ಮಕ್ಕಳ ನಾಪತ್ತೆ ಪ್ರಕರಣ: ಕರ್ನಾಟಕಕ್ಕೆ 3 ನೇ ಸ್ಥಾನ

5 ವರ್ಷದಲ್ಲಿ 27,528 ಮಕ್ಕಳು ಮಿಸ್ಸಿಂಗ್.! ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 2.75 ಲಕ್ಷಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರಕಾರವು ಲೋಕಸಭೆಗೆ ತಿಳಿಸಿದೆ. ಸಂಸದ ಬ್ರಿಜೇಂದ್ರ ಸಿಂಗ್ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ‘ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 27,528 ಮಕ್ಕಳು ನಾಪತ್ತೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ. 2018ರ ಜನವರಿ 1 ರಿಂದ ಈ ವರ್ಷದ ಜೂನ್ 30 ರವರೆಗೆ […]

Continue Reading

ದೇಶಕ್ಕಾಗಿ ಹೋರಾಡಿದ ನನಗೆ ನನ್ನ ಪತ್ನಿ, ಮಕ್ಕಳನ್ನು ಕಾಪಾಡಲು ಸಾಧ್ಯವಾಗಲಿಲ್ಲ: ಕಾರ್ಗಿಲ್ ನಲ್ಲಿ ಹೋರಾಡಿದ ಯೋಧ

ಮಣಿಪುರದಲ್ಲಿ ಹಿಂಸಾಚಾರ ಆಗುತ್ತಿದ್ದರೆ. ಅತ್ತ ಬೆತ್ತಲೇ ವಿಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ದೇಶದ ಮೂಲೆ ಮೂಲೆ ಮೂಲೆಯಲ್ಲೂ ಘಟನೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ ವೀರ ಯೋಧ ಪತ್ನಿಯನ್ನು ಮಣಿಪುರ ಘಟನೆಯಿಂದ ಆತನಿಗೆ ರಕ್ಷಿಸಿ ಕೊಳ್ಳಲು ಸಾಧ್ಯವಾಗಿಲ್ಲ.!ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ ಹಾಗೂ ಗ್ರಾಮಸ್ಥರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು […]

Continue Reading

ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿ ಆದೇಶಿಸಿದೆ. ತೀಸ್ತಾ ವಿರುದ್ಧದ ಪ್ರಕರಣದಲ್ಲಿ ಚಾರ್ಜ್ ಶೀಟ್ ದಾಖಲಾಗಿರುವುದರಿಂದ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ತೀಸ್ತಾಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.ಮಾತ್ರವಲ್ಲದೆ ತೀಸ್ತಾ ಸೆಟಲ್ವಾಡ್‌ ರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ನ ಆದೇಶವನ್ನು […]

Continue Reading

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 4.25ರ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ […]

Continue Reading

ಅಪರಾಧ ಪ್ರಕರಣದ ಮಾಹಿತಿ ಇದೆ ಅನ್ನುವ ಏಕೈಕ ಕಾರಣಕ್ಕೆ ಪತ್ರಕರ್ತರ ಮೊಬೈಲ್ ಪೊಲೀಸರು ವಶಪಡಿಸಿಕೊಳ್ಳಲಾಗದು: ಕೇರಳ ಹೈಕೋರ್ಟ್

ಅಪರಾಧಿಕ ಘಟನೆಯ ಮಾಹಿತಿ ಇದೆ ಎಂದ ಮಾತ್ರಕ್ಕೆ ಪತ್ರಕರ್ತರೊಬ್ಬರ ಮೊಬೈಲ್‌ ಫೋನನ್ನು ಪೊಲೀಸರು ನಿಯಮವನ್ನು ಉಲ್ಲಂಘಿಸಿ ವಶಪಡಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.ಜಿ. ವಿಶಾಖನ್ Vs ಕೇರಳ ಸರ್ಕಾರ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾ. ಪಿ.ವಿ. ಕುಂಞಕೃಷ್ಣನ್, ಅಪರಾಧ ಪ್ರಕರಣದ ತನಿಖೆಯಲ್ಲಿ ಅಗತ್ಯವಿದ್ದರೆ ಮಾತ್ರ ಅಪರಾಧಿಕ ಪ್ರಕ್ರಿಯಾ ಸಂಹಿತೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದ ಬಳಿಕವಷ್ಟೇ ಪತ್ರಕರ್ತರ ಫೋನ್‌ ವಶಕ್ಕೆ ಪಡೆದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತು. ಪತ್ರಿಕಾ ರಂಗ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರ ಸ್ತಂಬ. […]

Continue Reading

ಪ್ರಧಾನಿ ವಿರುದ್ಧ ನಿಂದನೆಯ ಮಾತುಗಳು ಅವಹೇಳನಕಾರಿಯೇ ಹೊರತು ದೇಶದ್ರೋಹವಲ್ಲ: ಕರ್ನಾಟಕ ಹೈಕೋರ್ಟ್

