ಚುನಾವಣಾ ಕರ್ತವ್ಯದಲ್ಲಿದ್ದು ನಾಪತ್ತೆಯಾಗಿದ್ದ ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೃತದೇಹ ಧರ್ಮಸ್ಥಳ ಸಮೀಪದ ಪಟ್ರೆ ಹೊಳೆಯಲ್ಲಿ ಪತ್ತೆ.

ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾನಗರ ನಿವಾಸಿ, ಕಳೆದ ಆರು ವರ್ಷಗಳಿಂದ ಬಂಟ್ವಾಳ ತಾಲೂಕು ಅಮ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ಮಾ.27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಅವರು ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಮನೆಯವರು ಅಮ್ಮಾಡಿ ಪಂಚಾಯತ್ ನಲ್ಲಿ ವಿಚಾರಿಸಿದಾಗ, ಅಲ್ಲಿನ ಸಿಬ್ಬಂದಿಗಳು ಕಾಯ೯ದಶಿ೯ಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿದ್ದರು. ಎಲ್ಲೆಡೆ ಹುಡುಕಾಡಿದರೂ […]

Continue Reading

ರಂಝಾನ್ ಉಪವಾಸದ ನಡುವೆಯೂ ಮಾನವೀಯತೆಯ ಸಂದೇಶ ಸಾರಿದ ನೇತ್ರಾವತಿ ವೀರರು.!

ನೇತ್ರಾವತಿ ನದಿಗೆ ಬಿದ್ದವನ ರಕ್ಷಿಸಲು ಹರಸಾಹಸ ಪಟ್ಟರೂ ವಿಧಿಯ ಕ್ರೂರ ಲೀಲೆಗೆ ಬಲಿಯಾದ ಅನೂಶ್. ನರಿಕೊಂಬು ಗ್ರಾಮದ ಅಂತರ ಕಲ್ಯಾರು ನಿವಾಸಿ ಪೈಂಟರ್ ಯೋಗೀಶ ಅವರ ಪುತ್ರ ಅನೂಶ್ ತನ್ನ ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಸ್ನಾನಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ. ಮಾಹಿತಿ ತಿಳಿದು ನೂರಾರು ಜನರ ಪ್ರಾಣ ರಕ್ಷಿಸಿದ ಪಾಣೆಮಂಗಳೂರು ಗೂಡಿನಬಳಿಯ ನೇತ್ರಾವತಿ ಮುಳುಗುತಜ್ಞರಾದ ಮುಹಮ್ಮದ್ @ಮಮ್ಮ. ಹನೀಫ್ ಬಾಯ್. ಇಂತಿಯಾಜ್. ರಹಿಮಾನ್ ಕೀಳಂಗಡಿ. ಅಶ್ಫಾಕ್ ಅಕ್ಕರಂಗಡಿ ತಂಡ ನದಿ ನೀರಿನಲ್ಲಿ ಹುಡುಕಾಡಿ ಮೇಲಕ್ಕೆತ್ತಿದ್ದರೂ […]

Continue Reading

ಜಿಲ್ಲೆಯ ಶಿಕ್ಷಣ, ಆರೋಗ್ಯ, ನಿರುದ್ಯೋಗದ ಸ್ಥಿತಿಗತಿಗಳ ಅರಿವಿಲ್ಲದ ಅಭ್ಯರ್ಥಿ ಬೃಜೇಶ್ ಚೌಟ: ಮುನೀರ್ ಕಾಟಿಪಳ್ಳ ಆರೋಪ

ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು […]

Continue Reading

ಬಂಟ್ವಾಳ ಕಾಂಗ್ರೆಸ್ ಮುಖಂಡ, R.T.I ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

