ವೆಂಟಿಲೇಟರ್ ಜೀವ ಉಳಿಸುವ ಸಾಧನವಾಗಿರಬೇಕು, ಅದು ಆಸ್ಪತ್ರೆಗೆ ಆದಾಯ ತರುವ ಸಾಧನವಾಗಿರಬಾರದು: ಕೇಂದ್ರ ಆರೋಗ್ಯ ಸಚಿವಾಲಯ

ಔಷಧವು ವ್ಯವಹಾರವಾಗುತ್ತಿರುವ ಈ ಸಮಯದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸಾಮಾನ್ಯ ಜನರಿಗೆ ಪರಿಹಾರ ನೀಡುವ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದೆ. ವೆಂಟಿಲೇಟರ್ ಜೀವ ಉಳಿಸುವ ಸಾಧನವಾಗಿರಬೇಕು, ಆದರೆ ಅದು ಆಸ್ಪತ್ರೆಗೆ ಆದಾಯ ತರುವ ಸಾಧನವಾಗಿರಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಚಿಕಿತ್ಸೆಯ ಅವಧಿಯನ್ನು ಅನಗತ್ಯವಾಗಿ ವಿಸ್ತರಿಸುವುದು ಮತ್ತು ಕುಟುಂಬ ಸದಸ್ಯರನ್ನು ವೆಚ್ಚಗಳ ಬಗ್ಗೆ ಕತ್ತಲೆಯಲ್ಲಿಡುವುದು ಮುಂತಾದ ದೂರುಗಳನ್ನು ಆರೋಗ್ಯ ಸೇವೆಗಳ ನಿರ್ದೇಶನಾಲಯ ಗಂಭೀರವಾಗಿ ಪರಿಗಣಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವೆಚ್ಚದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಸಚಿವಾಲಯದ ಅಡಿಯಲ್ಲಿ […]

Continue Reading

ಪೊಲೀಸರಿಗೆ ಬ್ಲಾಕ್ಮೇಲ್: ಖಾಸಗಿ ಸುದ್ದಿವಾಹಿನಿಯ ಪತ್ರಕರ್ತ ಅರೆಸ್ಟ್

ಡ್ರಗ್ಸ್ ದಂಧೆ ಶಾಮೀಲಾತಿಯ ಸ್ಟೋರಿ; ಹದಿನೈದು ಲಕ್ಷ ರೂಪಾಯಿ ಡಿಮ್ಯಾಂಡ್ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ವಾಟ್ಸಾಪ್ ಕರೆ ಮಾಡಿ ತಲಾ 5 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನೊಬ್ಬನನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ರಕರ್ತ ಶರತ್ ಶರ್ಮಾ ಕಲಗಾರು ಎಂಬಾತನೇ ಬಂಧಿತ ಆರೋಪಿ. ಬಾಗಲೂರು ಠಾಣೆ ಸಬ್ ಇನ್ಸ್ ಪೆಕ್ಟರ್ ರಮೇಶ್ ಎಂಬುವರ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ […]

Continue Reading

ವಾಹನ ಚಾಲನಾ ಪರವಾನಿಗೆಯ ಅವಧಿ ಮುಗಿದ ನಂತರ ಸ್ವಯಂಚಾಲಿತವಾಗಿ ವಿಸ್ತರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 14ರ ತಿದ್ದುಪಡಿ ಮಾಡದ ಕೊನೆಯ ನಿಬಂಧನೆಯಲ್ಲಿ ಒದಗಿಸಿದಂತೆ, ಚಾಲನಾ ಪರವಾನಗಿಯು ಈಗ ಅದರ ಅವಧಿ ಮುಗಿದ ನಂತರ ಸ್ವಯಂಚಾಲಿತವಾಗಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2019ರ ತಿದ್ದುಪಡಿ ಕಾಯ್ದೆಯ ನಂತರ, ಅವಧಿ ಮುಗಿದ ದಿನಾಂಕದ ಮರುದಿನದಿಂದಲೇ, ನವೀಕರಣವಿಲ್ಲದೆ, ಅವಧಿ ಮುಗಿದ ಪರವಾನಗಿಯನ್ನು ಹೊಂದಿರುವ ವ್ಯಕ್ತಿಯು ಅಂತಹ ಪರವಾನಗಿಯನ್ನು ಹೊಂದಿದ್ದ ವಾಹನಗಳನ್ನು ಓಡಿಸಲು ಅಸಮರ್ಥನಾಗಿದ್ದಾನೆ ಎಂದು ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಎಸ್ ವಿ ಎನ್ ಭಟ್ಟಿ ಅವರ ಪೀಠವು […]

