ಕಾಂಗ್ರೆಸ್ ಬಣ ರಾಜಕಾರಣಕ್ಕೆ ನಲುಗಿದ ಅಡ್ಯಾರ್: SDPI ತೆಕ್ಕೆಗೆ ಪಂಚಾಯತ್.!

ಪ್ರತಿಷ್ಠಿತ ಅಡ್ಯಾರ್-ಅರ್ಕುಳ ಗ್ರಾಮ ಪಂಚಾಯತ್ ಎಸ್ ಡಿ ಪಿಐ ವಶವಾಗಿದೆ. ಬಹುಮತವಿದ್ದ ಕಾಂಗ್ರೆಸ್ ಬಣ ರಾಜಕೀಯ ಮೇಳೈಸಿ ಅಧಿಕಾರ ಕಳೆದುಕೊಳ್ಳುವಂತಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ಕೈಯಲ್ಲಿದ್ದ ಗುರುಪುರ ಗ್ರಾಮ ಪಂಚಾಯತ್ ಎಸ್ ಡಿ ಪಿಐ ಪಾಲಾಗಿತ್ತು. ಇದೀಗ ಅಡ್ಯಾರ್ ಗ್ರಾಮ ಪಂಚಾಯತ್ ನ್ನು ಕಾಂಗ್ರೆಸ್ ಕಳೆದುಕೊಂಡಿದೆ. 31 ಸದಸ್ಯ ಬಲದ ಅಡ್ಯಾರ್ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಓರ್ವ ಸದಸ್ಯರ ನಿಧನದಿಂದ ಸಂಖ್ಯಾಬಲ 30 ಕ್ಕೆ ಇಳಿದಿತ್ತು. ಕಾಂಗ್ರೆಸ್ 13, ಎಸ್ ಡಿ ಪಿಐ 10, ಬಿಜೆಪಿ […]

Continue Reading

ನೀರುಮಾರ್ಗ: ಜಿ ಆರ್ ಮೆಡಿಕಲ್ ಕಾಲೇಜು ಎಂಬಿಬಿಸ್ ಸೀಟು ಅಕ್ರಮ; ರಾಷ್ಟ್ರೀಯ ವೈದ್ಯಕೀಯ ಆಯೋಗ

ನೂರಾರು ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ ಮಂಗಳೂರು ಹೊರವಲಯದ ನೀರುಮಾರ್ಗದಲ್ಲಿರುವ ಜಿ ಆರ್ ಮೆಡಿಕಲ್ ಕಾಲೇಜು ಕಾನೂನು ಬಾಹಿರ ಹಾಗೂ ಅಕ್ರಮ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಪಷ್ಟಪಡಿಸಿದೆ. ಸರಕಾರದ ಅನುಮತಿ ಇಲ್ಲದೆಯೇ 2022-23 ರ ಸಾಲಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಸೀಟು ನೀಡಲಾಗಿದ್ದು, ಲಕ್ಷಾಂತರ ರೂಪಾಯಿ ಗೆ ಫೀಸು ತೆತ್ತು ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಭವಿಷ್ಯ ಇದೀಗ ಡೋಲಾಯಮಾನವಾಗಿದೆ. ಪ್ರತಿಷ್ಠಿತ ನೀರುಮಾರ್ಗದ ಜಿ ಆರ್ ಮೆಡಿಕಲ್ ಕಾಲೇಜಿನಲ್ಲಿ 2022-23 ನೇ ಸಾಲಿನಲ್ಲಿ ಸುಮಾರು 150 ಎಂಬಿಬಿಎಸ್ […]

Continue Reading

ಬಡ ಜಾತ್ರೆ ವ್ಯಾಪಾರಸ್ಥರ ಮಧ್ಯೆ ಧರ್ಮ, ದ್ವೇಷದ ರಾಜಕೀಯ ಸಲ್ಲದು: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಡ ಜಾತ್ರೆ, ಉತ್ಸವ ವ್ಯಾಪಾರಸ್ಥರನ್ನು ಗುರಿಯಾಗಿಸಿ ಧರ್ಮಗಳ ನಡುವೆ ದ್ವೇಷ ಹರಡಿ ಬಡಪಾಯಿಗಳ ಬೀದಿಪಾಲು ಮಾಡುವ ಕೀಳುಮಟ್ಟದ ರಾಜಕೀಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಜನಪರ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್ ಹೇಳಿದರು. ಅವರು ನಗರದ ನಾಸಿಕ್ ಬಂಗೇರ ಭವನದಲ್ಲಿ ಜರಗಿದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಜಾತ್ರೆ ವ್ಯಾಪಾರಸ್ಥರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಸಂವಿಧಾನ ಎಲ್ಲಾ ಜನರಿಗೆ ಬದುಕುವ ಹಕ್ಕನ್ನು ನೀಡಿದೆ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸಮಾಜ ಒಡೆಯುವ ಸ್ಥಾಪಿತ ಹಿತಾಸಕ್ತಿಗಳು […]

