ಮಹಾರಾಷ್ಟ್ರ ವಿಧಾನಸಭೆ ಚುನಾವಣೆ; ಹಣ ಹಂಚಿದ ಆರೋಪ, ಐದು ಕೋಟಿ ಜೊತೆಗೆ ಸಿಕ್ಕಿ ಬಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹಣ ಹಂಚುವ ಕುರಿತು ವಿಪಕ್ಷ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರು ಹಣ ಹಂಚಿದ್ದಾರೆ ಎನ್ನುವ ಆರೋಪದ ಮೇಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರಿಗೆ ಥಳಿಸಿದ್ದಾರೆ. ವಿನೋದ್ ತಾವೆ ವಿರಾರ್ ಪಟ್ಟಣದಲ್ಲಿರುವ ಹೋಟೆಲ್‌ವೊಂದರಲ್ಲಿ, ಚುನಾವಣಾ ಕಾರ್ಯಕರ್ತರು ಹಾಗೂ ಮತದಾರರಿಗೆ ರೂಪಾಯಿ 5 ಕೋಟಿ ನಗದು ಹಂಚುತ್ತಿದ್ದರು ಎಂದು ಆರೋಪಿಸಲಾಗಿದೆ. ಹೋಟೆಲ್‌ನಲ್ಲಿ ಕಾರ್ಯಕರ್ತರು ಹಾಗೂ ಮತದಾರರಿಗೆ ರಾಪಾಯಿ 5 ಕೋಟಿ ನಗದು ಹಂಚುತ್ತಿರುವಾಗ ವಿನೋದ್ ತಾವೆ ಸಿಕ್ಕಿಬಿದ್ದಿದ್ದಾರೆ ಎಂದು […]

Continue Reading

ಫ್ಯಾಕ್ಟ್ ಚೆಕ್| ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ವಿವಾಹವಾಗಿದ್ದು ಸಿಂಧಿ ಹಿಂದೂ ಯುವಕ ಅನಿಶ್. ಆತ ಮುಸ್ಲಿಂ ಅಲ್ಲ.!

ಈಗಿನ ಜಮಾನದ್ದು ಸೋಷಿಯಲ್ ಮೀಡಿಯಾ ಯುಗ. ಯಾವುದು ಸತ್ಯ, ಯಾವುದು ಸುಳ್ಳು ಅನ್ನುವುದು ಗೊತ್ತಾಗುವ ಮುನ್ನವೇ ವೈರಲ್ ಆಗಿ ಬಿಡುತ್ತದೆ. ಸೋಶಿಯಲ್ ಮೀಡಿಯಾಗಳಲ್ಲಿ ಬರುವುದೇ ನಿಜವೆಂದು ನಂಬಿ ಫಾರ್ವರ್ಡ್ ಮಾಡಿ ಬಿಡುತ್ತಾರೆ. ಆದರೆ ಕಳೆದ ಎರಡು ದಿನಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಅಂಜಲಿ ಬಿರ್ಲಾ ಕೋಟಾದ ಉದ್ಯಮಿಯೋರ್ವರ ಪುತ್ರ ಮೊಹಮ್ಮದ್ ಅನೀಶ್ ಎಂಬ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾರೆ ಎಂದು ಪೋಸ್ಟ್ ವೈರಲ್ ಆಗಿತ್ತು. ಆದರೆ ಇದರ ಸತ್ಯಾಂಶ ತಿಳಿದಾಗ ವೈರಲ್ ಆಗಿರುವ […]

Continue Reading

ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಅಪ್ರಾಪ್ತ ಪತ್ನಿಯೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ ಪತ್ನಿ ಅತ್ಯಾಚಾರದ ದೂರು ದಾಖಲಿಸಿದ್ದ ವ್ಯಕ್ತಿಗೆ 10 ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿಯುವ ಸಂದರ್ಭದಲ್ಲಿ ಹೈಕೋರ್ಟ್‌ನ ನಾಗ್ಪುರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಒಪ್ಪಿಗೆಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದೆ ಎಂದು ನಿರ್ದಿಷ್ಟಪಡಿಸಿದ ನ್ಯಾಯಮೂರ್ತಿ ಜಿಎ ಸನಪ್ ಅವರ ಪೀಠ, “18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕ ಸಂಪರ್ಕವು ಅತ್ಯಾಚಾರ ಎಂದು ಹೇಳಬೇಕಾಗಿದೆ, ಅವಳು ಮದುವೆಯಾಗಿದ್ದರೂ ಅಥವಾ […]

Continue Reading

ಪ್ರಕರಣಗಳ ಮೌಖಿಕ ಉಲ್ಲೇಖವನ್ನು ನಿಷೇಧಿಸುವ CJI ನಿರ್ದೇಶನದ ಮೇಲೆ ವಕೀಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರು

