ಭಾರತೀಯ ಮೂಲದ ಬಂಕಿಮ್‌ ಬ್ರಹ್ಮಭಟ್‌ ಎಂಬ ಉದ್ಯಮಿ ಅಮೆರಿಕದಲ್ಲಿ 4,439 ಕೋಟಿ ರೂಪಾಯಿ ಹಣಕಾಸಿನ ವಂಚನೆ

ಗುಜರಾತ್ ಮೂಲದ ಬಂಕಿಮ್ ಬ್ರಹ್ಮಭಟ್ ಟೆಲಿಕಾಂ ಉದ್ಯಮದಲ್ಲಿ 30 ವರ್ಷಗಳಿಂದ ಸಕ್ರಿಯ ಭಾರತೀಯ ಮೂಲದ ಬಂಕಿಮ್‌ ಬ್ರಹ್ಮಭಟ್‌ ಎಂಬ ದೂರಸಂಪರ್ಕ ಉದ್ಯಮಿಯೊಬ್ಬರು ಅಮೆರಿಕದಲ್ಲಿ ಸುಮಾರು 4439 ಕೋಟಿ ರೂಪಾಯಿ ಹಣಕಾಸಿನ ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಬಂಕೈ ಗ್ರೂಪ್‌ ಎಂಬ ಸಂಸ್ಥೆಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂಕಿಮ್‌, ಪ್ರಮುಖ ಹೂಡಿಕೆ ಸಂಸ್ಥೆಯಾದ ಬ್ಲ್ಯಾಕ್‌ರಾಕ್‌ ಸೇರಿ ಇತರೆ ಸಂಸ್ಥೆಗಳಿಂದ 4439 ಕೋಟಿ ರೂ.ಹೂಡಿಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಬಂಕಿಮ್‌ ಅವರ ವಂಚನೆ ಬಗ್ಗೆ ಪತ್ತೆಯಾಗಿದ್ದು, ಅವರ […]

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಸ್ ಪೆಕ್ಟರ್ ಬದಲಾವಣೆ ಪರ್ವ ಶುರು: ಸುರತ್ಕಲ್ ಗೆ ಪ್ರಮೋದ್ ಕುಮಾರ್, ಮಂಗಳೂರು ಗ್ರಾಮಾಂತರ ಠಾಣೆಗೆ ಗವಿರಾಜು, ಕದ್ರಿಗೆ ಅನಂತ ಪದ್ಮನಾಭ

ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಳಹಂತದ ಪೊಲೀಸ್ ಅಧಿಕಾರಿಗಳ ಬದಲಾವಣೆ ಆರಂಭವಾಗಿದೆ. ರಾಜ್ಯ ಸರಕಾರ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಮಂಗಳೂರಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆಯ ನಂತರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿಯವರನ್ನು ವರ್ಗಾವಣೆಗೊಳಿಸಿ ಖಡಕ್ ಅಧಿಕಾರಿಗಳನ್ನು ನೇಮಿಸಿತ್ತು. ಸುರತ್ಕಲ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಹೇಶ್ ಪ್ರಸಾದ್ ಅವರು […]

Continue Reading

ಎದೆಗುಂದದ ದಿಟ್ಟ ಹೋರಾಟಗಾರ್ತಿ.. ಕುಪ್ಪೆಪದವಿನ ‘ರಾಣಿ ಅಬ್ಬಕ್ಕ’.!