ಆತ್ಮಹತ್ಯೆಯೋ..ವ್ಯವಸ್ಥಿತ ಕೊಲೆಯೋ.? ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಮೃತ ಯುವಕ. ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿದ್ದ ಪದ್ಮನಾಭ ಅವರು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ನಡೆದ ಹಲವು ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 2018ರಿಂದ 2023ರ ಅವಧಿಯಲ್ಲಿ ರಾಜೇಶ್ ನಾಯ್ಕ್ ಶಾಸಕರಾಗಿದ್ದ ಸಂದರ್ಭ ನಡೆದ ಎಲ್ಲಾ ಅಕ್ರಮ-ಸಕ್ರಮಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಅದೂ ಅಲ್ಲದೇ ಸೇತುವೆ ನಿರ್ಮಾಣ, ರಸ್ತೆ […]

Continue Reading

ಅಕ್ರಮಗಳನ್ನೇ ನೀತಿಯನ್ನಾಗಿಸಿದ ಬಿಜೆಪಿಯನ್ನು ಸೋಲಿಸಲು ಕರೆ: ಜೆ ಬಾಲಕೃಷ್ಣ ಶೆಟ್ಟಿ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ಮುಗಿಸುವ ಸಂಚನ್ನು ರೂಪಿಸಿವೆ ದೇಶದ ಅಧಿಕಾರ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಮತ್ತು ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿವೆ ಈ ಮೂಲಕ ಒಟ್ಟು ದೇಶದಲ್ಲಿ ಅಕ್ರಮಗಳನ್ನೇ ನೀತಿಯನ್ನಾಗಿಸಿರುವ ಬಿಜೆಪಿ ಪಕ್ಷವನ್ನು […]

Continue Reading

ಮೀನುಗಾರರ ಸಭೆಯಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ಬಿಜೆಪಿ ಅಭ್ಯರ್ಥಿ ಹಾಗೂ ಮೇಯರ್ ಸುಧೀರ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಸಿಪಿಐಎಂ ಆಗ್ರಹ

ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು ಮುಸ್ಲಿಮರ ವಿರುದ್ದ ಎತ್ತಿಕಟ್ಟುವ, ಆ ಮೂಲಕ ಮತೀಯ ದ್ವೇಷವನ್ನು ಹುಟ್ಟು ಹಾಕಿ ಚುನಾವಣೆಯಲ್ಲಿ ರಾಜಕೀಯ ಲಾಭ ಗಿಟ್ಟಿಸುವ ಯತ್ನ ನಡೆಸಿರುತ್ತಾರೆ. ಸಿಪಿಐಎಂ ದ‌.ಕ. ಜಿಲ್ಲಾ ಸಮಿತಿ ಬಿಜೆಪಿ ನಾಯಕರ ರಾಜಕೀಯ ದುರುದ್ದೇಶದ ಪರಸ್ಪರ ಎತ್ತಿಕಟ್ಟುವ ಮಾತುಗಳನ್ನು ಬಲವಾಗಿ ಖಂಡಿಸುತ್ತಿದ್ದು, ಮೇಯರ್ ಸುಧೀರ್ ಶೆಟ್ಟಿ […]

Continue Reading

ಬಜಪೆ ಪೊಲೀಸರ ಯಶಸ್ವಿ ಕಾರ್ಯಾಚರಣೆ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ

ಬಜಪೆ ಸ್ವಾಮಿಲಪದವು ಎಂಬಲ್ಲಿ ದಿನಾಂಕ 28-03-2024 ರಂದು ಮುಂಜಾನೆ 4:00 ಗಂಟೆ ಸಮಯಕ್ಕೆ ಬಜಪೆ ಠಾಣೆಯ ಎಎಸ್‌ಐ ರಾಮ ಪೂಜಾರಿ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿರುವಾಗ KA 70 H 4373 ದ್ವಿಚಕ್ರ ವಾಹನದಲ್ಲಿ ಅತೀ ವೇಗವಾಗಿ ಬರುತ್ತಿದ್ದನ್ನು ಗಮನಿಸಿ, ಆ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದಾಗ ದ್ವಿಚಕ್ರ ಸವಾರನು ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನನ್ನು ಅಡ್ಡ ಹಾಕಿ ಹಿಡಿದು, ದಾಖಲೆಗಳನ್ನು ಪರಿಶೀಲಿಸಿದಾಗ ಸದ್ರಿ ವಾಹನಕ್ಕೆ ಯಾವುದೇ ದಾಖಲೆ ಪತ್ರ ಇಲ್ಲದಿದ್ದು, […]

