇಶದ ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ ಎಂದು ಅಖಿಲೇಶ್ ಯಾದವ್ ಆತಂಕ […]

Continue Reading

ಜೈಪುರ: ಲಂಚ ಪ್ರಕರಣ; ಜೈಪುರದ ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದ ಬೆಂಗಳೂರು ಪೊಲೀಸರು

ರಾಜಸ್ಥಾನದ ಜೈಪುರದಲ್ಲಿ ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಯೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ದೂರುದಾರರೊಬ್ಬರಿಂದ 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಮೂವರು ಪೊಲೀಸರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿತಾ ಹಾಗೂ ಮುಖ್ಯ ಪೇದೆಗಳಾದ ಯತೀಶ್ ಕುಮಾರ್ ಮತ್ತು ಉಳುವಪ್ಪ ಎಂದು ಗುರುತಿಸಲಾಗಿದೆ. ಕರ್ತವ್ಯದ ನಿಮಿತ್ತ ಜೈಪುರಕ್ಕೆ ತೆರಳಿದ್ದ ಈ ಮೂವರು ಪೊಲೀಸ್ ಅಧಿಕಾರಿಗಳು ಅಲ್ಲಿಯೇ […]

Continue Reading

ಪೊಲೀಸರ ಒಂದು ಸಣ್ಣ ಎಡವಟ್ಟು, ಜೈಲು ಪಾಲಾಗಿ, ಶಿಕ್ಷೆ ಅನುಭವಿಸಿದ ಅಮಾಯಕ

ಜೈಲಲ್ಲೇ ಕೂತು ಕಾನೂನು ಪುಸ್ತಕ ಓದಿ, ಹೈಕೋರ್ಟಲ್ಲಿ ತನ್ನ ಪರ ತಾನೇ ವಾದ ಮಾಡಿ ಗೆದ್ದ ಶೆಟ್ಟಿ ಪೊಲೀಸರ ಒಂದು ಸಣ್ಣ ಎಡವಟ್ಟಿನ ಬೇಜವಾಬ್ದಾರಿ, ನಿರ್ಲಕ್ಷತನದಿಂದ ಒಬ್ಬ ಅಮಾಯಕನ ಬದುಕನ್ನೇ ಹೇಗೆ ನರಕ ಮಾಡಬಹುದು ಅನ್ನೋದಕ್ಕೆ ಈ ಘಟನೆ ಒಂದು ಜೀವಂತ ಉದಾಹರಣೆ. ಹೆಸರಿನ ಸಾಮ್ಯತೆ ಇದೆ ಅನ್ನೋ ಒಂದೇ ಒಂದು ಕಾರಣಕ್ಕೆ ಪೊಲೀಸರು ಮಾಡಿದ ಮಹಾ ಎಡವಟ್ಟಿನಿಂದಾಗಿ, ಒಬ್ಬ ವ್ಯಕ್ತಿ ತನ್ನ ಯೌವನದ ಪ್ರಮುಖ ಏಳು ವರ್ಷಗಳನ್ನು ಜೈಲಿನ ಕತ್ತಲ ಕೋಣೆಯಲ್ಲಿ ಕಳೆಯಬೇಕಾಗಿ ಬಂತು. ಜೈಲಿನಿಂದ […]

Continue Reading

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ ಆರರಂದು ನೀಟ್ ಪರೀಕ್ಷೆ ಅವ್ಯವಸ್ಥೆ ವಿರುದ್ದ CJP ಯಿಂದ ಪ್ರತಿಭಟನೆ

ದೆಹಲಿ: ಪರೀಕ್ಷಾ ಸಂಬಂಧಿತ ಲೋಪದೋಷ, ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ 6 ರಂದು ಭಾರತಕ್ಕೆ ಮರಳುವುದಾಗಿ ಹಾಗೂ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ದಿಪ್ಕೆ ಸೋಮವಾರ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪರೀಕ್ಷಾ ಸಂಬಂಧಿತ ಗೊಂದಲಗಳು ಮತ್ತು ವಿವಾದಗಳು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿವೆ ಮತ್ತು ಸರ್ಕಾರವು ಇದಕ್ಕೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಹೇಳುತ್ತಾ, ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಈ ಅಭಿಯಾನದಲ್ಲಿ […]

Continue Reading

ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ

ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ‌ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ‌ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]

Continue Reading

ರಾಜ್ಯಸಭೆಗೆ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಲು ವರಿಷ್ಠರಿಗೆ ರಾಜ್ಯ ನಾಯಕರ ಶಿಫಾರಸು

ವಿಧಾನ ಪರಿಷತ್ತಿಗೆ ಬಿಜೆಪಿಗೆ 2 ಸ್ಥಾನ, ಆಕಾಂಕ್ಷಿಗಳ ದಂಡು.! ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್‌ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಮ್ಮುಖದಲ್ಲಿ ಪ್ರಮುಖರ ಸಭೆ ಗುರುವಾರ ನಡೆಯಿತು. ಸದಾನಂದ ಗೌಡ ಅವರು ಬಿಜೆಪಿ […]

Continue Reading