ಜನಪರ ಹೋರಾಟಗಳಲ್ಲಿ ಸೈ..ಆಡಳಿತಾರೂಢರಿಗೆ ಸಿಂಹಸ್ವಪ್ನೆ ‘ಕಾಮ್ರೇಡ್ ವಸಂತಿ’ ಆಕೆ ಶಾಲೆಯ ಮೆಟ್ಟಿಲು ಹತ್ತಿದ್ದು ಬರೀ ಏಳನೇ ಕ್ಲಾಸು.. ಆದರೂ ಆಕೆ ತಾನು ಏನನ್ನಾದರೂ ಸಾಧಿಸಿ ತೋರಿಸಬೇಕೆಂಬ ಹಠ, ಛಲವಿತ್ತು. ಕೇವಲ ವಿದ್ಯೆವೊಂದಿದ್ದರೆ ಸಾಲದು. ಸಾಧಿಸಬೇಕೆನ್ನುವ ಹಠ, ಛಲವಿದ್ದರೆ ಏನನ್ನೂ ಬೇಕಾದರೂ ಸಾಧಿಸಬಹುದು ಅನ್ನುವುದಕ್ಕೆ ಈ ಹಳ್ಳಿಯ ಮಹಿಳೆಯೇ ಸಾಕ್ಷಿ. ಆಕೆ ಬೇರಾರೂ ಅಲ್ಲ. ಕುಪ್ಪೆಪದವಿನಲ್ಲಿ ಕಮ್ಯುನಿಸ್ಟ್ ಧ್ವಜ ಹಾರಿಸಿದ ಹೋರಾಟಗಾರ್ತಿ ಕಾಮ್ರೇಡ್ ವಸಂತಿ. ಎಲ್ಲರ ಪ್ರೀತಿಯ ವಸಂತಿ ಅಕ್ಕ, ಹೋರಾಟಗಾರರು, ಸಾಧಕರು ಹುಟ್ಟುವುದೇ ಗ್ರಾಮೀಣ ಪ್ರದೇಶಗಳಲ್ಲಿ ಅನ್ನುವುದು […]

Continue Reading

ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು.? ರೇಣುಕಾಚಾರ್ಯ ವಿರುದ್ಧ ಕಿಡಿ

‘ಭೈರತಿ ಬಸವರಾಜು ಜತೆ ಹೊಂದಿಕೊಂಡು ಹೋಗಿ’ ಸಿಎಂ ಆಗಲು ಶಾಸಕರ ಬೆಂಬಲ ಕಡಿಮೆಯಾದರೆ ಭೈರತಿ ಬಸವರಾಜು ನಮ್ಮ ಜತೆ ನಿಲ್ಲುತ್ತಾರೆ. ಮನಸ್ತಾಪ ಮಾಡಿಕೊಳ್ಳಬೇಡಿ ✍️. ಆರ್.ಟಿ.ವಿಠ್ಠಲಮೂರ್ತಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದ ವಾರ ಕರ್ನಾಟಕಕ್ಕೆ ಬಂದರು.ಹೀಗೆ ಬಂದವರು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಏಕತೆಯ ಮಂತ್ರ ಭೋಧಿಸಿ ಹೋದರು. ಅಂದ ಹಾಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಖರ್ಗೆಯವರು ಇದೇ ಮೊದಲ ಬಾರಿ ಏಕತೆಯ ಮಂತ್ರ ಭೋಧಿಸಿಲ್ಲ.ಬದಲಿಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ […]

Continue Reading

ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ.?ಯಡಿಯೂರಪ್ಪ ಕುದಿಯುತ್ತಿರುವುದು ಏಕೆ.?

ಸೋಮಣ್ಣ ಹೆಸರು ರೇಸಿಗೆ ಬಂದಿದೆ. ಬಿಜೆಪಿ ವರಿಷ್ಟರಿಗೆ ಡಿಕೆಶಿ ಸಂದೇಶ ಕಳೆದ ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ನಾಯಕರೊಬ್ಬರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಯತ್ನಾಳ್ ವರ್ಸಸ್ ವಿಜಯೇಂದ್ರ ನಡುವಣ ಬಿಕ್ಕಟ್ಟಿನ ಬಗ್ಗೆ ಅವರು ಪ್ರಾಕ್ಟಿಕಲ್ ವರದಿ ನೀಡಿದರಂತೆ.ಅಂದ ಹಾಗೆ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿರುವ ವಿಜಯೇಂದ್ರ ಮತ್ತು ಯತ್ನಾಳ್ ಗ್ಯಾಂಗಿನ ಸಂಘರ್ಷದ ಬಗ್ಗೆ ನಡ್ಡಾ ಅವರಿಗೆ ಗೊತ್ತಿಲ್ಲ ಅಂತೇನಲ್ಲ. ಆದರೆ ಏನೇ ಮಾಡಿದರೂ ವಿಜಯೇಂದ್ರ ವರ್ಸಸ್ ಯತ್ನಾಳ್ ಗ್ಯಾಂಗಿನ ಮಧ್ಯೆ […]

Continue Reading

ನಾಲ್ಕು ಮದುವೆಯಾಗಿ ಕೈಕೊಟ್ಟು ಐದನೇ ಮದುವೆಗೆ ಸ್ಕೆಚ್, ಬಹುಪತ್ನಿ ವಲ್ಲಭ ಬಂಧನ.

