ಅಪ್ರಾಪ್ತ ಬಾಲಕನಿಂದ 10 ವರ್ಷ ಪ್ರಾಯದ ಬಾಲಕಿಯನ್ನು ಎತ್ತೊಯ್ದು ಅಮಾನುಷವಾಗಿ ಅತ್ಯಾಚಾರ

ಬಾಲಕಿ ತನ್ನ ಕುಟುಂಬಸ್ಥರ ಜತೆ ಮಾಳಿಗೆಯ ಮೇಲೆ ಮಲಗಿದ್ದಳು. ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ನೆರೆಯ ಸ್ಲಂ ನಿವಾಸಿ ಬಾದಲ್ ಹುಡುಗಿಯನ್ನು ಎತ್ತಿಕೊಂಡು ಹೋಗಿ ಖಾಲಿಯಿದ್ದ ಪ್ಲಾಟ್ ಒಂದರಲ್ಲಿ ಕುಕೃತ್ಯವನ್ನು ಎಸಗಿದ್ದಾನೆ. ಬಾಲಾಪರಾಧಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಜಿಲ್ಲೆಯ ಲೋನಿ ಕ್ಷೇತ್ರದಲ್ಲಿ ಕಳವಳಕಾರಿ ಘಟನೆಯೊಂದು ನಡೆದಿದ್ದು, ಮಾಳಿಗೆಯ ಮೇಲೆ ಮಲಗಿದ್ದ ನೆರಮನೆಯ ನಿವಾಸಿ 10ರ ಪ್ರಾಯದ ಬಾಲಕಿಯನ್ನು ಅಪಹರಿಸಿದ 16 ವರ್ಷದ ಬಾಲಕನೊಬ್ಬ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿದ್ದಾನೆ. ಮಗುವಿನ ಅಳುವಿನ […]

Continue Reading

ಅನ್ಯ ರಾಜ್ಯಗಳಲ್ಲಿ FIR ಆದರೂ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ತೀರ್ಪು

ಅನ್ಯ ರಾಜ್ಯಗಳಲ್ಲಿ ಎಫ್ ಐ ಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್ ಹಾಗೂ ಸೆಷನ್ಸ್ ನ್ಯಾಯಾಲಯಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಾಗರಿಕರ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಸಾಂವಿಧಾನಿಕ ಅಗತ್ಯವನ್ನು ಪರಿಗಣಿಸಿ ಅತಿ ಅಪರೂಪದ ಸಂದರ್ಭಗಳಲ್ಲಿ ಕೆಲವು ಸೀಮಿತ ಷರತ್ತುಗಳೊಂದಿಗೆ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದಾಗಿದೆ ಎಂದು ನ್ಯಾಯಮೂರ್ತಿ ಬಿ.ವಿ ನಾಗರತ್ನ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ಹೇಳಿದೆ. “ಆರೋಪಿಗೆ ಬಂಧನ ರಕ್ಷಣೆ […]

Continue Reading

ಆಧಾರ್ ಆಫ್ ಡೇಟ್ ಗೆ ಡಿಸೆಂಬರ್ 14 ಕೊನೆಯ ದಿನ. ತಪ್ಪಿದಲ್ಲಿ ಭಾರಿ ದಂಡ ಸಾಧ್ಯತೆ

10 ವರ್ಷ ಅವದಿ ಮುಗಿದ ಆಧಾರ್ ಕಾರ್ಡ್ ಗೆ ದಾಖಲಾತಿ ಅಪ್ಲೋಡ್ ಮಾಡಿ ಆಧಾರ್ ಕಾರ್ಡ್ ನವೀಕರಿಸಲು ಡಿಸೆಂಬರ್ 14 ಕೊನೆಯ ದಿನಾಂಕ ಎಂದು ಆಧಾರ್ ಪ್ರಾಧಿಕಾರ ತಿಳಿಸಿದೆ. ತಪ್ಪಿದಲ್ಲಿ ಆಧಾರ್ ಕಾರ್ಡ ನಿಷ್ಕ್ರೀಯಗೊಳ್ಳಲಿದೆ ಎಂದು ಉಲ್ಲೇಖಿಸಲಾಗಿದೆ. ಆಧಾರ್ ಕಾರ್ಡ್ ಹೊಂದಿರುವ ನಾಗರಿಕರು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು 10 ವರ್ಷಕ್ಕೆ ಒಮ್ಮೆ ತಮ್ಮ ಆಧಾರ್ ಕಾರ್ಡ್ ನಲ್ಲಿ ದಾಖಲಾಗಿರುವ ಗುರುತಿನ ವಿವರ ಮತ್ತು ವಿಳಾಸದ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯವಾಗಿರುತ್ತದೆ. ಇದರ […]