ಹೊಸದಿಲ್ಲಿ: ತುರ್ತು ಪಟ್ಟಿಗಾಗಿ ಪ್ರಕರಣಗಳನ್ನು ಮೌಖಿಕವಾಗಿ ಉಲ್ಲೇಖಿಸುವುದನ್ನು ನಿಷೇಧಿಸುವ ಭಾರತದ ಹೊಸ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಿರ್ದೇಶನವು ಕಾನೂನು ವಲಯದಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಉಂಟುಮಾಡಿದೆ ಮತ್ತು ಒಂದು ವಿಭಾಗವು “ಶ್ಲಾಘನೀಯ” ಎಂದು ಬಣ್ಣಿಸಿದೆ ಆದರೆ ಇತರರು “ಅತ್ಯಂತ ತುರ್ತು ಪ್ರಕರಣಗಳನ್ನು ಎದುರಿಸಲು ಪ್ರಸ್ತುತ ಅಭ್ಯಾಸವನ್ನು ಮುಂದುವರಿಸಲು ಬಯಸುತ್ತಾರೆ” “. ಮಂಗಳವಾರ ಪ್ರಕಟಿಸಲಾದ ಹೊಸ ನೀತಿಯು ದೀರ್ಘಕಾಲದ ಅಭ್ಯಾಸದಿಂದ ಬದಲಾವಣೆಯನ್ನು ಸೂಚಿಸುತ್ತದೆ, ಅಲ್ಲಿ ವಕೀಲರು ಪ್ರತಿ ದಿನದ ವಿಚಾರಣೆಯ ಪ್ರಾರಂಭದಲ್ಲಿ ಸಿಜೆಐ ನೇತೃತ್ವದ ಪೀಠದ ಮುಂದೆ […]

Continue Reading

ಕರ್ನಾಟಕ ಸೇರಿ ದೇಶಾದ್ಯಂತ ಏಕಕಾಲಕ್ಕೆ ಎನ್ ಐ ಎ ದಾಳಿ ನಡೆಸಿ, ಶೋದಕಾರ್ಯಾಚರಣೆ

ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಲ್ಲಿ ಸೋಮವಾರದಂದು ಏಕಕಾಲಕ್ಕೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್‌ಐಎ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ […]

Continue Reading

ಮಾಜಿ ಕ್ರಿಕೆಟಿಗನ ಪುತ್ರ ಆರ್ಯನ್ ಬಂಗಾರ್ ಲಿಂಗ ಬದಲಾವಣೆ; ಅನಾಯಾ ಎಂದು ನಾಮಕರಣ

ಮಾಜಿ ಕ್ರಿಕೆಟಿಗೆ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಬಂಗಾರ್ ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. 23 ವರ್ಷ ಪ್ರಾಯದ ಆರ್ಯನ್ ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುತ್ತಾರೆ. ಭಾರತದ ಮಾಜಿ ನಾಯಕರೊಂದಿಗೆ ಹಾಗೂ ಅವರ ತಂದೆಯೊಂದಿಗೆ ಕೆಲವು ಹಳೆಯ ಚಿತ್ರಗಳನ್ನು ಪೋಸ್ಟ್ ಮಾಡಿ, ಲಿಂಗ ಬದಲಾವಣೆಯ ಥೆರಪಿಯೊಂದಿಗೆ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ, ಕ್ರಿಕೆಟಿಗ ತನ್ನನ್ನು ಅನಾಯಾ ಎಂದು ಗುರುತಿಸಿಕೊಂಡಿದ್ದಾಳೆ. ತನ್ನ ತಂದೆಯಂತೆಯೇ ಕ್ರಿಕೆಟಿಗ, […]

Continue Reading

ಬಿಜೆಪಿ ಸಿದ್ಧಾಂತಕ್ಕೆ ಒಗ್ಗಿಕೊಳ್ಳದ ಕಳಂಕಿತರನ್ನು ಹೊರಗೆ ಹಾಕುವ ಕೆಲಸ ಆಗಬೇಕು; ಕಳಂಕಿತರನ್ನು ಪ್ರಮುಖ ಸ್ಥಾನದಿಂದ ಹೊರಗೆ ಇಡದೇ ಇದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ: ಗಡ್ಕರಿ

