ಅದಾನಿ ಸಮೂಹ ನಿಯಮಗಳನ್ನು ಉಲ್ಲಂಘಿಸಿರುವುದು ಸೆಬಿ ತನಿಖೆಯಿಂದ ಪತ್ತೆ

ಷೇರುಪಟ್ಟಿಗೆ ಸೇರಿರುವ ಸಂಸ್ಥೆಗಳಿಗೆ ಸಂಬಂಧಿಸಿದಂತೆ ವಿದೇಶಗಳಲ್ಲಿರುವ ನಿಧಿ ಮತ್ತು ಮಿತಿಯ ವಿವರಗಳ ಘೋಷಣೆಯಲ್ಲಿ ಅದಾನಿ ಸಮೂಹ ನಿಯಮಗಳನ್ನು ಉಲ್ಲಂಘಿಸಿರುವುದು ಸೆಬಿ ತನಿಖೆಯಿಂದ ಪತ್ತೆಯಾಗಿದೆ. ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ಮೂಲಗಳು ಇದನ್ನು ದೃಢಪಡಿಸಿವೆ. ಅದಾನಿ ಸಮೂಹವು ಷೇರುಮೌಲ್ಯಗಳ ಏರಿಳಿತದಲ್ಲಿ ತೊಡಗಿದೆ ಎಂಬ ಅಮೆರಿಕದ ಹಿಂಡನ್‌ಬರ್ಗ್‌ ಸಂಶೋಧನಾ ಸಂಸ್ಥೆ ವರದಿ ಬಳಿಕ ಸೆಬಿ ತನಿಖೆ ಆರಂಭಿಸಿತ್ತು.ಬಂದರು ವಹಿವಾಟಿನಿಂದ ವಿದ್ಯುತ್ ಉತ್ಪಾದನೆಯವರೆಗೂ ವಿವಿಧ ಉದ್ಯಮಗಳನ್ನು ಹೊಂದಿರುವ ಅದಾನಿ ಸಮೂಹವು ತನ್ನಿಂದ ಯಾವುದೇ ಲೋಪವಾಗಿಲ್ಲ ಎಂದು ಇದೇ ವರ್ಷದ ಜನವರಿ ತಿಂಗಳಲ್ಲಿ […]

Continue Reading

ಗೆರಿಲ್ಲಾ ಯುದ್ಧ ತಂತ್ರ ಬಳಸುತ್ತಿದ್ದಾರೆ ಶರದ್ ಪವಾರ್: ಸಂಜಯ್ ರಾವತ್

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.ಶರದ್ ಪವಾರ್ ಮತ್ತು ಅಜಿತ್ ಪವಾರ್ ಭೇಟಿ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಜಯ್ ರಾವತ್,ಪಕ್ಷ ಬಿಟ್ಟವರ ವಿರುದ್ಧ ಎನ್ ಸಿ ಪಿ ಮುಖ್ಯಸ್ಥ ಶರದ್‌ ಪವಾರ್‌ ಗೆರಿಲ್ಲಾ ಯುದ್ಧತಂತ್ರವನ್ನು ಅನುಸರಿಸುತ್ತಿದ್ದಾರೆ. ನಮ್ಮ ಪಕ್ಷವೂ ರಣರಂಗದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದೆ ಎಂದು ಹೇಳಿದ್ದಾರೆ. ಶರದ್‌ ಪವಾರ್ ಹಾಗೂ ಅವರ ಸಂಗಡಿಗರು ಪಕ್ಷ ಬಿಟ್ಟವರ ವಿರುದ್ಧ […]

Continue Reading

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಭೀತಿ: ರಾಜ್ಯದೆಲ್ಲೆಡೆ ವ್ಯಾಪಕ ಕಟ್ಟೆಚ್ಚರ.ಹಂದಿ,ಕೋಳಿಗಳ ಮೇಲೆ ನಿಗಾ.

ಕೇರಳದಲ್ಲಿ ಮಾರಣಾಂತಿಕ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕ ಸೃಷ್ಟಿಸಿದೆ.ಇದು ಹಂದಿಗಳಲ್ಲಿ ಕಾಣಿಸಿಕೊಳ್ಳುವ ರೋಗವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.ಆಫ್ರಿಕನ್ ಹಂದಿ ಜ್ವರ ಆತಂಕ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಾವಲಿ ಮತ್ತು ಸುಲ್ತಾನ್ ಬತ್ತೇರಿ ಚೆಕ್ ಪೋಸ್ಟ್‌ಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳ ತಪಾಸಣೆಗಾಗಿ ಪಶುಸಂಗೋಪನಾ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಡಿ ಬಿ ಕುಪ್ಪೆ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂದಿ ಸಾಕಣೆ ಹಾಗೂ ಹಂದಿ ಮಾಂಸ ಮಾರಾಟವನ್ನು […]

Continue Reading

ಮಗು ಹೆರುವ ಆಯ್ಕೆಯ ಹಕ್ಕು ಮಹಿಳೆಯದ್ದೇ ಆಗಿದ್ದು, ಈ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪ ಅನಗತ್ಯ.

