ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು

ಬಂಟ್ವಾಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಬ್ದುಲ್ ರಹ್ಮಾನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಬಂಧಿತರಾಗಿದ್ದ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. […]

Continue Reading

ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಡಿವೈಎಫ್ಐ ಕಾರ್ಯಕರ್ತ ವರ್ಷಿತ್ ಕುಲಾಲ್

ಸೋಮವಾರ ಸಂಜೆ ಕುತ್ತಾರ್ ಭಾಗದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳು ನಿಷ್ಕ್ರಿಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುತ್ತಾರ್ ಬಟ್ಟೆದಡಿ ಪ್ರದೇಶದ ಡಿವೈಎಫ್ಐಯ ಸಕ್ರಿಯ ಕಾರ್ಯಕರ್ತ ವರ್ಷಿತ್ ಕುಲಾಲ್ (21) ಇನ್ನಿಲ್ಲ ಎಂಬ ನೋವಿನ ಸುದ್ದಿ ನಿಜಕ್ಕೂ ಆಘಾತಕಾರಿ. ಮತ್ತೆ ಗುಣಮುಖನಾಗಿ ನಮ್ಮ ನಡುವೆ ಮರಳಿ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ, ವೈದ್ಯರು ವರ್ಷಿತ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದಾಗ ಆ ಕುಟುಂಬ ಎದುರಿಸಿದ ನೋವನ್ನು ಪದಗಳಲ್ಲಿ ಹೇಳಲಾಗದು. ಕಣ್ಣೆದುರೇ ಬೆಳೆಸಿದ ಮಗನನ್ನು ಕಳೆದುಕೊಂಡ ದುಃಖ ಒಂದೆಡೆಯಾದರೆ, […]

Continue Reading

ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ, ವಕೀಲ ಮನೋರಾಜ್ ರಾಜೀವ ಪ್ರತಿಪಾದಿಸಿದ್ದಾರೆ. ಜೈಲು ಜಾಮಾರ್ ವ್ಯವಸ್ಥೆಯಿಂದ ಸಾರ್ವಜನಿಕರು ಪರದಾಡುವಂತಾಗಿದ್ದಾರೆ. ಆ ವಿಚಾರವನ್ನು ಮುಂದಿಟ್ಟು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕಾನೂನು ತಜ್ಞರೂ ಆದ ಮನೋರಾಜ್ ರಾಜೀವ್ ಬೇಸರ […]

Continue Reading

ಕರಾವಳಿ ಜಿಲ್ಲೆಗಳ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು, ಪ್ರವಾಸೋದ್ಯಮ ಸಹಿತ ಅಭಿವೃದ್ದಿ ನೀತಿಯಲ್ಲಿ ಕಾರ್ಪೊರೇಟ್ ಪರವಾದ ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ ಘೋಷಣೆ

ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ದಿಯ ಉದ್ದೇಶದೊಂದಿಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು 18.09.2026 ರಂದು ಮಂಗಳೂರಿನಲ್ಲಿ ನಡೆಸುವುದಾಗಿ ಕರ್ನಾಟಕ ಸರಕಾರ ಘೋಷಿಸಿದೆ. ಕರಾವಳಿ ಕರ್ನಾಟಕವು ಪರಿಸರ ಸೂಕ್ಷ್ಮವಾದ ಪಶ್ಚಿಮ ಘಟ್ಟ, ಅರಬಿ ಸಮುದ್ರ, ಹಲವಾರು ನದಿಗಳಿಂದ ಸಮೃದ್ದವಾದ ಪ್ರದೇಶ. ಬಂದರು, ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ವಿಶಾಲವಾದ ರಸ್ತೆ ಜಾಲಗಳಿಂದಾಗಿ ಅಭಿವೃದ್ದಿಯ ವಿಫುಲ ಅವಕಾಶಗಳನ್ನು ಹೊಂದಿರುವುದು ಹೌದು. ಉದ್ಯಮಶೀಲ ಹಾಗು ಶ್ರಮಜೀವಿ, ವಿದ್ಯಾವಂತ, ಬುದ್ದಿವಂತ ಜನರ ನೆಲೆಯೂ ಆಗಿರುವ ಕರಾವಳಿ ಜಿಲ್ಲೆಗಳು ಸಾಧಿಸಬೇಕಾದಷ್ಟು ಅಭಿವೃದ್ಧಿ ಸಾಧಿಸಿಲ್ಲ. […]