Continue Reading

17ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿಯಾದ, ಬಂಟ್ವಾಳ ತಾಲೂಕು, ಕುಕ್ಕಾಜೆ ಮಂಚಿ ಗ್ರಾಮದ, ಕಂಚಿಲ ಮನೆ ನಿವಾಸಿ ಅಬುಸಾಲಿ ಎಂಬಾತನು, ಸರಿ-ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ದಿನಾಂಕ: 29.03.2024 ರಂದು ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ರವರ ನೇತ್ರತ್ವದಲ್ಲಿ ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ಬಂಟ್ವಾಳ […]

Continue Reading

ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ವಿಟ್ಲ ಪೊಲೀಸ್ ಠಾಣಾಯಲ್ಲಿ ಪ್ರಕರಣ ಸಂಖ್ಯೆ: 127/2015 ಕಲಂ: 457,380. IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಇಬ್ರಾಹಿಂ ಮುಜಾಂಬಿಲ್ (28), ವಾಸ. ಕ್ಯಾಂಕೊ ಕಾಲೊನಿ, ಬಾಯರ್ ಪದವು ಮನೆ, ಕಾಸರಗೋಡು ಕೇರಳ. ಎಂಬಾತನು ಮಾನ್ಯ ನ್ಯಾಯಾಲಯಕ್ಕೊ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ದಿನಾಂಕ 27/3/24 ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀಮತಿ ವಿಧ್ಯಾ ಮತ್ತು ಸಿಬ್ಬಂದಿಗಳಾದ ASI ಜಯರಾಮ, PC ಆಶೋಕ ಹಾಗೂ HC ರಾಧಾಕೃಷ್ಣ (ಪುತ್ತೂರು ನಗರ ಠಾಣೆ ) ರವರುಗಳ ತಂಡ, ಪುತ್ತೂರು ನಗರದ […]

Continue Reading

ನಾಯಕರ ಹಿಂದೆ, ಮುಂದೆ ಸುತ್ತದೆ ಬೂತ್ ಮಟ್ಟದಲ್ಲಿ, ಮನೆ,ಮನೆ ಬೇಟಿ ಮಾಡಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಪಣತೊಡಲು ಇನಾಯತ್ ಅಲಿ ಕರೆ

ಮಂಗಳೂರು ಉತ್ತರ ಕ್ಷೇತ್ರದ ಗುರುಪುರ, ಸುರತ್ಕಲ್ ಬ್ಲಾಕ್ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಮಾವೇಶವು ಕಾವೂರು ಸೊಸೈಟಿ ಹಾಲ್ ನಲ್ಲಿ ಜರುಗಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಬಿ.ರಮಾನಾಥ್ ರೈ, ವಲ್ಲಭ ಭಾಯ್ ಪಟೇಲ್ ರವರು ಸಂಘ ಪರಿವಾರದ ಧೋರಣೆಯನ್ನು ಸಂಪೂರ್ಣವಾಗಿ ವಿರೋಧಿಸಿದವರು. ಕಾಂಗ್ರೆಸ್ ಪಕ್ಷ ದೇಶದಲ್ಲಿ ಆಳ್ವಿಕೆಯಲ್ಲಿದ್ದ ಕಾಲದಲ್ಲಿ ದೇಶದಲ್ಲಿ ಗಮನಾರ್ಹ ಬದಲಾವಣೆಯಾಯಿತು. “ಉಳುವವನೇ ಹೊಲದೊಡೆಯ” ಎಂಬ ಭೂ ಮಸೂದೆ ಕಾನೂನಿನಿಂದ ಬಡವರಿಗೆ ತುಂಡು ಭೂಮಿ ಸಿಕ್ಕಿದಂತಾಯಿತು. ದಕ್ಷಿಣ ಕನ್ನಡ ಜಿಲ್ಲೆ ಇಂದು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೆ ಅದಕ್ಕೆ […]

Continue Reading