Continue Reading

ಕಾಶ್ಮೀರಿ ಪಂಡಿತರೊಬ್ಬರ ಅಂತಿಮ ವಿಧಿಗಳನ್ನು ನೆರೆಹೊರೆಯ ಮುಸ್ಲಿಮರು ನೆರವೇರಿಸಿ ಕೋಮು ಸೌಹಾರ್ದತೆಯ ಸಂಪ್ರದಾಯವನ್ನು ನೆನಪಿಸಿದ್ದಾರೆ.

ಮಂಗಳವಾರ ಸಂಜೆ ನಿಧನರಾದ ಕಾಶ್ಮೀರಿ ಪಂಡಿತರೊಬ್ಬರ ಅಂತಿಮ ವಿಧಿಗಳನ್ನು ಇಲ್ಲಿನ ನೆರೆಹೊರೆಯ ಮುಸ್ಲಿಮರು ನೆರವೇರಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿನ ಕೋಮು ಸೌಹಾರ್ದತೆಯ ಸಂಪ್ರದಾಯವನ್ನು ನೆನಪಿಸಿದ್ದಾರೆ. ಅಶೋಕ್ ಕುಮಾರ್ ವಾಂಗೂ ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಪಾಂಪೋರ್ ಪಟ್ಟಣದ ಡ್ರಂಗಬಾಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಪಾರ್ಥಿವ ಶರೀರವನ್ನು ಜಮ್ಮುವಿಗೆ ಕೊಂಡೊಯ್ಯುವ ಬದಲು ಕಾಶ್ಮೀರ ಪಂಡಿತ ಸಮುದಾಯವು ಇಲ್ಲಿಯೇ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ನಿರ್ಧರಿಸಿತು. ಈ ಸಂದರ್ಭ ನೆರೆಯ ಮುಸ್ಲಿಂ ಸಮುದಾಯದ ಜನರು ಪಂಡಿತರ […]

Continue Reading

ವೈದ್ಯಕೀಯ ಸೀಟುಗಳ ಮೇಲೆ ಮಿತಿ ಹೇರುವ ಆಯೋಗದ ನಿಲುವಿಗೆ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯೋಗ ತನ್ನ ನಿರ್ಧಾರವನ್ನು ತಡೆಹಿಡಿದಿದೆ

ದಕ್ಷಿಣ ರಾಜ್ಯಗಳಲ್ಲಿರುವ ವೈದ್ಯಕೀಯ ಕಾಲೇಜುಗಳಲ್ಲಿ ಹೊಸ ವೈದ್ಯಕೀಯ ಸೀಟುಗಳ ಸಂಖ್ಯೆ ಮೇಲೆ ಮಿತಿ ಹೇರುವ ಕುರಿತ ತನ್ನ ನಿರ್ಧಾರವನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಬುಧವಾರ ತಡೆಹಿಡಿದಿದೆ. ಹೀಗಾಗಿ, ಕರ್ನಾಟಕ, ತಮಿಳುನಾಡು ಮತ್ತಿತರ ರಾಜ್ಯಗಳಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವ ಆಯ್ಕೆ ಲಭಿಸಿದಂತಾಗಿದೆ. ‘ಪ್ರತಿ 10 ಲಕ್ಷ ಜನಸಂಖ್ಯೆಗೆ 100 ಎಂಬಿಬಿಎಸ್‌ ಸೀಟುಗಳು ಇರಬೇಕು ಎಂಬ ತನ್ನ ಈ ಹಿಂದಿನ ನಿರ್ಧಾರವನ್ನು 2025-26ನೇ ಶೈಕ್ಷಣಿಕ ವರ್ಷದಿಂದ ಅನುಷ್ಠಾನಗೊಳಿಸಲಾಗುತ್ತದೆ’ ಎಂದು ಆಯೋಗವು ತನ್ನ ಆದೇಶದಲ್ಲಿ […]

