ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿದರೆ, ದೆಹಲಿಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಲಿದೆ: ಪ್ರಶಾಂತ್ ಕಿಶೋರ್

2025ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೈತ್ರಿಕೂಟವನ್ನು (NDA) ಮುನ್ನಡೆಸುವವರು ಯಾರು.? 2025ರಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸ್ಪರ್ಧೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು (NDA) ಯಾರು ಮುನ್ನಡೆಸುತ್ತಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಗೆ ನಿರ್ಣಾಯಕ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಿಶೋರ್ ಪ್ರಕಾರ, ಬಿಹಾರದ ಮುಖ್ಯಮಂತ್ರಿ ಸ್ಥಾನದಿಂದ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿದರೆ, ದೆಹಲಿಯಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಲಿದೆ. ರಾಷ್ಟ್ರೀಯ ಚುನಾವಣಾ ಫಲಿತಾಂಶಗಳು ಬಿಜೆಪಿಯು […]

Continue Reading

ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಭ್ರಷ್ಟಾಚಾರ ಆರೋಪ; ಮಹಾರಾಷ್ಟ್ರದ 33 ಕಡೆ ಸಿಬಿಐ ದಾಳಿ, 14 ಜನರ ವಿರುದ್ಧ ಪ್ರಕರಣ ದಾಖಲು, ಇಬ್ಬರ ಬಂಧನ.

ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ 33 ಕಡೆ ಸಿಬಿಐ ದಾಳಿ ನಡೆಸಿ 14 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಿದೆ. ಲೋಯರ್ ಪ್ಯಾರೆಲ್ ಹಾಗೂ ಮಲಾಡ್‌ನಲ್ಲಿರುವ ಸೇವಾ ಕೇಂದ್ರಗಳಲ್ಲಿನ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಜಾಲವು ಈ ಭ್ರಷ್ಟಾಚಾರದಲ್ಲಿ ತೊಡಗಿರುವುದನ್ನು ಪತ್ತೆ ಮಾಡಿರುವ ಸಿಬಿಐ ಅಧಿಕಾರಿಗಳು ಏಜೆಂಟರು ಹಾಗೂ ಮಧ್ಯವರ್ತಿಗಳ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಿದೆ. ಈ ಮಧ್ಯವರ್ತಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅಧಿಕಾರಿಗಳು ಅಗತ್ಯ ದಾಖಲೆ ಇಲ್ಲದಿದ್ದರೂ, ಅವುಗಳನ್ನು […]

Continue Reading

ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಿಗೆ ತಿದ್ದುಪಡಿ; ಜುಲೈ 1 ರಿಂದ ಜಾರಿ: ಟೆಲಿಕಾಂ ನಿಯಂತ್ರಣ ಪ್ರಾಧಿಕಾರ

ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಹೇಳಿದೆ. ಟ್ರಾಯ್ ಕಳೆದ ವಾರ ತನ್ನ ಮೊಬೈಲ್ ನಂಬರ್ ಪೋರ್ಟೆಬಿಲಿಟಿ ನಿಯಮಗಳಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ. ಇತ್ತೀಚಿನ ತಿದ್ದುಪಡಿಯ ಪ್ರಕಾರ, ಸಿಮ್ ಕಾರ್ಡ್ ಅನ್ನು ಬದಲಾಯಿಸಿದರೆ ಸಂಬಂಧಿತ ಮೊಬೈಲ್ ಸಂಖ್ಯೆಯನ್ನು ಏಳು ದಿನಗಳವರೆಗೆ ಬೇರೆ ಟೆಲಿಕಾಂ ಆಪರೇಟರ್‌ಗೆ ಪೋರ್ಟ್ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಸಿಮ್ ಸ್ವಾಪ್ ಬಳಿಕ 10 ದಿನ ಕಾಯಬೇಕಿತ್ತು. ಆದರೆ ಇತ್ತೀಚಿನ […]