ಬೀದರಿನ ಶಾಲಾ ಆಡಳಿತ ಮಂಡಳಿ ವಿರುದ್ಧದ ದೇಶದ್ರೋಹ ಪ್ರಕರಣವೊಂದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಲಾದ ನಿಂದನೆಯು ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ಕೂಡಿದೆ. ಆದರೆ ಅದನ್ನು ದೇಶದ್ರೋಹ ಎಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ವಿವಿಧ ಧಾರ್ಮಿಕ ಗುಂಪುಗಳ ನಡುವಿನ ಸಾಮರಸ್ಯವನ್ನು ಕದಡಿದಾಗ ಹೇರಲಾಗುವ ಸೆಕ್ಷನ್ 153 (ಎ) ಈ ಪ್ರಕರಣದಲ್ಲಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಬೆಂಗಳೂರು, ಶಾಲಾ ಆಡಳಿತ ಮಂಡಳಿಯೊಂದರ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ʼಪ್ರಧಾನಿ […]

Continue Reading

ಅಜಿತ್ ಪವಾರ್ ಹೊಸ ಡಿಸಿಎಂ: ಮಹಾ 2019 ರಿಂದ ನಾಲ್ಕು ಪ್ರಮಾಣ ವಚನ ಸಮಾರಂಭಗಳನ್ನು ಕಂಡಿದ್ದಾರೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಮತ್ತು ಅವರ ಹಲವಾರು ಸಹೋದ್ಯೋಗಿಗಳು ಕ್ರಮವಾಗಿ ಉಪಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಮಹಾರಾಷ್ಟ್ರ ತನ್ನ ರಾಜಭವನದಲ್ಲಿ 2019 ರಿಂದ 2023ರ ಅವಧಿಯಲ್ಲಿ ನಾಲ್ಕು ಪ್ರಮಾಣ ವಚನ ಸಮಾರಂಭಗಳನ್ನು ಕಂಡಿದೆ.ನವೆಂಬರ್ 2019 ರಲ್ಲಿ, ಅಸೆಂಬ್ಲಿ ಚುನಾವಣೆ ಮತ್ತು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ವಿಭಜನೆಯ ನಂತರ, ರಾಜಭವನದಲ್ಲಿ ಮುಂಜಾನೆ ನಡೆದ ಸಮಾರಂಭದಲ್ಲಿ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಕ್ರಮವಾಗಿ ಸಿಎಂ […]

Continue Reading

HSRP ವಿವಾದಕ್ಕೆ ತೆರೆ; ಎಲ್ಲಾ ಅರ್ಹ ಕಂಪನಿಗಳಿಗೆ ಅವಕಾಶ; ಸಿದ್ದು ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು […]

Continue Reading

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲರು

ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಗುರುವಾರ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ರಾಜಭವನ ತಿಳಿಸಿದೆ.ಅಧಿಕೃತ ಪ್ರಕಟಣೆಯಲ್ಲಿ ರಾಜಭವನ, ಸೆಂಥಿಲ್ ಬಾಲಾಜಿ ಅವರು “ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಬಾಕಿದಾರರಿಗೆ ಅಡ್ಡಿಪಡಿಸುತ್ತಿದ್ದಾರೆ. ಕಾನೂನು ಮತ್ತು ನ್ಯಾಯದ ಪ್ರಕ್ರಿಯೆ.” ಪ್ರಸ್ತುತ, ಅವರು ಜಾರಿ […]

Continue Reading

ಆಧಾರ್-ಪಾನ್ ಲಿಂಕ್ ಗೆ ಇನ್ನು ಕೇವಲ 2 ದಿನ ಬಾಕಿ; ಜೂನ್ 30 ರೊಳಗೆ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯ

ಆಧಾರ್ ಕಾರ್ಡ್ ನಂಬರ್ ಗೆ ಪಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿರುವ ಅವಧಿ ಮುಕ್ತಾಯವಾಗಲು ಕೇವಲ 2 ದಿನಗಳ ಕಾಲ ಬಾಕಿಯಿದ್ದು, ಅದರೊಳಗೆ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ಅಮಾನ್ಯ ವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. 1 ಸಾವಿರ ರೂಪಾಯಿ ದಂಡದೊಂದಿಗೆ ಆಧಾರ್ ಮತ್ತು ಪಾನ್ ಲಿಂಕ್ ಮಾಡಲು ನೀಡಲಾಗಿದ್ದ ಅವಧಿ ಜೂನ್ 30 ಕ್ಕೆ ಮುಕ್ತಾಯವಾಗಲಿದೆ. ಇದಾದ ಬಳಿಕ ಪಾನ್ ಕಾರ್ಡ್ ನಿಷ್ಕ್ರೀಯವಾಗಲಿದ್ದು, ಬ್ಯಾಂಕಿಂಗ್ ವ್ಯವಹಾರ ಸೇರಿದಂತೆ ಎಲ್ಲಾ ಆರ್ಥಿಕ ಚಟುವಟಿಕೆಗಳಿಗೆ ಸಮಸ್ಯೆಯಾಗಲಿದೆ. […]

Continue Reading