ನಟೋರಿಯಸ್ ಕಿರಾತಕ ಮಾಣಿ ರಫೀಕ್ ಬಂಟ್ವಾಳ ಪೊಲೀಸರ ಬಲೆಗೆ.. ನಾಲ್ಕು ಮದುವೆಯಾಗಿ ತ್ರಿವಳಿ ತಲಾಖ್ ನೀಡಿ ಆಕೆಯ ಮೇಲೆ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ ಐದನೇ ಮದುವೆಗೆ ತಯಾರಿ ನಡೆಸುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ‌.ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದ ರಾಕ್ಷಸೀಯ ಕೃತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ […]

Continue Reading

ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಅಬಕಾರಿ ಸಚಿವರ ತಲೆ ದಂಡ ಸಾಧ್ಯತೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಿಲ್ಲೊಂದು ಹಗರಣ ಬರುತ್ತಲೇ ಇದೆ. ವಾಲ್ಮೀಕಿ, ಮುಡಾ ಹಗರಣ, ಇದೀಗ ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಹಗರಣಗಳಿಂದ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುವಂತೆ ಮಾಡಿದೆ. ಹೀಗಾಗಿ ಸಚಿವರೊಬ್ಬರ ತಲೆದಂಡ ಖಚಿತ ಎನ್ನಲಾಗಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ರಾಜೀನಾಮೆ ಪಡೆಯಲು ಸಿದ್ಧತೆ ನಡೆಯುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ ವಲಯದಲ್ಲೇ ಕೇಳಿ ಬಂದಿದೆ.. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಹಗರಣದ ಆರೋಪ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿತ್ತು. […]

Continue Reading

ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

ಉಡುಪಿ : ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.19 ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ […]

Continue Reading

ಮಂಗಳೂರು: ಹನಿಟ್ರ್ಯಾಪ್.. ಪ್ರಮುಖ ಸೂತ್ರಧಾರಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಸತ್ತಾರ್, ಮುಸ್ತಫಾ ಅಂದರ್..ಬಲೆಗೆ ಬಿದ್ದಿದ್ದು ಹೇಗೆ ಗೊತ್ತೆ..? ಮಂಗಳೂರು ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹನಿಟ್ರ್ಯಾಪ್ ಸೂತ್ರಧಾರಿಗಳನ್ನು ಪೊಲೀಸರು ಬಲೆಗೆ ಕೆಡವಲು ಯಶಸ್ವಿಯಾಗಿದ್ದು, ಒಟ್ಟಾರೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಅನ್ನಲಾಗುತ್ತಿದೆ. ಮುಮ್ತಾಜ್ ಅಲಿ ನಿಗೂಢ ಕಣ್ಮರೆ ಬಳಿಕ ಮುಮ್ತಾಜ್ ಅಲಿ ಸಹೋದರ ಹೈದರ್ ಆರು ಜನರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಿಎನ್ […]

Continue Reading

ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಪಕ್ಷಪಾತ, ಮತೀಯ ತಾರತಮ್ಯದ, ದುರುದ್ದೇಶ ಪೂರ್ವಕ ನಡೆಯನ್ನು ಒಕ್ಕೊರಲಿನಿಂದ ಖಂಡಸಿದ ಸಮಾನ ಮನಸ್ಕ ಸಂಘಟನೆಗಳು

ಸಂತ ಜರೋಜಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜರೋಜಾ ಶಾಲೆಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿತು. ಒಟ್ಟು ಘಟನೆಯ ವಿವರವನ್ನು ಪಡೆಯಿತು. ಮತೀಯ ದ್ವೇಷದ ದಾಳಿಗೆ ಗುರಿಯಾದ ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿಗೆ ನೈತಿಕ ಬೆಂಬಲ ವ್ಯಕ್ತ ಪಡಿಸಿತು. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಪಕ್ಷಪಾತದ, ಮತೀಯ ತಾರತಮ್ಯದ, ದುರುದ್ದೇಶ ಪೂರ್ವಕ ನಡೆಯನ್ನು ನಿಯೋಗ ಒಕ್ಕೊರಲಿನಿಂದ […]

Continue Reading