Continue Reading

ಒಬೆರಾಯ್ ಗ್ರೂಪ್‌ನ ಅಧ್ಯಕ್ಷ, ಒಬೆರಾಯ್ ಹೊಟೇಲ್ ಮಾಲಿಕ ಆರ್‌.ಎಸ್ ಒಬೆರಾಯ್ ನಿಧನ.

ಒಬೆರಾಯ್ ಗ್ರೂಪ್‌ನ ಅಧ್ಯಕ್ಷ ಆರ್‌.ಎಸ್ ಒಬೆರಾಯ್ ಇಂದು ಬೆಳಿಗ್ಗೆ ನಿಧನರಾದರು. PRS ಒಬೆರಾಯ್ ಭಾರತದಲ್ಲಿ ಹೋಟೆಲ್ ಉಧ್ಯಮದ ರೂಪವನ್ನು ಬದಲಾಯಿಸುವಲ್ಲಿ ಹೆಸರುವಾಸಿಯಾಗಿದ್ದರು. ದಿ ಒಬೆರಾಯ್ ಗ್ರೂಪ್‌ನ ಪ್ರಮುಖ ಕಂಪನಿಯಾದ EIH ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದರು. ಅವರು EIH ಲಿಮಿಟೆಡ್‌ನ ಪ್ರಮುಖ ಷೇರುದಾರರಾದ ಒಬೆರಾಯ್ ಹೋಟೆಲ್ಸ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದರು. ಹಲವಾರು ದೇಶಗಳಲ್ಲಿ ಐಷಾರಾಮಿ ಹೋಟೆಲ್‌ಗಳ ನಿರ್ವಹಣೆಗೆ ನಾಯಕತ್ವವನ್ನು ಒದಗಿಸುವುದರ ಜೊತೆಗೆ, ಒಬೆರಾಯ್ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳ ಅಭಿವೃದ್ಧಿಯ ಪ್ರವರ್ತಕರಲ್ಲಿ PRS ಒಬೆರಾಯ್ ಪ್ರಮುಖ ಪಾತ್ರ ವಹಿಸಿದ್ದಾರೆ. […]

Continue Reading

ಲೋಕಸಭಾ ಚುನಾವಣೆ: 13 ಮಂದಿ ಹಾಲಿ ಸಂಸದರಿಗೆ ಕೋಕ್ ನೀಡಿ, ಹೊಸಬರಿಗೆ ಮಣೆಹಾಕಲು ಬಿಜೆಪಿ ಚಿಂತನೆ.!

ಲೋಕಸಭಾ ಚುನಾವಣೆ ಒಟ್ಟಿನಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿಗಳಿಗೆ ಟಿಕೆಟ್ ತಪ್ಪಲಿದ್ದು, ಬಹುತೇಕ ಹೊಸಬರಿಗೆ ಮಣೆಹಾಕಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮಾಡಿದಂತೆ ಈ ಬಾರಿಯೂ ಪ್ರಯೋಗ ನಡೆಯಲಿದೆ. ಆದರೆ, ಮೊದಲೇ ಮಾಹಿತಿ ನೀಡಿ ಬಂಡಾಯ ಏಳದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಟಿಕೆಟ್ ಪ್ರಕಟಿಸಲಿದೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಹಾಲಿ ಶಾಸಕರಿಗೆ ಕೋಕ್ ನೀಡಿ ಹೊಸಬರಿಗೆ ಮಣೆಹಾಕಿ ನಡೆಸಿದ್ದ ಪ್ರಯೋಗವನ್ನು ಲೋಕಸಭಾ ಚುನಾವಣೆಯಲ್ಲಿಯೂ ನಡೆಸಲು ಬಿಜೆಪಿ ಹೈಕಮಾಂಡ್ ಚಿಂತನೆಯಲ್ಲಿದೆ. 13 ಕ್ಷೇತ್ರಗಳಲ್ಲಿ ಹಾಲಿ ಸಂಸದರ […]