Continue Reading

ಕಾಂಗ್ರೆಸ್ ತೆಕ್ಕೆಯಿಂದ ಜಾರಿ ಎಸ್ ಡಿ ಪಿಐ ಮಡಿಲಿಗೆ ಗುರುಪುರ ಗ್ರಾಮ ಪಂಚಾಯತ್

ಕಾಂಗ್ರೆಸ್ ಪಕ್ಷಕ್ಕೆ ದುಬಾರಿಯಾದ ದಾವೂದ್ ಬಂಗ್ಲಗುಡ್ಡೆ ಉಚ್ಛಾಟನೆ ಬಹು ನಿರೀಕ್ಷಿತ ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದ್ದು ಕಾಂಗ್ರೆಸ್ ಉಚ್ಛಾಟಿತ ಸದಸ್ಯ ದಾವೂದ್ ಬಂಗ್ಲಗುಡ್ಡೆ ಕೈ ಮೇಲಾಗಿದೆ. 28 ಸದಸ್ಯರನ್ನೊಳಗೊಂಡ ಗುರುಪುರ ಗ್ರಾಮ ಪಂಚಾಯತ್ ನಲ್ಲಿ 8 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 9 ಎಸ್ ಡಿಪಿಐ ಬೆಂಬಲಿತ ಸದಸ್ಯರಿದ್ದರು. ಕಾಂಗ್ರೆಸ್ ಬೆಂಬಲಿತ 10 ಮಂದಿ ಸದಸ್ಯರಿದ್ದಾರೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಹಿದ್ದೀನ್ ಬಾವಾ ಪರ ಗುರುತಿಸಿಕೊಂಡ ಸದಸ್ಯ […]

Continue Reading

ಬಜಪೆ ಪೊಲೀಸರ ಭರ್ಜರಿ ಕಾರ್ಯಾಚರಣೆ, ಬ್ಯಾಟರಿ ಕಳ್ಳತನ ಮಾಡುತಿದ್ದ ಕುಖ್ಯಾತ ಕಳ್ಳರ ಬಂದನ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ಪಾರ್ಕ್ ಮಾಡಿ ನಿಲ್ಲಿಸಿದ್ದ ಟಿಪ್ಪರ್ ಲಾರಿ, ಜೆ.ಸಿ.ಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಸದ್ರಿ ಪ್ರಕರಣಗಳಲ್ಲಿ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕರಾದ ಪ್ರಕಾಶ ರವರ ತಂಡ ದಿನಾಂಕ 08-08-2023 ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದ ಕಲ ಎಂಬಲ್ಲಿ ಬ್ಯಾಟರಿಗಳನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ […]

Continue Reading

ಬಿಕರ್ನಕಟ್ಟೆ-ಸಾಣೂರು ಅಸಮರ್ಪಕ ಹೆದ್ದಾರಿ ಕಾಮಗಾರಿ ಆರೋಪ; ಸ್ಕೂಟರ್ ಸಹಿತ ನೆಲಕ್ಕೆ ಬಿದ್ದು ಗಾಯಗೊಂಡ ಉದ್ಯಮಿ

ಸೂಚನಾ ಪಲಕವಿಲ್ಲ, ಮುಂಜಾಗ್ರತಾ ಕ್ರಮ ವಹಿಸಿಲ್ಲ. ರಿಪ್ಲೆಕ್ಟರ್ ಅಳವಡಿಸಿಲ್ಲ. ಅವೈಜ್ಞಾನಿಕ ಕಾಮಗಾರಿ.! ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣದ ಅಸಮರ್ಪಕತೆ ಒಂದೊಂದಾಗಿಯೇ ಬಯಲಿಗೆ ಬರುತ್ತಿದೆ. ಗುರುಪುರ ಕೈಕಂಬ ಬಳಿ ಮಳೆಗೆ ಅನಾವರಣಗೊಂಡ ರಸ್ತೆ ಅವ್ಯವಸ್ಥೆ, ಇದೀಗ ಕಾರ್ಕಳ ಬೆಳುವಾಯಿಯಲ್ಲಿಯೂ ಅಸಮರ್ಪಕತೆ ಎದ್ದು ಕಾಣುತ್ತದೆ. ಬೆಳುವಾಯಿ ಪೇಟೆಯಲ್ಲಿ ಅಸಮರ್ಪಕ ಹೆದ್ದಾರಿ ಕಾಮಗಾರಿಯಿಂದ ನಿನ್ನೆ ಬೆಳಿಗ್ಗೆ ಸ್ಕೂಟರ್ ಸವಾರರೊಬ್ಬರು ಉರುಳಿ ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರಿಂದ ಕುಪಿತಗೊಂಡ ಸ್ಥಳೀಯರು ಹೆದ್ದಾರಿ ಕಾಮಗಾರಿಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ […]