ಮಗು ಹೆರುವ ಆಯ್ಕೆಯ ಹಕ್ಕು ಮಹಿಳೆಯದ್ದೇ ಆಗಿದ್ದು, ಈ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪ ಅನಗತ್ಯ. ಇಲ್ಲಿ ಮಾನವನ ಘನತೆಯನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಅತ್ಯಾಚಾರ ಸಂತ್ರಸ್ತೆಯೊಬ್ಬರ 27 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಿ ಹೊರಡಿಸಿರುವ ಆದೇಶದಲ್ಲಿ ಸುಪ್ರೀಂಕೋರ್ಟ್‌ ತನ್ನ ಅದೇಶದಲ್ಲಿ ಹೇಳಿದೆ. ಗರ್ಭಪಾತಕ್ಕೆ ಅವಕಾಶ ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ 25 ವರ್ಷದ ಸಂತ್ರಸ್ತೆ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನಾ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತ್ತು.ಗರ್ಭಪಾತಕ್ಕೆ ಒಳಗಾಗುವ […]

Continue Reading

ವರ್ಷಾಂತ್ಯದಲ್ಲಿ ನಡೆಯಲಿರುವ ಛತೀಸ್ ಘಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಸಾಧ್ಯತೆ:ಸಿ ವೋಟರ್

ವರ್ಷಾಂತ್ಯದಲ್ಲಿ ನಡೆಯಲಿರುವ ಛತೀಸ್ ಘಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಭೇರಿ ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. “ಎಬಿಪಿ” ಸುದ್ದಿವಾಹಿನಿ “ಸಿ ವೋಟರ್‌’ ಸಂಸ್ಥೆ ಜತೆಗೆ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ 48ರಿಂದ 54 ಸ್ಥಾನಗಳು ಲಭಿಸುವ ಸಾಧ್ಯತೆಗಳು ಇವೆ. ಕಾಂಗ್ರೆಸ್‌ಗೆ ಸರಳ ಬಹುಮತಕ್ಕಿಂತ ಹೆಚ್ಚು ಸ್ಥಾನಗಳು ಲಭಿಸಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಬಿಜೆಪಿಗೆ 35ರಿಂದ 41, ಇತರರಿಗೆ 4 ಸ್ಥಾನಗಳ ವರೆಗೆ ಲಭಿಸುವ ಸಾಧ್ಯತೆ ಇದೆ. ಆ ರಾಜ್ಯದ ವಿಧಾನಸಭೆಯ ಒಟ್ಟು ಸ್ಥಾನಗಳು 90.

Continue Reading

ಛತ್ತೀಸ್‌ಗಢ ಚುನಾವಣೆಗೆ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ರಚನೆ, ಮುಖ್ಯಸ್ಥರಾಗಿ ಕುಮಾರಿ ಸೆಲ್ಜಾ

ಛತ್ತೀಸ್‌ಗಢದ ಚುನಾವಣೆಗೆ ಒಳಪಡಲಿರುವ ಕಾಂಗ್ರೆಸ್ ತನ್ನ ರಾಜಕೀಯ ವ್ಯವಹಾರಗಳ ಸಮಿತಿಯನ್ನು ಗುರುವಾರ ರಚಿಸಿದ್ದು, ಪ್ರಧಾನ ಕಾರ್ಯದರ್ಶಿ ಕುಮಾರಿ ಸೆಲ್ಜಾ ಅಧ್ಯಕ್ಷರಾಗಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಇದರ ಸದಸ್ಯರಲ್ಲಿ ಸೇರಿದ್ದಾರೆ.”ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಂವಿಧಾನದ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ” ಎಂದು ಪಕ್ಷದ ಹೇಳಿಕೆಯೊಂದು ತಿಳಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ದೀಪಕ್ ಬೈಜ್, ಹಿರಿಯ ಮುಖಂಡರಾದ ಚರಣ್ ದಾಸ್ ಮಹಂತ್, ತಾಮರಧ್ವಜ್ ಸಾಹು, […]

Continue Reading

ಮುಂಬರುವ 2024ರ ಲೋಕಸಭೆ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಮಧ್ಯೆ ತೀವ್ರ ಲಾಬಿ