Continue Reading

ಪೊಲೀಸರ ಡ್ಯಾಶಿಂಗ್ ರೀತಿಯ ಭಾಷೆಯನ್ನು ಕರಾವಳಿಯ ಜನ ಒಪ್ಪಿಕೊಳ್ಳಲ್ಲ. ಘಟ್ಟದಾಚೆಗಿನ ಪೊಲೀಸರ ಕಟು ಭಾಷೆ ಇಲ್ಲಿ ವರ್ಕೌಟ್ ಆಗಲ್ಲ.!

ಸಂಚಾರಿ ಪೊಲೀಸಪ್ಪನ ರೌದ್ರಾವತಾರ.. ವಿಡಿಯೋ ವೈರಲ್.. ಕರಾವಳಿ ಪೊಲೀಸರು ಅನುಸರಿಸಬೇಕಾದ ಮಾನದಂಡವೇನು.? ಪೊಲೀಸರಷ್ಟು ಟೀಕೆಗೆ ಗುರಿಯಾಗುವ ವ್ಯಕ್ತಿ ಈ ಜಗತ್ತಿನಲ್ಲಿ ಬೇರೆ ಯಾರೂ ಇರಲಿಕ್ಕಿಲ್ಲ. ಗಲಾಟೆ, ದೊಂಬಿ, ಕೋಮುಗಲಭೆ ನಡೆದರೆ ಮೊದಲು ಟೀಕೆಗೊಳಗಾಗುವುದು ಪೊಲೀಸರು. ಗಲಾಟೆಯನ್ನು ಸಮರ್ಥವಾಗಿ ನಿಭಾಯಿಸಿದರೆ ಅಮಾಯಕರ ಮೇಲೆ ದೌರ್ಜನ್ಯ ಅನ್ನುವ ಮತ್ತೊಂದು ಹೊಸ ಕೂಗು ಕೇಳಿ ಬರುತ್ತದೆ. ದಿನದ 24 ತಾಸು ಮಳೆ, ಬಿಸಿಲು ಅನ್ನದೆ ಕಾರ್ಯನಿರ್ವಹಿಸಬೇಕಾದವರು ಪೊಲೀಸರು. ಕೆಲವೊಮ್ಮೆ ನಡುಬೀದಿಯ ರಸ್ತೆಯ ಬಸ್ಸು ನಿಲ್ದಾಣ ಪೊಲೀಸರಿಗೆ ರಾತ್ರಿಯ ನಿದ್ರಿಸುವ ಸ್ಥಳವೂ ಆಗಿರುತ್ತದೆ. […]

Continue Reading

ಮುಲ್ಕಿ: ಕಿಲ್ಪಾಡಿ ಗ್ರಾಮದ ಕೊರ್ದಬ್ಬು ದೈವಸ್ಥಾನದ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ

ಆರೋಪಿಗಳಿಂದ 17.20 ಲಕ್ಷ ರೂ. ಮೌಲ್ಯದ ಸ್ವತ್ತು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲೂ ಭಾಗಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಅ.ಕ್ರ 65/2026 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಗಾಗಿ ವಿಶೇಷ ಪೊಲೀಸರ ತಂಡವನ್ನು ರಚಿಸಿ, […]

Continue Reading

ಬೆಳ್ಳಾರೆ: ವಿದ್ಯಾರ್ಥಿ ನಿಲಯಕ್ಕೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು ಪ್ರಕರಣ: ಪುತ್ತೂರಿನ ರಾಮಚಂದ್ರ ಅರೆಸ್ಟ್