Continue Reading

ಎಫ್‌ಐಆರ್‌ ದಾಖಲಾಗುವ ಮುನ್ನವೇ ಕೇಂದ್ರ ಗೃಹ ಇಲಾಖೆಯಿಂದ ಬಂದಿದ್ದ ಪತ್ರ; ಯೆಡಿಯೂರಪ್ಪ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲು ಸೂಚಿನೆ

ಲೈಂಗಿಕ ದರ್ಜನ್ಯ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪರವರನ್ನು ಬಂಧಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಡ ಹೇರಿದ್ದರು ಎಂಬ ಆರೋಪ ಕೇಳಿಬಂದಿದೆ. ನ್ಯೂಸ್‌ ಮಿನಿಟ್‌ ಎಂಬ ಸುದ್ದಿ ಸಂಸ್ಥೆಯೊಂದು ಈ ಕುರಿತು ವರದಿ ನೀಡಿದ್ದು, ಒಂದು ವಾರದ ಹಿಂದೆಯೇ ಕರ್ನಾಟಕ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದ್ದ ಕೇಂದ್ರ ಗೃಹ ಇಲಾಖೆ, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ದ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ಕೇಳಿತ್ತು ಎಂದು ಹೇಳಿದೆ. ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ದ ಎಫ್‌ಐಆರ್‌ ದಾಖಲಾಗುವ ಮುನ್ನವೇ […]

Continue Reading

ಉತ್ತಮ ರಸ್ತೆಗಳನ್ನು ನಿರ್ಮಿಸಲು ಸಾಧ್ಯವಾಗದಿದ್ದಾಗ ಟೋಲ್ ವಿಧಿಸುವುದು ಸರಿಯಲ್ಲ. ರಸ್ತೆಗಳು ಉತ್ತಮವಾಗಿಲ್ಲದಿದ್ದರೆ ಜನರು ಸಂತೋಷಪಡುವುದಿಲ್ಲ: ನಿತಿನ್ ಗಡ್ಕರಿ

ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾಹನ ಸವಾರರು ಸಂಚರಿಸುವ ರಸ್ತೆಗಳು ಕಳಪೆಯಾಗಿರುವ ಪ್ರದೇಶಗಳಲ್ಲಿ ಟೋಲ್ ಶುಲ್ಕ ವಿಧಿಸದಂತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಏಜೆನ್ಸಿಗಳಿಗೆ ಸೂಚಿಸಿದ್ದಾರೆ. ನೀವು ನೀಡುವ ಸೇವೆಗಳು ಉತ್ತಮವಾಗಿಲ್ಲದಿದ್ದಾಗ ಟೋಲ್ ವಿಧಿಸಬೇಡಿ. ರಸ್ತೆಗಳು ಉತ್ತಮವಾಗಿಲ್ಲದಿದ್ದರೆ ಜನರು ಸಂತೋಷಪಡುವುದಿಲ್ಲ. ಅನೇಕರು ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಆದ್ದರಿಂದ ಉತ್ತಮ ರಸ್ತೆಗಳನ್ನು ನಿರ್ಮಿಸಲು ಸಾಧ್ಯವಾಗದಿದ್ದಾಗ ಟೋಲ್ ವಿಧಿಸುವುದು ಸರಿಯಲ್ಲ. ಗುಂಡಿ ಬಿದ್ದ ರಸ್ತೆಗಳಲ್ಲಿ ಟೋಲ್ ಸಂಗ್ರಹಿಸಿದರೆ, ರಾಜಕಾರಣಿಗಳಾದ ನಾವು ಜನರ ಕೋಪವನ್ನು […]

Continue Reading

ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಹೊಸ ಕಾನೂನುಗಳ ಅನುಷ್ಠಾನ ಮುಂದೂಡುವಂತೆ ಕೋರಿ ಪಿಯುಸಿಎಲ್ ಮನವಿ