Continue Reading

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಲೋಕಸಭೆಯ ನೈತಿಕ ಸಮಿತಿ ಶಿಫಾರಸು

ನವದೆಹಲಿ: ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಇಲ್ಲಿ ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎನ್ನಲಾಗಿದೆ. ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು […]

Continue Reading

ತನಿಖಾ ಸಂಸ್ಥೆಗಳನ್ನು ಬಳಸಿ ಸರಕಾರ ಮಾಧ್ಯಮ ನಿಯಂತ್ರಿಸುವ ಗೋಜಿಗೆ ಹೋಗಬೇಡಿ: ಸುಪ್ರೀಂ ಕೋರ್ಟ್ ಕಿವಿಮಾತು

ಮಾಧ್ಯಮಗಳ ಕಾರ್ಯ ನಿರ್ವಹಣೆಗೆ ಮುಕ್ತ ಸ್ವಾತಂತ್ರ್ಯ ಇರಬೇಕು ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಸರ್ಕಾರವು ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಗೋಜಿಗೆ ಹೋಗಬಾರದು ಎಂದು ಸೂಚ್ಯವಾಗಿ ತಿಳಿಸಿದೆ. ಮಾಧ್ಯಮಗಳಿಗೆ ಮುಕ್ತ ಸ್ವಾತಂತ್ರ್ಯ ಕಲ್ಪಿಸಬೇಕು. ಪತ್ರಕರ್ತರ ಡಿಜಿಟಲ್ ಸಾಧನೆಗಳ ಪರಿಶೀಲನೆ ಹಾಗೂ ಜಪ್ತಿಗೆ ಮಾರ್ಗಸೂಚಿ ರಚನೆ ಕೋರಿ ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ “ಕಾನೂನು ಜಾರಿ ಹೊಣೆ ಹೊತ್ತ ಸಂಸ್ಥೆಗಳು […]

Continue Reading

ಶೀಘ್ರದಲ್ಲೇ ಮೊಬೈಲ್ ಚಂದಾದಾರರಿಗೆ ವಿಶಿಷ್ಟ ಐಡಿ ಸಂಖ್ಯೆ; ಮೊಬೈಲ್ ಗೂ ಬಿತ್ತು ಲಾಕ್.!

ಭಾರತ ಸರಕಾರ ಶೀಘ್ರದಲ್ಲೇ ಮೊಬೈಲ್ ಚಂದಾದಾರರಿಗೆ ವಿಶಿಷ್ಟ ಐಡಿ ಸಂಖ್ಯೆಯನ್ನು ನೀಡಲಿದೆ. ಈ ಐಡಿ ಸಂಖ್ಯೆಯು ಒಂದು ರೀತಿಯಲ್ಲಿ ಗುರುತಿನ ಚೀಟಿಯಂತೆ ಕಾರ್ಯನಿರ್ವಹಿಸುತ್ತದೆ, ಇದು ನಮ್ಮಪ್ರಾಥಮಿಕ ಮತ್ತು ಆಡ್-ಆನ್ ಫೋನ್ ಸಂಪರ್ಕಕ್ಕೆ ಸಂಬಂಧಿಸಿದ ಎಲ್ಲದರ ಬಗ್ಗೆ ಮಾಹಿತಿಯನ್ನು ಹೊಂದಿರುತ್ತದೆ. ನೀವು ಎಷ್ಟು ಫೋನ್ ಗಳನ್ನು ಬಳಸುತ್ತೀರಿ, ನಿಮ್ಮ ಬಳಿ ಎಷ್ಟು ಸಿಮ್ ಕಾರ್ಡ್ ಗಳಿವೆ, ಯಾವ ಸಿಮ್ ಎಲ್ಲಿ ಸಕ್ರಿಯವಾಗಿದೆ ಮತ್ತು ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳನ್ನು ನೀಡಲಾಗಿದೆ. ದಿ ಫೈನಾನ್ಷಿಯಲ್ ಎಕ್ಸ್ಪ್ರೆಸ್ನ ವರದಿಯ […]

Continue Reading