2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಬೆಂಗಳೂರು ಕೇಂದ್ರ ಭಾಗದಿಂದ ಮಾಜಿ ಸಚಿವ ಎಚ್‌ಎಂ ರೇವಣ್ಣ ಹಾಗೂ ಮಹಮ್ಮದ್‌ ನಲಪಾಡ್‌ ತೀವ್ರ ಪೈಪೋಟಿ ನಡೆಸುತ್ತಿದ್ದರೆ, ಮಾಜಿ ಸಂಸದ ವಿಎಸ್‌ ಉಗ್ರಪ್ಪ ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ.ಬೆಳಗಾವಿ ಕ್ಷೇತ್ರಕ್ಕೂ ಹೆಚ್ಚಿನ ಬೇಡಿಕೆ […]

Continue Reading

ರಾಹುಲ್ ಗಾಂಧಿ ಗುಜರಾತ್‌ನಿಂದ ಮೇಘಾಲಯಕ್ಕೆ ಮತ್ತೊಂದು ಜೋಡೋ ಯಾತ್ರೆಗೆ ಸಿದ್ದತೆ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವು ಗುಜರಾತ್‌ನಿಂದ ಪ್ರಾರಂಭವಾಗಿ ಈಶಾನ್ಯ ರಾಜ್ಯವಾದ ಮೇಘಾಲಯದವರೆಗೆ ವಿಸ್ತರಿಸಲಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಈ ಹಿಂದೆ ಗುಜರಾತ್‌ನ ಪೋರಬಂದರ್‌ನಿಂದ ಅರುಣಾಚಲ ಪ್ರದೇಶದ ಪಾಸಿಘಾಟ್‌ವರೆಗೆ ‘ನವೆಂಬರ್‌ ಮೊದಲು’ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸುದ್ದಿಯನ್ನು ಖಚಿತಪಡಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ರಾಜ್ಯದೊಳಗಿನ ಪಕ್ಷದ ನಾಯಕರು ಪಾದಯಾತ್ರೆ ಯಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ನಾಯಕರು ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. […]

Continue Reading

ಡಾಕ್ಟರ್ ಗಳು ಔಷಧ ಹೆಸರುಗಳನ್ನು ಸ್ಪಷ್ಟವಾಗಿ ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು: ರಾಷ್ಟ್ರೀಯ ವೈದ್ಯಕೀಯ ಆಯೋಗ

ವೈದ್ಯರು ತಮ್ಮ ರೋಗಿಗಳಿಗೆ ಜನೆರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು ಎಂಬ ಸೂಚನೆಯನ್ನು ನೀಡಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆ.2 ರಂದು ಹೊರಬಿದ್ದಿರುವ ‘ರೆಗ್ಯುಲೇಷನ್ಸ್ ರಿಲೇಟಿಂಗ್ ಟು ಪ್ರೊಫೆಷನಲ್ ಕಂಡಕ್ಟ್ ಆಫ್ ರಿಜಿಸ್ಟರ್ಡ್ ಮೆಡಿಕಲ್ ಪ್ರ್ಯಾಕ್ಟಿಷಿನರ್ಷ್’ ಪ್ರಕಾರ ವೈದ್ಯರು ಔಷಧದ ಹೆಸರುಗಳನ್ನು ಸ್ಪಷ್ಟವಾಗಿ ಮತ್ತು ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು. ತಪ್ಪು ತಿಳುವಳಿಕೆ ತಪ್ಪಿಸುವ ನಿಟ್ಟಿನಲ್ಲಿ […]

Continue Reading

ಮೋದಿ’ಗೆ ಮುಖಭಂಗ.!

ರಾಹುಲ್‌ಗಾಂಧಿ ಚುನಾವಣೆಗೆ ಸ್ವರ್ಧಿಸದಂತೆ ಮಾಡುವ ಯೋಜಿತ ಷಡ್ಯಂತ್ರದ ಭಾಗವಾಗಿತ್ತು. ​ಕರ್ನಾಟಕದ ಕೋಲಾರದಲ್ಲಿ 2019 ರ ಏಪ್ರಿಲ್ 13 ರಂದು ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್‌ಗಾಂಧಿಯವರು ‘ಎಲ್ಲ ಕಳ್ಳರು ಮೋದಿ ಎಂಬ ಉಪನಾಮವನ್ನು ಹೇಗೆ ಹೊಂದಿದ್ದಾರೆ’ ಎಂದು ಪ್ರಶ್ನಿಸಿದ್ದರು.ಈ ಸಂಬಂಧ ಗುಜರಾತಿನ ಮಾಜಿ ಸಚಿವ ಪೂರ್ಣಿಶ್ ಮೋದಿ ಎಂಬವರು ರಾಹುಲ್ ವಿರುದ್ಧ 2019 ರಲ್ಲಿ ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ​ಮೋದಿ ಉಪನಾಮ ಟೀಕೆ ಕುರಿತು ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ಸೂರತ್ ಮೆಜಿಸ್ಟ್ರೇಟ್ […]

Continue Reading