‘ಭ್ರಷ್ಟಾಚಾರ ಆರೋಪ: ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಗ್ರಾಮಸ್ಥರ ಪಟ್ಟು; ಗ್ರಾಮಸಭೆ ಮೊಟಕು.!

’ಭ್ರಷ್ಟಾಚಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದಕ್ಕೆ ಯಾವುದೇ ಸಭೆ ನಡೆಸಲು ಬಿಡುವುದಿಲ್ಲ” ಗ್ರಾಮಸ್ಥರು ಸಾಮೂಹಿಕವಾಗಿ ಪ್ರತಿಜ್ಞೆ ಪೆರುವಾಯಿ: ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರ ರಾಜೀನಾಮೆಗೆ ಪಟ್ಟು ಹಿಡಿದ ಗ್ರಾಮಸ್ಥರು, ಗ್ರಾಮಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಪರಿಣಾಮ ಸಭೆಯನ್ನು ಮೊಟಕುಗೊಳಿಸಿದ ಘಟನೆ ಬುಧವಾರ ದಿನಾಂಕ 10/12/2025 ನಡೆಯಿತು. ಅಧ್ಯಕ್ಷರ ವಿರುದ್ಧದ ಆರೋಪಗಳು ತನಿಖೆಯಲ್ಲಿ ಸಾಬೀತಾದರೂ ರಾಜೀನಾಮೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶಗೊಂಡರು. ಗ್ರಾಮಸಭೆಯು ನಾಡಗೀತೆಯೊಂದಿಗೆ ಪ್ರಾರಂಭವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) […]

Continue Reading

ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ಪ್ರದಾನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರು ತಾಲೂಕಿನ ಪುರಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾರಿ ಕಲಾವಿದ ಮುಹಮ್ಮದ್ ಆಲಿ ಬಡ್ಡೂರು ಅವರಿಗೆ ಚಮ್ಮನ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ 2022-23 ರ ಸಾಲಿನ ಬ್ಯಾರಿ ಅಕಾಡೆಮಿ ಚಮ್ಮನ (ಗೌರವ ಪ್ರಶಸ್ತಿ) ಪುರಸ್ಕಾರಕ್ಕೆ ಮುಹಮ್ಮದ್ ಆಲಿ ಬಡ್ಡೂರು ಆಯ್ಕೆಯಾಗಿದ್ದರು. ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಂಗಭೂಮಿ ಕಲಾವಿದರಾಗಿ ಜಿಲ್ಲೆಯಾದ್ಯಂತ ತನ್ನದೇ ಆದ ಛಾಪು ಮೂಡಿಸಿರುವ ಮುಹಮ್ಮದ್ ಆಲಿ […]

Continue Reading

ಅನ್ಯಾಯದ ಪರ ಮುಲಾಜಿಲ್ಲದೆ ಗಟ್ಟಿ ಧ್ವನಿ ಎತ್ತುತ್ತಿದ್ದ ಸಿರಾಜ್ ಬಜ್ಪೆ ಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಕಾಂಗ್ರೆಸ್ ಕಚೇರಿಗೆ ಬೀಗ

ಕಾಂಗ್ರೆಸ್ ನಲ್ಲಿ ಬಕೆಟ್ ಶೂರರು, ಪೇಮೆಂಟ್ ಗಿರಾಕಿಗಳಿಗೆ ಮಾತ್ರ ಸ್ಥಾನವೇ.? ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಗ್ರಾಮ ಪಂಚಾಯತ್ ಆಗಿದ್ದ ಬಜಪೆ ಇದೀಗ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿ ಮೊದಲ ಬಾರಿ ಚುನಾವಣೆ ಎದುರಿಸುತ್ತಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗೊಳಪಟ್ಟ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಡಿಸೆಂಬರ್ 21 ರಂದು ನಡೆಯಲಿದೆ. ಎಲ್ಲರ ಚಿತ್ತ ಬಜಪೆ ಪಟ್ಟಣ ಪಂಚಾಯತ್ ನತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ತಾರಕಕ್ಕೇರಿದ್ದು, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಕ್ಷೇತ್ರದಾದ್ಯಂತ […]

Continue Reading

ಪುತ್ತೂರು: ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳವು; ಪ್ರಮುಖ ಆರೋಪಿ ಅಶ್ಲೇಷ್ ಭಟ್ ಸೇರಿ ನಾಲ್ವರು ಅಂದರ್

ಕಬಕ ಗ್ರಾಮದ ನೆಹರು ನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಅಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ್ ಶೆಟ್ಟಿ ಹಾಗೂ ಅಶ್ರಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳವಾಗಿದ್ದ 80 ಗೋಣಿ ಕಾಫಿ ಬೀಜಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಸ್ವಿಫ್ಟ್ ಕಾರು ಹಾಗೂ ಎರಡು ಆಟೋ ರಿಕ್ಷಾಗಳನ್ನು ಪೊಲೀಸರು […]