ಬಿಜೆಪಿ ಪಕ್ಷವನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪಕ್ಷಾಂತರದ ಮೂಲಕ ಸೆಳೆಯಲಾಗುತ್ತಿದೆ. ಆದರೆ ಕಳಂಕಿತ ರಾಜಕಾರಣಿಗಳ ಸೇರ್ಪಡೆಯಿಂದ ಪಕ್ಷದ ವರ್ಚಸ್ಸು ಕುಂದುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೈದ್ಧಾಂತಿಕ ಪಕ್ಷವಾಗಿದ್ದು, ಈ ಸಿದ್ಧಾಂತ ಒಪ್ಪಿ ಬರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೇರಿಸಿಕೊಳ್ಳಬೇಕು. ಆದರೆ ಕಳಂಕಿತ ರಾಜಕಾರಣಿಗಳನ್ನು ಪ್ರಮುಖ ಸ್ಥಾನದಿಂದ ಹೊರಗೆ ಇಡದೇ ಇದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ ಎಂದು ಹೇಳಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಚರ್ಚೆಯ ವೇಳೆ ಮಾತನಾಡಿದ […]

Continue Reading

ಜಾರ್ಖಂಡ್ ‌ನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ, ಸಿಎಂ ಹೇಮಂತ್ ಸೋರೆನ್ ಆಪ್ತರ ಬಳಿ ಶೋಧ

ರಾಂಚಿ: ತೆರಿಗೆ ವಂಚನೆ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಶನಿವಾರ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ಸಂಪರ್ಕ ಹೊಂದಿರುವ ವ್ಯಕ್ತಿಯ ಆವರಣ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂಜಾನೆ ಆರಂಭವಾದ ಕಾರ್ಯಾಚರಣೆಯಲ್ಲಿ ರಾಜ್ಯದ ರಾಜಧಾನಿ ರಾಂಚಿ ಮತ್ತು ಜೆಮ್‌ಶೆಡ್‌ಪುರದ ಒಟ್ಟು ಒಂಬತ್ತು ಆವರಣಗಳ ಮೇಲೆ ದಾಳಿ ನಡೆಸಲಾಗಿದೆ. ಸಿಆರ್‌ಪಿಎಫ್‌ನ ಭದ್ರತಾ ತಂಡವೊಂದು ಐಟಿ ದಾಳಿಗೆ ನೆರವು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಆಪ್ತರಾಗಿರುವ ಸುನೀಲ್ ಶ್ರೀವಾಸ್ತವ್ ಅವರಿಗೆ […]

Continue Reading

ಹತ್ತು ವರ್ಷಕ್ಕಿಂತ ಹೆಚ್ಚು ಹಳೆಯ ಆಧಾರ್ ಕಾರ್ಡ್ ನವೀಕರಿಸುವುದು ಕಡ್ಡಾಯವಾಗಿದೆ.

ಇತ್ತೀಚೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೀಡಿದ ನಾಗರಿಕರಿಗೆ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಸರ್ಕಾರ ಹೊರಡಿಸಿರುವ ಈ ಹೊಸ ಸಲಹೆಯ ಪ್ರಕಾರ, ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹೆಚ್ಚು ಹಳೆಯ ಆಧಾರ್ ಕಾರ್ಡ್ ನವೀಕರಿಸುವುದು ಕಡ್ಡಾಯವಾಗಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಅಥವಾ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ಇತರ ಹಣಕಾಸು ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಆಧಾರ್ ಕಾರ್ಡ್ ಬಳಸಲಾಗುವ ದಾಖಲೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ […]

Continue Reading

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿಗಳಿಗೆ 25 ಲಕ್ಷ ನಗದು, ಫ್ಲ್ಯಾಟ್​, ಕಾರು, ದುಬೈ ಪ್ರವಾಸದ ಭರವಸೆ ನೀಡಲಾಗಿತ್ತಂತೆ

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ನಾಲ್ವರಿಗೆ 25 ಲಕ್ಷ ರೂ. ನಗದು ಹಣ, ಫ್ಲ್ಯಾಟ್​, ಕಾರು ಮತ್ತು ದುಬೈ ಪ್ರವಾಸದ ಭರವಸೆ ನೀಡಲಾಗಿತ್ತು ಎಂದು ವಿಚಾರಣೆ ವೇಳೆ ಬಂಧಿತರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬರಾದ ರಾಮ್​ಚಂದ್​ಪೂಲ್​ ಕನೋಜಿಯಾ ಎಂಬಾತನಿಂದ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ಕು ಯುವ ಆರೋಪಿಗಳಿಗೆ ಈ ಭರವಸೆ ನೀಡಿದ್ದನು ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಯುವ ಆರೋಪಿಗಳಾದ ರೂಪೇಶ್ ಮೊಹೋಲ್, ಶಿವಂ ಕೊಹಾದ್, ಕರಣ್ ಸಾಳ್ವೆ, ಮತ್ತು […]

Continue Reading