Continue Reading

ಉಪ್ಪಿನಂಗಡಿ: 7ವರ್ಷಗಳ ಹಿಂದಿನ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ಆರೋಪಿಗಳು ದೋಷ ಮುಕ್ತ

ಆರೋಪಿಗಳ ಪರ ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ 2016 ರಂದು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಗಾಂಧಿ ಪಾರ್ಕ್ ಬಳಿ ಇರುವ ರೆಹಮಾನ್ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದು ಕೈ ಮಿಲಾಯಿಸಿಕೊಂಡು ಸಾರ್ವಜನಿಕ ಶಾಂತಿ ಭಂಗ ಮಾಡಿದ್ದ ಆರೋಪದಡಿಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 325/16 ರಂತೆ ಮುಖದ ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಿ,ತನಿಖಾಧಿಕಾರಿಯವರು ಪ್ರಕರಣದ ಕುರಿತು ಸಮಗ್ರ ತನಿಖೆಯನ್ನು ಮಾಡಿ ದೋಷಾರೋಪಣ ಪಟ್ಟಿಯನ್ನು ಮಾನ್ಯ […]

Continue Reading

ವಿಟ್ಲ ದಲಿತ ಬಾಲಕಿಯ ಅತ್ಯಾಚಾರ : ಕಠಿಣ ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ವಿಟ್ಲದಲ್ಲಿ ದಲಿತ ಬಾಲಕಿಯ ಮೇಲೆ ನಡೆದಿರುವ ಸರಣಿ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಗರಿಷ್ಟ ಶಿಕ್ಷೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಸ್ಥಾಪಿತ) ದ ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ದಲಿತ ಮುಖಂಡ ಎಂ ದೇವದಾಸ್, ವಿಟ್ಲ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದ ಕುರಿತು ಹಿಂದುತ್ವವಾದಿಗಳು ತುಟಿ ಬಿಚ್ಚುತ್ತಿಲ್ಲ. ಬಂಧಿತ ಅತ್ಯಾಚಾರಿಗಳು ಸಂಘಪರಿವಾರದ ಕಾರ್ಯಕರ್ತರು ಎಂಬುದು ಜಾಹೀರಾಗಿದ್ದರೂ, […]

Continue Reading

ಸೌಜನ್ಯ ಮರ್ಡರ್ ; ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು’: ವಸಂತ ಬಂಗೇರ ಸ್ಟೋಟಕ ಹೇಳಿಕೆ

ಬೆಳ್ತಂಗಡಿ ಸೌಜನ್ಯ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ದಿನದಿಂದ ದಿನಕ್ಕೆ ವಿಚಿತ್ರ ತಿರುವುಗಳು ಒಂದೊಂದಾಗಿಯೇ ಬಯಲಿಗೆ ಬರುತ್ತಿದ್ದು, ಈ ಪ್ರಕರಣದಲ್ಲಿ ಪ್ರಭಾವೀಗಳ ಪಾತ್ರ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ,ಮಾಜಿ ಶಾಸಕ ವಸಂತ ಬಂಗೇರ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸೌಜನ್ಯ ಪ್ರಕರಣದ ಈ ರಹಸ್ಯವನ್ನು ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು ಎಂದು ಬಹಿರಂಗವಾಗಿ ಹೇಳಿದ್ದಾರೆ. “ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ […]

Continue Reading

ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಬಲಿ ಬೀಳಬೇಡಿ: ಸಂತೋಷ್ ಬಜಾಲ್

ಮಂಗಳೂರಿಗೆ ಒಂದೊಂದು ಹೆಸರಲ್ಲಿ ಆಗಮಿಸುತ್ತಿರುವ ಬ್ಲೇಡ್ ಕಂಪೆನಿಗಳು ಜನಸಾಮಾನ್ಯರ ದುಡಿಮೆಯ ಹಣವನ್ನು ಉಳಿತಾಯ ಹೆಸರಿನ ಯೋಜನೆಯಲ್ಲಿ ಕೊಳ್ಳೆಹೊಡೆದು ಕೋಟ್ಯಾಂತರ ಹಣವನ್ನು ಮೋಸ ಮಾಡಿ ಬಾಗಿಲು ಮುಚ್ಚಿದ ಪ್ರಕರಣಗಳ ಬಗ್ಗೆ ಸಾಲು ಸಾಲು ಉದಾಹರಣೆಗಳಿವೆ.ಜನರ ಆರ್ಥಿಕ ಸಂಕಷ್ಟಗಳ ಪರಿಹಾರಕ್ಕೆಂದು ಮಂಗಳೂರಿಗೆ ಬರುವ ಇಂತಹ ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ ಬಲಿಬೀಳಬಾರದು ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪಿಎಸಿಎಲ್ ಅನ್ಯಾಯದ ವಿರುದ್ಧದ ಹೋರಾಟದ ರೂಪುರೇಷೆಗಾಗಿ ನಡೆದ ಪಿಎಸಿಎಲ್ ಎಜೆಂಟರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪಿಎಸಿಲ್ […]

Continue Reading