Continue Reading

ಜಿಲ್ಲೆಯ ಇತಿಹಾಸದಲ್ಲೇ ಡ್ರಗ್ ಪೆಡ್ಲರ್ ಗಳಿಗೆ 14 ವರ್ಷದ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಿದ ಸರಕಾರಿ ಅಭಿಯೋಜಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸನ್ಮಾನ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಹಚ್ಚಿ, ಮಾದಕ ವಸ್ತುಗಳನ್ನು ಸ್ವಾಧೀನಪಡಿಸಿ, ಆರೋಪಿತರನ್ನು ಬಂಧಿಸಿ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುತ್ತಾರೆ. ದಿನಾಂಕ 14-06-2022 ರಂದು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 54/2022 ಪ್ರಕರಣಕ್ಕೆ ಸಂಬಂಧಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ […]

Continue Reading

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ‌ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಬೃಹತ್ ರಾಲಿ

ಜನರ ಬದುಕಿನ ಕುರಿತು ಚಿಂತಿಸದ ಬಿಜೆಪಿ, ಕಾಂಗ್ರೆಸ್ ನಾಯಕರು ಪರಸ್ಪರ ಸ್ಪರ್ಧೆಗೆ ಬಿದ್ದು ವೈಭವದ ಕಂಬಳ, ಹುಲಿ ಕುಣಿತ ಆಯೋಜಿಸುತ್ತಿದ್ದಾರೆ: ಮುನೀರ್ ಕಾಟಿಪಳ್ಳ ಆರೋಪ ಶಿಕ್ಷಣ,ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ‘ಜನ ಸಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ, ಘೋಷಣೆಯ ಅಡಿಯಲ್ಲಿ ಅಂಬೆಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರಗೆ […]

Continue Reading

ಮಂಗಳೂರು: ಡ್ರಗ್ಸ್ ಜಾಲದ ಐದು ಮಂದಿ ಪೆಡ್ಲರ್ ಗಳಿಗೆ 14 ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ

ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಐದು ಮಂದಿ ಆರೋಪಿಗಳಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಕಠಿಣ ಸಜೆ ಹಾಗೂ ದಂಡ ವಿಧಿಸಿ ಆದೇಶ ನೀಡಿರುತ್ತದೆ. 2022ರಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳನ್ನು ಬಂಧಿಸಿ, ಅವರಿಂದ 125 ಗ್ರಾಂ ಎಂಡಿಎಂಎ ವಶಕ್ಕೆ ಪಡೆದು, ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು. ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಉಪ್ಪಳದ ಮಹಮ್ಮದ್‌ […]

Continue Reading

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಪೂರೈಕೆದಾರರ ಬಂಧನ, 50 ಲಕ್ಷ ರೂ. ಮೌಲ್ಯದ 517.76 ಗ್ರಾಂ ಎಂಡಿಎಂಎ ವಶ

ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂ.ಡಿ.ಎಂ.ಎ. ಮಾದಕ ದ್ರವ್ಯವನ್ನು ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ಮಂಗಳೂರು ನಗರ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಸಿಸಿಬಿ ಪೊಲೀಸರ ತಂಡವು ಖಚಿತ ಮಾಹಿತಿ ಮೇರೆಗೆ ಇಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ […]

Continue Reading

ಮಂಗಳೂರು ನಗರ ಪೊಲೀಸರ ವಿಶೇಷ ಕಾರ್ಯಾಚರಣೆ, ಕುಖ್ಯಾತ ಅಂತರ್ ರಾಜ್ಯ ವಾಹನ ಚೋರ, ಸರಗಳ್ಳತನ ಆರೋಪಿಯ ಬಂಧನ.

ನಾಲ್ಕು ದ್ವಿಚಕ್ರ ವಾಹನ, ಎರಡು ಚಿನ್ನದ ಸರ, ಒಟ್ಟು 5 ಲಕ್ಷ ಮೌಲ್ಯದ ಸೊತ್ತುಗಳ ವಶ. ಇತ್ತೀಚೆಗೆ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆ ಹಂತದಲ್ಲಿತ್ತು. ಪ್ರಕರಣದ ಆರೋಪಿಯ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಮಂಗಳೂರು […]

Continue Reading

ಪುತ್ತೂರು: ನಿಷೇದಿತ ಮಾದಕವಸ್ತು ಮಾರಾಟ; ಕುಖ್ಯಾತ ಆರೋಪಿಯ ಬಂಧನ.

ಪುತ್ತೂರು ತಾಲೂಕಿನ ಕಬಕ, ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣೆಯ ಪೊಲೀಸ್‌ ಉಪ-ನಿರೀಕ್ಷಕರಾದ ಅಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಆರೋಪಿತನನ್ನು ಹಿಡಿದು ವಿಚಾರಣೆ ನಡೆಸಿದಾಗ, ಆತನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ ಎಂಬುದಾಗಿ ತಿಳಿದುಬಂದಿದ್ದು, ಆತನನ್ನು ವಿಚಾರಣೆ ನಡೆಸಿ, ತಪಾಸಣೆಗೊಳಪಡಿಸಿದಾಗ ಆರೋಪಿಯು ಮಾರಾಟ ‌ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ MDMA ಎಂಬ ನಿಷೇಧಿತ ಮಾದಕವಸ್ತು ಪತ್ತೆಯಾಗಿರುತ್ತದೆ. […]

Continue Reading