Continue Reading

ಹನ್ನೊಂದು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್ಐಆರ್ ನಡೆಸಿ, 3.67 ಕೋಟಿ ಮತದಾರರ ಕೈಬಿಟ್ಟ ಕೇಂದ್ರ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಸಿ, 3.67 ಕೋಟಿ ಮತದಾರರನ್ನು ಕೈಬಿಟ್ಟಿದೆ. ಎರಡನೇ ಹಂತದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೈಗೊಂಡ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್‌ನ ಕರಡು ಮತದಾರರ ಪಟ್ಟಿ ಮಂಗಳವಾರ ಪ್ರಕಟವಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಗೋವಾ, ಪುದುಚೇರಿ, ಲಕ್ಷದ್ವೀಪ, ಗುಜರಾತ್ ಮತ್ತು ತಮಿಳುನಾಡಿನ ಕರಡು ಪಟ್ಟಿಗಳನ್ನು ಆಯೋಗವು ಕಳೆದ ಹತ್ತು ದಿನಗಳಲ್ಲಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ […]

Continue Reading

ಪಾಕಿಸ್ತಾನ ಪರ ಗೌಪ್ಯ ಮಾಹಿತಿ ರವಾನೆ; ಆರೋಪಿಗಳಿಗೆ ಸಿಮ್ ಕಾರ್ಡ್ ನೀಡುತ್ತಿದ್ದ ಗುಜರಾತ್ ಮೂಲದ ಹೀರೇಂದ್ರ ಕುಮಾರ್ ಖಡಯಾತ್ ಬಂಧನ

ಉಡುಪಿ: ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತಿ‌ನ ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ ಎಂದು ಗುರುತಿಸಲಾಗಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ […]

Continue Reading

ಮೋದಿ ಆಡಳಿತದಿಂದ ಗ್ರಾಮೀಣ ಜನರ ಬದುಕು ಬುಲ್ಡೋಜ್; ಕೇಂದ್ರ ಸರಕಾರದ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದ ‘ಮನಾರೇಗ’ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಯೋಜನೆಯನ್ನು ಬುಲ್ಡೋಜ್ ಮಾಡಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. “ಹಳ್ಳಿಯ ಜನರ ಉದ್ಯೋಗದ ಹಕ್ಕು ಕಸಿದುಕೊಳ್ಳುವ ಉದ್ದೇಶ ‘ವಿಬಿ ಜಿ ರಾಮ್ ಜಿ’ (ವಿಕಸಿತ ಭಾರತ -ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್) ವಿಧೇಯಕದ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸಲಿದೆ. ವಿಧೇಯಕ ಹಿಂದಕ್ಕೆ ಪಡೆಯುವ ತನಕ ಪಕ್ಷದ […]

Continue Reading

ವರ್ಷಕ್ಕೆ ಎರಡು ಲಕ್ಷಕ್ಕೂ ಅಧಿಕ ಭಾರತೀಯರು ಶಾಶ್ವತವಾಗಿ ದೇಶ ಬಿಟ್ಟು, ತಮ್ಮ ಪೌರತ್ವವನ್ನು ತ್ಯಜಿಸುತ್ತಿದ್ದಾರೆ: ವಿದೇಶಾಂಗ ಸಚಿವಾಲಯ

ವರ್ಷಕ್ಕೆ ಎರಡು ಲಕ್ಷಕ್ಕೂ ಅಧಿಕ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ ಹೆಚ್ಚು ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ ಎಂದು ಚಳಿಗಾಲದ ಅಧಿವೇಶನದಲ್ಲಿ ವಿದೇಶಾಂಗ ಸಚಿವಾಲಯವು ಅಂಕಿ ಅಂಶಗಳ ಸಹಿತ ಸಂಸತ್ತಿಗೆ ಮಾಹಿತಿ ನೀಡಿದೆ. ಇದರಲ್ಲಿ ಹಲವಾರು ಮಂದಿ ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಹುಟ್ಟಿ ಬೆಳೆದ ಊರು ಬಿಟ್ಟು ಬರುವುದೇ ಕಷ್ಟವಾಗಿರುತ್ತದೆ. ಹೀಗಿರುವಾಗ […]