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಕೆ. ರಾಮಚಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 2 ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವ ಸಂಗತಿ ಗಮನಕ್ಕೆ ಬಂದಿದ್ದು ಈ ವಿಚಾರವನ್ನು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ತಿಳಿಸಿದ್ದಾರೆ. ಸಿ ಸಿ ಕ್ಯಾಮರಾ ಪರಿಶೀಲಿಸಿದಾಗ ದಿನಾಂಕ: 02.09.2026 ರಂದು ಬೆಳಗ್ಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿಗಳು ಒಣಗಿಸಲು ಹಾಕಿದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು […]

Continue Reading

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಿರುದ್ದದ ಕೇಸ್ ವಜಾಗೊಳಿಸಿದ ಸುಪ್ರೀಂಕೋರ್ಟ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಯಮ ಮೀರಿ ಅಧಿಕ ಬಡ್ಡಿ ವಸೂಲಿ ಮಾಡುತ್ತಿದೆ ಹಾಗೂ ಕಾನೂನುಬಾಹಿರವಾಗಿ ಮನಿ ಲೆಂಡಿಂಗ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಾಗರಿಕ ಸೇವಾ ಟ್ರಸ್ಟ್‌ನ ರಂಜನ್ ರಾವ್ ಯೆರ್ದೂರ್ ಅವರು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯು ಕಾನೂನುಬಾಹಿರವಾಗಿ ಬಡ್ಡಿ ದಂಧೆ ನಡೆಸುತ್ತಿದೆ, ಕರ್ನಾಟಕ ಮನಿ ಲೆಂಡರ್ಸ್ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಮತ್ತು ಸಾರ್ವಜನಿಕರಿಗೆ ವಂಚನೆ ಎಸಗುತ್ತಿದೆ ಎಂದು ಆರೋಪಿಸಿ […]

Continue Reading

ಮೂಲ್ಕಿ: ಕಿಲ್ಪಾಡಿ ದೈವಸ್ಥಾನದ ಬೆಲೆಬಾಳುವ ಆಭರಣ ಕಳ್ಳತನ – ನಾಲ್ವರು ಆರೋಪಿಗಳು ಅಂದರ್

ಮೂಲ್ಕಿ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಬೆಲೆಬಾಳುವ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು ಉಳಿದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಆರೋಪಿಗಳನ್ನು ಪಡುಬಿದ್ರೆ ಕಂಚಿನಡ್ಕ ನಿವಾಸಿ ಜಾಹಿದ್ ಸಿನಾನ್ , ಕಾರ್ಕಳ ನಿಟ್ಟೆ ನಿವಾಸಿ ಪ್ರಸ್ತುತ ಕಾರ್ನಾಡ್ ಬಳಿ ವಾಸ್ತವ್ಯವಿರುವ ನಿವಾಸಿ ಯಾಸಿನ್, ದಾವಣಗೆರೆ ನಿವಾಸಿಗಳಾದ ಅಬ್ದುಲ್ ಜುಮಾಲ್ , ಮಹಮ್ಮದ್ ಆಫ್ರಿದ್ ಎಂದು ಗುರುತಿಸಲಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ದೈವಸ್ಥಾನದಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಪೂರ್ವ […]

Continue Reading

ಬೆಳ್ತಂಗಡಿ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ; ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು, ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ನೋಟೀಸ್ ಅಂಟಿಸಿದ್ದಾರೆ. ಲಾಯಿಲ ಗ್ರಾಮ ಪಂಚಾಯಿತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಪ್ಪ ಎಂಬವರು ಪಡ್ಲಾಡಿ ಬಳಿ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಗಳಿಲ್ಲದೆ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕಳೆದ ಕೆಲವು […]

Continue Reading