ಬೆಂಗಳೂರು: ಹಿಂದಿನ ವರ್ಷ ದಿಸೆಂಬರ್ ನಲ್ಲಿ ಕೇಂದ್ರ ಸರಕಾರ ಅಂಗೀಕರಿಸಿದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಕಾನೂನಗಳು ಮುಂದಿನ ತಿಂಗಳ ಆರಂಭದಿಂದ ಅನುಷ್ಠಾನ ಗೊಳ್ಳುವುದನ್ನು ಮುಂದೂಡುವಂತೆ ದೇಶದ ಪ್ರಮುಖ ಮಾನವ ಹಕ್ಕು ಸಂಘಟನೆಯಾದ ಪೀಪಲ್ಸ್ ಯುನಿಯನ್ ಫಾರ್ ಸಿವಿಲ್ ಲಿಬೆರ್ಟೀಸ್ ಸಂಸ್ಥೆಯು ಕೇಂದ್ರ ಕಾನೂನು ಮಂತ್ರಿಯಾದ ಶ್ರೀ ಅರುಣ್ ಮೇಘವಾಲ್ ರವರಿಗೆ ಪತ್ರ ಬರೆದು, ಮೂರು ಕಾನೂನುಗಳ ಅನುಷ್ಠಾನದ ಮೊದಲು ಸದ್ರಿ ಕಾನೂನಿನ ಬಗ್ಗೆಗಿನ ಮತ್ತು […]

Continue Reading

ಬಿಜೆಪಿಯ ಹಿರಿಯ ನಾಯಕಿ ವಸುಂಧರಾ ರಾಜೆ ಸಿಂಧಿಯಾ ಮತ್ತೆ ಬಂಡಾಯದ ಬಾವುಟ ಹಾರಿಸುವ ಮುನ್ಸೂಚನೆ

ಅಂದು ರಾಜಕೀಯದಲ್ಲಿ ನಿಷ್ಠೆ, ಗೌರವ ಇತ್ತು. ಇಂದು ಮೊದಲು ನಡೆಯಲು ಕಲಿಸಿದವರ ಬೆರಳನ್ನೇ ಕಡಿಯಲು ಬಯಸುತ್ತಿದ್ದಾರೆ: ವಸುಂಧರಾ ರಾಜೇ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಬಿಜೆಪಿಯ ಹಿರಿಯ ನಾಯಕಿ ವಸುಂಧರಾ ರಾಜೆ ಸಿಂಧಿಯಾ ಮತ್ತೆ ಬಂಡಾಯದ ಬಾವುಟ ಹಾರಿಸುವ ಮುನ್ಸೂಚನೆ ನೀಡಿದ್ದಾರೆ. ಸುಂದರ್‌ ಸಿಂಗ್‌ ಭಂಡಾರಿ ಚಾರಿಟೇಬಲ್‌ ಟ್ರಸ್ಟ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಾಗವಹಿಸಿ, ನಿಷ್ಠೆ ಮತ್ತು ರಾಜಕೀಯ ಬೆಳವಣಿಗೆ ಕುರಿತು ಅವರು ನೀಡಿರುವ ಹೇಳಿಕೆ ಬಿಜೆಪಿಯಲ್ಲಿ ಭಾರೀ ಅಲ್ಲೊಲ್ಲ ಕಲ್ಲೊಲ ಸೃಷ್ಟಿಸಿದೆ. ರಾಜಕೀಯದಲ್ಲಿ ಬಡ್ತಿ ಕೊಡುವ ವ್ಯಕ್ತಿಯನ್ನು ಗೌರವಿಸುತ್ತಿದ್ದ […]

Continue Reading

ರಾಮಲಲ್ಲಾನ ಗರ್ಭಗುಡಿಯಲ್ಲಿ ಸಂಗ್ರಹವಾದ ನೀರು ಹೊರಹೋಗುವ ವ್ಯವಸ್ಥೆಯಲ್ಲಿ ದೋಷ. ಅರ್ಚಕರು, ದೇವಸ್ಥಾನದ ಆಡಳಿತ ಮಂಡಳಿಗೆ ಆತಂಕ.!

ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಇದು ಅಲ್ಲಿನ ಅರ್ಚಕರಿಗೆ ತಲೆನೋವಾಗಿ ಪರಿಣಮಿಸಿದೆ. ದೇವರಿಗೆ ಜಲಾಭಿಷೇಕ ನಂತರದಲ್ಲಿ ಗರ್ಭಗುಡಿಯಲ್ಲಿ ಸಂಗ್ರಹವಾಗಿರುವ ನೀರು ಹೊರಹೋಗಲು ಒಳಚರಂಡಿ ವ್ಯವಸ್ಥೆಯಲ್ಲಿ ದೋಷಗಳು ಇರುವುದರಿಂದ ನಿತ್ಯದ ಪೂಜಾ ಕೈಂಕರ್ಯಗಳಿಗೆ ಬಳಸುವ ನೀರು ಹರಿದು ಹೋಗದೇ ಇರುವುದು, ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಗೆ ಆತಂಕ ತಂದಿದೆ. ದೇವರ ಅಲಂಕಾರ ಸಮಾರಂಭದ ಮೊದಲು ರಾಮಲಲ್ಲಾನಿಗೆ ಪ್ರತಿದಿನ ಸ್ನಾನ ಮಾಡಿಸಲಾಗುತ್ತದೆ. ಈ ಆಚರಣೆಯಲ್ಲಿ […]

Continue Reading

ಈ ವರ್ಷ ಸಾವಿರಾರು ಮಂದಿ ಕೋಟ್ಯಾಧಿಪತಿಗಳು ಭಾರತವನ್ನೇ ತೊರೆಯಲಿದ್ದಾರೆ

ಒಂದು ದೇಶವು ಹೆಚ್ಚಿನ ಸಂಖ್ಯೆಯ ಮಿಲಿಯನೇರ್‌ಗಳನ್ನು ಕಳೆದುಕೊಳ್ಳುತ್ತಿದ್ದರೆ, ಆ ದೇಶದಲ್ಲಿನ ಗಂಭೀರ ಸಮಸ್ಯೆಗಳಿಂದ ಅದು ಸಂಭವಿಸುತ್ತಿದೆ ಸಾವಿರಾರು ಮಂದಿ ಕೋಟ್ಯಾಧಿಪತಿಗಳು ಭಾರತವನ್ನೇ ತೊರೆಯಲಿದ್ದಾರೆ. ವರದಿಯ ಪ್ರಕಾರ ಈ ವರ್ಷ ಸುಮಾರು 4300 ಮಿಲಿಯನೇರ್‌ಗಳು ದೇಶವನ್ನು ತೊರೆಯುವ ನಿರೀಕ್ಷೆಯಿದೆ. ಪ್ರತಿ ವರ್ಷ ದೇಶದ ಮಿಲಿಯನೇರ್‌ಗಳ ಪಟ್ಟಿಯಲ್ಲಿ ಅನೇಕ ಹೊಸಮುಖಗಳಿರುತ್ತವೆ. ಅದೇ ರೀತಿ ದೇಶ ಬಿಟ್ಟು ಹೋಗುವವರ ಸಂಖ್ಯೆಯೂ ಕಡಿಮೆಯೇನಿಲ್ಲ. ಆರ್ಥಿಕ ತಜ್ಞರ ಪ್ರಕಾರ ಈ ಮಿಲಿಯನೇರ್‌ಗಳ ಮೂಲಕ ಹೊರಹೋಗುವ ಹಣವು ವಿಶೇಷ ಕಾಳಜಿಯ ವಿಷಯವಲ್ಲ. ಏಕೆಂದರೆ ದೇಶವನ್ನು ತೊರೆಯುವ […]

Continue Reading

17,840 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ, 21.8 ಕಿ.ಮೀ ಉದ್ದದ ಅಟಲ್ ಸೇತು ಬಿರುಕು, ಭ್ರಷ್ಟಾಚಾರದ ವಾಸನೆ: ಪಟೋಳೆ

ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆರೋಪಿಸಿದ್ದಾರೆ. ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಆರೋಪಿಸಿದ್ದಾರೆ. ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ ಎಂದು ಪ್ರತಿಪಾದಿಸಿದರು. ಸೇತುವೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಳೆ, ರಾಜ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲ […]

Continue Reading