Continue Reading

ವಿಪರೀತ ರಸ್ತೆ ಅಪಘಾತ: ಹೈವೇ ಬದಿಯ ಅಕ್ರಮ ಢಾಬಾಗಳ ತೆರವಿಗೆ ಸುಪ್ರೀಂ ಕೋರ್ಟ್ ಸೂಚನೆ

ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ ಪ್ರೆಸ್ ವೇಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಖಿಲ ಭಾರತ ಮಾರ್ಗಸೂಚಿ ರೂಪಿಸುವ ಬಗ್ಗೆ ಒಲವು ತೋರಿದೆ. ಇದರ ಪರಿಣಾಮ ಹೆದ್ದಾರಿ ಪಕ್ಕದ ಅಕ್ರಮ ಢಾಬಾಗಳಿಗೆ ಕಡಿವಾಣ ಬೀಳುವ ಸಾಧ್ಯತೆ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇ ಗಳ ಎರಡೂ ಬದಿಗಳಲ್ಲಿ ಅಕ್ರಮ ಢಾಬಾಗಳ ನಿರ್ಮಾಣವು ರಸ್ತೆ ಅಪಘಾತಗಳಿಗೆ ಸಂಭವನೀಯ ಕಾರಣ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಹೇಳಿದೆ. ಅಲ್ಲದೆ […]

Continue Reading

ಪಂಚಾಯತ್ ರಾಜ್ ವ್ಯವಸ್ಥೆಗೆ ಕೇಂದ್ರ ಸರ್ಕಾರದಿಂದ ಗಧಾಪ್ರಹಾರ; ತಕ್ಷಣ ಸರಿಪಡಿಸುವಂತೆ ಆಗ್ರಹ..

ರಾಷ್ಟ್ರಪಿತ ಮಹಾತ್ಮ ಗಾಂಧಿಜೀವರ ಕನಸಾದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ನಿರ್ಜೀವಗೊಳಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಅತ್ಯಂತ ಖಂಡನೀಯವೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಷ್‌ಚಂದ್ರ ಶೆಟ್ಟಿ ತಿಳಿಸಿದ್ದಾರೆ. 2020–25 ನೇ ಸಾಲಿನ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜನಪ್ರತಿನಿಧಿಗಳು “ಪ್ರತಿ ಪಂಚಾಯತಿಗೂ ಕನಿಷ್ಠ ಒಂದು ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ನೇರವಾಗಿ ಬಿಡುಗಡೆ ಮಾಡಲಿದೆ” ಎಂಬ ಭರವಸೆಯನ್ನು ನೀಡಿದ್ದರು. ಆದರೆ ವಾಸ್ತವದಲ್ಲಿ, ಕಾಂಗ್ರೆಸ್ […]

Continue Reading

ದೇಶದ ಒಟ್ಟು 8 ಲಕ್ಷ ವಕ್ಫ್ ಆಸ್ತಿಗಳ ಪೈಕಿ ಕೇವಲ 2.16 ಲಕ್ಷ ಆಸ್ತಿಗಳು ಮಾತ್ರ ನೋಂದಣಿಯಾಗಿವೆ

ಕರ್ನಾಟಕ ಮೊದಲ ಸ್ಥಾನ. ಶನಿವಾರ ಗಡುವು ಮುಕ್ತಾಯ, ವಕ್ಫ್ ಅಧಿಕಾರಿಗಳು ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸಿದ್ಧತೆ ಕೇಂದ್ರ ಸರ್ಕಾರವು ಜೂನ್ 6 ರಂದು ಪ್ರಾರಂಭಿಸಿದ ಉಮೀದ್ ಪೋರ್ಟಲ್‌ನಲ್ಲಿ ದೇಶದ ಒಟ್ಟು 8 ಲಕ್ಷ ವಕ್ಫ್ ಆಸ್ತಿಗಳ ಪೈಕಿ ಕೇವಲ 2.16 ಲಕ್ಷ ಆಸ್ತಿಗಳು ಮಾತ್ರ ನೋಂದಣಿಯಾಗಿವೆ. ನೋಂದಣಿಗೆ ನಿಗದಿಪಡಿಸಿದ್ದ ಅಂತಿಮ ಗಡುವು ಶನಿವಾರ ಮುಗಿದಿದ್ದು, ವಕ್ಫ್ ಮಂಡಳಿ ಅಧಿಕಾರಿಗಳು ಈಗ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಒಟ್ಟು 5.17 ಲಕ್ಷ ನೋಂದಣಿ ಅರ್ಜಿಗಳಲ್ಲಿ 10,872 ಅರ್ಜಿಗಳು ತಿರಸ್ಕೃತಗೊಂಡಿವೆ. ಕರ್ನಾಟಕವು […]

Continue Reading